18.4 C
London
Saturday, May 18, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಏಪ್ರಿಲ್ 7 ರಿಂದ ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ನ ಬೇಸಿಗೆ ಕ್ರಿಕೆಟ್ ಶಿಬಿರ

ಏಪ್ರಿಲ್ 7 ರಿಂದ ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ನ ಬೇಸಿಗೆ ಕ್ರಿಕೆಟ್ ಶಿಬಿರ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಬೈಂದೂರು-ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ ಬೇಸಿಗೆ ರಜೆಯ ಪ್ರಯುಕ್ತ ಏಪ್ರೀಲ್ ಮತ್ತು ಮೇ ತಿಂಗಳಲ್ಲಿ ಬೈಂದೂರಿನಲ್ಲಿ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವು ಜರುಗಲಿರುವುದು. 7 ರಿಂದ 16 ವರ್ಷದ ಬಾಲಕ ಬಾಲಕಿಯರಿಗೆ ತರಬೇತಿ ಪಡೆಯುವ ಅವಕಾಶವಿದ್ದು ಏಪ್ರೀಲ್ 7 ರಿಂದ ಪ್ರಥಮ ಹಂತದ ಶಿಬಿರ ಆರಂಭಗೊಳ್ಳಲಿದೆ.
ಬೈಂದೂರಿನ ಕ್ರೀಡಾಂಗಣದಲ್ಲಿ ಎರಡು ತಿಂಗಳುಗಳ ಕಾಲ ಪ್ರತಿದಿನ ಮಧ್ಯಾಹ್ನ 3 ರಿಂದ 6 ಗಂಟೆಯ ವರೆಗೆ ಕ್ರಿಕೆಟ್ ತರಬೇತಿ ನಡೆಯಲಿದೆ. ಕ್ರಿಕೆಟ್ ತರಬೇತುದಾರರಾದ ನಿತಿನ್ ಸಾರಂಗ, ದಿನೇಶ್ ಕೆ ಮತ್ತು ರಾಜೇಶ್ ಆಚಾರ್ ಮಾರ್ಗದರ್ಶನ ನೀಡಲಿದ್ದಾರೆ. ಎರಡು ತಿಂಗಳ ಕಾಲ ನಡೆಯುವ ಶಿಬಿರಕ್ಕೆ ಇತರೆ ಸ್ಥಳದ ನುರಿತ ತರಬೇತುದಾರರು ಕೂಡ ಆಗಮಿಸಿ ವಿಶೇಷ ತರಬೇತಿ ನೀಡಲಿದ್ದಾರೆ.
ಕರ್ನಾಟಕ ರಾಜ್ಯ ಟೆನಿಸ್ ಕ್ರಿಕೆಟ್ ನಲ್ಲಿ  ಐವತ್ತು ವರ್ಷಗಳ ಇತಿಹಾಸ ಇರುವ ತಂಡ ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ಈ ಸಮ್ಮರ್ ಕ್ರಿಕೆಟ್ ಕೋಚಿಂಗ್ ಕ್ಯಾಂಪ್  ಹಮ್ಮಿಕೊಂಡಿದ್ದಾರೆ . ತರಬೇತಿ ಶಿಬಿರದಲ್ಲಿ ಬೇಸಿಕ್ ಹಾಗೂ ಅಡ್ವಾನ್ಸ್ ಸ್ಕಿಲ್ ಗಳನ್ನು ತರಬೇತುದಾರರು ಕಲಿಸಿಕೊಡುವರು. ಶಿಬಿರದಲ್ಲಿ ಫಿಟ್ನೆಸ್ ಬಗ್ಗೆಯೂ ಹೇಳಿಕೊಡಲಾಗುವುದು. ಶಿಬಿರದ ಮಧ್ಯದಲ್ಲಿ ಬೇರೆ  ಕ್ರಿಕೆಟ್ ತಂಡದ ವಿರುದ್ಧ ಪಂದ್ಯಗಳನ್ನು ಕೂಡ ಆಯೋಜಿಸಲಾಗುವುದು. ಬೈಂದೂರು ಮತ್ತು ಸುತ್ತಮುತ್ತಲಿನ ಕ್ರಿಕೆಟ್ ಉತ್ಸಾಹಿ ಮಕ್ಕಳಿಗೆ ಈ ಸಮ್ಮರ್ ಸ್ಪೆಷಲ್ ಪ್ರಯೋಜನವನ್ನು ನೀಡುತ್ತದೆ. ಎಲ್ಲಾ ಯುವ ಮತ್ತು ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳಿಗೆ ತಮ್ಮ ಬೇಸಿಗೆಯ ರಜಾದಿನಗಳನ್ನು ಅಮೂಲ್ಯವಾದ ರೀತಿಯಲ್ಲಿ ಕಳೆಯಲು ಇದು ಒಂದು ಅದ್ಭುತವಾದ ಅವಕಾಶವಾಗಿದೆ.
ಉದಯೋನ್ಮುಖ ಪ್ರತಿಭೆಗಳನ್ನು ಆಟಕ್ಕೆ ಪರಿಚಯಿಸಿ ಉತ್ತಮ ನಿರ್ವಹಣೆಗಾಗಿ ಪ್ರೋತ್ಸಾಹಿಸಲಾಗುವುದು ಎಂದು ವಿಕ್ರಮ್ ಕ್ರಿಕೆಟ್ ಕ್ಲಬ್ ನ ಪ್ರಕಟಣೆ ತಿಳಿಸಿದೆ. ಆಸಕ್ತರು ಈ ಶಿಬಿರದ ಸದುಪಯೋಗ  ಪಡೆದುಕೊಳ್ಳಬೇಕಾಗಿ ಕೋರಲಾಗಿದೆ. ಬುಕ್ಕಿಂಗ್ ಮತ್ತು ಹೆಚ್ಚಿನ ವಿವರಗಳಿಗಾಗಿ ನಿತಿನ್ ಸಾರಂಗ  98456 41449, ದಿನೇಶ್ ಗಾಣಿಗ 63638 52771,ರಾಜೇಶ್ ಆಚಾರ್ 99164 40337 ಇವರನ್ನು ಸಂಪರ್ಕಿಸಬಹುದು.
ಕ್ರಿಕೆಟ್  ಕೌಶಲ್ಯ  ಅಭಿವೃದ್ಧಿ ಮತ್ತು ತರಬೇತಿಯನ್ನು ಬೈಂದೂರಿನ ವಿಕ್ರಮ್ ಕ್ರಿಕೆಟ್  ಕ್ಲಬ್  ಪರಿಣಾಮಕಾರಿಯಾಗಿ  ಒದಗಿಸಲಿ ಎಂದು ಸ್ಪೋರ್ಟ್ಸ್ ಕನ್ನಡ ಈ ಸಂದರ್ಭದಲ್ಲಿ ಹಾರೈಸುತ್ತಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

11 + twelve =