ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಬೈಂದೂರು ವಿಕ್ರಮ್ ಕ್ರಿಕೆಟ್ ಕ್ಲಬ್ ನಿಂದ ಬೇಸಿಗೆ ಕ್ರಿಕೆಟ್ ತರಬೇತಿ...

ಬೈಂದೂರು ವಿಕ್ರಮ್ ಕ್ರಿಕೆಟ್ ಕ್ಲಬ್ ನಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ

-

- Advertisment -spot_img
ಬೈಂದೂರು: ಬೈಂದೂರು ಮತ್ತು ಸುತ್ತಮುತ್ತಲಿನ ಕ್ರಿಕೆಟ್ ಆಸಕ್ತ ಮಕ್ಕಳಿಗೆ  ಕ್ರಿಕೆಟ್ ತರಬೇತಿಯನ್ನು ನೀಡಿ   ಪ್ರತಿಭಾವಂತ ಕ್ರಿಕೆಟ್ ಆಟಗಾರರನ್ನಾಗಿ ಮಾರ್ಪಡಿಸಲು  ಪ್ರತಿಷ್ಠಿತ ವಿಕ್ರಮ್ ಕ್ರಿಕೆಟ್  ಕ್ಲಬ್  ಬೈಂದೂರು ವಾರ್ಷಿಕ ತರಬೇತಿ ಶಿಬಿರವನ್ನು ಆರಂಭಿಸಿದೆ.
ಬೈಂದೂರು ನಗರದ ವಿಕ್ರಮ್ ಕ್ರಿಕೆಟ್  ಕ್ಲಬ್   ಪ್ರತಿಭಾವಂತ ಕ್ರಿಕೆಟ್ ಪಟುಗಳಿಗಾಗಿ ಆಯೋಜಿಸಿರುವ ಶಿಬಿರ ಏಪ್ರಿಲ್  1 ರಿಂದ ಆರಂಭಗೊಳ್ಳಲಿದ್ದು, ಮೇ 31ರವರೆಗೆ ಬೈಂದೂರಿನ  ಮೈದಾನದಲ್ಲಿ ಶಿಬಿರ ನಡೆಸಿ ತರಬೇತಿ ನೀಡುತ್ತಿದೆ. 10 ವರ್ಷದ ಮಕ್ಕಳಿಂದ 23 ವರ್ಷದೊಳಗಿನ ಬಾಲಕ ಬಾಲಕಿಯರಿಗೆ ಇಲ್ಲಿ ತರಬೇತಿ ನೀಡಿ ಪ್ರತಿಭಾವಂತರನ್ನು ಗುರುತಿಸುವ ಕಾರ್ಯದಲ್ಲಿ ತೊಡಗಿದೆ. ಪಾಲ್ಗೊಂಡವರಿಗೆ ಪ್ರಮಾಣಪತ್ರ ಮತ್ತು ಸ್ಮರಣಿಕೆ ವಿತರಿಸಲಾಗುವುದು.
ಕಳೆದ ಬಹಳಷ್ಟು ವರ್ಷಗಳಿಂದ ಸತತವಾಗಿ ವಾರ್ಷಿಕ ತರಬೇತಿ, ಬೇಸಿಗೆ ಶಿಬಿರಗಳನ್ನು ನಡೆಸುತ್ತಿರುವ ವಿಕ್ರಮ್ ಕ್ರಿಕೆಟ್  ಕ್ಲಬ್  ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ನಡೆಸಿ ಆಯೋಜಿಸಿ ಪ್ರತಿಭಾವಂತ ಕ್ರಿಕೆಟ್ ಪಟುಗಳ ಶೋಧಕಾರ್ಯದಲ್ಲಿ ನಿರತವಾಗಿದೆ . ಇಲ್ಲಿ ಉತ್ಸಾಹಿ ಹಿರಿಯ ಆಟಗಾರರು ಮತ್ತು ತಜ್ಞ ಕ್ರಿಕೆಟ್ ಪಟುಗಳ ಮಾರ್ಗದರ್ಶನದಲ್ಲಿ ತರಬೇತಿ ನೀಡಿ, ಪ್ರತಿಭಾವಂತರನ್ನು ವೃತ್ತಿಪರ ಕ್ರಿಕೆಟ್‍ಗೆ ಪೂರಕವಾಗಿ ತಯಾರಿ ನಡೆಸಲಾಗುತ್ತದೆ ಎಂದು ಕ್ಲಬ್ ನ ದಿನೇಶ್ ಗಾಣಿಗ ಬೈಂದೂರು ತಿಳಿಸಿದ್ದಾರೆ.
ಇಲ್ಲಿ ತರಬೇತಿ ಪಡೆದ ಸಾಕಷ್ಟು ಮಕ್ಕಳು ಜಿಲ್ಲಾಮಟ್ಟ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಭವಿಷ್ಯ ರೂಪಿಸಿಕೊಂಡಿದ್ದಾರೆ ಎಂದು ತಿಳಿಸಿರುವ ಅವರು, ಆಸಕ್ತ ಕ್ರಿಕೆಟ್ ಪ್ರೇಮಿಗಳು ಒಟ್ಟುಗೂಡಿ ಈ ಸತ್ಕಾರ್ಯದಲ್ಲಿ ತೊಡಗಿರುವುದಾಗಿ ಹೇಳಿದ್ದಾರೆ.
ಮಕ್ಕಳನ್ನು ದೈಹಿಕ ಮತ್ತು ಮಾನಸಿಕವಾಗಿ ತಯಾರುಗೊಳಿಸಿ ಭವಿಷ್ಯದ ಕ್ರಿಕೆಟ್ ಪಟುಗಳಾಗಿ ರೂಪುಗೊಳಿಸುವುದೇ ಪ್ರತಿಷ್ಠಿತ ವಿಕ್ರಮ್ ಕ್ರಿಕೆಟ್  ಕ್ಲಬ್  ಬೈಂದೂರು ಸಂಸ್ಥೆಯ ಗುರಿ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕ್ರಿಕೆಟ್ ಕೋಚ್ ಪ್ರಕಾಶ್ ಕುಲಾಲ್ 7678022778 ಅಥವಾ ದಿನೇಶ್ ಗಾಣಿಗ 6363852771, ರಾಜೇಶ್ ಆಚಾರ್ ಬೈಂದೂರು 9916440337 ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 × two =

Latest news

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2 ಕೋಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ ನಾಮಧಾರಿ ಸಮುದಾಯದ ಕ್ರೀಡಾಭಿಮಾನಿಗಳಿಗೆ ವಿಶೇಷ ಉತ್ಸವವಾಗಿ ರೂಪುಗೊಂಡಿರುವ ನಾಮಧಾರಿ ಪ್ರೀಮಿಯರ್ ಲೀಗ್ – 2026 (NPL-2026) ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you