ಕ್ರಿಕೆಟ್ಬೆಳಕಿನೆಡೆಗೆ "ಬಂಟ್ಸ್ ಬಿಗ್ ಬ್ಯಾಷ್ ಲೀಗ್-2020"

ಬೆಳಕಿನೆಡೆಗೆ “ಬಂಟ್ಸ್ ಬಿಗ್ ಬ್ಯಾಷ್ ಲೀಗ್-2020”

-

- Advertisment -spot_img

 

ಪ್ರತಿಕ್ಷಣವೂ ಬರುವ ಸಣ್ಣ ಸಣ್ಣ ಸಂತೋಷಗಳನ್ನು ಅ ನುಭವಿಸುತ್ತಾ ತಮ್ಮ ಪುಟ್ಟ ಕಂಗಳಲ್ಲಿ ಕನಸನ್ನು ಕಾಣುತ್ತಾ ಇರುವ,ಅಪ್ಪ ಅಮ್ಮನ ಕಣ್ಣಿಂದ ಕಣ್ಣು ತೆರೆಯುವ ಮುನ್ನವೇ ಅನಾಥರಾಗುವ ಅದೆಷ್ಟೋ ಮುಗ್ಧ ಮನಸ್ಸುಗಳಿಗೆ ಆಸರೆಯಾಗಬೇಕು ಅನ್ನುವ ಒಂದು ಸುಂದರ ಪರಿಕಲ್ಪನೆಯ ಜೊತೆಗೆ ಪ್ರಾಮಾಣಿಕವಾಗಿ ಬದುಕಿ,ನಮ್ಮ ಚಿಂತೆಗಳನ್ನು ಬಿಟ್ಟು ಇನ್ನೊಬ್ಬರ ಧ್ವನಿಗೆ ಧ್ವನಿಯಾಗಬೇಕೆಂಬ ಮಾನವೀಯ ನೆಲೆಯಲ್ಲಿ ಕುಂದಾಪುರ ಮೂಲದ ಉದ್ಯಮಿ ಸುಚೇತ್ ಶೆಟ್ಟಿ ಸಾರಥ್ಯದಲ್ಲಿ

 

ಮಾರ್ಚ್ 21,22 ರಂದು ಬೆಂಗಳೂರಿನ ಜೆ.ಪಿ.ಪಾರ್ಕ್ ಮತ್ತಿಕೆರೆ ಅಂಗಣದಲ್ಲಿ 2 ದಿನಗಳ ಹೊನಲು ಬೆಳಕಿನ ಬಂಟ ಸಮುದಾಯದ ಪ್ರತಿಷ್ಟಿತ “ಬಂಟ್ಸ್ ಬ್ಯಾಷ್ ಲೀಗ್-2020” ಪಂದ್ಯಾವಳಿ ನಡೆಯಲಿದೆ.

ಕಳೆದ ವಾರ ಆಟಗಾರರ ಹರಾಜು ಪ್ರಕ್ರಿಯೆ ಹಾಗೂ ಜೆರ್ಸಿ ವಿತರಣೆ ಕಾರ್ಯಕ್ರಮ ನಡೆದಿದ್ದು‌ ಕುಂದಾಪುರದ ಭೋಜರಾಜ್ ಶೆಟ್ಟಿ ಅತಿ ಹೆಚ್ಚು ಮೊತ್ತಕ್ಕೆ ಬಿಡ್ ಆಗಿದ್ದಾರೆ. ಈ ಸಂದರ್ಭ ಉದ್ಯಮಿ ಅನಂತ್ ರಾಮ್ ಶೆಟ್ಟಿ, ರಾಮಕೃಷ್ಣ ಶೆಟ್ಟಿ,ರಾಧಾಕೃಷ್ಣ ಶೆಟ್ಟಿ, ಸಮಾಜ ಸೇವಕಿ ಸೌಮ್ಯ ಪ್ರಿಯಾ ಹೆಗ್ಡೆ,ಅಮೃತಾ ಶೆಟ್ಟಿ ಹಾಗೂ ಆಕ್ಷನ್ ಪ್ರಕ್ರಿಯೆ ನಡೆಸಿದ ಹಿರಿಯ ಪ್ರಸಿದ್ಧ ವೀಕ್ಷಕ ವಿವರಣೆಕಾರ ಶಿವನಾರಾಯಣ ಐತಾಳ್ ಹಾಗೂ ನಿಕೇಶ್ ಶೆಟ್ಟಿ ಉಪಸ್ಥಿತರಿದ್ದರು. ಕ್ರಿಕ್ ಸೇ ನೇರ ಪ್ರಸಾರವನ್ನು ಬಿತ್ತರಿಸಿತ್ತು.

ಐ.ಪಿ.ಎಲ್ ಮಾದರಿಯಲ್ಲಿ ಸಾಗುವ ಈ ಪಂದ್ಯಾವಳಿಯಲ್ಲಿ ಭಾಗವಹಿಸುವ
8 ಫ್ರಾಂಚೈಸಿಗಳ ವಿವರ ಈ ಕೆಳಗಿನಂತಿದೆ.
1.ಈಶಾನಿ ಸಹಾರಾ ಕ್ರಿಕೆಟರ್ಸ್
2.ಶೆಟ್ಟಿ ಎಂಪೈರ್
3.ಎಸ್.ಡಿ.ಸಿ.ಸಿ
4.ಉಡುಪಿ ಹಾಸ್ಪಿಟಾಲಿಟಿ ಸರ್ವಿಸಸ್
5.ಗೂಗ್ಲಿ ಪೊಳಲಿ ಟೈಗರ್ಸ್
6.ಬಂಟ್ಸ್ ಯುನೈಟೆಡ್‌ ಮಂಗಳೂರು
7.ಯುನೈಟೆಡ್ ವಾರಿಯರ್ಸ್
8.ಅಭಯ್ ಕ್ರಿಕೆಟರ್ಸ್.

ಚಿನ್ನದ ಟ್ರೋಫಿ ಹಾಗೂ ಗರಿಷ್ಠ ನಗದು ಬಹುಮಾನ

ಬಂಟ ಸಮುದಾಯದ ಇತಿಹಾಸದಲ್ಲೇ ಮೊತ್ತ ಮೊದಲ ಬಾರಿಗೆ ಚಾಂಪಿಯನ್ಸ್ ತಂಡಕ್ಕೆ
ಮಿರುಗುವ ಚಿನ್ನದ ಟ್ರೋಫಿಯನ್ನು ನೀಡಲಾಗುತ್ತಿದ್ದು ಜೊತೆಗೆ 1.5 ಲಕ್ಷ ನಗದು,ರನ್ನರ್ಸ್ ತಂಡ 1 ಲಕ್ಷ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.

ಜೀವನಕ್ಕೆ ಯಶಸ್ಸು ಸಿಗಬೇಕಾದರೆ ಪರಿಶ್ರಮ ಪಡಬೇಕು,ಯಶಸ್ಸು ಅಂದರೆ ಬರಿ ಹಣ ಅಧಿಕಾರ ಅಲ್ಲ.ನಮ್ಮನ್ನು ಅರಸಿ ಬರುವ ಅದೆಷ್ಟೋ ಮುಗ್ಧ ಮನಸ್ಸುಗಳಿಗೆ ಆಸರೆಯಾಗಿ ಬದುಕಬೇಕೆನ್ನುವ ನಿಲುವಿನಲ್ಲಿ ಸಾಗುತ್ತಿರುವ ಪ್ರಪಂಚದಲ್ಲಿ ಎಲ್ಲರಿಗೂ ಬದುಕುವ,ಪ್ರೀತಿಸುವ ಹಕ್ಕಿದೆ.ಅವರನ್ನೂ ಅವಕಾಶ ವಂಚಿತರನ್ನಾಗಿಸದೆ,ಅವರಿಗೂ ಕೂಡ ಕನಸುಗಳಿದೆ,ಆಸೆಗಳಿದೆ ಅನ್ನುವತ್ತ ನಮ್ಮ ಯೋಚನೆಯನ್ನು ಹರಿಸಬೇಕು ಅನ್ನುವ ಧೃಡ ನಿಲುವಿನೊಂದಿಗೆ ಆಯೋಜನೆಗೊಂಡಿರುವ ಈ ಪಂದ್ಯಾವಳಿಯಲ್ಲಿ ಬರುವ ಹಣದಿಂದ ಕನಿಷ್ಟ 5 ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಭರಿಸುವ ಯೋಚನೆಯನ್ನು ಆಯೋಜಕರು ಹೊಂದಿರುವುದು ಅತೀವ ಸಂತೋಷದ ವಿಚಾರ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eighteen + 5 =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you