ಕಬಡ್ಡಿಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ 43–42 ರಲ್ಲಿ ರೋಚಕ ಜಯಪಡೆದ ಬೆಂಗಳೂರು...

ಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ 43–42 ರಲ್ಲಿ ರೋಚಕ ಜಯಪಡೆದ ಬೆಂಗಳೂರು ಬುಲ್ಸ್‌

-

- Advertisment -spot_img

ಪವನ್‌ ಕುಮಾರ್ ಶೆರಾವತ್‌ ಅವರ ಅಬ್ಬರದ ರೈಡಿಂಗ್ ಮೂಲಕ ಮತ್ತೊಮ್ಮೆ ಬೆಂಗಳೂರು ಬುಲ್ಸ್‌ ನೆರವಿಗೆ ಬಂದರು. ಅವರು ಒಂದೇ ಪಂದ್ಯದಲ್ಲಿ 29 ಪಾಯಿಂಟ್ಸ್‌ ಕಲೆಹಾಕಿದರು! ಶನಿವಾರ ನಡೆದ ಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ಸ್‌ ತಂಡದ ವಿರುದ್ಧ ಕೊನೆಯ ನಾಲ್ಕು ನಿಮಿಷಗಳವರೆಗೆ ಹಿನ್ನಡೆಯಲ್ಲಿದ್ದ ಬೆಂಗಳೂರು ಬುಲ್ಸ್‌ ತಂಡ ಅಂತಿಮವಾಗಿ 43–42 ರಲ್ಲಿ ರೋಚಕ ಜಯಪಡೆಯಿತು.

ಪಾಟಲೀಪುತ್ರ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವಾರಿಯರ್ಸ್‌ ತಂಡ ಬಹುಪಾಲು ಅವಧಿಯಲ್ಲಿ ಮುನ್ನಡೆ ಪಡೆದಿತ್ತು. ಐದು ನಿಮಿಷಗಳಿದ್ದಾಗ ವಾರಿಯರ್ಸ್‌ ತಂಡ 40–34ರಲ್ಲಿ ಮುನ್ನಡೆಯಲ್ಲಿತ್ತು. ಆದರೆ ನಾಲ್ಕು ನಿಮಿಷಗಳಿದ್ದಾಗ ಎದುರಾಳಿ ತಂಡವನ್ನು ಆಲೌಟ್‌ ಮಾಡಿದ ಬುಲ್ಸ್‌ ತಂಡ ಹಿನ್ನಡೆಯನ್ನು 38–40ಕ್ಕೆ ಇಳಿಸಿತು. ನಂತರ ಏಕಾಂಗಿಯಾಗಿ ಯಶಸ್ವಿ ರೈಡ್‌ಗಳ ಮೂಲಕ ಪವನ್‌ ತಂಡವನ್ನು ಗೆಲುವಿನತ್ತ ಒಯ್ದರು.

ಪವನ್‌ ಮೂರು ಬೋನಸ್‌ ಸೇರಿ 29 ಪಾಯಿಂಟ್ಸ್‌ ಸಂಗ್ರಹಿಸಿದರು. ತಂಡ ಒಟ್ಟಾರೆ ರೈಡಿಂಗ್‌ನಲ್ಲಿ ಗಳಿಸಿದ್ದ 27 ರೈಡಿಂಗ್‌ ಪಾಯಿಂಟ್‌ಗಳಲ್ಲಿ 26 ಈ ಆಟಗಾರನಿಂದಲೇ ಬಂದಿದ್ದು ವಿಶೇಷ. ರಕ್ಷಣೆಯ ವಿಭಾಗದಲ್ಲಿ ಸೌರಬ್‌ ನಂದಲ್‌ ಆರು ಪಾಯಿಂಟ್ಸ್‌ ಗಳಿಸಿದರು.

ಇದು ಬುಲ್ಸ್ ತಂಡಕ್ಕೆ ನಾಲ್ಕು ಪಂದ್ಯಗಳಲ್ಲಿ ಮೂರನೇ ಗೆಲುವು. ಬುಲ್ಸ್ ಐದನೇ ಸ್ಥಾನದಲ್ಲಿದ್ದರೆ, ವಾರಿಯರ್ಸ್‌ ತಂಡ ಆರನೇ ಸ್ಥಾನದಲ್ಲಿದೆ.

ಶನಿವಾರ ಆರಂಭವಾದ ಪಟ್ನಾ ಲೆಗ್‌ನ ಮೊದಲ ಪಂದ್ಯದಲ್ಲಿ ಪಿಂಕ್‌ ಪ್ಯಾಂಥರ್ಸ್‌ ತಂಡ 34–21 ರಿಂದ (ವಿರಾಮ: 15–9) ಆತಿಥೇಯ ಪಟ್ನಾ ಪೈರೇಟ್ಸ್‌ ತಂಡವನ್ನು ಮಣಿಸಿತು. ದೀಪಕ್‌ ನರ್ವಾಲ್‌ 9 ಪಾಯಿಂಟ್ಸ್‌ ಗಳಿಸಿದರೆ, ಉತ್ತಮ ಫಾರ್ಮ್‌ನಲ್ಲಿರುವ ಸಂದೀಪ್‌ ಧುಲ್‌ ಟ್ಯಾಕ್ಲಿಂಗ್‌ನಲ್ಲಿ ಮಿಂಚಿ ಎಂಟು ಪಾಯಿಂಟ್ಸ್ ಗಳಿಸಿದರು.

ಪಿಂಕ್‌ ಪ್ಯಾಂಥರ್ಸ್‌ ತಂಡ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದು 20 ಪಾಯಿಂಟ್‌ಗಳೊಡನೆ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

1 × one =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you