ಕ್ರಿಕೆಟ್ಡಾ.ತಿಮ್ಮಪ್ಪಯ್ಯ ಟ್ರೋಫಿ ಕ್ರಿಕೆಟ್ ಟೂರ್ನಿ: ಶರತ್,ಗೌತಮ್ ಗೆ ಇಲ್ಲ ಚಾನ್ಸ್; ಕರ್ನಾಟಕ...

ಡಾ.ತಿಮ್ಮಪ್ಪಯ್ಯ ಟ್ರೋಫಿ ಕ್ರಿಕೆಟ್ ಟೂರ್ನಿ: ಶರತ್,ಗೌತಮ್ ಗೆ ಇಲ್ಲ ಚಾನ್ಸ್; ಕರ್ನಾಟಕ ತೊರೆಯಲಿದ್ದಾರಾ ಈ ಕ್ರಿಕೆಟರ್ಸ್?

-

- Advertisment -spot_img

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿಷ್ಠಿತ ಡಾ.ತಿಮ್ಮಪ್ಪಯ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ನಾಲ್ಕು ತಂಡಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಅನುಭವಿ ಆಫ್ ಸ್ಪಿನ್ ಆಲ್ರೌಂಡರ್ ಕೆ.ಗೌತಮ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಬಿ.ಆರ್ ಶರತ್ ಅವರಿಗೆ ನಾಲ್ಕೂ ತಂಡಗಳಲ್ಲಿ ಸ್ಥಾನ ಸಿಕ್ಕಿಲ್ಲ.

KSCA ಟೂರ್ನಿಗೆ ಗೌತಮ್ ಮತ್ತು ಶರತ್ ಅವರಿಗೆ ಅವಕಾಶ ಸಿಗದಿರುವುದನ್ನು ನೋಡಿದರೆ, ಮುಂಬರುವ ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಗಳಲ್ಲೂ ಕರ್ನಾಟಕ ಸೀನಿಯರ್ ತಂಡದಲ್ಲಿ ಇವರಿಗೆ ಸ್ಥಾನ ಸಿಗುವುದು ಅನುಮಾನ. ಹೀಗಾಗಿ ಇವರಿಬ್ಬರೂ ಕರ್ನಾಟಕ ತಂಡವನ್ನು ತೊರೆದು ಅನ್ಯ ರಾಜ್ಯದ ಪರ ಆಡಲಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ.

ಡಾ.ತಿಮ್ಮಪ್ಪಯ್ಯ ಟೂರ್ನಿಯಲ್ಲಿ ಕೆಎಸ್‌ಸಿಎ ಇಲೆವೆನ್ ತಂಡವನ್ನು ಮನೀಶ್ ಪಾಂಡೆ ಮುನ್ನಡೆಸಲಿದ್ದಾರೆ. ಕೆಎಸ್‌ಸಿಎ ಸೆಕ್ರೆಟರಿ ಇಲೆವೆನ್ ತಂಡವನ್ನು ಶ್ರೇಯಸ್ ಗೋಪಾಲ್, ಕೆಎಸ್‌ಸಿಎ ಪ್ರೆಸಿಡೆಂಟ್ಸ್ ಇಲೆವೆನ್ ತಂಡವನ್ನು ಅನೀಶ್ವರ್ ಗೌತಮ್ ಮತ್ತು ಕೆಎಸ್‌ಸಿಎ ಕೋಲ್ಟ್ಸ್ ತಂಡವನ್ನು ಶುಭಾಂಗ್ ಹೆಗ್ಡೆ ಮುನ್ನಡೆಸಲಿದ್ದಾರೆ.

ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾಗಿರುವ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಕೆಎಸ್‌ಸಿಎ ಕೋಲ್ಟ್ಸ್ ತಂಡದ ಪರ ಆಡಲಿದ್ದಾರೆ.

KSCA XI
ಮನೀಶ್ ಪಾಂಡೆ (ನಾಯಕ), ನಿಕಿನ್ ಜೋಸ್, ಚೇತನ್ ಎಲ್.ಆರ್, ಅನೀಶ್ ಕೆ.ವಿ, ಸ್ಮರಣ್ ಆರ್, ಅಕ್ಷಣ್ ರಾವ್, ಶರತ್ ಶ್ರೀನಿವಾಸ್ (ವಿಕೆಟ್ ಕೀಪರ್), ಹಾರ್ದಿಕ್ ರಾಜ್, ವಿದ್ಯಾಧರ್ ಪಾಟೀಲ್, ವಿ.ಕೌಶಿಕ್, ಆದಿತ್ಯ ನಾಯರ್, ಮೊಹ್ಸಿನ್ ಖಾನ್, ಸ್ಯಾಂಟೋಕ್ ಸಿಂಗ್, ರೋಹಿತ್ ಕುಮಾರ್ ಎ.ಸಿ, ಸಂಜಯ್ ಅಶ್ವಿನ್.

KSCA SECRETARY XI
ಶ್ರೇಯಸ್ ಗೋಪಾಲ್ (ನಾಯಕ), ರೋಹನ್ ಪಾಟೀಲ್, ವಿಶಾಲ್ ಓನಟ್, ಕಿಶನ್ ಬೆದರೆ, ಅರ್ಸನಾಲ್ ಎಂ., ಕೃತಿಕ್ ಕೃಷ್ಣ (ವಿಕೆಟ್ ಕೀಪರ್), ಯಶೋವರ್ಧನ್ ಪರಂತಪ್, ಅಭಿಲಾಷ್ ಶೆಟ್ಟಿ, ಶಿಖರ ಶೆಟ್ಟಿ, ಅಧೋಕ್ಷ್ ಹೆಗ್ಡೆ, ಕುಮಾರ್ ಎಲ್.ಆರ್., ಜಸ್ಪೆರ್ ಇ.ಜೆ., ಆದಿತ್ಯ ಗೋಯಲ್, ನಿಶ್ಚಿತ್ ರಾವ್, ಶ್ರೀಜಿತ್ ಕೆ.ಎಲ್ (ವಿಕೆಟ್ ಕೀಪರ್), ಲವ್ನೀತ್ ಸಿಸೋಡಿಯಾ (ವಿಕೆಟ್ ಕೀಪರ್).

KSCA PRESIDENTS XI
ಅನೀಶ್ವರ್ ಗೌತಮ್ (ನಾಯಕ), ಮೆಕ್ನೀಲ್ ನೊರೋಹ್ನ, ಸ್ವರೂಪ್ ಎಸ್.ಎಚ್., ಅಭಿನವ್ ಮನೋಹರ್, ಸುಜಯ್ ಸತೇರಿ (ವಿಕೆಟ್ ಕೀಪರ್), ಮನೋಜ್ ಭಾಂಡಗೆ, ವರುಣ್ ರಾವ್, ಪರಾಸ್ ಗುರ್ಬಕ್ಸ್ ಆರ್ಯ, ಮೋನಿಶ್ ರೆಡ್ಡಿ, ರಾಜ್ವೀರ್ ವಾಧ್ವಾ, ಮನ್ವಂತ್ ಕುಮಾರ್ ಎಲ್., ಯಶ್ವಂತ್ ಬಿ.ಎನ್., ತುಷಾರ್ ಸಿಂಗ್, ಶಿವಕುಮಾರ್ ಬಿ.ಯು., ಅಭಿಷೇಕ್ ಪ್ರಭಾಕರ್.

KSCA COLTS
ಶುಭಾಂಗ್ ಹೆಗ್ಡೆ (ನಾಯಕ), ರೋಹಿತ್ ಆರ್.ವಿ., ಹರ್ಷಿಲ್ ಧರ್ಮಾನಿ, ಸಮಿತ್ ದ್ರಾವಿಡ್, ಕಾರ್ತಿಕೇಯ ಕೆ.ಪಿ, ಧೀರಜ್ ಗೌಡ, ಧ್ರುವ ಪ್ರಭಾಕರ್, ಸಮರ್ಥ್ ನಾಗರಾಜ್, ಧನುಷ್ ಗೌಡ, ನಿಶ್ಚಿತ್ ಪೈ, ಯುವರಾಜ್ ಅರೋರ (ವಿಕೆಟ್ ಕೀಪರ್), ಶಿವಂ ಎಂ.ಬಿ., ಮಾಧವ ಧರ್ವಡ್ಕರ್, ಇಶಾನ್ ಎಸ್., ಕ್ರಿಶಿವ್ ಬಜಾಜ್ (ವಿಕೆಟ್ ಕೀಪರ್)

LEAVE A REPLY

Please enter your comment!
Please enter your name here

five × 1 =

Latest news

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...
- Advertisement -spot_imgspot_img

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...

Must read

- Advertisement -spot_imgspot_img

You might also likeRELATED
Recommended to you