14.7 C
London
Monday, May 20, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಬೈಂದೂರು ವಿಕ್ರಮ್ ಕ್ರಿಕೆಟ್ ಕ್ಲಬ್ ನಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ

ಬೈಂದೂರು ವಿಕ್ರಮ್ ಕ್ರಿಕೆಟ್ ಕ್ಲಬ್ ನಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಬೈಂದೂರು: ಬೈಂದೂರು ಮತ್ತು ಸುತ್ತಮುತ್ತಲಿನ ಕ್ರಿಕೆಟ್ ಆಸಕ್ತ ಮಕ್ಕಳಿಗೆ  ಕ್ರಿಕೆಟ್ ತರಬೇತಿಯನ್ನು ನೀಡಿ   ಪ್ರತಿಭಾವಂತ ಕ್ರಿಕೆಟ್ ಆಟಗಾರರನ್ನಾಗಿ ಮಾರ್ಪಡಿಸಲು  ಪ್ರತಿಷ್ಠಿತ ವಿಕ್ರಮ್ ಕ್ರಿಕೆಟ್  ಕ್ಲಬ್  ಬೈಂದೂರು ವಾರ್ಷಿಕ ತರಬೇತಿ ಶಿಬಿರವನ್ನು ಆರಂಭಿಸಿದೆ.
ಬೈಂದೂರು ನಗರದ ವಿಕ್ರಮ್ ಕ್ರಿಕೆಟ್  ಕ್ಲಬ್   ಪ್ರತಿಭಾವಂತ ಕ್ರಿಕೆಟ್ ಪಟುಗಳಿಗಾಗಿ ಆಯೋಜಿಸಿರುವ ಶಿಬಿರ ಏಪ್ರಿಲ್  1 ರಿಂದ ಆರಂಭಗೊಳ್ಳಲಿದ್ದು, ಮೇ 31ರವರೆಗೆ ಬೈಂದೂರಿನ  ಮೈದಾನದಲ್ಲಿ ಶಿಬಿರ ನಡೆಸಿ ತರಬೇತಿ ನೀಡುತ್ತಿದೆ. 10 ವರ್ಷದ ಮಕ್ಕಳಿಂದ 23 ವರ್ಷದೊಳಗಿನ ಬಾಲಕ ಬಾಲಕಿಯರಿಗೆ ಇಲ್ಲಿ ತರಬೇತಿ ನೀಡಿ ಪ್ರತಿಭಾವಂತರನ್ನು ಗುರುತಿಸುವ ಕಾರ್ಯದಲ್ಲಿ ತೊಡಗಿದೆ. ಪಾಲ್ಗೊಂಡವರಿಗೆ ಪ್ರಮಾಣಪತ್ರ ಮತ್ತು ಸ್ಮರಣಿಕೆ ವಿತರಿಸಲಾಗುವುದು.
ಕಳೆದ ಬಹಳಷ್ಟು ವರ್ಷಗಳಿಂದ ಸತತವಾಗಿ ವಾರ್ಷಿಕ ತರಬೇತಿ, ಬೇಸಿಗೆ ಶಿಬಿರಗಳನ್ನು ನಡೆಸುತ್ತಿರುವ ವಿಕ್ರಮ್ ಕ್ರಿಕೆಟ್  ಕ್ಲಬ್  ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ನಡೆಸಿ ಆಯೋಜಿಸಿ ಪ್ರತಿಭಾವಂತ ಕ್ರಿಕೆಟ್ ಪಟುಗಳ ಶೋಧಕಾರ್ಯದಲ್ಲಿ ನಿರತವಾಗಿದೆ . ಇಲ್ಲಿ ಉತ್ಸಾಹಿ ಹಿರಿಯ ಆಟಗಾರರು ಮತ್ತು ತಜ್ಞ ಕ್ರಿಕೆಟ್ ಪಟುಗಳ ಮಾರ್ಗದರ್ಶನದಲ್ಲಿ ತರಬೇತಿ ನೀಡಿ, ಪ್ರತಿಭಾವಂತರನ್ನು ವೃತ್ತಿಪರ ಕ್ರಿಕೆಟ್‍ಗೆ ಪೂರಕವಾಗಿ ತಯಾರಿ ನಡೆಸಲಾಗುತ್ತದೆ ಎಂದು ಕ್ಲಬ್ ನ ದಿನೇಶ್ ಗಾಣಿಗ ಬೈಂದೂರು ತಿಳಿಸಿದ್ದಾರೆ.
ಇಲ್ಲಿ ತರಬೇತಿ ಪಡೆದ ಸಾಕಷ್ಟು ಮಕ್ಕಳು ಜಿಲ್ಲಾಮಟ್ಟ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಭವಿಷ್ಯ ರೂಪಿಸಿಕೊಂಡಿದ್ದಾರೆ ಎಂದು ತಿಳಿಸಿರುವ ಅವರು, ಆಸಕ್ತ ಕ್ರಿಕೆಟ್ ಪ್ರೇಮಿಗಳು ಒಟ್ಟುಗೂಡಿ ಈ ಸತ್ಕಾರ್ಯದಲ್ಲಿ ತೊಡಗಿರುವುದಾಗಿ ಹೇಳಿದ್ದಾರೆ.
ಮಕ್ಕಳನ್ನು ದೈಹಿಕ ಮತ್ತು ಮಾನಸಿಕವಾಗಿ ತಯಾರುಗೊಳಿಸಿ ಭವಿಷ್ಯದ ಕ್ರಿಕೆಟ್ ಪಟುಗಳಾಗಿ ರೂಪುಗೊಳಿಸುವುದೇ ಪ್ರತಿಷ್ಠಿತ ವಿಕ್ರಮ್ ಕ್ರಿಕೆಟ್  ಕ್ಲಬ್  ಬೈಂದೂರು ಸಂಸ್ಥೆಯ ಗುರಿ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕ್ರಿಕೆಟ್ ಕೋಚ್ ಪ್ರಕಾಶ್ ಕುಲಾಲ್ 7678022778 ಅಥವಾ ದಿನೇಶ್ ಗಾಣಿಗ 6363852771, ರಾಜೇಶ್ ಆಚಾರ್ ಬೈಂದೂರು 9916440337 ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

one × four =