ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಏಪ್ರಿಲ್ 7 ರಿಂದ ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ನ ಬೇಸಿಗೆ...

ಏಪ್ರಿಲ್ 7 ರಿಂದ ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ನ ಬೇಸಿಗೆ ಕ್ರಿಕೆಟ್ ಶಿಬಿರ

-

- Advertisment -spot_img
ಬೈಂದೂರು-ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ ಬೇಸಿಗೆ ರಜೆಯ ಪ್ರಯುಕ್ತ ಏಪ್ರೀಲ್ ಮತ್ತು ಮೇ ತಿಂಗಳಲ್ಲಿ ಬೈಂದೂರಿನಲ್ಲಿ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವು ಜರುಗಲಿರುವುದು. 7 ರಿಂದ 16 ವರ್ಷದ ಬಾಲಕ ಬಾಲಕಿಯರಿಗೆ ತರಬೇತಿ ಪಡೆಯುವ ಅವಕಾಶವಿದ್ದು ಏಪ್ರೀಲ್ 7 ರಿಂದ ಪ್ರಥಮ ಹಂತದ ಶಿಬಿರ ಆರಂಭಗೊಳ್ಳಲಿದೆ.
ಬೈಂದೂರಿನ ಕ್ರೀಡಾಂಗಣದಲ್ಲಿ ಎರಡು ತಿಂಗಳುಗಳ ಕಾಲ ಪ್ರತಿದಿನ ಮಧ್ಯಾಹ್ನ 3 ರಿಂದ 6 ಗಂಟೆಯ ವರೆಗೆ ಕ್ರಿಕೆಟ್ ತರಬೇತಿ ನಡೆಯಲಿದೆ. ಕ್ರಿಕೆಟ್ ತರಬೇತುದಾರರಾದ ನಿತಿನ್ ಸಾರಂಗ, ದಿನೇಶ್ ಕೆ ಮತ್ತು ರಾಜೇಶ್ ಆಚಾರ್ ಮಾರ್ಗದರ್ಶನ ನೀಡಲಿದ್ದಾರೆ. ಎರಡು ತಿಂಗಳ ಕಾಲ ನಡೆಯುವ ಶಿಬಿರಕ್ಕೆ ಇತರೆ ಸ್ಥಳದ ನುರಿತ ತರಬೇತುದಾರರು ಕೂಡ ಆಗಮಿಸಿ ವಿಶೇಷ ತರಬೇತಿ ನೀಡಲಿದ್ದಾರೆ.
ಕರ್ನಾಟಕ ರಾಜ್ಯ ಟೆನಿಸ್ ಕ್ರಿಕೆಟ್ ನಲ್ಲಿ  ಐವತ್ತು ವರ್ಷಗಳ ಇತಿಹಾಸ ಇರುವ ತಂಡ ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ಈ ಸಮ್ಮರ್ ಕ್ರಿಕೆಟ್ ಕೋಚಿಂಗ್ ಕ್ಯಾಂಪ್  ಹಮ್ಮಿಕೊಂಡಿದ್ದಾರೆ . ತರಬೇತಿ ಶಿಬಿರದಲ್ಲಿ ಬೇಸಿಕ್ ಹಾಗೂ ಅಡ್ವಾನ್ಸ್ ಸ್ಕಿಲ್ ಗಳನ್ನು ತರಬೇತುದಾರರು ಕಲಿಸಿಕೊಡುವರು. ಶಿಬಿರದಲ್ಲಿ ಫಿಟ್ನೆಸ್ ಬಗ್ಗೆಯೂ ಹೇಳಿಕೊಡಲಾಗುವುದು. ಶಿಬಿರದ ಮಧ್ಯದಲ್ಲಿ ಬೇರೆ  ಕ್ರಿಕೆಟ್ ತಂಡದ ವಿರುದ್ಧ ಪಂದ್ಯಗಳನ್ನು ಕೂಡ ಆಯೋಜಿಸಲಾಗುವುದು. ಬೈಂದೂರು ಮತ್ತು ಸುತ್ತಮುತ್ತಲಿನ ಕ್ರಿಕೆಟ್ ಉತ್ಸಾಹಿ ಮಕ್ಕಳಿಗೆ ಈ ಸಮ್ಮರ್ ಸ್ಪೆಷಲ್ ಪ್ರಯೋಜನವನ್ನು ನೀಡುತ್ತದೆ. ಎಲ್ಲಾ ಯುವ ಮತ್ತು ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳಿಗೆ ತಮ್ಮ ಬೇಸಿಗೆಯ ರಜಾದಿನಗಳನ್ನು ಅಮೂಲ್ಯವಾದ ರೀತಿಯಲ್ಲಿ ಕಳೆಯಲು ಇದು ಒಂದು ಅದ್ಭುತವಾದ ಅವಕಾಶವಾಗಿದೆ.
ಉದಯೋನ್ಮುಖ ಪ್ರತಿಭೆಗಳನ್ನು ಆಟಕ್ಕೆ ಪರಿಚಯಿಸಿ ಉತ್ತಮ ನಿರ್ವಹಣೆಗಾಗಿ ಪ್ರೋತ್ಸಾಹಿಸಲಾಗುವುದು ಎಂದು ವಿಕ್ರಮ್ ಕ್ರಿಕೆಟ್ ಕ್ಲಬ್ ನ ಪ್ರಕಟಣೆ ತಿಳಿಸಿದೆ. ಆಸಕ್ತರು ಈ ಶಿಬಿರದ ಸದುಪಯೋಗ  ಪಡೆದುಕೊಳ್ಳಬೇಕಾಗಿ ಕೋರಲಾಗಿದೆ. ಬುಕ್ಕಿಂಗ್ ಮತ್ತು ಹೆಚ್ಚಿನ ವಿವರಗಳಿಗಾಗಿ ನಿತಿನ್ ಸಾರಂಗ  98456 41449, ದಿನೇಶ್ ಗಾಣಿಗ 63638 52771,ರಾಜೇಶ್ ಆಚಾರ್ 99164 40337 ಇವರನ್ನು ಸಂಪರ್ಕಿಸಬಹುದು.
ಕ್ರಿಕೆಟ್  ಕೌಶಲ್ಯ  ಅಭಿವೃದ್ಧಿ ಮತ್ತು ತರಬೇತಿಯನ್ನು ಬೈಂದೂರಿನ ವಿಕ್ರಮ್ ಕ್ರಿಕೆಟ್  ಕ್ಲಬ್  ಪರಿಣಾಮಕಾರಿಯಾಗಿ  ಒದಗಿಸಲಿ ಎಂದು ಸ್ಪೋರ್ಟ್ಸ್ ಕನ್ನಡ ಈ ಸಂದರ್ಭದಲ್ಲಿ ಹಾರೈಸುತ್ತಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

7 + 5 =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you