Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಉಡುಪಿಯ ಪ್ರತಿಭಾನ್ವಿತ ಮಹಿಳಾ ಕ್ರಿಕೆಟ್ ಆಟಗಾರ್ತಿ ವೈಷ್ಣವಿ ಆಚಾರ್ಯ ಕಡಿಯಾಳಿ…!!!

ಉಡುಪಿ-ನಾವು ಭಾರತೀಯರು ಕ್ರಿಕೆಟ್ ಆಟವನ್ನು ಧರ್ಮದಂತೆ ಆಚರಿಸುತ್ತೇವೆ, ಏಕೆಂದರೆ ಕ್ರಿಕೆಟ್‌ಗೆ ಹೆಚ್ಚಿದ ಗೌರವ ಮತ್ತು ಪ್ರೋತ್ಸಾಹದಿಂದಾಗಿ. ಇತ್ತೀಚೆಗೆ ದೇಶದಾದ್ಯಂತ ಕ್ರಿಕೆಟ್ ಪರ ಜೋರಾದ ಗಾಳಿ ಬೀಸುತ್ತಿದೆ.
ಇದು ಇಂದಿನ ದಿನಗಳಲ್ಲಿ ಪುರುಷರಷ್ಟೇ ಅಲ್ಲ ಮಹಿಳೆಯರೂ  ಕೂಡಾ ಆಡುವ ಕ್ರೀಡೆಯಾಗಿದೆ. ಇತ್ತೀಚಿನ ದಿನಗಳನ್ನು  ‘ ದಿ ಗೋಲ್ಡನ್ ಏರಾ ಆಫ್  ದಿ ಇಂಡಿಯನ್ ವಿಮೆನ್’ಸ್ ಕ್ರಿಕೆಟ್ ‘ ಎಂದು ಹೇಳಬಹುದು..  ಇದೀಗ ಭಾರತ ಮಹಿಳಾ ತಂಡದಲ್ಲಿ ಹೊಸ ತಾರೆಯರು ಹುಟ್ಟಿಕೊಳ್ಳುತ್ತಿದ್ದು, ಹೊಸ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ. 
 
ಉಡುಪಿ ಮಹಿಳಾ ತಂಡದ ಶ್ರೇಷ್ಠ ಆಟಗಾರ್ತಿಯ ಪರಿಚಯ ಇಲ್ಲಿದೆ.  ಸ್ನೇಹಿತರೇ, ಇಂದು ನಾವು ಉಡುಪಿಯ  ಮಹಿಳಾ ಯುವ ಕ್ರಿಕೆಟ್ ಪ್ರತಿಭೆ  ವೈಷ್ಣವಿ ಆಚಾರ್ಯ ಕಡಿಯಾಳಿ ಬಗ್ಗೆ ಹೇಳಲಿದ್ದೇವೆ. ಈ ಹೆಸರು ಅನೇಕ ಜನರಿಗೆ ಗೊತ್ತಿರಲಿಕ್ಕಿಲ್ಲ ಹೌದು!  ಉಡುಪಿ ಕ್ರಿಕೆಟ್ ಅಸೋಸಿಯೇಷನ್ ನ ಸ್ಟಾರ್ ಮಹಿಳಾ ಆಟಗಾರ್ತಿ ವೈಷ್ಣವಿ ಆಚಾರ್ಯ ಮಹಿಳಾ ಕ್ರಿಕೆಟಿಗರಲ್ಲಿ ಒಬ್ಬರು.  ಆರಂಭದ ದಿನಗಳಲ್ಲಿ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಗ ಕಟಪಾಡಿಯ ಕೆ ಆರ್ ಎಸ್  ಅಕಾಡೆಮಿಯ ಉದಯ ಕುಮಾರ್ ಕಟಪಾಡಿ ಆಕೆಯ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದವರು. ಇತ್ತೀಚಿನ ದಿನಗಳಲ್ಲಿ ಉಡುಪಿ ಕ್ರಿಕೆಟ್ ಅಸೋಸಿಯೇಷನ್ ನ ಮುಖ್ಯ ತರಬೇತುದಾರ ಶ್ರೀ ಪ್ರಭಾಕರ್ ಶೆಟ್ಟಿ  ಅವರ ಅಡಿಯಲ್ಲಿ ನಿಯಮಿತವಾಗಿ ಅಭ್ಯಾಸ ಮಾಡುತ್ತಿದ್ದಾಳೆ, ಇವರು ತಮ್ಮ ವೇಗದ ಬೌಲಿಂಗ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ನಿಂದ  ಗಮನ ಸೆಳೆದವರು. ಬಲಗೈ ಬ್ಯಾಟರ್ ಆಗಿರುವ ಇವರು ಬಲಗೈನಲ್ಲಿ ಬೌಲಿಂಗ್‌ ಮಾಡುತ್ತಾರೆ. 18 ವರ್ಷ ಪ್ರಾಯದ ವೈಷ್ಣವಿ ಆಚಾರ್ಯ ಪ್ರತಿಷ್ಠಿತ ವನಿತಾ ಕ್ರಿಕೆಟ್ ಕೂಟದಲ್ಲಿ ಭಾಗವಹಿಸುತ್ತಿರುವ  ಆಟಗಾರ್ತಿ. ರಾಜ್ಯದಲ್ಲಿ ನಡೆದ ಅನೇಕ ಮಹಿಳಾ ಕ್ರಿಕೆಟ್ ನಲ್ಲಿ  ಕಾಣಿಸಿಕೊಂಡಿದ್ದಾರೆ. ಅವರು ತನ್ನ ಆಲ್ ರೌಂಡ್  ಪ್ರದರ್ಶನದಿಂದಲೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ವೇಗದಲ್ಲಿ ಬೌಲಿಂಗ್‌ ಮಾಡುವ ಸಾಮರ್ಥ್ಯ ಹೊಂದಿರುವ ಅವರ ಬೌಲಿಂಗ್ ಶೈಲಿಗೆ ಅಭಿಮಾನಿಗಳು ಫಿದಾ ಆಗಿದ್ದು, ಇವರು ಭವಿಷ್ಯದ ಭರವಸೆಯ ಬೌಲರ್‌ ಎನಿಸಿದ್ದಾರೆ. ಜೊತೆಗೆ ಅವರ ಬ್ಯಾಟಿಂಗ್ ಸೆನ್ಸ್ ಅದ್ಭುತವಾಗಿದೆ. ಅಮೋಘ ಕ್ರಿಕೆಟ್ ಪ್ರದರ್ಶನಕ್ಕಾಗಿ ಹಲವಾರು ಮಹಿಳಾ ಕ್ರಿಕೆಟಿಗ ಪ್ರಶಸ್ತಿಯನ್ನು ಪಡೆದಿದ್ದಾರೆ. ಕ್ರಿಕೆಟ್ ವಿಷಯ ಬಂದಾಗ ಈಕೆಯ ಆಟಕ್ಕೆ ಅನೇಕರು ಮನಸೋತಿದ್ದುಂಟು. 
 
ಉಡುಪಿಯ ಸ್ನೇಹ  ಟ್ಯೂಟೋರಿಯಲ್  ಕಾಲೇಜಿನಲ್ಲಿ  ದ್ವಿತೀಯ ಪಿ ಯು ಸಿ  ಓದುತ್ತಿರುವ ವೈಷ್ಣವಿ ಆಚಾರ್ಯ 19 ವರ್ಷದೊಳಗಿನ ಕರ್ನಾಟಕ ಮಹಿಳಾ ಟಿ 20 ಕ್ರಿಕೆಟ್ ತಂಡಕ್ಕೆ ಆಯ್ಕೆ ಆಗುವ ಅವಕಾಶ ಪಡೆದಿದ್ದರು.  2022 ರಲ್ಲಿ  ಮೊದಲ ಬಾರಿಗೆ ಅಂಡರ್ 19 ರಾಜ್ಯ ಸಂಭಾವ್ಯರ ಪಟ್ಟಿಯಲ್ಲಿ ಆಡುವ ಅರ್ಹತೆ ಸಂಪಾದಿಸಿದರು.  19 ವರ್ಷದೊಳಗಿನ ಟಿ 20 ತಂಡದ ಪಂದ್ಯಕ್ಕೆ  ಆಯ್ಜೆಯಾಗಿದ್ದ ವೈಷ್ಣವಿ ಆಚಾರ್ಯ, ಇವರು  ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರು ಎಂದೂ ಸಹ ಗುರುತಿಸಲ್ಪಟ್ಟಿದ್ದಾರೆ. ವನಿತಾ ವಿಭಾಗದಲ್ಲಿ ನಾಮ ನಿರ್ದೇಶನಗೊಂಡ ವೈಷ್ಣವಿ ಆಚಾರ್ಯ ರಾಜ್ಯ ವಲಯ ಸ್ಥಳೀಯ ಮಹಿಳಾ ಕ್ರಿಕೆಟ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು.. ರಾಜ್ಯಾದ್ಯಂತ ನಡೆದ ಹಲವು ಟೂರ್ನಮೆಂಟ್  ನಲ್ಲಿ ಪ್ರಮುಖ ಪಾತ್ರ ವಹಿಸಿ ಹಲವಾರು ಪಂದ್ಯಾವಳಿಗಳಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
 
 
ಇದುವರೆಗಿನ ಸಾಧನೆ:
 
2022ರ  ಅಕ್ಟೋಬರ್ ನಲ್ಲಿ ಅಂಡರ್ 19 ಕರ್ನಾಟಕ  ತಂಡಕ್ಕೆ ಸೆಲೆಕ್ಟ್ ಆದ ವೈಷ್ಣವಿ ಆಚಾರ್ಯ  19 ವರ್ಷದೊಳಗಿನ ರಾಜ್ಯ ಸಂಭವನೀಯರು ಪಂದ್ಯದಲ್ಲಿ ರಾಜ್ಯ ಕ್ರಿಕೆಟ್‌ಗೆ ಚೊಚ್ಚಲ ಪ್ರವೇಶ ಮಾಡಿದರು.
 
ನಂತರ ರಾಜ್ಯ ವಲಯ ಸ್ಥಳೀಯ  ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದು, ಎರಡು ಬಾರಿ ಅವರು ಪ್ರತಿನಿಧಿಸಿದ ತಂಡ ವಿಜೇತರಾಗಿ  ಹೊರಹೊಮ್ಮಿತು. ಬೌಲಿಂಗ್‌ನಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದ ವೈಷ್ಣವಿ ಆಚಾರ್ಯ ನಂತರ ಆಲ್‌ರೌಂಡರ್‌ ಆಗಿ ಮಿಂಚುತ್ತಿದ್ದಾರೆ.
 
2022 ರಲ್ಲಿ ನೆನಪು ಟ್ರೋಫಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಆಡಿ ಇವರ ತಂಡ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.
 
ಮೈಸೂರ್ ನಲ್ಲಿ ನಡೆದ ಮಾಫ್ಯೂಸಿಲ್ ವಿಮೆನ್’ಸ್ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಅತ್ಯಧಿಕ ವಿಕೆಟ್‌ಗಳ  ಸಾಧನೆಗೈದು  ವುಮನ್  ಆಫ್  ದಿ ಮ್ಯಾಚ್ ಪ್ರಶಸ್ತಿಯನ್ನು  ಗಿಟ್ಟಿಸಿಕೊಂಡರು. 
 
ಸಿ  ಸಿ ಎಲ್ 2023 ರಲ್ಲಿ ರನ್ನರ್ ಅಪ್ ಪ್ರಶಸ್ತಿ
 
ಸಿ ಪಿ ಎಲ್ 2023 ರಲ್ಲೂ ಬ್ಯಾಕ್ ಟು ಬ್ಯಾಕ್ 5 ಬೌಂಡರಿಗಳನ್ನು ಬಾರಿಸಿ, ಅತ್ಯಧಿಕ ರನ್‌ ಹೊಡೆದು ವುಮನ್  ಆಫ್  ದಿ ಮ್ಯಾಚ್ ಪ್ರಶಸ್ತಿ  ಗಳಿಸಿದರು.
 
ಉಡುಪಿ ಸಿಂಗರ್ಸ್ ಟ್ರೋಫಿ 2023 ರಲ್ಲಿ ವಿನ್ನರ್ಸ್
 
ವೇಗದಲ್ಲಿ ಚೆಂಡೆಸೆಯುವ ಸಾಮರ್ಥ್ಯ‌ ಹೊಂದಿದ್ದು ಸ್ಥಳೀಯ ಮಟ್ಟದ ಟೂರ್ನಿಗಳಲ್ಲಿ ಮಿಂಚುತ್ತಿರುವ ಯುವ ವೇಗದ ಬೌಲರ್‌.
 
 
” ಕ್ರಿಕೆಟ್ ಮೇಲಿನ ಆಸಕ್ತಿಯಿಂದ, ಕಠಿಣ ಪರಿಶ್ರಮದಿಂದ ಮತ್ತು  ಹಿರಿಯರ ಪ್ರೇರಣೆ, ಹಾಗೂ ಕೋಚ್ ಗಳ ಮಾರ್ಗದರ್ಶನದಿಂದ ಕ್ರಿಕೆಟ್‌ಪಟು ಆಗಿದ್ದೇನೆ. ಕ್ರಿಕೆಟ್  ಪ್ರತಿಭೆಗಳಿಗೆ  ಪ್ರೋತ್ಸಾಹ ಸಿಕ್ಕರೆ ಖಂಡಿತವಾಗಿಯೂ  ಹೆಚ್ಚಿನ ಸಾಧನೆಗೆ ಅನುಕೂಲವಾಗುತ್ತದೆ. ಸಾಧನೆಗೆ  ನಿರಂತರ ಅಭ್ಯಾಸ  ಹಾಗೂ ಶ್ರಮ ಮುಖ್ಯ. ಮೊದಲ ಬಾರಿ ಅಂಡರ್ 19 ರಾಜ್ಯ ತಂಡದ ಪಂದ್ಯದಲ್ಲಿಆಯ್ಕೆ ಆದಾಗ ಬಹಳಷ್ಟು ಸಂತಸ ತಂದಿತ್ತುಎಂದು ವೈಷ್ಣವಿ ಹೇಳಿದರು. ರಾಜ್ಯ  ತಂಡಕ್ಕೆ ಆಯ್ಕೆಯಾಗುವ ಗುರಿ ಹೊಂದಿದ್ದು, ಹಲವು ಟೂರ್ನಿಗಳಲ್ಲಿಉತ್ತಮ ಪ್ರದರ್ಶನ ನೀಡುತ್ತಿದ್ದೇನೆ ”  ಎಂದು ಸ್ಪೋರ್ಟ್ಸ್ ಕನ್ನಡದ ಜೊತೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.
 
 
ಕಳೆದ ಎರಡು ವರ್ಷಗಳಿಂದ ವಿವಿಧ ವಯೋಮಿತಿಯ  ಟೂರ್ನಿಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ ವೇಗಿ ವೈಷ್ಣವಿ ರಾಜ್ಯ ಕಿರಿಯರ ತಂಡದ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದಾರೆ.  ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದ ಅವರ ತಂದೆ ಸತೀಶ್ ಆಚಾರ್ಯ ಅಕ್ಕಸಾಲಿಗರಾಗಿದ್ದಾರೆ ಮತ್ತು ಅವರ ತಾಯಿ ಗೀತಾ ಎಸ್ ಆಚಾರ್ಯ ಅವರು ಟೈಲರಿಂಗ್ ಅಂಗಡಿಯನ್ನು ನಡೆಸುತ್ತಿದ್ದಾರೆ.  ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುವ ಆಸೆ ಅವಳಲ್ಲಿ ಬೇರೂರಿದೆ.  ಮುಂದೆ ಬೆಂಗಳೂರಿನ ಪ್ರಸಿದ್ಧ ಕ್ರಿಕೆಟ್ ಸಂಸ್ಥೆಗಳಲ್ಲಿ ಒಂದಾದ ಜಸ್ಟ್ ಕ್ರಿಕೆಟ್ ಅಕಾಡೆಮಿಯಲ್ಲಿ ವೃತ್ತಿಪರ ಕ್ರಿಕೆಟ್ ತರಬೇತಿ ಪಡೆಯುವ ಆಸೆ ಇದ್ದು, ಸೂಕ್ತ ಪ್ರೋತ್ಸಾಹದ ನಿರೀಕ್ಷೆಯಲ್ಲಿದ್ದಾರೆ . ಉಡುಪಿಯ ಈ  ಮಹಿಳಾ ಕ್ರಿಕೆಟ್  ಪ್ರತಿಭೆಗೆ ಈಗ ನೆರವಿನ ಹಸ್ತ ಬೇಕಿದೆ .  
 
ವೈಷ್ಣವಿ ಆಚಾರ್ಯ ಸಾಧನೆಗೆ ಸ್ಪೋರ್ಟ್ಸ್ ಕನ್ನಡದ ಪ್ರವರ್ತಕರಾದ ಕೆ ಆರ್  ಕೆ ಆಚಾರ್ಯ ಅಭಿನಂದಿಸಿದ್ದು, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲೂ ಸಾಧನೆ ತೋರಿ, ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿ, ತಾರೆಯಾಗಿ ಬೆಳೆದು ಉಡುಪಿ ಜಿಲ್ಲೆಯ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರಿಸುವ ಸಾಧನೆ ಮಾಡುವಂತೆ ಹಾರೈಸಿದ್ದಾರೆ.
 
ವೈಷ್ಣವಿ ಬೌಲಿಂಗ್ ವೀಡಿಯೋ

 
 
ಆಲ್ ದಿ ಬೆಸ್ಟ್  ವೈಷ್ಣವಿ ಆಚಾರ್ಯ…
 
 
ಸುರೇಶ್ ಭಟ್ ಮೂಲ್ಕಿ  &
ಟೀಮ್ ಸ್ಪೋರ್ಟ್ಸ್ ಕನ್ನಡ
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ದಿ. ಶ್ರೀಮತಿ ಲೂಸಿ ಸಲ್ದಾನ‌ ಮೆಮೋರಿಯಲ್ ಕಪ್ – 2023 ಅಂಡರ್ -14 ರಾಜ್ಯ ಮಟ್ಟದ ಲೆದರ್ ಬಾಲ್ ಟಿ20 ಕ್ರಿಕೆಟ್ ಪಂದ್ಯಾವಳಿ

ಕಾರ್ಕಳ ಸಮೀಪದ ರಂಗನಪಲ್ಕೆ ಕೌಡೂರು ಸ್ಟೇಡಿಯಂ ನಲ್ಲಿ ರಾಜ್ಯಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಅಂಡರ್ ೧೪ ಕ್ರಿಕೆಟ್ ಪಂದ್ಯಾಟಕ್ಕೆ ಸನ್ ರೈಸ್ ಕ್ರಿಕೆಟ್ ಅಕಾಡೆಮಿಯ ಪ್ರಧಾನ ಕೋಚ್, ಹಿರಿಯ  ಆಟಗಾರರಾದ ಸದಾನಂದ ಶಿರ್ವ ಚಾಲನೆ ನೀಡಿದರು.
ಸಾಗರ, ಭದ್ರಾವತಿ,ಮೈಸೂರು, ಬ್ರಹ್ಮಾವರ, ಮಂಗಳೂರು, ಮಣಿಪಾಲ, ಶಿರ್ವ, ಪುತ್ತೂರು ಭಾಗದ ಒಟ್ಟು ೧೨ ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿವೆ. ಮುಂದಿನ ಐದು ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ.
ಈ ಸಂದರ್ಭ ಕೌಡೂರು ಸ್ಟೇಡಿಯಂ ಸಂಸ್ಥಾಪಕ ಲಾರೆನ್ಸ್ ಸಲ್ದಾನ ಕೌಡೂರು, ಮೈದಾನದ ವ್ಯವಸ್ಥಾಪಕ ಮೆಲ್ವಿನ್ ನೊರೊನ್ಹಾ ,  ಪಂದ್ಯಾಟ ಸಂಯೋಜಕ ಸದಾನಂದ ಶಿರ್ವ ಮತ್ತಿತರರು ಇದ್ದರು.
ಸನ್ ರೈಸ್ ಕ್ರಿಕೆಟ್ ಅಕಾಡೆಮಿಯ ಆಶ್ರಯದಲ್ಲಿ ಏಪ್ರಿಲ್ 8 ರಿಂದ 12 ರ ವರೆಗೆ, ಲೀಗ್ ಕಮ್ ನಾಕ್ ಔಟ್ ರೂಪದಲ್ಲಿ ಪ್ರತೀ ದಿನ ಮೂರು ಪಂದ್ಯಗಳು ನಡೆಯಲಿವೆ.
ಭಾಗವಹಿಸುವ ತಂಡಗಳು:
ಬೆಳ್ಳಿಪಾಡಿ ಆಳ್ವಾಸ್ ಅಕಾಡೆಮಿ ಬ್ರಹ್ಮಾವರ,
22 ಯಾರ್ಡ್ಸ್ ಸ್ಕೂಲ್ ಆಫ್  ಅಕಾಡೆಮಿ ಮಂಗಳೂರು,
ಪುತ್ತೂರು ಕ್ರಿಕೆಟ್ ಅಕಾಡೆಮಿ ಪುತ್ತೂರು,
ಸೇಂಟ್ ಅಲೋಶಿಯಸ್ ಕ್ರಿಕೆಟ್ ಅಕಾಡೆಮಿ ಮಂಗಳೂರು,HJC ಕ್ರಿಕೆಟ್ ಅಕಾಡೆಮಿ ಶಿರ್ವ,
ಉಡುಪಿ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಷನ್  ಮಣಿಪಾಲ,ದಕ್ಷಿಣ ಕನ್ನಡ ಕ್ರಿಕೆಟ್ ಅಸೋಸಿಯೇಷನ್ ಮಂಗಳೂರು,ಕರಾವಳಿ ಕ್ರಿಕೆಟ್ ಅಸೋಸಿಯೇಷನ್ ಮಂಗಳೂರು,ಸಾಗರ್ ಬಾಯ್ಸ್ ಇಲೆವೆನ್ ಸಾಗರ,
ಹೆರಿಟೇಜ್ ಕ್ರಿಕೆಟ್ ಅಕಾಡೆಮಿ ಮೈಸೂರು,
ರಘುವೀರ್  ಕ್ರಿಕೆಟ್ ಅಕಾಡೆಮಿ ಭದ್ರಾವತಿ.
ಸನ್ ರೈಸ್ ಕ್ರಿಕೆಟ್ ಅಕಾಡೆಮಿ  ಆಯೋಜಿಸಿರುವ  ದಿ. ಶ್ರೀಮತಿ ಲೂಸಿ ಸಲ್ದಾನ  ಇವರ  ಸ್ಮರಣಾರ್ಥ ನಡೆಯುವ ರಾಜ್ಯಮಟ್ಟದ 14 ರ ವಯೋಮಿತಿಯ ಈ ಲೆದರ್ ಬಾಲ್ T-20 ಕ್ರಿಕೆಟ್ ಪಂದ್ಯಾವಳಿಗೆ ಸ್ಪೋರ್ಟ್ಸ್ ಕನ್ನಡ. ಕಾಮ್ ಶುಭಾಶಯ ಕೋರುತ್ತಿದೆ. ಕ್ರಿಕೆಟ್ ನಮ್ಮ ಪ್ರಮುಖ ಆಟ.  ಈ ಪಂದ್ಯಾವಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಆಟಗಾರರು ಕ್ರೀಡಾ ಕೌಶಲ್ಯ ಮತ್ತು ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಿ , ಕ್ರಿಕೆಟ್‌ನಲ್ಲಿ ಉತ್ಸಾಹವನ್ನು ಹೊಂದಿ ಮತ್ತು ಉತ್ತಮ ಪ್ರದರ್ಶನ  ತೋರ್ಪಡಿಸಿ  ಮುಂದಿನ ಕ್ರಿಕೆಟ್ ತಾರೆಯಾಗುವ ಅವಕಾಶವನ್ನು ಪಡೆದುಕೊಳ್ಳಿ ಎಂದು ಹಾರೈಸುತ್ತಿದೆ.
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಎಮ್.ಜೆ.ಸಿ ಮೂಡುಬೆಳ್ಳೆ ಮಡಿಲಿಗೆ ಎಮ್.ಪಿ.ಎಲ್ 2023- ಸೀಸನ್ 4 ರ ಪ್ರಶಸ್ತಿ

ಉಡುಪಿ-ಯಶಸ್ವಿ ಸ್ಪೋರ್ಟ್ಸ್ ಕ್ಲಬ್ ಮೂಡುಬೆಳ್ಳೆ ಇವರ ಆಶ್ರಯದಲ್ಲಿ ಏಪ್ರಿಲ್ 2 ರವಿವಾರದಂದು ಮೂಡುಬೆಳ್ಳೆ ಕಾಲೇಜು ಮೈದಾನದಲ್ಲಿ ನಡೆದ ಮೂಡುಬೆಳ್ಳೆ ಪ್ರೀಮಿಯರ್ ಲೀಗ್ 2023-ಸೀಸನ್ 4 ರ ಪ್ರಶಸ್ತಿಯನ್ನು ಎಮ್.ಜೆ.ಸಿ ಮೂಡುಬೆಳ್ಳೆ ತಂಡ ಜಯಿಸಿದೆ.
ಮೂಡುಬೆಳ್ಳೆ ಪರಿಸರದ ಪ್ರತಿಭಾನ್ವಿತ ಆಟಗಾರರ ಅನ್ವೇಷಣೆಯ ಸದುದ್ದೇಶದಿಂದ ಹಮ್ಮಿಕೊಂಡ ಈ ಪಂದ್ಯಾಟದಲ್ಲಿ ಒಟ್ಟು 8 ತಂಡಗಳು ಭಾಗವಹಿಸಿದ್ದವು.
ಅಂತಿಮವಾಗಿ ಫೈನಲ್ ನಲ್ಲಿ ಎಮ್.ಜೆ.ಸಿ ಮೂಡುಬೆಳ್ಳೆ ತಂಡ ಭಜರಂಗಿ ಕ್ರಿಕೆಟರ್ಸ್ ಮೂಡುಬೆಳ್ಳೆ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟವನ್ನು ಹಾಗೂ
ಬ್ರೂಟಲ್ ವಾರಿಯರ್ಸ್‌ ತೃತೀಯ ಸ್ಥಾನ ತನ್ನದಾಗಿಸಿಕೊಂಡಿತು.
ಫೈನಲ್ ನ ಪಂದ್ಯಶ್ರೇಷ್ಟ  ಹಾಗೂ ಬೆಸ್ಟ್ ಬೌಲರ್ ಪ್ರಶಸ್ತಿಯನ್ನು ಸುದೇಶ್ ಆಚಾರ್ಯ ಎಮ್.ಜೆ‌.ಸಿ ಮೂಡುಬೆಳ್ಳೆ ಪಡೆದುಕೊಂಡರೆ,ಅನಿಕೇತ್ ಎಂಟರ್ಪ್ರೈಸಸ್ ಎಡ್ಮೇರ್ ನ ಚಂದ್ರಕಾಂತ್ ಬೆಸ್ಟ್ ಫೀಲ್ಡರ್,ಭಜರಂಗಿ ಮೂಡುಬೆಳ್ಳೆಯ ಪುರುಷೋತ್ತಮ್ ಬೆಸ್ಟ್ ಬ್ಯಾಟರ್ ಹಾಗೂ ಪಂದ್ಯಾಟದುದ್ದಕ್ಕೂ ಶ್ರೇಷ್ಠ ಆಲ್ರೌಂಡರ್ ಪ್ರದರ್ಶನ ನೀಡಿದ ಅನಿತ್ ಮೂಡುಬೆಳ್ಳೆ ಸರಣಿಶ್ರೇಷ್ಟ ಗೌರವಕ್ಕೆ ಭಾಜನರಾದರು…
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಏಪ್ರಿಲ್ 7 ರಿಂದ ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ನ ಬೇಸಿಗೆ ಕ್ರಿಕೆಟ್ ಶಿಬಿರ

ಬೈಂದೂರು-ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ ಬೇಸಿಗೆ ರಜೆಯ ಪ್ರಯುಕ್ತ ಏಪ್ರೀಲ್ ಮತ್ತು ಮೇ ತಿಂಗಳಲ್ಲಿ ಬೈಂದೂರಿನಲ್ಲಿ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವು ಜರುಗಲಿರುವುದು. 7 ರಿಂದ 16 ವರ್ಷದ ಬಾಲಕ ಬಾಲಕಿಯರಿಗೆ ತರಬೇತಿ ಪಡೆಯುವ ಅವಕಾಶವಿದ್ದು ಏಪ್ರೀಲ್ 7 ರಿಂದ ಪ್ರಥಮ ಹಂತದ ಶಿಬಿರ ಆರಂಭಗೊಳ್ಳಲಿದೆ.
ಬೈಂದೂರಿನ ಕ್ರೀಡಾಂಗಣದಲ್ಲಿ ಎರಡು ತಿಂಗಳುಗಳ ಕಾಲ ಪ್ರತಿದಿನ ಮಧ್ಯಾಹ್ನ 3 ರಿಂದ 6 ಗಂಟೆಯ ವರೆಗೆ ಕ್ರಿಕೆಟ್ ತರಬೇತಿ ನಡೆಯಲಿದೆ. ಕ್ರಿಕೆಟ್ ತರಬೇತುದಾರರಾದ ನಿತಿನ್ ಸಾರಂಗ, ದಿನೇಶ್ ಕೆ ಮತ್ತು ರಾಜೇಶ್ ಆಚಾರ್ ಮಾರ್ಗದರ್ಶನ ನೀಡಲಿದ್ದಾರೆ. ಎರಡು ತಿಂಗಳ ಕಾಲ ನಡೆಯುವ ಶಿಬಿರಕ್ಕೆ ಇತರೆ ಸ್ಥಳದ ನುರಿತ ತರಬೇತುದಾರರು ಕೂಡ ಆಗಮಿಸಿ ವಿಶೇಷ ತರಬೇತಿ ನೀಡಲಿದ್ದಾರೆ.
ಕರ್ನಾಟಕ ರಾಜ್ಯ ಟೆನಿಸ್ ಕ್ರಿಕೆಟ್ ನಲ್ಲಿ  ಐವತ್ತು ವರ್ಷಗಳ ಇತಿಹಾಸ ಇರುವ ತಂಡ ವಿಕ್ರಮ್ ಕ್ರಿಕೆಟ್ ಕ್ಲಬ್ ಬೈಂದೂರು ಈ ಸಮ್ಮರ್ ಕ್ರಿಕೆಟ್ ಕೋಚಿಂಗ್ ಕ್ಯಾಂಪ್  ಹಮ್ಮಿಕೊಂಡಿದ್ದಾರೆ . ತರಬೇತಿ ಶಿಬಿರದಲ್ಲಿ ಬೇಸಿಕ್ ಹಾಗೂ ಅಡ್ವಾನ್ಸ್ ಸ್ಕಿಲ್ ಗಳನ್ನು ತರಬೇತುದಾರರು ಕಲಿಸಿಕೊಡುವರು. ಶಿಬಿರದಲ್ಲಿ ಫಿಟ್ನೆಸ್ ಬಗ್ಗೆಯೂ ಹೇಳಿಕೊಡಲಾಗುವುದು. ಶಿಬಿರದ ಮಧ್ಯದಲ್ಲಿ ಬೇರೆ  ಕ್ರಿಕೆಟ್ ತಂಡದ ವಿರುದ್ಧ ಪಂದ್ಯಗಳನ್ನು ಕೂಡ ಆಯೋಜಿಸಲಾಗುವುದು. ಬೈಂದೂರು ಮತ್ತು ಸುತ್ತಮುತ್ತಲಿನ ಕ್ರಿಕೆಟ್ ಉತ್ಸಾಹಿ ಮಕ್ಕಳಿಗೆ ಈ ಸಮ್ಮರ್ ಸ್ಪೆಷಲ್ ಪ್ರಯೋಜನವನ್ನು ನೀಡುತ್ತದೆ. ಎಲ್ಲಾ ಯುವ ಮತ್ತು ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳಿಗೆ ತಮ್ಮ ಬೇಸಿಗೆಯ ರಜಾದಿನಗಳನ್ನು ಅಮೂಲ್ಯವಾದ ರೀತಿಯಲ್ಲಿ ಕಳೆಯಲು ಇದು ಒಂದು ಅದ್ಭುತವಾದ ಅವಕಾಶವಾಗಿದೆ.
ಉದಯೋನ್ಮುಖ ಪ್ರತಿಭೆಗಳನ್ನು ಆಟಕ್ಕೆ ಪರಿಚಯಿಸಿ ಉತ್ತಮ ನಿರ್ವಹಣೆಗಾಗಿ ಪ್ರೋತ್ಸಾಹಿಸಲಾಗುವುದು ಎಂದು ವಿಕ್ರಮ್ ಕ್ರಿಕೆಟ್ ಕ್ಲಬ್ ನ ಪ್ರಕಟಣೆ ತಿಳಿಸಿದೆ. ಆಸಕ್ತರು ಈ ಶಿಬಿರದ ಸದುಪಯೋಗ  ಪಡೆದುಕೊಳ್ಳಬೇಕಾಗಿ ಕೋರಲಾಗಿದೆ. ಬುಕ್ಕಿಂಗ್ ಮತ್ತು ಹೆಚ್ಚಿನ ವಿವರಗಳಿಗಾಗಿ ನಿತಿನ್ ಸಾರಂಗ  98456 41449, ದಿನೇಶ್ ಗಾಣಿಗ 63638 52771,ರಾಜೇಶ್ ಆಚಾರ್ 99164 40337 ಇವರನ್ನು ಸಂಪರ್ಕಿಸಬಹುದು.
ಕ್ರಿಕೆಟ್  ಕೌಶಲ್ಯ  ಅಭಿವೃದ್ಧಿ ಮತ್ತು ತರಬೇತಿಯನ್ನು ಬೈಂದೂರಿನ ವಿಕ್ರಮ್ ಕ್ರಿಕೆಟ್  ಕ್ಲಬ್  ಪರಿಣಾಮಕಾರಿಯಾಗಿ  ಒದಗಿಸಲಿ ಎಂದು ಸ್ಪೋರ್ಟ್ಸ್ ಕನ್ನಡ ಈ ಸಂದರ್ಭದಲ್ಲಿ ಹಾರೈಸುತ್ತಿದೆ.

Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಯುನೈಟೆಡ್ ಕ್ರಿಕೆಟ್ ಲೀಗ್ ನಲ್ಲಿ ಕ್ಲಾಸಿಕ್ ಸಾಲ್ಮಾರ್ ಕಾರ್ಕಳಕ್ಕೆ ಭರ್ಜರಿ ಗೆಲುವು

ಮಂಗಳೂರು-ಅಂಡರ್ ಆರ್ಮ್ ಟೆನಿಸ್ ಬಾಲ್ ಕ್ರಿಕೆಟ್  ಮಂಗಳೂರು ಮತ್ತು ಕಾರ್ಕಳ ಆಟಗಾರರಿಗೆ ವಿಭಿನ್ನ ರೀತಿಯ ಸಂತೋಷವನ್ನು ನೀಡುತ್ತದೆ. ಇದು ತನ್ನ ಅರ್ಹ ಅಭಿಮಾನಿಗಳು ಮತ್ತು ಅನುಯಾಯಿಗಳನ್ನು ಹೊಂದಿದೆ. ಋತುವಿನ GSB ಯ ಅತಿ ದೊಡ್ಡ ಅಂಡರ್ ಆರ್ಮ್ ಫ್ಲಡ್ ಲೈಟ್ ಕ್ರಿಕೆಟ್ ಪಂದ್ಯಾವಳಿಯನ್ನು ಕೊಡಿಯಾಲ್ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿತ್ತು. ಈ ಪ್ರತಿಷ್ಠಿತ ಪಂದ್ಯಾಕೂಟದಲ್ಲಿ ಹತ್ತು  ಫ್ರ್ಯಾಂಚೈಸ್ ತಂಡಗಳು ಭಾಗವಹಿಸಿದ್ದವು. ಡೆಡ್ಲಿ ಪ್ಯಾಂಥರ್ಸ್ ವಿರುದ್ಧ ನಡೆದ ಫೈನಲ್ ಸೆಣಸಾಟದಲ್ಲಿ ಕ್ಲಾಸಿಕ್ ಸಾಲ್ಮಾರ್ ಕಾರ್ಕಳ 6 ವಿಕೆಟ್ ಗಳ ಭರ್ಜರಿ ಗೆಲುವು ಪಡೆದು ಪ್ರಶಸ್ತಿ ಗೆದ್ದಿದೆ.
ಕೊಡಿಯಾಲ್ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮಂಗಳೂರಿನ ಉರ್ವಾ ಮೈದಾನದ ಆವರಣದಲ್ಲಿ ಈ ಟೆನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ವಾರಾಂತ್ಯವನ್ನು GSB ಕ್ರಿಕೆಟ್ ಅಭಿಮಾನಿಗಳು ಮಂಗಳೂರು ಉರ್ವಾ ಮೈದಾನದಲ್ಲಿ ಆನಂದಿಸಿದರು. V4 News ನಲ್ಲಿ ಟೂರ್ನಮೆಂಟ್ ನ ನೇರ ಪ್ರಸಾರ ಬಿತ್ತರಿಸಲಾಯಿತು.
ಕಾರ್ಕಳದ  ತಂಡ ‘ ಕ್ಲಾಸಿಕ್ ಸಾಲ್ಮಾರ್  ‘ ಪ್ರಥಮ ಬಹುಮಾನ ಐವತ್ತು  ಸಾವಿರದ ಏಳು ರೂ. ನಗದು ಹಾಗೂ ಟ್ರೋಫಿ ಗಳಿಸಿತು.   ಡೆಡ್ಲಿ ಪ್ಯಾಂಥರ್ಸ್ ಕೊಡಿಯಾಲ್  ತಂಡ ಎರಡನೇ ಬಹುಮಾನ ಮೂವತ್ತು ಸಾವಿರದ ಏಳು ರೂ. ಹಾಗೂ ಟ್ರೋಫಿ ಪಡೆಯಿತು. ಮೂರನೇ ಸ್ಥಾನ ಪಡೆದ ಜೈಕಾರ್ ಸ್ಟ್ರೈಕರ್ಸ್ ತಂಡಕ್ಕೆ  ಟ್ರೋಫಿ ವಿತರಿಸಲಾಯಿತು.
ಫೈನಲ್ ಪಂದ್ಯ ದ ಮ್ಯಾನ್ ಆಪ್ ದಿ ಮ್ಯಾಚ್ – ರಾಧಾ ಕೃಷ್ಣ ಕ್ಲಾಸಿಕ್ ಸಾಲ್ಮಾರ್ ಕಾರ್ಕಳ
ಮ್ಯಾನ್ಆಫ್ ದಿ ಸೀರೀಸ್:  ಮಹೇಶ್ ನಾಯಕ್  ಕ್ಲಾಸಿಕ್ ಸಾಲ್ಮಾರ್ ಕಾರ್ಕಳ
ಬೆಸ್ಟ್ ಬ್ಯಾಟರ್ – ಜೈಕಾರ್ ಸ್ಟ್ರೈಕರ್ಸ್ ತಂಡದ ಶಿವ ಪ್ರಸಾದ್
ಬೆಸ್ಟ್ ಬೌಲರ್ -ವರುಣ್ ಕಿಣಿ ಡೆಡ್ಲಿ ಪ್ಯಾಂಥರ್ಸ್
ಬೆಸ್ಟ್ ಫೀಲ್ಡರ್-ಕಾರ್ತಿಕ್ ಪ್ರಭು ಡೆಡ್ಲಿ ಪ್ಯಾಂಥರ್ಸ್
ಎಮರ್ಜಿಂಗ್ ಪ್ಲೇಯರ್-ಕ್ಲಾಸಿಕ್ ಸಾಲ್ಮಾರ್ ಕಾರ್ಕಳದ  ಪ್ರತೀಕ್ ಪ್ರಭು
ಮಂಗಳೂರಿನ ಗೋಪಿ ಭಟ್ರು ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ನಿರೂಪಣೆ ಮಾಡಿದರು.
ಅದ್ದೂರಿಯಾಗಿ ಪಂದ್ಯಾವಳಿ ಆಯೋಜಿಸಿ ಯಶಸ್ವಿಗೆ  ಕಾರಣರಾದ ಕೊಂಚಾಡಿ ನರಸಿಂಹ ಶೆಣೈ , ನಾಗೇಶ್,  ಕಾರ್ತಿಕ್ ಪ್ರಭು, ವಿವೇಕ್ ಹೆಗ್ಡೆ, ಸಂದೀಪ್ ಮತ್ತು ಎಲ್ಲಾ ಸನ್ಮಿತ್ರರಿಗೂ, ವಿಜೇತ ತಂಡಗಳಿಗೂ ಅಭಿನಂದನೆಗಳು.
ಶುಭ ಕೋರುವ,
ಸುರೇಶ ಭಟ್ ಮೂಲ್ಕಿ &
ಟೀಮ್ ಸ್ಪೋರ್ಟ್ಸ್ ಕನ್ನಡ
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಪ್ರತಿಭಾವಂತ ಕ್ರಿಕೆಟ್ ಆಟಗಾರರಿಗೆ ಶೋಧ–ಚಕ್ರವರ್ತಿ ಕ್ರಿಕೆಟ್ ಕ್ಲಬ್‍ನಿಂದ ತರಬೇತಿ ಶಿಬಿರ

ಕುಂದಾಪುರ-ಏಪ್ರಿಲ್ 1 ರಿಂದ ಏಪ್ರಿಲ್ 30 ರವರೆಗೆ ನಡೆಯುವ ಬೇಸಿಗೆ ಕ್ರಿಕೆಟ್‌ ತರಬೇತಿ ಶಿಬಿರ.ಏಪ್ರಿಲ್  ಮೊದಲ ವಾರದಿಂದ ಆರಂಭವಾಗಲಿರುವ ವಾರ್ಷಿಕ ತರಬೇತಿ ಶಿಬಿರ.

80-90 ರ ಧಶಕದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ನಲ್ಲಿ ಚಕ್ರಾದಿಪಥ್ಯ ಸಾಧಿಸಿ ಮೆರೆದ ಸಂಸ್ಥೆ ಅದು ನಮ್ಮೂರಿನ ಹೆಮ್ಮೆಯ ಕುಂದಾಪುರದ ಚಕ್ರವರ್ತಿ ಕ್ರಿಕೆಟ್ ಕ್ಲಬ್. ಶ್ರೀಪಾದ ಉಪಾಧ್ಯಾಯ, ಸತೀಶ್ ಕೋಟ್ಯಾನ್, ಮನೋಜ್ ನಾಯರ್, ಕೆ ಪಿ ಸತೀಶ್, ಪ್ರದೀಪ್ ವಾಜ್, ರಾಜ, ಶಾಹೀದ್,ರಾಘವೇಂದ್ರ ಚರಣ್ ನಾವಡ, ರಂಜಿತ್ ಶೆಟ್ಟಿ ಹೀಗೇ ಇನ್ನಿತರ ಆಟಗಾರರು ಸೇರಿ ಕರ್ನಾಟಕ ರಾಜ್ಯದಲ್ಲೇ ಪ್ರಾಬಲ್ಯವನ್ನು ಮೆರೆದಿತ್ತು.

ಕ್ರಿಕೆಟ್  ಟೂರ್ನಮೆಂಟ್ ನಲ್ಲಿ ಭಾಗವಹಿಸುವುದನ್ನು ನಿಲ್ಲಿಸಿದಾರರೂ ಕ್ರಿಕೆಟ್ ಮೇಲೆ ಇರುವ ಇವರ  ಪ್ರೀತಿ ಎಂದಿಗೂ ನಿಲ್ಲಲಿಲ್ಲ ಪ್ರತಿಭಾವಂತ ಕ್ರಿಕೆಟ್ ಆಟಗಾರರನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಷ್ಠಿತ ಚಕ್ರವರ್ತಿ ಕ್ರಿಕೆಟ್ ಕ್ಲಬ್. ವಾರ್ಷಿಕ ತರಬೇತಿ ಶಿಬಿರವನ್ನು ನಡೆಸುತ್ತಾ ಬಂದಿದೆ.

ಕುಂದಾಪುರ ನಗರದ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಪ್ರತಿಭಾವಂತ ಕ್ರಿಕೆಟ್ ಪಟುಗಳಿಗಾಗಿ ಆಯೋಜಿಸಿರುವ ಶಿಬಿರ ಏಪ್ರಿಲ್ 1 ರಿಂದ ಪ್ರಾರಂಭಗೊಳ್ಳಲಿದೆ, ಗಾಂಧಿ ಮೈದಾನದಲ್ಲಿ ಶಿಬಿರ ನಡೆಸಿ ತರಬೇತಿ ನೀಡಲಿದೆ. ಅಂಡರ್ 13  ಮತ್ತು 14 ವರ್ಷ ಮಿಗಿಲಾದ ಮಕ್ಕಳಿಗಾಗಿ ( Both Boys & Girls ) ಇಲ್ಲಿ ಲೆದರ್ ಬಾಲ್ ತರಬೇತಿ ನೀಡಿ ಪ್ರತಿಭಾವಂತರನ್ನು ಗುರುತಿಸುವ ಕಾರ್ಯದಲ್ಲಿ ತೊಡಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಭಾಗಿತ್ವದಲ್ಲಿ ಈ ತರಬೇತಿ ಶಿಬಿರ ನಡೆಯಲಿದೆ.

ಕಳೆದ ಹಲವಾರು ವರ್ಷಗಳಿಂದ ಸತತವಾಗಿ ವಾರ್ಷಿಕ ತರಬೇತಿ, ಬೇಸಿಗೆ ಶಿಬಿರಗಳನ್ನು ನಡೆಸುತ್ತಿರುವ  ಚಕ್ರವರ್ತಿ ಕ್ರಿಕೆಟ್ ಕ್ಲಬ್, ಒಂದು ತಿಂಗಳ ಕಾಲ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ನಡೆಸಲಿದೆ. ಉತ್ಸಾಹಿ ಹಿರಿಯ ಆಟಗಾರರು ಮತ್ತು ತಜ್ಞ ಕ್ರಿಕೆಟ್ ಪಟುಗಳ ಮಾರ್ಗದರ್ಶನದಲ್ಲಿ ತರಬೇತಿ ನೀಡಿ, ಪ್ರತಿಭಾವಂತರನ್ನು ವೃತ್ತಿಪರ ಕ್ರಿಕೆಟ್‍ಗೆ ಪೂರಕವಾಗಿ ತಯಾರಿ ನಡೆಸಲಾಗುತ್ತದೆ ಎಂದು ಕ್ಲಬ್ ನ ಕ್ರಿಕೆಟ್ ಕೋಚ್  ಪ್ರದೀಪ್ ವಾಜ್ ತಿಳಿಸಿದ್ದಾರೆ. ಇಲ್ಲಿ ತರಬೇತಿ ಪಡೆದ ಸಾಕಷ್ಟು ಮಕ್ಕಳು ಜಿಲ್ಲಾಮಟ್ಟ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಭವಿಷ್ಯ ರೂಪಿಸಿಕೊಂಡಿದ್ದಾರೆ ಎಂದು ತಿಳಿಸಿರುವ ಅವರು, ಆಸಕ್ತ ಕ್ರಿಕೆಟ್ ಪ್ರೇಮಿಗಳು ಒಟ್ಟುಗೂಡಿ ಈ ಸತ್ಕಾರ್ಯದಲ್ಲಿ ತೊಡಗಿರುವುದಾಗಿ ಹೇಳಿದ್ದಾರೆ.

ಶಿಬಿರದಲ್ಲಿ ಮಕ್ಕಳ ದೈಹಿಕ ಸಾಮರ್ಥ್ಯ ವೃದ್ಧಿ, ಮನೋಬಲ ಹೆಚ್ಚಿಸುವುದರ ಜೊತೆಗೆ ವೃತ್ತಿಪರ ಕ್ರಿಕೆಟ್‌ಗೆ ಪೂರಕವಾಗಿ ತಯಾರಿ ಮಾಡಲಾಗುವುದು. ಪ್ರಸ್ತುತ ಕುಂದಾಪುರದ ಗಾಂಧಿ  ಮೈದಾನದಲ್ಲಿ ವಾರ್ಷಿಕ ತರಬೇತಿ ನೀಡಲಾಗುತ್ತಿದ್ದು ಮಕ್ಕಳನ್ನು ದೈಹಿಕ ಮತ್ತು ಮಾನಸಿಕವಾಗಿ ತಯಾರುಗೊಳಿಸಿ ಭವಿಷ್ಯದ ಕ್ರಿಕೆಟ್ ಪಟುಗಳಾಗಿ ರೂಪುಗೊಳಿಸುವುದೇ ಇವರ ಗುರಿ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಪ್ರದೀಪ್ ವಾಜ್  9448252649 ಅಥವಾ ಅರ್ಮಾನ್  8792444376,  ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಚಕ್ರವರ್ತಿ ಕ್ರಿಕೆಟ್ ಕ್ಲಬ್ನ ಸೇವೆಯನ್ನು ಸ್ಪೋರ್ಟ್ಸ್ ಕನ್ನಡ ಶ್ಲಾಘಿಸುತ್ತಿದೆ. ರಾಜ್ಯಕ್ಕೆ ಪ್ರತಿಭಾವಂತ ಕ್ರಿಕೆಟಿಗರನ್ನು ಕೊಡುಗೆಯಾಗಿ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿ ಎಂದು ಹಾರೈಸುತ್ತಿದೆ. ಭವಿಷ್ಯದಲ್ಲೂ ಕ್ಲಬ್ ನ ಉತ್ತಮ ಕಾರ್ಯಕ್ಕೆ ಸಂಪೂರ್ಣ ಸಹಕಾರ ಸ್ಪೋರ್ಟ್ಸ್ ಕನ್ನಡ ನೀಡಲಿದೆ.

ಏಪ್ರಿಲ್ 1 ರಿಂದ ಏಪ್ರಿಲ್ 30 ರವರೆಗೆ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯುವ  ಬೇಸಿಗೆ ತರಬೇತಿ ಕ್ರಿಕೆಟ್‌ ಶಿಬಿರ ಯಶಸ್ವಿಯಾಗಿ ಮುಕ್ತಾಯವಾಗಲಿ.

Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಸ್ಪೋರ್ಟ್ಸ್

ಪಡುಕೋಣೆಯಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿದೆ ರಾಷ್ಟ್ರ ಮಟ್ಟದ ವಾಲಿಬಾಲ್ ಹಾಗೂ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಕೂಟ…!

ಪಡುಕೋಣೆಯ *ಗ್ರೆಗರಿ ಪ್ರೌಢಶಾಲಾ* ಮೈದಾನ ನಾಳೆಯಿಂದ ಮೂರು ದಿನ *(ಮಾರ್ಚ್ 24 ಶುಕ್ರವಾರ – 26 ಭಾನುವಾರ*)ಒಂದು ಅಪರೂಪದ ಕ್ರೀಡಾಕೂಟಕ್ಕೆ ಸಾಕ್ಷಿಯಾಗಲಿದೆ.
ಈ ಹಿಂದೆ ಹತ್ತಾರು ಸಮಾಜಮುಖಿ ಕ್ರೀಡಾಕೂಟಗಳನ್ನು ನಡೆಸಿಕೊಂಡು ಬಂದಿರುವಂತಹ ಈ ಭಾಗದ ಹೆಮ್ಮೆಯ ಸಂಸ್ಥೆಯಾದ *ಪಡುಕೋಣೆ ಎಜುಕೇಶನ್ & ಸ್ಪೋರ್ಟ್ಸ್ ಪ್ರಮೋಟರ್ಸ್* ಇವರು ಈ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಕ್ರಿಕೆಟ್ ಪಂದ್ಯಕೂಟವನ್ನು ಆಯೋಜಿಸುತ್ತಿದ್ದಾರೆ…*ದಿ.ಪ್ರಭು ಅರ್ಥರ್ ಪಿರೇರಾ* ಸ್ಮರಣಾರ್ಥ ಮೊದಲು ನಡೆಯುವ ವಾಲಿಬಾಲ್ ಟೂರ್ನಮೆಂಟಿನಲ್ಲಿ
*ಅಶ್ವಲ್ ರೈ(ಸೀನಿಯರ್ ಇಂಡಿಯಾ)*
*ಪಂಕಜ್ ಶರ್ಮಾ (ಸೀನಿಯರ್ ಇಂಡಿಯಾ)*
*ರತೀಶ್ (ಸೀನಿಯರ್ ಇಂಡಿಯಾ)*
*ಕಾರ್ತಿಕ್ ಮಧು (ಸೀನಿಯರ್ ಇಂಡಿಯಾ)*
*ಅನೂಪ್ ಡಿ ಕೋಷ್ಟಾ (ಸೀನಿಯರ್ ಇಂಡಿಯಾ)*
*ಮನೋಜ್ (ಸೀನಿಯರ್ ಇಂಡಿಯಾ)*
*ನಿಖಿಲ್ ಗೌಡ (ಇಂಡಿಯನ್ ಆರ್ಮಿ)*
*ರೈಸನ್ ರೆಬ್ಬೆಲ್ಲೋ (ಕರ್ನಾಟಕ ಸ್ಟೇಟ್)*
*ಪ್ರಮೋದ್ ಹೆಗ್ಡೆ ಚಿನ್ನ*
*ನವೀನ್ ಕಾಂಚನ್*
*ಹರಿಪ್ರಸಾದ್ ಚೋಟು (ಇಂಡಿಯನ್ ಜೂನಿಯರ್)*
*ರಾಕಿ*
ಮುಂತಾದ ರಾಜ್ಯ,ರಾಷ್ಟ್ರ,ಅಂತಾರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರರು ಭಾಗವಹಿಸುತ್ತಿರುವುದು ನಮ್ಮೂರಿನ ಕ್ರೀಡಾಭಿಮಾನಿಗಳು ಹೆಮ್ಮೆ ಪಡುವಂತಹ ವಿಚಾರ…
ಜೊತೆಗೆ ಗತಕಾಲ ವೈಭವ ಸಾರುವ *ದಿ.ಸುರೇಶ್ ಡಿ ಪಡುಕೋಣೆ* ಇವರ ಕನಸಿನ ಕೂಸಾದ *ಅಪ್ಪೋಲೋ* ಮಾದರಿಯ  ಕ್ರಿಕೆಟ್ ಪಂದ್ಯಕೂಟದಲ್ಲಿ ಕೂಡ *ರಾಜ್ಯ,ರಾಷ್ಟ್ರ,ಮಟ್ಟದ* ಆಟಗಾರರಿಗೆ ಭಾಗವಹಿಸಲು ಮುಕ್ತ ಅವಕಾಶ ನೀಡಿದ್ದು ಇವರುಗಳು ಕ್ರೀಡಾಭಿಮಾನಿಗಳಿಗೆ ರಸಾದೌತಣ ಉಣಬಡಿಸುವುದರಲ್ಲಿ ಅನುಮಾನವಿಲ್ಲ…!
ನಮ್ಮೂರ ಮಹಾನ್ ಕ್ರೀಡಾ ಪ್ರೋತ್ಸಾಹಕರಾಗಿದ್ದ *ದಿ.ಸುರೇಶ್ ಡಿ ಪಡುಕೋಣೆ ಹಾಗೂ ದಿ.ಪ್ರಭು ಅರ್ಥರ್ ಪಿರೇರಾ* ಇವರ ಸ್ಮರಣಾರ್ಥ ನಡೆಯುವ ಈ ಮೂರು ದಿನದ ಕ್ರೀಡಾ ಮಹೋತ್ಸವ ಕಣ್ತುಂಬಿಕೊಳ್ಳಲು ನೀವು ಬರಲೇಬೇಕು….ನಿಮ್ಮವರನ್ನು ಕರೆತರಲೇಬೇಕು…ಯಾಕೆಂದರೆ ಮತ್ತೆ ಮತ್ತೆ ಇಂತಹ ಅದ್ಬುತ ಆಯೋಜನೆಯ ಕ್ರೀಡಾಕೂಟ ಕಾಣಸಿಗದು…!
*ಮರೆಯದಿರಿ ಮಾರ್ಚ್ 24 ಶುಕ್ರವಾರ ಸಂಜೆ 7 ರಿಂದ*
*ಸ್ಥಳ – ಗ್ರೆಗರಿ ಪ್ರೌಢಶಾಲಾ ಮೈದಾನ ಪಡುಕೋಣೆ*
*-ಎಮ್ ಪಿ ಬೆಳ್ಳಾಡಿ*
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಸನ್ ರೈಸ್ ಕ್ರಿಕೆಟ್ ಅಕಾಡೆಮಿ ವತಿಯಿಂದ ಲೆದರ್ ಬಾಲ್ ಕ್ರಿಕೆಟ್ ತರಬೇತಿ ಶಿಬಿರ ಮತ್ತು ದಿ.ಶ್ರೀಮತಿ ಲೂಸಿ ಸಲ್ದಾನ‌ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

ಕಾರ್ಕಳ-ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ, ಶ್ರೀಯುತ ಲಾರೆನ್ಸ್ ಸಲ್ದಾನ ಕೌಡೂರು ರವರ  ಕನಸಿನ ಕ್ರೀಡಾಂಗಣ, ಕಾರ್ಕಳ ತಾಲೂಕಿನ ರಂಗನಪಲ್ಕೆ ಗ್ಲಾರಿಡಾ ಎಸ್ಟೇಟ್ ಎಲ್ಯಾಳದ
“ಕೌಡೂರು ಸ್ಟೇಡಿಯಂ” ನಲ್ಲಿ , ಸಲ್ದಾನ್ಹರವರ ಪ್ರಾಯೋಜಕತ್ವ ದ *ಸನ್ ರೈಸ್ ಕ್ರಿಕೆಟ್ ಅಕಾಡೆಮಿ* ವತಿಯಿಂದ, ಲೆದರ್ ಬಾಲ್ ಕ್ರಿಕೆಟ್ ತರಬೇತಿ ಶಿಬಿರ ಶುಬಾರಂಭಗೊಳ್ಳಲಿದೆ.
ಪ್ರಕೃತಿ ಸೌಂದರ್ಯ ಒಳಗೊಂಡ ವಿಶಾಲವಾದ ಮೈದಾನ,
ಎಲ್ಲಾ ರೀತಿಯ ಮೂಲ ಸೌಕರ್ಯ, ಹೊಸದಾಗಿ ಹೊಂದಿಸಲಾದ ಆಸ್ಟ್ರೋ ಟರ್ಫ್ ವಿಕೆಟ್ ಈ ಅಕಾಡೆಮಿಯ ವಿಶೇಷತೆಗಳು. ಕಾರ್ಕಳ ತಾಲೂಕಿನ ಹಾಗೂ ಈ ಭಾಗದ, ಆಸಕ್ತ ಬಾಲಕ ಬಾಲಕಿಯರು ಇದರ ಸದುಪಯೋಗ ಪಡಿಸಿಕೊಳ್ಳುವ ಸದವಕಾಶ ಕಲ್ಪಿಸಲಾಗಿದೆ.
ಅಕಾಡೆಮಿಯ ವತಿಯಿಂದ ,ದಿ.ಶ್ರೀಮತಿ. ಲೂಸಿ ಸಲ್ದಾನ ಸ್ಮರಣಾರ್ಥ ರಾಜ್ಯಮಟ್ಟದ ಅಂಡರ್ 14 ರ ವಯೋಮಿತಿಯ, ಲೆದರ್ ಬಾಲ್ ಟಿ-20 ಕ್ರಿಕೆಟ್ ಪಂದ್ಯಾವಳಿ, ಏಪ್ರಿಲ್ 8 ರಿಂದ 12 ರ ವರೆಗೆ, ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ನಡೆಯಲಿದೆ. ಈ ಕ್ರಿಕೆಟ್ ಪಂದ್ಯಾಟದ ಪ್ರಥಮ ಮತ್ತು ದ್ವಿತೀಯ ಬಹುಮಾನ ಗಳಿಸಿದ ತಂಡಗಳಿಗೆ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದೆ. ಹಾಗೂ ಪ್ರತಿ ಪಂದ್ಯಕ್ಕೂ ಪಂದ್ಯಶ್ರೇಷ್ಟ, ಬೆಸ್ಟ್ ಬ್ಯಾಟರ್, ಬೆಸ್ಟ್ ಬೌಲರ್ ಹಾಗೂ ಸರಣಿ ಪುರುಷೋತ್ತಮ ಪ್ರಶಸ್ತಿ ರೂಪದಲ್ಲಿ ವಿಶೇಷ ಬಹುಮಾನಗಳನ್ನು ನೀಡಲಾಗುತ್ತಿದೆ. ರಾಜ್ಯದ ಪ್ರತಿಷ್ಠಿತ 12 ತಂಡಗಳು ಈ ಒಂದು ಪಂದ್ಯಾಕೂಟದಲ್ಲಿ ಸೆಣಸಾಡಲಿವೆ.ಪ್ರತಿ ದಿನ ಮೂರು ಪಂದ್ಯಗಳು ನಡೆಯಲಿದ್ದು,1-09-2008 ನಂತರದ ಜನನ ದಿನಾಂಕದ ಆಟಗಾರರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಸನ್ ರೈಸ್ ಕ್ರಿಕೆಟ್ ಅಕಾಡೆಮಿಯ ಪ್ರಧಾನ ಕೋಚ್, ಹಿರಿಯ ಆಟಗಾರರಾದ ಸದಾನಂದ ಶಿರ್ವ -9972581234 ಇವರನ್ನು ಸಂಪರ್ಕಿಸಬಹುದಾಗಿದೆ.
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ದಿ.ಸುರೇಶ್ ಡಿ ಪಡುಕೋಣೆ-ದಿ.ಪ್ರಭು ಅರ್ಥರ್ ಪಿರೇರಾ ಸ್ಮರಣಾರ್ಥ ಪಡುಕೋಣೆಯಲ್ಲಿ ಹೊನಲು ಬೆಳಕಿನ ವಾಲಿಬಾಲ್ ಮತ್ತು ಕ್ರಿಕೆಟ್ ಪಂದ್ಯಾಟ

ಪಡುಕೋಣೆ-ಕಳೆದ 15 ವರ್ಷಗಳಿಂದ ಶೈಕ್ಷಣಿಕ, ಸಾಮಾಜಿಕ ಹಾಗೂ ಕ್ರೀಡಾ ಸೇವೆಯಲ್ಲಿ ತೊಡಗಿಸಿಕೊಂಡ ಪಡುಕೋಣೆ ಎಜ್ಯುಕೇಶನ್ & ಸ್ಪೋರ್ಟ್ಸ್ ಪ್ರಮೋಟರ್ಸ್ ಇವರ ವತಿಯಿಂದ ಅಗಲಿದ ಹಿರಿಯ ಕ್ರೀಡಾಪ್ರೋತ್ಸಾಹಕರಾದ ದಿ‌‌.ಸುರೇಶ್.ಡಿ. ಪಡುಕೋಣೆ ಮತ್ತು ದಿ.ಪ್ರಭು ಅರ್ಥರ್ ಪಿರೇರಾ ಇವರ ಸ್ಮರಣಾರ್ಥ ನಾಡ ಪಡುಕೋಣೆಯ ಗ್ರೆಗರಿ ಪ್ರೌಢಶಾಲಾ ಮೈದಾನದಲ್ಲಿ ಮಾರ್ಚ್ 24 ರಿಂದ 26 ರ ವರೆಗೆ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಆಟಗಾರರನ್ನೊಳಗೊಂಡ ಹೊನಲು ಬೆಳಕಿನ ವಾಲಿಬಾಲ್ ಮತ್ತು ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
*ದಿ.ಪ್ರಭು ಅರ್ಥರ್ ಪಿರೇರಾ ಸ್ಮರಣಾರ್ಥ ವಾಲಿಬಾಲ್ ಪಂದ್ಯಾಟ*
ದಿ.ಪ್ರಭು ಅರ್ಥರ್ ಪಿರೇರಾ ಇವರು ನಾಡ ಗುಡ್ಡೆ ಅಂಗಡಿಯ ಗೇರುಕಟ್ಟೆ ಪರಿಸರದಲ್ಲಿ ಜನಿಸಿ,
ಶೈಕ್ಷಣಿಕ,ಸಾಮಾಜಿಕ ಮತ್ತು ಕ್ರೀಡಾ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಸಂಸ್ಥೆಯ ಸ್ಥಾಪಕ ಸದಸ್ಯರಾಗಿ ಹಾಗೂ ಕೋಶಾಧಿಕಾರಿಯಾಗಿ 8 ವರ್ಷಗಳ ದೀರ್ಘಾವಧಿಯ ಸೇವೆ ಸಲ್ಲಿಸಿ 25-4-2021 ರಂದು ನಿಧನರಾದರು. ಇವರ ಸ್ಮರಣಾರ್ಥ ಮಾರ್ಚ್ 24 ರಂದು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಗಿದೆ.
*ದಿ.ಸುರೇಶ್.ಡಿ.ಪಡುಕೋಣೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ*
ದಿ.ಸುರೇಶ್.ಡಿ.ಪಡುಕೋಣೆ ಇವರು ಪಡುಕೋಣೆಯ ಕೋಟಿನಕಳಿಯಲ್ಲಿ ಜನಿಸಿ,ತಮ್ಮೂರಿನ ಹೆಸರನ್ನು ಗಗನದೆತ್ತರಕ್ಕೇರಿಸಿದ ಮಹಾನ್ ವ್ಯಕ್ತಿ.ಇವರು ಉಡುಪಿ ಮತ್ತು ಮುಂಬಯಿಯಲ್ಲಿ ಅಪೋಲೋ ಬೋರಿಂಗ್ ಇಂಜಿನಿಯರಿಂಗ್ ವರ್ಕ್ಸ್ ಎಂಬ ಸಂಸ್ಥೆಯನ್ನು ಸ್ಥಾಪಿಸಿ ನೂರಾರು ಜನರಿಗೆ ಉದ್ಯೋಗ ನೀಡಿ,ಪ್ರಗತಿಪರ ಉದ್ಯಮಿ ಎನಿಸಿಕೊಂಡು ತಾನು ಕಲಿತ ಶಾಲೆಗೆ,ಬಡ ಮಕ್ಕಳ ಶಿಕ್ಷಣ,ದೈವಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಾ,ಪಡುಕೋಣೆಯಲ್ಲಿ ಅಪೋಲೋ ಟ್ರೋಫಿ ಪಂದ್ಯಾಟ ಸಂಘಟಿಸಿ,ಕ್ರಿಕೆಟ್ ಕ್ರಾಂತಿ ಎಬ್ಬಿಸಿ,
13/2/2022 ರಂದು ನಿಧನರಾದರು.ಇವರ ಸ್ಮರಣಾರ್ಥ ಮಾರ್ಚ್ 25 ಮತ್ತು 26 ರಂದು ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಮಾರ್ಚ್ 24 ರ ಸಂಜೆ 5.30 ಕ್ಕೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು,ವೇದಿಕೆಯಲ್ಲಿ ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ.ಈ ಸಂದರ್ಭ ವಿದ್ಯಾರ್ಥಿ ವೇತನ ವಿತರಣೆ ಮತ್ತು ಗಣ್ಯ ವ್ಯಕ್ತಿಗಳಿಗೆ ಸನ್ಮಾನ‌ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾರ್ಚ್ 26 ರ ಸಂಜೆ 6.30 ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ.
ಪಡುಕೋಣೆ ಎಜ್ಯುಕೇಶನ್ ಮತ್ತು ಸ್ಪೋರ್ಟ್ಸ್ ಪ್ರಮೋಟರ್ಸ್ ಇವರ ಸಾಮಾಜಿಕ,ಶೈಕ್ಷಣಿಕ ಮತ್ತು ಕ್ರೀಡಾಸೇವೆಯಲ್ಲಿ ಕೈ ಜೋಡಿಸಿವವರು ಈ ಕೆಳಗೆ ನಮೂದಿಸಿದ ಬ್ಯಾಂಕ್ ಖಾತೆಗೆ ಆರ್ಥಿಕ ಸಹಾಯವನ್ನು ಮಾಡಬಹುದಾಗಿದೆ.
*ಬ್ಯಾಂಕ್ ಮಾಹಿತಿ*
 Bank Name-BANK OF BARODA
Account Holder-Padukone Education & Sports Promoters
Acount Number-81920100007634
IFSC Code-BARB0VJNADA
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಕುಂದಾಪುರ: ಚಾಲೆಂಜ್ ಕ್ರಿಕೆಟ್ ಕ್ಲಬ್ ನ ಸಮಾಜ ಸೇವೆ ಶ್ಲಾಘನೀಯ–ವೀಣಾ ಭಾಸ್ಕರ್

ಕುಂದಾಪುರ: ಈಗಾಗಲೇ ತಮ್ಮ ಮೂಲಕ ಗುರುತಿಸಿಕೊಂಡ ಚಾಲೆಂಜ್ ಕ್ರಿಕೆಟ್ ಸಂಸ್ಥೆಯು ಕ್ರೀಡೆಯ ಜೊತೆಗೆ ಅಶಕ್ತರಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ ನೀಡುವ ಮೂಲಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಕುಂದಾಪುರ ಪುರಸಭಾ ಅಧ್ಯಕ್ಷರಾದ ವೀಣಾ ಭಾಸ್ಕರ್ ಮೆಂಡನ್ ಹೇಳಿದರು.
ವಡೇರಹೋಬಳಿ ಸರಕಾರಿ ಶಾಲೆಯಲ್ಲಿ ಹಮ್ಮಿಕೊಂಡ ಕುಂದಾಪುರದ ಚಾಲೆಂಜ್ ಕ್ರಿಕೆಟ್ ಸಂಸ್ಥೆ ನಡೆಸಿದ ರಾಷ್ಟ್ರಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟದಲ್ಲಿ ಉಳಿಕೆಯಾದ ಹಣವನ್ನು 30 ಜನ ಅನಾರೋಗ್ಯ ಪೀಡಿತರಿಗೆ ಹಾಗೂ 25 ಜನ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಹ ಪ್ರಭಾರಿ ರಾಜೇಶ್ ಕಾವೇರಿ ಮಾತನಾಡಿ, ಅತ್ಯಂತ ವ್ಯವಸ್ಥಿತವಾಗಿ ಕ್ರೀಡಾಕೂಟವನ್ನು ನಡೆಸುವ ಮೂಲಕ ಕ್ರೀಡಾಸಕ್ತರಿಗೂ ಹಾಗೂ ಅದರಿಂದ ಉಳಿಕೆಯಾದ ಹಣವನ್ನು ಸಮಾಜದ ಹಿತ ಕಾಯುವ ಕಾರ್ಯಗಳಿಗೆ ಬಳಕೆ ಮಾಡಿದ ಸಂಸ್ಥೆಯು ಎಲ್ಲರಿಗೂ ಮಾದರಿ ಆಗಿದೆ ಎಂದರು.
ಇದೆ ಸಂದರ್ಭದಲ್ಲಿ ಹಿರಿಯ ಸಮಾಜಸೇವಕ ನರಸಿಂಹ ಪೂಜಾರಿ, ನಾಗ ಮೆಂಡನ್, ಸಂಜೀವ ಪೂಜಾರಿ, ಯುವ ಆಟಗಾರರಿಗೆ ಸದಾ ಪ್ರೋತ್ಸಾಹ ನೀಡುವ ಕ್ರಿಕೆಟ್ ಆಟಗಾರ ಮನೋಜ್ ನಾಯರ್ ಹಾಗೂ ಸಂಸ್ಥೆ ಸದಸ್ಯರು ಇತ್ತೀಚಿಗೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನ ಮಠ ಇವರನ್ನು ಸನ್ಮಾನಿಸಲಾಯಿತು.
ಸಾರ್ವಜನಿಕ ರುದ್ರಭೂಮಿ ಹೊಸಾಳ ಬಾರ್ಕೂರು ಇದರ ಅಭಿವೃದ್ಧಿ ಕಾರ್ಯಕ್ಕೆ ನೆರವು ನೀಡಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದಾನಿಗಳಾದ ಪ್ರಿಯ ವಸಂತ ಕರ್ಕೇರ ಗುತ್ತಿಗೆದಾರರಾದ ಸಚಿತ್ ಪೈ, ಕುಂದಾಪುರ ಪುರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಗಿರೀಶ್ ಕೆ, ಕೆದೂರು ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ರತ್ನ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸುಧಾಕರ ಮೊಗವೀರ ಉದ್ಯಮಿಗಳಾದ ಪ್ರವೀಣ್ ಗಡಿಯಾರ್, ಸಂಸ್ಥೆಯ ಗೌರವಾಧ್ಯಕ್ಷ ಗಂಗಾಧರ ಶೇರಿಗಾರ್, ಅಧ್ಯಕ್ಷ ಚಂದ್ರ ಪೂಜಾರಿ, ಸಂಸ್ಥೆಯ ಪ್ರಮುಖರಾದ ಶಿವಕುಮಾರ್ ಮೆಂಡನ್, ಭಾಸ್ಕರ್ ಬಿಲ್ಲವ ಮುಂತಾದವರು ಉಪಸ್ಥಿತರಿದ್ದರು. ಹಿರಿಯ ಕ್ರಿಕೆಟಿಗ ಕೆ.ಪಿ ಸತೀಶ್ ಕಾರ್ಯಕ್ರಮ ನಿರ್ವಹಿಸಿ, ಸಂಸ್ಥೆ ಕಾರ್ಯದರ್ಶಿ ನವೀನ್ ಮೆಂಡನ್ ವಂದಿಸಿದರು.