ಇತರೆಬಹು ನಿರೀಕ್ಷೆಯ ಬಿಗ್ ಬಾಸ್ ಸ್ಪರ್ಧೆಗೆ ಗ್ರ್ಯಾಂಡ್ ಎಂಟ್ರಿ‌ ಕೊಟ್ಟ ಸಿ.ಸಿ.ಎಲ್...

ಬಹು ನಿರೀಕ್ಷೆಯ ಬಿಗ್ ಬಾಸ್ ಸ್ಪರ್ಧೆಗೆ ಗ್ರ್ಯಾಂಡ್ ಎಂಟ್ರಿ‌ ಕೊಟ್ಟ ಸಿ.ಸಿ.ಎಲ್ ಸ್ಟಾರ್- ರಾಜೀವ್ ಹನು.

-

- Advertisment -spot_img
ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಕನ್ನಡದ ಬಿಗ್ ಬಾಸ್ 8ನೇ ಆವೃತ್ತಿಯು ಭರ್ಜರಿಯಾಗಿ ಆರಂಭಗೊಂಡಿದೆ. ಬಿಗ್ ಬಾಸ್ ತಂಡ ಈಗಾಗಲೇ ಪ್ರಕಟಿಸಿರುವಂತೆ ಈ ಆವೃತ್ತಿಯಲ್ಲಿ ಸೆಲೆಬ್ರಿಟಿಗಳೇ ಇದ್ದಾರೆ‌.
ಈ ಬಾರಿಯ ಬಿಗ್ ಬಾಸ್ ಸಮಸ್ತ ಕನ್ನಡಿಗರ ಕುತೂಹಲ ಕೆರಳಿಸಿರುವ ವಿಚಾರವೆಂದರೆ 16 ನೇ ನಂಬರ್ ಸ್ಪರ್ಧಿಯ ರೂಪದಲ್ಲಿ
ಬಿಗ್ ಬಾಸ್ ಮನೆಗೆ ಗ್ರ್ಯಾಂಡ್ ಎಂಟ್ರಿಕೊಟ್ಟ ಚಲನ ಚಿತ್ರ ನಟ,
ಸಿ.ಸಿ.ಎಲ್ ಸ್ಟಾರ್ ಪ್ಲೇಯರ್ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ ತಂಡದಲ್ಲಿ ಸಾಕಷ್ಟು ಮಿಂಚಿದ ಆಟಗಾರ  ರಾಜೀವ್ ಹನು.

ಚಲನಚಿತ್ರ ರಂಗದ ಜೊತೆ ಸಿ.ಸಿ.ಎಲ್ ಹಾಗೂ ಕೆ.ಪಿ.ಎಲ್ ನಲ್ಲಿ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಟೆನ್ನಿಸ್ಬಾಲ್ ಕ್ರಿಕೆಟ್ ಫ್ರೆಂಡ್ಸ್ ಬೆಂಗಳೂರು ತಂಡದ ಪರವಾಗಿ ಮಿಂಚಿದ ಕ್ರಿಕೆಟಿಗ ರಾಜೀವ್ ಹನು.
ಮೂಲತಃ ಆಡುಗೋಡಿ ತಂಡದ ಮೂಲಕ ಕ್ರಿಕೆಟ್ ಜೀವನ ಪ್ರಾರಂಭಿಸಿದ ರಾಜೀವ್ ಇವರ ಪ್ರತಿಭೆಗೆ ರಾಜ್ಯ ಮಟ್ಟದ ವೇದಿಕೆಯನ್ನು ಸೃಷ್ಟಿಸಿದ ತಂಡ ಫ್ರೆಂಡ್ಸ್ ಬೆಂಗಳೂರಿನ ರೇಣು ಗೌಡರು.2004 ರಲ್ಲಿ ಪಡುಬಿದ್ರಿ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಟೆನ್ನಿಸ್ಬಾಲ್ ಕ್ರಿಕೆಟ್ ಅಂಗಣಕ್ಕೆ ಪಾದಾರ್ಪಣೆಗೈದ ರಾಜೀವ್ ಮತ್ತೆ ಹಿಂತಿರುಗಿ ನೋಡಿದ್ದೇ ಇಲ್ಲ.ಎಡಗೈ ದಾಂಡಿಗ ಇಮ್ರಾನ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ರಾಜೀವ್ ಬಿರುಸಿನ ಹೊಡೆತಗಳ ಮೂಲಕ ಕ್ಷಿಪ್ರಗತಿಯಲ್ಲಿ ರನ್ ಸರಾಸರಿ ಏರಿಸಿ,ರಾಜ್ಯದ ಅತ್ಯಂತ ಯಶಸ್ವೀ ಆರಂಭಿಕ ಜೋಡಿ ಖ್ಯಾತಿಗೆ ಪಾತ್ರರಾಗಿದ್ದು ಜೊತೆಗೆ ಫ್ರೆಂಡ್ಸ್ ಬೆಂಗಳೂರು ತಂಡ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಜಯಿಸುವಲ್ಲಿ ರಾಜೀವ್ ಪಾತ್ರ ಮಹತ್ತರವಾದದ್ದು.
ಸಿ.ಸಿ.ಬಿ ಯಲ್ಲಿ ಸೇವೆಯ ನಡುವೆ ಚಿತ್ರರಂಗದತ್ತ ವಿಪರೀತ ಒಲವಿನ ಕಾರಣ ಚಲನಚಿತ್ರ ರಂಗಕ್ಕೆ ಪಾದಾರ್ಪಣೆಗೈದ ರಾಜೀವ್,ಕಿಚ್ಚ ಸುದೀಪ್ ಜೊತೆ ಹೆಬ್ಬುಲಿ ಹಾಗೂ ಆರ್.ಎಕ್ಸ್‌‌.ಸೂರಿ,ಬೆಂಗಳೂರು-56,ಉಸಿರೇ ಉಸಿರೇ ಹೀಗೆ ಅನೇಕ ಚಿತ್ರಗಳಲ್ಲಿ ನಟಿಸಿದ್ದು,ಮುಂದಿನ ದಿನಗಳಲ್ಲಿ ಬಹು ನಿರೀಕ್ಷೆಯ ಚಲನಚಿತ್ರಗಳು ಸೆಟ್ಟೇರಲಿದೆ.
ಸಿನಿಮಾ ರಂಗದ ಮೂಲಕ ಕಿಚ್ಚ ಸುದೀಪ್ ನೆಚ್ಚಿನ ಆಟಗಾರರೆನಿಸಿಕೊಂಡು,ಕರ್ನಾಟಕ ಬುಲ್ಡೋಜರ್ ನ ಪರವಾಗಿ ವೇಗದ ಶತಕ ಸಹಿತ,ಅನೇಕ ಗೆಲುವಿನ ಇನ್ನಿಂಗ್ಸ್ ಕಟ್ಟಿ,ಸಿ‌.ಸಿ.ಎಲ್ ನ ಕ್ರಿಸ್ ಗೇಲ್ ಖ್ಯಾತಿಗೆ ಪಾತ್ರರಾಗಿದ್ದಾರೆ.
ಕೆ.ಪಿ.ಎಲ್ ನಲ್ಲೂ ಅತ್ಯುತ್ತಮ ನಿರ್ವಹಣೆ ನೀಡಿದ್ದಾರೆ.
 ಫ್ರೆಂಡ್ಸ್ ಬೆಂಗಳೂರು ತಂಡದಲ್ಲಿ ಕಳೆದ 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ರಾಜೀವ್ ಹನು ಇವರು ರೇಣುಗೌಡರ ಮನೆಯ ಸದಸ್ಯರಂತೆ ಕಷ್ಟ,ಸುಖಗಳಲ್ಲಿ ಭಾಗಿಯಾಗುತ್ತಾರೆ.
ತನ್ನ ಒಡನಾಡಿಗಳನ್ನು,ಹಿರಿಯ ಕ್ರಿಕೆಟಿಗರನ್ನು ಗೌರವಿಸುವ ಪರಿಪಾಠವನ್ನು ಮೈಗೂಡಿಸಿಕೊಂಡಿದ್ದು,
ಸಮಾಜಮುಖಿಯಾಗಿ ಬದುಕನ್ನು ಸಾಗಿಸುತ್ತಿರುವ ಸರಳ ಸಜ್ಜನಿಕೆಯ ವ್ಯಕ್ತಿತ್ವದ ರಾಜೀವ್ ಹನು ಇವರು ಚಲನಚಿತ್ರ ರಂಗ,ಸಿ.ಸಿ.ಎಲ್ ಹಾಗೂ ಕರ್ನಾಟಕ ಟೆನ್ನಿಸ್ಬಾಲ್ ಕ್ರಿಕೆಟ್ ನ ಗೌರವದ ಪ್ರತೀಕ.
ಬಿಗ್ ಬಾಸ್ ಮನೆಯಲ್ಲಿ ನಿಮ್ಮೆಲ್ಲಾ ಪ್ರತಿಭೆಗಳ ಅನಾವರಣಗೊಳ್ಳಲಿ
ಬಿಗ್ ಬಾಸ್ ನಿಮಗೆ ಮತ್ತಷ್ಟು ಯಶಸ್ಸನ್ನು ತಂದುಕೊಡಲಿ.ಸಿ.ಸಿ.ಎಲ್ ಹಾಗೂ ಟೆನ್ನಿಸ್ಬಾಲ್ ಕ್ರಿಕೆಟ್ ರಂಗದಲ್ಲಿ ನಿಮ್ಮ‌ ಸೇವೆಯ ಮೂಲಕ ಕರ್ನಾಟಕ ರಾಜ್ಯವಲ್ಲದೇ ದೇಶ,ವಿದೇಶದೆಲ್ಲೆಡೆ ಅಪಾರ ಅಪಾರ ಅಭಿಮಾನಿ ಬಳಗ ಸಂಪಾದಿಸಿದ ನೀವು ಬಿಗ್ ಬಾಸ್ ನಲ್ಲಿ ಗೆದ್ದುಬನ್ನಿ,ಕನ್ನಡಿಗರ ಹೃದಯ ತುಂಬಿದ ಹಾರೈಕೆ ನಿಮ್ಮೊಂದಿಗಿದೆ.ನಿಮಗೆ ರಾಜ್ಯ ಟೆನ್ನಿಸ್ ಕ್ರಿಕೆಟ್ ಹಾಗೂ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ವತಿಯಿಂದ ಶುಭ ಹಾರೈಕೆಗಳು….
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × 3 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you