ಕಬಡ್ಡಿಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ 43–42 ರಲ್ಲಿ ರೋಚಕ ಜಯಪಡೆದ ಬೆಂಗಳೂರು...

ಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ 43–42 ರಲ್ಲಿ ರೋಚಕ ಜಯಪಡೆದ ಬೆಂಗಳೂರು ಬುಲ್ಸ್‌

-

- Advertisment -spot_img

ಪವನ್‌ ಕುಮಾರ್ ಶೆರಾವತ್‌ ಅವರ ಅಬ್ಬರದ ರೈಡಿಂಗ್ ಮೂಲಕ ಮತ್ತೊಮ್ಮೆ ಬೆಂಗಳೂರು ಬುಲ್ಸ್‌ ನೆರವಿಗೆ ಬಂದರು. ಅವರು ಒಂದೇ ಪಂದ್ಯದಲ್ಲಿ 29 ಪಾಯಿಂಟ್ಸ್‌ ಕಲೆಹಾಕಿದರು! ಶನಿವಾರ ನಡೆದ ಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ಸ್‌ ತಂಡದ ವಿರುದ್ಧ ಕೊನೆಯ ನಾಲ್ಕು ನಿಮಿಷಗಳವರೆಗೆ ಹಿನ್ನಡೆಯಲ್ಲಿದ್ದ ಬೆಂಗಳೂರು ಬುಲ್ಸ್‌ ತಂಡ ಅಂತಿಮವಾಗಿ 43–42 ರಲ್ಲಿ ರೋಚಕ ಜಯಪಡೆಯಿತು.

ಪಾಟಲೀಪುತ್ರ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವಾರಿಯರ್ಸ್‌ ತಂಡ ಬಹುಪಾಲು ಅವಧಿಯಲ್ಲಿ ಮುನ್ನಡೆ ಪಡೆದಿತ್ತು. ಐದು ನಿಮಿಷಗಳಿದ್ದಾಗ ವಾರಿಯರ್ಸ್‌ ತಂಡ 40–34ರಲ್ಲಿ ಮುನ್ನಡೆಯಲ್ಲಿತ್ತು. ಆದರೆ ನಾಲ್ಕು ನಿಮಿಷಗಳಿದ್ದಾಗ ಎದುರಾಳಿ ತಂಡವನ್ನು ಆಲೌಟ್‌ ಮಾಡಿದ ಬುಲ್ಸ್‌ ತಂಡ ಹಿನ್ನಡೆಯನ್ನು 38–40ಕ್ಕೆ ಇಳಿಸಿತು. ನಂತರ ಏಕಾಂಗಿಯಾಗಿ ಯಶಸ್ವಿ ರೈಡ್‌ಗಳ ಮೂಲಕ ಪವನ್‌ ತಂಡವನ್ನು ಗೆಲುವಿನತ್ತ ಒಯ್ದರು.

ಪವನ್‌ ಮೂರು ಬೋನಸ್‌ ಸೇರಿ 29 ಪಾಯಿಂಟ್ಸ್‌ ಸಂಗ್ರಹಿಸಿದರು. ತಂಡ ಒಟ್ಟಾರೆ ರೈಡಿಂಗ್‌ನಲ್ಲಿ ಗಳಿಸಿದ್ದ 27 ರೈಡಿಂಗ್‌ ಪಾಯಿಂಟ್‌ಗಳಲ್ಲಿ 26 ಈ ಆಟಗಾರನಿಂದಲೇ ಬಂದಿದ್ದು ವಿಶೇಷ. ರಕ್ಷಣೆಯ ವಿಭಾಗದಲ್ಲಿ ಸೌರಬ್‌ ನಂದಲ್‌ ಆರು ಪಾಯಿಂಟ್ಸ್‌ ಗಳಿಸಿದರು.

ಇದು ಬುಲ್ಸ್ ತಂಡಕ್ಕೆ ನಾಲ್ಕು ಪಂದ್ಯಗಳಲ್ಲಿ ಮೂರನೇ ಗೆಲುವು. ಬುಲ್ಸ್ ಐದನೇ ಸ್ಥಾನದಲ್ಲಿದ್ದರೆ, ವಾರಿಯರ್ಸ್‌ ತಂಡ ಆರನೇ ಸ್ಥಾನದಲ್ಲಿದೆ.

ಶನಿವಾರ ಆರಂಭವಾದ ಪಟ್ನಾ ಲೆಗ್‌ನ ಮೊದಲ ಪಂದ್ಯದಲ್ಲಿ ಪಿಂಕ್‌ ಪ್ಯಾಂಥರ್ಸ್‌ ತಂಡ 34–21 ರಿಂದ (ವಿರಾಮ: 15–9) ಆತಿಥೇಯ ಪಟ್ನಾ ಪೈರೇಟ್ಸ್‌ ತಂಡವನ್ನು ಮಣಿಸಿತು. ದೀಪಕ್‌ ನರ್ವಾಲ್‌ 9 ಪಾಯಿಂಟ್ಸ್‌ ಗಳಿಸಿದರೆ, ಉತ್ತಮ ಫಾರ್ಮ್‌ನಲ್ಲಿರುವ ಸಂದೀಪ್‌ ಧುಲ್‌ ಟ್ಯಾಕ್ಲಿಂಗ್‌ನಲ್ಲಿ ಮಿಂಚಿ ಎಂಟು ಪಾಯಿಂಟ್ಸ್ ಗಳಿಸಿದರು.

ಪಿಂಕ್‌ ಪ್ಯಾಂಥರ್ಸ್‌ ತಂಡ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದು 20 ಪಾಯಿಂಟ್‌ಗಳೊಡನೆ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × 4 =

Latest news

HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು

  HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು HMC ಯುನೈಟೆಡ್ ಟ್ರೋಫಿ–2026 ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಗಳ...

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಟೂರ್ನಿಯ ಇತ್ತೀಚೆಗೆ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ...

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ ಶ್ರೀ ಕೃಷ್ಣ ಕ್ಷೇತ್ರ.

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ  ಶ್ರೀ ಕೃಷ್ಣ ಕ್ಷೇತ್ರ. ಧರ್ಮ ಕ್ರೀಡೆ ಸಾಹಿತ್ಯ ಸಂಸ್ಕೃತಿಯ ಮಹಾಪೋಷಕರಾಗಿದ್ದ ಶ್ರೀಶಿರೂರುಮಠದ ಪೀಠಾಧಿಪತಿ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಸ್ಮರಣಾರ್ಥ...

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ ಅಂತರರಾಷ್ಟ್ರೀಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಮಹೋತ್ಸವವಾಗಿರುವ HMC ಯುನೈಟೆಡ್ ಟ್ರೋಫಿ–2026ಗೆ ಭರ್ಜರಿ ಚಾಲನೆ ದೊರೆತಿದ್ದು,...
- Advertisement -spot_imgspot_img

ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ

  ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ   ಕಿದಿಯೂರಿನ ಎಸ್‌ಎನ್‌ಜಿ ಸ್ಪೋರ್ಟ್ಸ್ ಕ್ಲಬ್ ತನ್ನ 12ನೇ ವಾರ್ಷಿಕೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ...

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ.

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ. HMC ಸಂಸ್ಥೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ HMC ಯುನೈಟೆಡ್ ಟ್ರೋಫಿ 2026 ಅಂತರರಾಷ್ಟ್ರೀಯ...

Must read

- Advertisement -spot_imgspot_img

You might also likeRELATED
Recommended to you