14.9 C
London
Thursday, May 16, 2024
HomeAction Replayಡ್ಯುರಾಂಡ್‌ ಕಪ್‌ ಫುಟ್‌ಬಾಲ್‌ ಟೂರ್ನಿಯ ಡ್ರಾ ಪಂದ್ಯದಲ್ಲಿ ಬೆಂಗಳೂರು ಎಫ್‌ಸಿ

ಡ್ಯುರಾಂಡ್‌ ಕಪ್‌ ಫುಟ್‌ಬಾಲ್‌ ಟೂರ್ನಿಯ ಡ್ರಾ ಪಂದ್ಯದಲ್ಲಿ ಬೆಂಗಳೂರು ಎಫ್‌ಸಿ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಕೋಲ್ಕತ್ತ : ಬೆಂಗಳೂರು ಎಫ್‌ಸಿ ತಂಡದ ಹೊಸ ಆಟಗಾರ ಸುರೇಶ್‌ ವಾಂಗ್ಜಾಮ್‌ 81ನೇ ನಿಮಿಷ ‘ಪೆನಾಲ್ಟಿ’ ಅವಕಾಶವನ್ನು ಗೋಲಾಗಿ ಪರಿವರ್ತಿಸಿ, ತಮ್ಮ ತಂಡ ಡ್ಯುರಾಂಡ್‌ ಕಪ್‌ ಫುಟ್‌ಬಾಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಆರ್ಮಿ ರೆಡ್‌ ವಿರುದ್ಧದ ಪಂದ್ಯವನ್ನು 1–1 ಗೋಲುಗಳಿಂದ ‘ಡ್ರಾ’ ಮಾಡಿಕೊಳ್ಳಲು ನೆರವಾದರು.

‌ಸೋಮವಾರ ಧಗೆಯ ವಾತಾವರಣವಿದ್ದು, ಸೂಪರ್‌ ಲೀಗ್‌ ಚಾಂಪಿಯನ್ನರಾದ ಬೆಂಗಳೂರು ಎಫ್‌ಸಿ ಇದಕ್ಕೆ ಹೊಂದಿಕೊಳ್ಳಲು ಪರದಾಡಿತು.

ಆರ್ಮಿ ತಂಡದ ಫಾರ್ವರ್ಡ್‌ ಆಟಗಾರ ಲಿಟೊನ್‌ ಶಿಲ್‌, ವಿರಾಮಕ್ಕೆ ಕೆಲವೇ ಸೆಕೆಂಡುಗಳಿರುವಾಗ ತಮ್ಮ ತಂಡಕ್ಕೆ ಮುನ್ನಡೆ ತಂದುಕೊಟ್ಟಿದ್ದರು. ಆದರೆ ಉತ್ತಮ ಪಾಸ್‌ಗಳನ್ನು ಕಂಡ ಮೊದಲಾರ್ಧದ ಹೆಚ್ಚಿನ ಅವಧಿಯಲ್ಲಿ ಬೆಂಗಳೂರು ಎಫ್‌ಸಿ ಮೇಲುಗೈ ಸಾಧಿಸಿತ್ತು.

ಪಂದ್ಯ ಮುಗಿಯಲು 9 ನಿಮಿಷಗಳಿರುವಂತೆ, ರಕ್ಷಣೆ ಆಟಗಾರ ನಾಮ್‌ಗ್ಯಾಲ್‌ ಅವರನ್ನು ಎದುರಾಳಿ ತಂಡದ ಬದಲಿ ಆಟಗಾರ ಆಲ್ವಿನ್‌ ಇ. ಅವರು ಗೋಲಿನ ಹತ್ತಿರ ಕೆಡವಿ ಬೀಳಿಸಿದ ಪರಿಣಾಮ ಬೆಂಗಳೂರು ಎಫ್‌ಸಿಗೆ ‘ಪೆನಾಲ್ಟಿ’ ಅವಕಾಶ ದೊರೆಯಿತು. ಬೆಂಗಳೂರು ತಂಡಕ್ಕೆ ಮೊದಲ ಬಾರಿ ಆಡಿದ ಸುರೇಶ್‌, ಸಂಯಮದಿಂದ ಈ ಅವಕಾಶವನ್ನು ಗೋಲಾಗಿ ಪರಿವರ್ತಿಸಿದರು.

ಈ ‘ಡ್ರಾ’ದಿಂದ ಒಂದು ಪಾಯಿಂಟ್‌ ಪಡೆದ ಬೆಂಗಳೂರು ಎಫ್‌ಸಿ ತಂಡ ಈಗ ‘ಎ’ ಗುಂಪಿನಲ್ಲಿ ಎರಡನೇ
ಸ್ಥಾನದಲ್ಲಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

8 + eight =