UncategorizedRCB ಅಭಿಮಾನಿಗಳಿಗೆ ಬಿಗ್ ಶಾಕ್.. ರಾಯಲ್ ಚಾಲೆಂಜರ್ಸ್’ಗೆ ಕೊಹ್ಲಿ ಗುಡ್ ಬೈ..?

RCB ಅಭಿಮಾನಿಗಳಿಗೆ ಬಿಗ್ ಶಾಕ್.. ರಾಯಲ್ ಚಾಲೆಂಜರ್ಸ್’ಗೆ ಕೊಹ್ಲಿ ಗುಡ್ ಬೈ..?

-

- Advertisment -spot_img

RCB ಅಭಿಮಾನಿಗಳಿಗೆ ಬಿಗ್ ಶಾಕ್.. ರಾಯಲ್ ಚಾಲೆಂಜರ್ಸ್’ಗೆ ಕೊಹ್ಲಿ ಗುಡ್ ಬೈ..?

ಟೀಮ್ ಇಂಡಿಯಾದ ಮಾಜಿ ನಾಯಕ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸೂಪರ್ ಸ್ಟಾರ್ ಕ್ರಿಕೆಟರ್, ಕಿಂಗ್ ಖ್ಯಾತಿಯ ವಿರಾಟ್ ಕೊಹ್ಲಿ RCBಗೆ ಗುಡ್ ಬೈ ಹೇಳಲಿದ್ದಾರಾ..? ಮುಂದಿನ ವರ್ಷದಿಂದ ವಿರಾಟ್ ಕೊಹ್ಲಿ ಐಪಿಎಲ್ ಟೂರ್ವಿಯಲ್ಲಿ ಆಡಲ್ವಾ..? ಇಂತಹ ಪ್ರಶ್ನೆಗಳು ಏಳುವಂತೆ ಮಾಡಿದೆ ಅದೊಂದು ಸುದ್ದಿ.


2008ರಲ್ಲಿ ಐಪಿಎಲ್ ಟೂರ್ನಿ ಆರಂಭವಾದ ದಿನದಿಂದ ವಿರಾಟ್ ಕೊಹ್ಲಿ ಆಡಿರುವುದು, ಆಡುತ್ತಾ ಬಂದಿರುವುದು ಒಂದೇ ತಂಡದ ಪರ, ಅದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಫ್ರಾಂಚೈಸಿ ಪರ 18 ವರ್ಷ ಆಡಿದ ಆಟಗಾರ ಯಾರಾದರೂ ಇದ್ದರೆ ಅದು ಕಿಂಗ್ ವಿರಾಟ್ ಕೊಹ್ಲಿ. 2008ರಲ್ಲಿ ಆರ್.ಸಿ.ಬಿ ಫ್ರಾಂಚೈಸಿ ಸೇರಿದ್ದ ವಿರಾಟ್ ಕೊಹ್ಲಿ ಅಂದಿನಿಂದ ಇಂದಿನವರೆಗೂ ಚಾಲೆಂಜರ್ಸ್ ಪರ ರಾಯಲ್ ಆಟವಾಡುತ್ತಾ ಬಂದಿದ್ದಾರೆ. ಐಪಿಎಲ್ ಕಪ್ ಗೆಲ್ಲಲಾಗದ ಕೊರಗನ್ನು ಈ ವರ್ಷದ ಟೂರ್ನಿಯಲ್ಲಿ ನೀಗಿಸಿಕೊಂಡಿದ್ದಾರೆ . ಆದರೆ ಮುಂದಿನ ವರ್ಷದಿಂದ ವಿರಾಟ್ ಕೊಹ್ಲಿ ಐಪಿಎಲ್ ಟೂರ್ನಿಯಲ್ಲಿ ಆಡುವ ಬಗ್ಗೆ ಖಚಿಚತೆಯೂ ಇಲ್ಲ, ಸ್ಪಷ್ಟತೆಯೂ ಇಲ್ಲ. ಕಾರಣ, ವಿರಾಟ್ ಕೊಹ್ಲಿ ಅವರ ಅದೊಂದು ನಡೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೊತೆಗಿನ ಒಪ್ಪಂದ ನವೀಕರಣಕ್ಕೆ ಸಹಿ ಹಾಕಲು ವಿರಾಟ್ ಕೊಹ್ಲಿ ನಿರಾಕರಿಸಿದ್ದಾರೆ. ಇದು ಹಲವಾರು ಅನುಮಾನಗಳನ್ನು ಹುಟ್ಟು ಹಾಕಿದೆ.

ಐಪಿಎಲ್’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಟ್ಟು 267 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 39.54ರ ಸರಾಸರಿಯಲ್ಲಿ 8 ಶತಕಗಳು ಮತ್ತು 63 ಅರ್ಧಶತಕಗಳ ಸಹಿತ 132.85ರ ಸ್ಟ್ರೈಕ್’ರೇಟ್’ನಲ್ಲಿ 8661 ರನ್ ಕಲೆ ಹಾಕಿದ್ದಾರೆ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

17 − six =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you