7.1 C
London
Wednesday, April 24, 2024
Homeಕ್ರಿಕೆಟ್ಮಾನವೀಯ ನೆಲೆಯ ಸುಂದರ ಪರಿಕಲ್ಪನೆ-ಸುಚೇತ್ ಶೆಟ್ಟಿ ಸಾರಥ್ಯದಲ್ಲಿ ಅದ್ಧೂರಿಯ ಬಂಟ್ಸ್ ಬಿಗ್ ಬ್ಯಾಶ್ ಲೀಗ್.

ಮಾನವೀಯ ನೆಲೆಯ ಸುಂದರ ಪರಿಕಲ್ಪನೆ-ಸುಚೇತ್ ಶೆಟ್ಟಿ ಸಾರಥ್ಯದಲ್ಲಿ ಅದ್ಧೂರಿಯ ಬಂಟ್ಸ್ ಬಿಗ್ ಬ್ಯಾಶ್ ಲೀಗ್.

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಪ್ರತಿಕ್ಷಣವೂ ಬರುವ ಸಣ್ಣ ಸಣ್ಣ ಸಂತೋಷಗಳನ್ನು ಅನುಭವಿಸುತ್ತಾ,ತಮ್ಮ ಪುಟ್ಟ ಕಂಗಳಲ್ಲಿ ಕನಸನ್ನು ಕಾಣುತ್ತಿರುವ,ಅಪ್ಪ ಅಮ್ಮನ ಕಣ್ಣಿಂದ ಕಣ್ಣು ತೆರೆಯುವ ಮುನ್ನವೇ ಅನಾಥರಾಗುವ ಅದೆಷ್ಟೋ ಮುಗ್ಧ ಮನಸ್ಸುಗಳಿಗೆ ಆಸರೆಯಾಗಬೇಕು ಎನ್ನುವ ಒಂದು ಸುಂದರ ಪರಿಕಲ್ಪನೆಯ ಜೊತೆಗೆ ಪ್ರಾಮಾಣಿಕವಾಗಿ ಬದುಕಿ,ಸ್ವಂತ ಚಿಂತೆಗಳನ್ನು ಬದಿಗಿಟ್ಟು ಇನ್ನೊಬ್ಬರ ಧ್ವನಿಗೆ ಧ್ವನಿಯಾಗಬೇಕೆಂಬ ಮಾನವೀಯ ನೆಲೆಯಲ್ಲಿ ಕುಂದಾಪುರ ಮೂಲದ ಉದ್ಯಮಿ ಸುಚೇತ್‌ ಶೆಟ್ಟಿ ಸಾರಥ್ಯದಲ್ಲಿ ಬಂಟ್ಸ್ ಬ್ಯಾಶ್ ಲೀಗ್-2021 ಪಂದ್ಯಾಕೂಟ ನಡೆಯಲಿದೆ.
2020ರಲ್ಲೇ ಘೊಷಣೆಯಾಗಿದ್ದ ಈ ಪಂದ್ಯಾಕೂಟ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್-19 ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು.ಈ ಬಾರಿ ಬಂಟ್ಸ್ ಬಿಗ್ ಬ್ಯಾಶ್ ಲೀಗ್ ಮಾರ್ಚ್ 27 ಹಾಗೂ 28 ರಂದು ಬೆಂಗಳೂರಿನ ಜೆ‌.ಪಿ‌.ಪಾರ್ಕ್ ಅಂಗಣದಲ್ಲಿ ಹೊನಲು ಬೆಳಕಿನಲ್ಲಿ ಆಯೋಜಿಸಲಾಗಿದೆ.
ಬಂಟ ಸಮುದಾಯದ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ವಿಜೇತ ತಂಡಕ್ಕೆ ಚಿನ್ನದ ಮಿನುಗುವ ಟ್ರೋಫಿಯೊಂದಿಗೆ 2 ಲಕ್ಷ ನಗದು ಹಾಗೂ ರನ್ನರ್ ಅಪ್ ತಂಡಕ್ಕೆ 1ಲಕ್ಷ ನಗದು ಬಹುಮಾನ‌ ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ.
ಈಗಾಗಲೇ ತಂಡಗಳ ಬಿಡ್ಡಿಂಗ್ ಪ್ರಕ್ರಿಯೆ ಮುಗಿದಿದ್ದು 8 ತಂಡಗಳ ವಿವರ ಈ ಕೆಳಗಿನಂತಿದೆ.
1)ಅಭಯ್ ಕ್ರಿಕೆಟರ್ಸ್
2)ಬಂಟ್ಸ್ ಯುನೈಟೆಡ್
3)ಗೂಗ್ಲಿ ಪೊಳಲಿ ಟೈಗರ್ಸ್
4)ಈಶಾನಿ ಸಹಾರಾ ಕ್ರಿಕೆಟರ್ಸ್
5)S.D.C.C(ಶ್ರೀ ದುರ್ಗಾ ಕ್ರಿಕೆಟ್ ಕ್ಲಬ್)
6)ಶೆಟ್ಟಿ ಎಂಪೈರ್‌
7)ಉಡುಪಿ ಹಾಸ್ಪಿಟಾಲಿಟಿ ಸರ್ವಿಸಸ್
8)ಯುನೈಟೆಡ್ ವಾರಿಯರ್ಸ್
ಪಂದ್ಯಾಕೂಟದ  ನೇರ ಪ್ರಸಾರವನ್ನು ಕ್ರಿಕ್ ಸೇ ಬಿತ್ತರಿಸಿದರೆ,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

4 × three =