ಕ್ರಿಕೆಟ್ಮಾನವೀಯ ನೆಲೆಯ ಸುಂದರ ಪರಿಕಲ್ಪನೆ-ಸುಚೇತ್ ಶೆಟ್ಟಿ ಸಾರಥ್ಯದಲ್ಲಿ ಅದ್ಧೂರಿಯ ಬಂಟ್ಸ್ ಬಿಗ್...

ಮಾನವೀಯ ನೆಲೆಯ ಸುಂದರ ಪರಿಕಲ್ಪನೆ-ಸುಚೇತ್ ಶೆಟ್ಟಿ ಸಾರಥ್ಯದಲ್ಲಿ ಅದ್ಧೂರಿಯ ಬಂಟ್ಸ್ ಬಿಗ್ ಬ್ಯಾಶ್ ಲೀಗ್.

-

- Advertisment -spot_img
ಪ್ರತಿಕ್ಷಣವೂ ಬರುವ ಸಣ್ಣ ಸಣ್ಣ ಸಂತೋಷಗಳನ್ನು ಅನುಭವಿಸುತ್ತಾ,ತಮ್ಮ ಪುಟ್ಟ ಕಂಗಳಲ್ಲಿ ಕನಸನ್ನು ಕಾಣುತ್ತಿರುವ,ಅಪ್ಪ ಅಮ್ಮನ ಕಣ್ಣಿಂದ ಕಣ್ಣು ತೆರೆಯುವ ಮುನ್ನವೇ ಅನಾಥರಾಗುವ ಅದೆಷ್ಟೋ ಮುಗ್ಧ ಮನಸ್ಸುಗಳಿಗೆ ಆಸರೆಯಾಗಬೇಕು ಎನ್ನುವ ಒಂದು ಸುಂದರ ಪರಿಕಲ್ಪನೆಯ ಜೊತೆಗೆ ಪ್ರಾಮಾಣಿಕವಾಗಿ ಬದುಕಿ,ಸ್ವಂತ ಚಿಂತೆಗಳನ್ನು ಬದಿಗಿಟ್ಟು ಇನ್ನೊಬ್ಬರ ಧ್ವನಿಗೆ ಧ್ವನಿಯಾಗಬೇಕೆಂಬ ಮಾನವೀಯ ನೆಲೆಯಲ್ಲಿ ಕುಂದಾಪುರ ಮೂಲದ ಉದ್ಯಮಿ ಸುಚೇತ್‌ ಶೆಟ್ಟಿ ಸಾರಥ್ಯದಲ್ಲಿ ಬಂಟ್ಸ್ ಬ್ಯಾಶ್ ಲೀಗ್-2021 ಪಂದ್ಯಾಕೂಟ ನಡೆಯಲಿದೆ.
2020ರಲ್ಲೇ ಘೊಷಣೆಯಾಗಿದ್ದ ಈ ಪಂದ್ಯಾಕೂಟ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್-19 ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು.ಈ ಬಾರಿ ಬಂಟ್ಸ್ ಬಿಗ್ ಬ್ಯಾಶ್ ಲೀಗ್ ಮಾರ್ಚ್ 27 ಹಾಗೂ 28 ರಂದು ಬೆಂಗಳೂರಿನ ಜೆ‌.ಪಿ‌.ಪಾರ್ಕ್ ಅಂಗಣದಲ್ಲಿ ಹೊನಲು ಬೆಳಕಿನಲ್ಲಿ ಆಯೋಜಿಸಲಾಗಿದೆ.
ಬಂಟ ಸಮುದಾಯದ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ವಿಜೇತ ತಂಡಕ್ಕೆ ಚಿನ್ನದ ಮಿನುಗುವ ಟ್ರೋಫಿಯೊಂದಿಗೆ 2 ಲಕ್ಷ ನಗದು ಹಾಗೂ ರನ್ನರ್ ಅಪ್ ತಂಡಕ್ಕೆ 1ಲಕ್ಷ ನಗದು ಬಹುಮಾನ‌ ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ.
ಈಗಾಗಲೇ ತಂಡಗಳ ಬಿಡ್ಡಿಂಗ್ ಪ್ರಕ್ರಿಯೆ ಮುಗಿದಿದ್ದು 8 ತಂಡಗಳ ವಿವರ ಈ ಕೆಳಗಿನಂತಿದೆ.
1)ಅಭಯ್ ಕ್ರಿಕೆಟರ್ಸ್
2)ಬಂಟ್ಸ್ ಯುನೈಟೆಡ್
3)ಗೂಗ್ಲಿ ಪೊಳಲಿ ಟೈಗರ್ಸ್
4)ಈಶಾನಿ ಸಹಾರಾ ಕ್ರಿಕೆಟರ್ಸ್
5)S.D.C.C(ಶ್ರೀ ದುರ್ಗಾ ಕ್ರಿಕೆಟ್ ಕ್ಲಬ್)
6)ಶೆಟ್ಟಿ ಎಂಪೈರ್‌
7)ಉಡುಪಿ ಹಾಸ್ಪಿಟಾಲಿಟಿ ಸರ್ವಿಸಸ್
8)ಯುನೈಟೆಡ್ ವಾರಿಯರ್ಸ್
ಪಂದ್ಯಾಕೂಟದ  ನೇರ ಪ್ರಸಾರವನ್ನು ಕ್ರಿಕ್ ಸೇ ಬಿತ್ತರಿಸಿದರೆ,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eighteen + seven =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you