6.4 C
London
Wednesday, April 24, 2024
Homeಕಬಡ್ಡಿಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ 43–42 ರಲ್ಲಿ ರೋಚಕ ಜಯಪಡೆದ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ 43–42 ರಲ್ಲಿ ರೋಚಕ ಜಯಪಡೆದ ಬೆಂಗಳೂರು ಬುಲ್ಸ್‌

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಪವನ್‌ ಕುಮಾರ್ ಶೆರಾವತ್‌ ಅವರ ಅಬ್ಬರದ ರೈಡಿಂಗ್ ಮೂಲಕ ಮತ್ತೊಮ್ಮೆ ಬೆಂಗಳೂರು ಬುಲ್ಸ್‌ ನೆರವಿಗೆ ಬಂದರು. ಅವರು ಒಂದೇ ಪಂದ್ಯದಲ್ಲಿ 29 ಪಾಯಿಂಟ್ಸ್‌ ಕಲೆಹಾಕಿದರು! ಶನಿವಾರ ನಡೆದ ಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ಸ್‌ ತಂಡದ ವಿರುದ್ಧ ಕೊನೆಯ ನಾಲ್ಕು ನಿಮಿಷಗಳವರೆಗೆ ಹಿನ್ನಡೆಯಲ್ಲಿದ್ದ ಬೆಂಗಳೂರು ಬುಲ್ಸ್‌ ತಂಡ ಅಂತಿಮವಾಗಿ 43–42 ರಲ್ಲಿ ರೋಚಕ ಜಯಪಡೆಯಿತು.

ಪಾಟಲೀಪುತ್ರ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವಾರಿಯರ್ಸ್‌ ತಂಡ ಬಹುಪಾಲು ಅವಧಿಯಲ್ಲಿ ಮುನ್ನಡೆ ಪಡೆದಿತ್ತು. ಐದು ನಿಮಿಷಗಳಿದ್ದಾಗ ವಾರಿಯರ್ಸ್‌ ತಂಡ 40–34ರಲ್ಲಿ ಮುನ್ನಡೆಯಲ್ಲಿತ್ತು. ಆದರೆ ನಾಲ್ಕು ನಿಮಿಷಗಳಿದ್ದಾಗ ಎದುರಾಳಿ ತಂಡವನ್ನು ಆಲೌಟ್‌ ಮಾಡಿದ ಬುಲ್ಸ್‌ ತಂಡ ಹಿನ್ನಡೆಯನ್ನು 38–40ಕ್ಕೆ ಇಳಿಸಿತು. ನಂತರ ಏಕಾಂಗಿಯಾಗಿ ಯಶಸ್ವಿ ರೈಡ್‌ಗಳ ಮೂಲಕ ಪವನ್‌ ತಂಡವನ್ನು ಗೆಲುವಿನತ್ತ ಒಯ್ದರು.

ಪವನ್‌ ಮೂರು ಬೋನಸ್‌ ಸೇರಿ 29 ಪಾಯಿಂಟ್ಸ್‌ ಸಂಗ್ರಹಿಸಿದರು. ತಂಡ ಒಟ್ಟಾರೆ ರೈಡಿಂಗ್‌ನಲ್ಲಿ ಗಳಿಸಿದ್ದ 27 ರೈಡಿಂಗ್‌ ಪಾಯಿಂಟ್‌ಗಳಲ್ಲಿ 26 ಈ ಆಟಗಾರನಿಂದಲೇ ಬಂದಿದ್ದು ವಿಶೇಷ. ರಕ್ಷಣೆಯ ವಿಭಾಗದಲ್ಲಿ ಸೌರಬ್‌ ನಂದಲ್‌ ಆರು ಪಾಯಿಂಟ್ಸ್‌ ಗಳಿಸಿದರು.

ಇದು ಬುಲ್ಸ್ ತಂಡಕ್ಕೆ ನಾಲ್ಕು ಪಂದ್ಯಗಳಲ್ಲಿ ಮೂರನೇ ಗೆಲುವು. ಬುಲ್ಸ್ ಐದನೇ ಸ್ಥಾನದಲ್ಲಿದ್ದರೆ, ವಾರಿಯರ್ಸ್‌ ತಂಡ ಆರನೇ ಸ್ಥಾನದಲ್ಲಿದೆ.

ಶನಿವಾರ ಆರಂಭವಾದ ಪಟ್ನಾ ಲೆಗ್‌ನ ಮೊದಲ ಪಂದ್ಯದಲ್ಲಿ ಪಿಂಕ್‌ ಪ್ಯಾಂಥರ್ಸ್‌ ತಂಡ 34–21 ರಿಂದ (ವಿರಾಮ: 15–9) ಆತಿಥೇಯ ಪಟ್ನಾ ಪೈರೇಟ್ಸ್‌ ತಂಡವನ್ನು ಮಣಿಸಿತು. ದೀಪಕ್‌ ನರ್ವಾಲ್‌ 9 ಪಾಯಿಂಟ್ಸ್‌ ಗಳಿಸಿದರೆ, ಉತ್ತಮ ಫಾರ್ಮ್‌ನಲ್ಲಿರುವ ಸಂದೀಪ್‌ ಧುಲ್‌ ಟ್ಯಾಕ್ಲಿಂಗ್‌ನಲ್ಲಿ ಮಿಂಚಿ ಎಂಟು ಪಾಯಿಂಟ್ಸ್ ಗಳಿಸಿದರು.

ಪಿಂಕ್‌ ಪ್ಯಾಂಥರ್ಸ್‌ ತಂಡ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದು 20 ಪಾಯಿಂಟ್‌ಗಳೊಡನೆ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

ten − eight =