6.3 C
London
Tuesday, April 23, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕ್ರೀಡೆಯಿಂದ ಸೌಹಾರ್ದಯುತ ಸಮಾಜ ನಿರ್ಮಾಣ-ಜನಾಬ್ ಅಬ್ದುಲ್ ಮದನಿ

ಕ್ರೀಡೆಯಿಂದ ಸೌಹಾರ್ದಯುತ ಸಮಾಜ ನಿರ್ಮಾಣ-ಜನಾಬ್ ಅಬ್ದುಲ್ ಮದನಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕಾರ್ಕಳ-ಇಲ್ಲಿನ ಗಾಂಧಿ ಮೈದಾನದಲ್ಲಿ ಏಪ್ರಿಲ್ 29 ಶುಕ್ರವಾರದಂದು ಆರ್.ಸಿ.ಸಿ ಗುತ್ತಿಗೆದಾರರ ಸಂಘ(ರಿ)ಕಾರ್ಕಳ ಹೆಬ್ರಿ ವಲಯ ಇವರ ವತಿಯಿಂದ ಆಹ್ವಾನಿತ ಪ್ರತಿಷ್ಠಿತ ಸಂಸ್ಥೆಗಳ ನಡುವೆ ಕ್ರಿಕೆಟ್ ಪಂದ್ಯಾಟ ಜರುಗಿತು.
ಪಂದ್ಯಾಟವನ್ನು ಉದ್ಘಾಟಿಸಿ  ಮಾತನಾಡಿ ಕಾಬೆಟ್ಟು ಮಹಮ್ಮದೀಯ ಜುಮ್ಮಾ ಮಸ್ಜಿದ್ ನ ಖತೀಬರಾದ ಜನಾಬ್ ಅಬ್ದುಲ್ಲ ಮದನಿ “ಕ್ರೀಡೆ ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿ ಕೊಡುತ್ತದೆ” ಎಂದರು.”ಈ ಸಂದರ್ಭ ಬಂಡಿಮಠ ಮೂಡುಮಹಾಗಣಪತಿ ದೇವಸ್ಥಾನ ಅರ್ಚಕರಾದ ಶ್ರೀ ಗಣೇಶ್ ಭಟ್, ಕ್ರೈಸ್ಟ್ ಕಿಂಗ್ ಚರ್ಚ್ ಕಾರ್ಕಳ ಆತ್ಮಿಕ ನಿರ್ದೇಶಕರಾದ ವಂ|ಫಾ|ಕ್ಲೆಮೆಂಟ್ ಮಸ್ಕರೇನ್ಹಸ್ ಮತ್ತು ಸಂಘದ ಗೌರವ ಅಧ್ಯಕ್ಷರು ಗೋಪಾಲ್ ಅಂಚನ್ ಹಾಗೂ ಅಧ್ಯಕ್ಷರು ಕೋಟ ದಾಮೋದರ ಆಚಾರ್ ಕಾರ್ಕಳ ಉಪಸ್ಥಿತರಿದ್ದರು.
ಸಂಘಟನೆಯ ಉತ್ತಮ ಸಾಮಾಜಿಕ ಯೋಜನೆಗಳ ಸಹಾಯಾರ್ಥವಾಗಿ ನಡೆದ ಈ ಕ್ರಿಕೆಟ್ ಪಂದ್ಯಾಟದಲ್ಲಿ ಒಟ್ಟು 11 ತಂಡಗಳು ಭಾಗವಹಿಸಿದ್ದು,
ಅಂತಿಮವಾಗಿ ಫೈನಲ್ ನಲ್ಲಿ R.C.C ಕಾರ್ಕಳ ತಂಡ-SKPA ಕಾರ್ಕಳ ತಂಡವನ್ನು‌ ಸೋಲಿಸಿ ಪ್ರಥಮ‌ ಪ್ರಶಸ್ತಿ ತಮ್ಮದಾಗಿಸಿಕೊಂಡರು.
ಫೈನಲ್ ನ ಪಂದ್ಯಶ್ರೇಷ್ಟ RCC ತಂಡದ ಸುಕೇಶ್,ಉತ್ತಮ ದಾಂಡಿಗ SKPA ತಂಡದ ಪ್ರಣಾಮ್,ಉತ್ತಮ ಬೌಲರ್ ವಿಜಯ್ SKPA,R.C.C ತಂಡದ ಮಹೇಶ್ ಸರಣಿ ಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು.
ಸಮಾರೋಪ‌ ಸಮಾರಂಭದಲ್ಲಿ
ಮಾತನಾಡಿದ RCC ಗುತ್ತಿಗೆದಾರರ ಸಂಘ(ರಿ)ಅಧ್ಯಕ್ಷರಾದ ಕೋಟ ದಾಮೋದರ ಆಚಾರ್ ಕಾರ್ಕಳ ಮಾತನಾಡಿ “ಸಂಘದ ಸರ್ವ ಸದಸ್ಯರ ಸಹಕಾರದಿಂದ ಪಂದ್ಯಾಟ ಯಶಸ್ವಿಯಾಗಿದೆ ಮುಂದಿನ ಎಲ್ಲಾ ಯೋಜನೆಗಳಲ್ಲೂ ನಿಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದರು.ಈ ಸಂದರ್ಭ RCC ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷರಾದ ಗೋಪಾಲ್ ಅಂಚನ್,ಉಪಾಧ್ಯಕ್ಷ ವಿಕ್ರಮ್,ಕ್ರೀಡಾ ಕಾರ್ಯದರ್ಶಿ ಗಣೇಶ್,ಶ್ರೀನಿವಾಸ್ ಜಿ.ಕೆ ಪೈ ವಿನ್ಯಾಸ್ ಇಂಜಿನಿಯರಿಂಗ್,ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಯುವ ಉದ್ಯಮಿ ಮನೋಹರ್ ಪ್ರಭು ವಿನ್ಯಾಸ್,
ಅವಿನಾಶ್.ಜಿ.ಶೆಟ್ಟಿ,ಸ್ಪೋರ್ಟ್ಸ್ ಕನ್ನಡ ಕೋಟ ರಾಮಕೃಷ್ಣ ಆಚಾರ್,SKPA ವಲಯ ಅಧ್ಯಕ್ಷರಾದ ಪದ್ಮಪ್ರಸಾದ್ ಹಾಗೂ ಸುಶೀಲ್ ಕುಮಾರ್,RCC ಸಂಘದ ಕಾರ್ಯದರ್ಶಿ ಚಂದ್ರ ಆಚಾರ್ ಹಾಗೂ ಪದಾಧಿಕಾರಿಗಳು ಸರ್ವಸದಸ್ಯರು ಉಪಸ್ಥಿತರಿದ್ದರು.ಪ್ರಶಾಂತ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಪ್ರಸಿದ್ಧ ವೀಕ್ಷಕ ವಿವರಣೆಕಾರರಾದ
ಶಿವನಾರಾಯಣ ಐತಾಳ್ ಕೋಟ ವೀಕ್ಷಕ ವಿವರಣೆಯಲ್ಲಿ ಭಾಗವಹಿಸಿದರೆ,ಪಂದ್ಯಾಟದ ನೇರ ಪ್ರಸಾರ ಸ್ಪೋರ್ಟ್ಸ್ ಕನ್ನಡ ಟಿ.ವಿ ಯೂಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಂಡಿತು.ಮಂಗಳೂರಿನ ಆಕರ್ಷಕ ಗೊಂಬೆ ವೇಷ ನೆರೆದ ಕ್ರೀಡಾ ಪ್ರೇಕ್ಷಕರನ್ನು ರಂಜಿಸಿತು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

four × three =