Uncategorizedಕ್ಯಾಪ್ಟನ್ ಕೂಲ್ ಧೋನಿ ಬಳಿಕ ನನ್ನ ಮೇಲೆ ಜವಾಬ್ದಾರಿ ಹೆಚ್ಚಿದೆ: ಹಾರ್ದಿಕ್...

ಕ್ಯಾಪ್ಟನ್ ಕೂಲ್ ಧೋನಿ ಬಳಿಕ ನನ್ನ ಮೇಲೆ ಜವಾಬ್ದಾರಿ ಹೆಚ್ಚಿದೆ: ಹಾರ್ದಿಕ್ ಪಾಂಡ್ಯ

-

- Advertisment -spot_img
ಬಲಿಷ್ಠ ನ್ಯೂಜಿಲೆಂಡ್ ಎದುರು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಸರಣಿ ಗೆದ್ದು ಬೀಗಿದ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ
ಸರಣಿ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ. ತಂಡದ ಗೆಲುವಿನ ನಂತರ ಮಾಧ್ಯಮದ ಎದುರು
ಧೋನಿ ಬಳಿಕ ಮ್ಯಾಚ್ ಫಿನಿಶಿಂಗ್ ಜವಾಬ್ದಾರಿ ನನ್ನ ಮೇಲಿದೆ ಮತ್ತು ಜವಾಬ್ದಾರಿ ಹೆಚ್ಚಾಗಿದೆ ಎಂದ ಪಾಂಡ್ಯ
ಅಹಮದಾಬಾದ್‌(ಫೆ.02): ಬಲಿಷ್ಠ ನ್ಯೂಜಿಲೆಂಡ್ ಎದುರಿನ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಂ ಇಂಡಿಯಾ, 168 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಈ ಪಂದ್ಯದ ಗೆಲುವಿನೊಂದಿಗೆ
ಹತ್ತಾರು ದಾಖಲೆಯೊಂದಿಗೆ 2-1 ಅಂತರದಲ್ಲಿ ಟಿ20 ಸರಣಿಯನ್ನು ತನ್ನ ವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ನ್ಯೂಜಿಲೆಂಡ್ ಎದುರಿನ ಈ ಬಾರಿ ಅಂತರದ ಗೆಲುವು ಟಿ20 ಕ್ರಿಕೆಟ್‌ ಮಾದರಿಯಲ್ಲಿ ಟೀಂ ಇಂಡಿಯಾ ಜಯಿಸಿದ ಅತಿ ದೊಡ್ಡ ಅಂತರದ ಗೆಲುವು ಎನಿಸಿಕೊಂಡಿತು.
ಇದರ ಜೋತೆಗೆ ತವರು ನೆಲದಲ್ಲಿ ಭಾರತೀಯರು ಜಯಿಸಿದ ಸತತ 13ನೇಯ ಟಿ20 ಸರಣಿಯ ಗೆಲುವು ಎನಿಸಿಕೊಂಡಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆರಂಭಿಕ ದಾಂಡಿಗನಾಗಿ ಅಂಕಣಕ್ಕೆ ಇಳಿದ ಶುಭ್‌ಮನ್‌ ಗಿಲ್‌ ಕೇವಲ 64 ಎಸೆತಗಳಲ್ಲಿ ಅಜೇಯ 126 ರನ್ ಬಾರಿಸುವುದರ ಮೂಲಕ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾದರು. ಭಾರತ ಕೇವಲ 4 ವಿಕೆಟ್‌ ಕಳೆದುಕೊಂಡು 234 ರನ್‌ ಬಾರಿಸಿತು.
ಭಾರತೀಯರು ಕಲೆಹಾಕಿದ ದೊಡ್ಡ ಮೊತ್ತ ನೋಡಿಯೇ ದಿಕ್ಕೆಟ್ಟು ಹೋಗಿದ್ದ ಕಿವೀಸ್‌ ತನ್ನ ಬ್ಯಾಟಿಂಗ್ ಸರಣಿಯನ್ನು ಆರಂಭಿಸಿತೆ ಹೊರತು ಯಾವ ಕ್ಷಣದಲ್ಲೂ ಪ್ರತಿರೋಧ ತೋರಲಿಲ್ಲ.ಭಾರತೀಯರ ಬೌಲಿಂಗ್ ಎದುರು ಹೆಣಗಾಡಿದ ಕಿವೀಸ್ 12.1 ಓವರಲ್ಲಿ ಕೇವಲ 66ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಬಾರಿ ಅಂತರದಿಂದ ಸೋಲಿಗೆ ಶರಣಾಯಿತು. ಡ್ಯಾರಿಲ್‌ ಮಿಚೆಲ್‌(35), ಸ್ಯಾಂಟ್ನರ್‌(13) ಈ ಇಬ್ಬರು ಆಟಗಾರರನ್ನು ಬಿಟ್ಟರೆ ಉಳಿದವರೆಲ್ಲ ಬಂದಷ್ಟೆ ವೇಗವಾಗಿ ಪೆವಿಲಿಯನ್ ಗೆ ಮರಳಿದ್ದರು. ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಜವಾಬ್ದಾರಿಯುತ ಬೌಲಿಂಗ್ ಮಾಡಿ ಕೇವಲ 16 ರನ್ ಗಳಿಗೆ ನ್ಯೂಜಿಲೆಂಡ್ ನ 4 ವಿಕೆಟ್ ಕಬಳಿಸಿದರೆ. ಭಾರತೀಯ ಯುವ ವೇಗಿ ಉಮ್ರಾನ್‌ ಹಾಗೂ ಆರ್ಶದೀಪ್‌, ಶಿವಂ ಮಾವಿ ತಲಾ 2 ವಿಕೆಟ್‌ ಪಡೆದು ನ್ಯೂಜಿಲೆಂಡ್ ತಂಡವನ್ನು ಕಡಿಮೆ ರನ್ ಗಳಿಗೆ ಕಟ್ಟಿಹಾಕಿ ಭಾರತ ತಂಡಕ್ಕೆ ಬಾರಿ ಅಂತರದ ಗೆಲುವು ತಂದು ಕೊಟ್ಟರು.
ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಷ್ಟೇ ಅಲ್ಲದೇ, ಬ್ಯಾಟಿಂಗ್‌ನಲ್ಲೂ ಕೇವಲ 17 ಎಸೆತಗಳನ್ನು ಎದುರಿಸಿ 30 ರನ್‌ಗಳ ಮಹತ್ವದ ಕಾಣಿಕೆ ನೀಡಿದರು. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ತೋರಿದ ಹಾರ್ದಿಕ್ ಪಾಂಡ್ಯ, ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾದರು.ಅಂತೆಯೇ ಶುಭಮನ್ ಗಿಲ್ ಪಂದ್ಯದ ಶ್ರೇಷ್ಠ ಆಟಗಾರನಾಗಿ ಪ್ರಶಸ್ತಿ ಮುಡಿಗೆರಿಸಿ ಕೊಂಡರು
ಕಳೆದ ವರ್ಷದ ಗಾಯದ ಸಮಸ್ಯೆಯಿಂದ ಕೇಲವು ಪಂದ್ಯಗಳಿಂದ ದೂರ ಉಳಿದಿದ್ದ ಪಾಂಡ್ಯ ನಂತರ ಚೇತರಿಸಿಕೊಂಡು ತಂಡಕೂಡಿಕೊಂಡ ಬಳಿಕ ಹಾರ್ದಿಕ್ ಪಾಂಡ್ಯ ತಿರುಗಿ ನೋಡಲಿಲ್ಲ ತನ್ನ ಬ್ಯಾಟಿಂಗ್ ನಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿರುವ  ಪಾಂಡ್ಯ ದೊಡ್ಡ ಹೊಡೆತಕ್ಕೆ ಕೈ ಹಾಕುವುದಕ್ಕಿಂತ ಹೆಚ್ಚಾಗಿ ಸ್ಟ್ರೈಕ್ ರೊಟೇಟ್ ಮಾಡುವ ಕಡೆ ಹೆಚ್ಚು ಗಮನ ಕೊಡುತ್ತಿದ್ದಾರೆ. ಸ್ಪೋಟಕ ಬ್ಯಾಟಿಂಗ್‌ನಿಂದಲೇ ಗುರುತಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ, ಇದೀಗ ತಮ್ಮ ಆಟದ ಶೈಲಿಯನ್ನು ಕೊಂಚ ಬದಲಿಸಿಕೊಂಡು ತಾಳ್ಮೆಯಿಂದ ಪ್ರತಿ ಬಾಲನ್ನು ಎದುರಿಸಿ ತಕ್ಕ ಉತ್ತರ ನೀಡುತ್ತಿದ್ದಾರೆ.ಇದನ್ನು ಸ್ವತಹ ಪಾಂಡ್ಯನೆ ಒಪ್ಪಿಕೊಂಡಿದ್ದಾರೆ.
ನ್ಯೂಜಿಲೆಂಡ್ ಎದುರಿನ ಮೂರನೇ ಟಿ20 ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಹಾರ್ದಿಕ್ ಪಾಂಡ್ಯ, ” ನಾನು ಯಾವಾಗಲೂ ಸಿಕ್ಸರ್ ಬಾರಿಸುವುದನ್ನು ಎಂಜಾಯ್ ಮಾಡುತ್ತಿದ್ದೆ, ಯಾಕೆಂದರೇ ನಾನು ಬೆಳೆದುಬಂದಿದ್ದೇ ಹಾಗೆ. ಆದರೆ ನಾನು ಜತೆಯಾಟದ ಮೇಲೆ ಹೆಚ್ಚು ನಂಬಿಕೆ ಇಡುತ್ತೇನೆ. ನಾನು ನನ್ನ ಸಹ ಆಟಗಾರನಿಗೆ ಹಾಗೂ ತಂಡಕ್ಕೆ ನಾನಿದ್ದೇನೆ ಎನ್ನುವ ಭರವಸೆ ನೀಡುತ್ತೇನೆ ಹಾಗೂ ಕ್ರೀಸ್‌ನಲ್ಲಿ ತಾಳ್ಮೆಯಿಂದಿರಲು ಬಯಸುತ್ತೇನೆ. ನಾನು ಇವರೆಲ್ಲರಿಗಿಂತ ಹೆಚ್ಚಿನ ಪಂದ್ಯಗಳನ್ನಾಡಿದ್ದೇನೆ. ನಾನು ಒತ್ತಡದ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎನ್ನುವುದನ್ನು ಅರಿತುಕೊಂಡಿದ್ದೇನೆ” ಎಂದು ಹೇಳಿದ್ದಾರೆ.
ಈ ಕಾರಣಕ್ಕಾಗಿಯೇ ನನ್ನ ಸ್ಟ್ರೈಕ್‌ರೇಟ್ ಕಡಿಮೆಯಾಗಬಹುದು. ನನಗೆ ಸಿಕ್ಕಿರುವ ಜವಾಬ್ದಾರಿಯನ್ನು ಮುಂದುವರೆಸಿಕೊಂಡು ಹೋಗಲು ಬಯಸುತ್ತೇನೆ. ನಾನು ಹೊಸ ಚೆಂಡಿನೊಂದಿಗೆ ದಾಳಿಗಿಳಿಯುವ ಪಾತ್ರವನ್ನು ನಿಭಾಯಿಸುತ್ತಿದ್ದೇನೆ. ಯಾಕೆಂದರೆ, ನಾನು ಬೇರೆಯವರು ಈ ಕಷ್ಟಕರ ಪಾತ್ರವನ್ನು ನಿಭಾಯಿಸಲಿ ಎಂದು ಬಯಸುವುದಿಲ್ಲ. ಎದುರಾಳಿಗಳು ಒತ್ತಡದಲ್ಲಿದ್ದಾರೆ ಎಂದರೆ ನಾವು ಅವರನ್ನು ಬೆನ್ನತ್ತಬಹುದು. ನಾನೇ ನೇತೃತ್ವ ತೆಗೆದುಕೊಂಡು ಮುಂದುವರೆಯುತ್ತೇನೆ. ಹೊಸ ಚೆಂಡಿನೊಂದಿಗೆ ದಾಳಿ ನಡೆಸುವ ಕೌಶಲ್ಯದ ಕಡೆಗೂ ಗಮನ ಕೊಡುತ್ತಿದ್ದೇನೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ನಾನು ಮಹೇಂದ್ರ ಸಿಂಗ್ ಧೋನಿ ಅವರಂತೆಯೇ, ಕೆಳಕ್ರಮಾಂಕದಲ್ಲಿ ಆಡುವ ಬಗ್ಗೆ ಹೆಚ್ಚು ಆಲೋಚಿಸಲು ಹೋಗುವುದಿಲ್ಲ. ನಾನು ಆರಂಭದಲ್ಲಿ ಚೆಂಡನ್ನು ಮೂಲೆ ಮೂಲೆಗೆ ಸಿಕ್ಸರ್‌ಗಟ್ಟುತ್ತಿದ್ದೆ. ಆದರೆ ಧೋನಿ ನಿವೃತ್ತಿಯಾದ ಬಳಿಕ, ದಿಢೀರ್ ಎನ್ನುವಂತೆ ಆ ಜವಾಬ್ದಾರಿ ಈಗ ನನ್ನ ಹೆಗಲೇರಿದೆ. ಹೀಗಾಗಿ ಅದರ ಬಗ್ಗೆ ಹೆಚ್ಚು ಚಿಂತಿಸುವುದಿಲ್ಲ. ತಂಡಕ್ಕೆ ಒಳ್ಳೆಯದಾಗುತ್ತದೇ ಎಂದರೇ ನಾನು ಮಂದ ಗತಿಯಲ್ಲಿ ಬ್ಯಾಟಿಂಗ್ ಮಾಡುವ ಬಗ್ಗೆ ಆಲೋಚಿಸುವುದಿಲ್ಲ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.ಅದೇನೇ ಇರಲಿ ದೋನಿ ನಂತರದಲ್ಲಿ  ಭಾರತ ತಂಡಕ್ಕೆ ಉತ್ತಮ ನಾಯಕನೊಬ್ಬ ಸಿಕ್ಕಿರುವುದು ಭಾರತೀಯರು ಹೆಮ್ಮೆ ಪಡುವಂತಾಗಿದೆ.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

15 + one =

Latest news

Lucky Vibe Casino: Your Destination for Short, High‑Intensity Gaming Sessions

1. The Quick‑Hit Experience at Lucky Vibe CasinoWhen you log into Lucky Vibe Casino, the first thing that strikes...

MaxiSpin – Quick‑Play Slots and Instant Wins for the Modern Gambler

1. The Quick‑Play Pulse – Why Short Sessions RuleMaxiSpin is built around players who crave instant gratification. In a...

Roby Casino: Quick‑Hit Gaming for the Modern Player

1. The Pulse of Fast PlayRoby Casino has carved a niche for players who crave adrenaline in a tight...

Winning Casino – Experience Rapid Wins with Every Spin

Welcome to Winning – Quick Wins AwaitIn a world where time is gold, Winning casino offers a playground designed...
- Advertisement -spot_imgspot_img

Burswood Online Casino: Quick‑Spin Thrills for the Fast‑Paced Player

1 – The Pulse of a Rapid‑Fire SessionFor many casino enthusiasts the game‑playing window is a burst of adrenaline:...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Must read

- Advertisement -spot_imgspot_img

You might also likeRELATED
Recommended to you