Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಜೈಹಿಂದ್ ತಂಡ ರಾಜ್ಯಕ್ಕೆ ಮಾದರಿ-ಆನಂದ್.ಸಿ‌.ಕುಂದರ್

ಕೋಟ-ಜೈಹಿಂದ್ ಕ್ರಿಕೆಟರ್ಸ್ ಮಣೂರು-ಪಡುಕರೆ ಆಶ್ರಯದಲ್ಲಿ,ಜೈಹಿಂದ್ ಪ್ರೀಮಿಯರ್‌ ಲೀಗ್-2023 ಕ್ರಿಕೆಟ್ ಪಂದ್ಯಾಟ ಮಣೂರು ಪಡುಕರೆ ಕಾಲೇಜು ಮೈದಾನದಲ್ಲಿ ಜರುಗಿತು.
ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್‌ ಸಿ ಕುಂದರ್ ಮಾತನಾಡಿ “ಜೈಹಿಂದ್ ಸಂಸ್ಥೆ ಕ್ರೀಡೆಯ ಜೊತೆಗೆ ಸಮಾಜಸೇವಾ ಕಾರ್ಯಕ್ರಮಗಳನ್ನು ಸಂಘಟಿಸಿ ರಾಜ್ಯಕ್ಕೆ ಮಾದರಿ ಸಂಸ್ಥೆಯಾಗಿದೆ” ಎಂದರು.
ಈ ಸಂದರ್ಭ 2023 ರ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿಕ ಜಯರಾಮ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಗೋವನ್ ಸಂಸ್ಥೆಯ ಮುಖ್ಯಸ್ಥ ಉದ್ಯಮಿ ಬಿಜು ನಾಯರ್,ಬೃಹ್ಮಾವರ ತಾಲೂಕು  ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ,ಕೋಟ ಠಾಣೆಯ ಪೋಲೀಸ್ ಉಪ ನಿರೀಕ್ಷಕ ಶಂಭುಲಿಂಗಯ್ಯ,ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮಾಲಕ ಕೋಟ ರಾಮಕೃಷ್ಣ ಆಚಾರ್,ದಿನೇಶ್ ಪಡುಕರೆ ಭಾಗವಹಿಸಿದ್ದರು.
ರಾಜ್ಯದ ಪ್ರಸಿದ್ಧ ವೇಗಿ ಪ್ರಶಾಂತ್ ಪಡುಕರೆ ಸಾರಥ್ಯದಲ್ಲಿ ಜೈಹಿಂದ್ ಪಡುಕರೆ ತಂಡ ಕಾರ್ಯಕ್ರಮ ಸಂಯೋಜಿಸಿದರು.
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಯುವ ಪ್ರತಿಭೆಗಳಿಗೆ ಟಿ.ಸಿ.ಎ ವಿಪುಲ ಅವಕಾಶ ಸೃಷ್ಟಿಸಲಿದೆ-ಗೌತಮ್ ಶೆಟ್ಟಿ

ಟಿ.ಸಿ.ಎ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ ಫಲಿತಾಂಶ
ಜಿ.ಪಿ.ಟಿ ಮಣಿಪಾಲ ಪ್ರಥಮ
ಎಮ್.ಎಸ್.ಆರ್.ಎಸ್ ಶಿರ್ವ-ದ್ವಿತೀಯ
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ಶಾಲಾ-ಕಾಲೇಜು ಮಟ್ಟದ ವಿದ್ಯಾರ್ಥಿಗಳ ಕ್ರಿಕೆಟ್ ಪಂದ್ಯಾಟ ನಡೆಯಿತು.
ನವೆಂಬರ್ 6 ರಿಂದ 10 ರ ವರೆಗೆ ಸತತ 5 ದಿನಗಳ ಕಾಲ ನಡೆದ ಈ ಪಂದ್ಯಾಟದಲ್ಲಿ 64 ಹೈಸ್ಕೂಲ್ ಮತ್ತು ಕಾಲೇಜು ತಂಡಗಳು ಭಾಗವಹಿಸಿದ್ದರು‌.ಅಂತಿಮವಾಗಿ ಫೈನಲ್ ನಲ್ಲಿ ಜಿ.ಪಿ.ಟಿ ಮಣಿಪಾಲ-ಎಮ್.ಎಸ್.ಆರ್.ಎಸ್ ಶಿರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಲಕ್ಷ್ಮೀ ಸೋಮ ಬಂಗೇರ ಕಾಲೇಜು ಪಡುಕರೆ ಮತ್ತು ಎಸ್.ಕೆ.ವಿ.ಎಮ್.ಎಸ್ ಕೋಟೇಶ್ವರ ತೃತೀಯ ಸ್ಥಾನ ಪಡೆದರು.
ಫೈನಲ್ ಪಂದ್ಯಶ್ರೇಷ್ಟ ಹರ್ಷಿತ್,ಬೆಸ್ಟ್ ಬ್ಯಾಟರ್ ಅಕ್ಷಯ್,ಬೆಸ್ಟ್ ಬೌಲರ್ ಮಹೇಶ್,ಸರಣಿ ಶ್ರೇಷ್ಠ ಪ್ರಶಸ್ತಿ ಪ್ರೀತೇಶ್ ಜಿ.ಪಿ‌‌‌.ಟಿ ಮಣಿಪಾಲ ಪಡೆದುಕೊಂಡರು.
ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಟಿ.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ “ಯುವಕರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯ.ಅಂತರಾಷ್ಟ್ರೀಯ ಆಟಗಾರರು ಕೂಟ ಟೆನಿಸ್ಬಾಲ್ ಕ್ರಿಕೆಟ್ ನಿಂದಲೇ ಕ್ರಿಕೆಟ್ ಜೀವನ ಪ್ರಾರಂಭಿಸಿದ್ದಾರೆ.ಅಳಿವಿನಂಚಿನಲ್ಲಿರುವ ಈ ಟೆನಿಸ್ಬಾಲ್ ಕ್ರಿಕೆಟ್ ಉಳಿಸಬೇಕಾದರೆ ಯುವಕರು ಈಗಿನಿಂದಲೇ ಜಾಗೃತರಾಗಬೇಕಿದೆ.ಈ ನಿಟ್ಟಿನಲ್ಲಿ ಟಿ.ಸಿ.ಎ ಉಡುಪಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರ ಸಹಕಾರದೊಂದಿಗೆ ಶಾಲಾ-ಕಾಲೇಜು ಮಟ್ಟದ ಪಂದ್ಯಾಟ ಯಶಸ್ವಿಯಾಗಿ ಸಂಘಟಿಸಿದೆ.ಮುಂದಿನ ದಿನಗಳಲ್ಲಿ ಟಿ.ಸಿ.ಎ ಉಡುಪಿ ಪ್ರತಿಭಾವಂತ ಆಟಗಾರರಿಗೆ ಭವಿಷ್ಯದಲ್ಲಿ ಶಿಕ್ಷಣ,ಉದ್ಯೋಗ,ಕ್ರೀಡಾ ಜೀವನ ಕಟ್ಟಿಕೊಡಲು ಸಹಕಾರ ನೀಡಲಿದ್ದೇವೆ ಎಂದರು.”
ಈ ಸಂದರ್ಭ 2023 ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕ್ರಿಕೆಟ್ ಪಟು ಪೃಥ್ವಿರಾಜ್‌ ಶೆಟ್ಟಿ ಹುಂಚನಿ,14 ರ ವಯೋಮಾನದ ಬಾಲಕಿಯರ ಕ್ರಿಕೆಟ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಚಿತಾ ಹತ್ವಾರ್ ಮತ್ತು ಪ್ರಾಚಿ,17 ಮತ್ತು 14 ರ ವಯೋಮಾನ  ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಚಾರಿತ್ರ್ಯ ಮತ್ತು ತ್ರಿಶಾ.ಐ.ನಾಯಕ್ ಸನ್ಮಾನಿಸಲಾಯಿತು.
ಶಾಲಾ-ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ ಪರಿಕಲ್ಪನೆಯನ್ನು ಕಂಡು ಯಶಸ್ವಿಯಾಗಿ ನಿರ್ವಹಿಸಿದ ಟಿ.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ ಇವರನ್ನು ಟಿ.ಸಿ.ಎ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಬಹುಮಾನ ವಿತರಣಾ ಸಮಾರಂಭದಲ್ಲಿ ಯುವ ಜನ ಸಬಲೀಕರಣ ಕ್ರೀಡಾ ಇಲಾಖೆಯ ಕುಸುಮಾಕರ್ ಶೆಟ್ಟಿ, ಟಿ.ಸಿ.ಎ ಉಡುಪಿ ಗೌರವಾಧ್ಯಕ್ಷರಾದ ಶ್ರೀಧರ್ ಶೆಟ್ಟಿ ಪ್ಯಾರಡೈಸ್ ಬನ್ನಂಜೆ,ರಮೇಶ್ ಶೇರಿಗಾರ್,ಜಗದೀಶ್ ಕಾಮತ್ ಕಟಪಾಡಿ,ಸದಾನಂದ ಶಿರ್ವ,ಯಾದವ್ ನಾಯ್ಕ್ ಕೆಮ್ಮಣ್ಣು,ಅಮರನಾಥ್ ಭಟ್,ಶರತ್ ಶೆಟ್ಟಿ ಪಡುಬಿದ್ರಿ,ಆಸಿಫ್ ಕೆಮ್ಮಣ್ಣು,ನಿತ್ಯಾನಂದ ಮುನ್ನ,ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಬೈಲೂರು,ದಿನೇಶ್ ಗಾಣಿಗ ಬೈಂದೂರು,ನಾರಾಯಣ ಶೆಟ್ಟಿ ಮಾರ್ಕೋಡು,ಮನೋಜ್ ನಾಯರ್,ಕೆ‌.ಪಿ‌.ಸತೀಶ್,ಪ್ರವೀಣ್ ಪಿತ್ರೋಡಿ,ಕೋಟ ರಾಮಕೃಷ್ಣ ಆಚಾರ್,ಚೇತನ್ ಕುಮಾರ್ ದೇವಾಡಿಗ,ಅಶೋಕ್ ಹೆಗ್ಡೆ,ಸುಕೇಶ್ ಶೆಟ್ಟಿ,ನಾಗೇಶ್ ನಾವಡ,ಭಾಸ್ಕರ್ ಆಚಾರ್,ಮನೋಜ್,ಉಮೇಶ್ ಕುಂದಾಪುರ,ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಸ್ಪೋರ್ಟ್ಸ್

ಕ್ರಿಕೆಟ್ ಸಾಧಕರಿಗೆ ಟಿ.ಸಿ.ಎ ಉಡುಪಿ ವತಿಯಿಂದ ಇಂದು ಸನ್ಮಾನ

ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಟಿ.ಸಿ.ಎ ಉಡುಪಿ  ಆಶ್ರಯದಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಶಾಲಾ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟ ಸತತ ಐದು ದಿನಗಳಿಂದ ನಡೆಯುತ್ತಿದೆ.
ಅಂತಿಮ‌ ದಿನವಾದ ಶುಕ್ರವಾರದಂದು 2023 ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕ್ರಿಕೆಟ್ ಪಟು ಪೃಥ್ವಿರಾಜ್‌ ಶೆಟ್ಟಿ ಹುಂಚನಿ,14 ರ ವಯೋಮಾನದ ಬಾಲಕಿಯರ ಕ್ರಿಕೆಟ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಚಿತಾ ಹತ್ವಾರ್ ಮತ್ತು ಪ್ರಾಚಿ,17 ಮತ್ತು 14 ರ ವಯೋಮಾನ  ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಚಾರಿತ್ರ್ಯ ಮತ್ತು ತ್ರಿಶಾ.ಐ.ನಾಯಕ್ ಇವರನ್ನು ಸಮಾರೋಪ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಟಿ.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ ಸ್ಪೋರ್ಟ್ಸ್ ಕನ್ನಡ ಪ್ರಕಟಣೆಯನಲ್ಲಿ ತಿಳಿಸಿದ್ದಾರೆ.
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಯುವಕರು ಕ್ರೀಡಾಸ್ಪೂರ್ತಿ ಮೈಗೂಡಿಸಿಕೊಳ್ಳಬೇಕು-ಡಾ.ಶುಭಕರ್ ಆಚಾರ್ಯ

ಕುಂದಾಪುರ-ಟಿ‌.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶಾಲಾ-ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ ಮೂರನೇ ದಿನ ಕಾಲೇಜು ಮಟ್ಟದ ಟೂರ್ನಮೆಂಟ್ ಜರುಗಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಭಂಡಾರ್ಕರ್ಸ್ ಡಿಗ್ರಿ ಕಾಲೇಜಿನ ಪ್ರಿನ್ಸಿಪಾಲ್ ಡಾ.ಶುಭಕರ್ ಆಚಾರ್ಯ ಮಾತನಾಡಿ “ಆಟದಲ್ಲಿ ಸೋಲು ಗೆಲುವು ಸಾಮಾನ್ಯ-ಭಾಗವಹಿಸುವಿಕೆ ಮುಖ್ಯ,ಯುವಕರು ಕ್ರೀಡಾ ಸ್ಪೂರ್ತಿ ಮೈಗೂಡಿಸಿಕೊಳ್ಳಬೇಕು ಎಂದರು.
ಭಂಡಾರ್ಕರ್ಸ್ ಪಿ.ಯು ಕಾಲೇಜಿನ ಪ್ರಿನ್ಸಿಪಾಲ್ ಡಾ.ಜಿ.ಎಂ.ಗೊಂಡಾ “ಕ್ಷೇತ್ರೀಯ ಪ್ರತಿಭೆಗಳಿಗೆ ಟಿ.ಸಿ‌.ಎ ಉಡುಪಿ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ” ಎಂದರು.
ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅತಿಥಿಗಳು ಹಸ್ತಲಾಘವ ನೀಡಿ ಶುಭಹಾರೈಸಿದರು.
ಈ ಸಂದರ್ಭ ಟಿ‌.ಸಿ‌.ಎ ಅಧ್ಯಕ್ಷ ಗೌತಮ್ ಶೆಟ್ಟಿ,ಹರ್ಷವರ್ಧನ್ ಶೆಟ್ಟಿ, ನವೀನ್ ಹೆಗ್ಡೆ,ರಮೇಶ್ ಶೆಟ್ಟಿ ಹಾಲಾಡಿ,ನಿತ್ಯಾನಂದ ಮುನ್ನಾ,ಯಾದವ್ ನಾಯಕ್ ಕೆಮ್ಮಣ್ಣು,ಸದಾನಂದ ಶಿರ್ವ,ಸತೀಶ್ ಕೋಟ್ಯಾನ್,ಮನೋಜ್ ನಾಯರ್‌,ಕೆ.ಪಿ ಸತೀಶ್,ನಾರಾಯಣ ಶೆಟ್ಟಿ, ಅಬು ಮೊಹಮ್ಮದ್, ಕೋಟ ರಾಮಕೃಷ್ಣ ಆಚಾರ್,ಶಿವನಾರಾಯಣ ಐತಾಳ್ ಕೋಟ,ವಿವಿಧ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು,ಟಿ.ಸಿ‌.ಎ ಪದಾಧಿಕಾರಿಗಳು ಉಪಸ್ಥಿತರಿದ್ದರು.
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಕ್ರೀಡೆಯಿಂದ ಯುವಕರ ಭವಿಷ್ಯ ರೂಪುಗೊಳ್ಳುತ್ತದೆ-ಗೌತಮ್ ಶೆಟ್ಟಿ

ಕುಂದಾಪುರ-ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ಶಾಲಾ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ 2 ದಿನವಾದ ಮಂಗಳವಾರ ನಡೆದ ಹೈಸ್ಕೂಲ್ ವಿಭಾಗದ ಪಂದ್ಯಾಟದಲ್ಲಿ ಟಿ‌‌‌.ಎ ಪೈ ಪ್ರೌಢಶಾಲೆ ಉಡುಪಿ ಜಯ ಸಾಧಿಸಿತು.
ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಟಿ.ಸಿ‌.ಎ ಉಡುಪಿ ಅಧ್ಯಕ್ಷ ಗೌತಮ್ ಶೆಟ್ಟಿ “ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ,ಸೋತಾಗ ಕುಗ್ಗದೇ ಗೆದ್ದಾಗ ಹಿಗ್ಗದೆ,ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ” ಎಂದರು.
ಹೈಸ್ಕೂಲ್ ವಿಭಾಗದಲ್ಲಿ ಒಟ್ಟು ಎಂಟು ತಂಡಗಳ ನಡುವೆ ಲೀಗ್ ಹಂತದಲ್ಲಿ ರೋಚಕ ಹಣಾಹಣಿ ಸಾಗಿತ್ತು.ಉಪಾಂತ್ಯ ಪಂದ್ಯದಲ್ಲಿ
ಗ್ರೀನ್ ಪಾರ್ಕ್ ಹಿರಿಯಡ್ಕ-ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯನ್ನು ಹಾಗೂ ಟಿ.ಎ.ಪೈ-ಸೈಲಸ್ ಉಡುಪಿ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು.
*ವೈದಿಕ್ ಶೆಟ್ಟಿ ಸಮಯೋಚಿತ ಆಟ-ಟಿ.ಎ ಪೈ ತಂಡ ಚಾಂಪಿಯನ್*
ಫೈನಲ್ ಟಾಸ್ ಸೋತು ಬ್ಯಾಟಿಂಗ್ ಇಳಿಸಲ್ಪಟ್ಟ ಗ್ರೀನ್ ಪಾರ್ಕ್ ಹೈಸ್ಕೂಲ್ ಹಿರಿಯಡ್ಕ
ಪವನ್ 34 ರನ್ ನೆರವಿನಿಂದ ನಿಗದಿತ 10 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 68 ರನ್ ಕಲೆ ಹಾಕಿತ್ತು.
‌ಇದಕ್ಕುತ್ತರವಾಗಿ ಟಿ‌.ಎ ಪೈ ತಂಡ ವೈದಿಕ್ ಶೆಟ್ಟಿ ಅಜೇಯ 35  ರನ್ ಗಳ ಜವಾಬ್ದಾರಿಯುತ ಆಟದ ನೆರವಿನಿಂದ ಕೊನೆಯ ಓವರ್ ನಲ್ಲಿ ಜಯ ಸಾಧಿಸಿತು.
ಸೈಲಸ್ ಉಡುಪಿ ಮತ್ತು ಗುರುಕುಲ ವಕ್ವಾಡಿ ತಂಡ ಮೂರನೇ ಸ್ಥಾನ ಪಡೆದುಕೊಂಡರು.
ಫೈನಲ್ ನ ಪಂದ್ಯಶ್ರೇಷ್ಟ ಮತ್ತು ಬೆಸ್ಟ್ ಬ್ಯಾಟರ್ ಪ್ರಶಸ್ತಿ ವೈದಿಕ್ ಶೆಟ್ಟಿ, ಗ್ರೀನ್ ಪಾರ್ಕ್ ನ ಮಾಝಿನ್ ಬೆಸ್ಟ್ ಬೌಲರ್ ಹಾಗೂ ಪವನ್ ಗ್ರೀನ್ ಪಾರ್ಕ್ ಸರಣಿಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು.
ಬಹುಮಾನ ವಿತರಣಾ ವೇದಿಕೆಯಲ್ಲಿ ರಮೇಶ್  ಶೆಟ್ಟಿ, ಮನೋಜ್ ನಾಯರ್,ಕೆ.ಪಿ ಸತೀಶ್, ರಾಘವೇಂದ್ರ ಚರಣ್ ನಾವಡ,ನಾರಾಯಣ ಶೆಟ್ಟಿ ಮಾರ್ಕೋಡು,
ಭಾಸ್ಕರ ಆಚಾರ್,ನಾಗೇಶ್ ನಾವಡ,ಸ್ಪೋರ್ಟ್ಸ್ ಕನ್ನಡ
ಕೋಟ ರಾಮಕೃಷ್ಣ ಆಚಾರ್,ಶಿವನಾರಾಯಣ ಐತಾಳ್ ಕೋಟ,ಶ್ರೀಕಾಂತ್, ಸುಕೇಶ್ ಮತ್ತು ಟಿ‌.ಸಿ.ಎ ಪದಾಧಿಕಾರಿಗಳು,ಸದಸ್ಯರು ಮತ್ತು ಪಂದ್ಯಾಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ಪೋರ್ಟ್ಸ್ ಕನ್ನಡ ಟಿ.ವಿ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಂಡಿತು.
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಟಿ‌.ಎ.ಪೈ ಪ್ರೌಢಶಾಲೆ ಮಡಿಲಿಗೆ ಟಿ‌‌.ಸಿ.ಎ ಹೈಸ್ಕೂಲ್ ವಿಭಾಗದ ಪ್ರಶಸ್ತಿ

ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಹೈಸ್ಕೂಲ್ ವಿಭಾಗದ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿಯ ಟಿ.ಎ.ಪೈ‌.ಇ.ಎಮ್.ಹೆಚ್.ಎಸ್ ತಂಡ ಪ್ರಶಸ್ತಿ ಜಯಿಸಿದೆ.
ಹೈಸ್ಕೂಲ್ ವಿಭಾಗದಲ್ಲಿ ಒಟ್ಟು ಎಂಟು ತಂಡಗಳ ನಡುವೆ ಲೀಗ್ ಹಂತದಲ್ಲಿ ರೋಚಕ ಹಣಾಹಣಿ ಸಾಗಿತ್ತು.ಉಪಾಂತ್ಯ ಪಂದ್ಯದಲ್ಲಿ
ಗ್ರೀನ್ ಪಾರ್ಕ್ ಹಿರಿಯಡ್ಕ-ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯನ್ನು ಹಾಗೂ ಟಿ.ಎ.ಪೈ-ಸೈಲಸ್ ಉಡುಪಿ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು.
*ವೈದಿಕ್ ಶೆಟ್ಟಿ ಸಮಯೋಚಿತ ಆಟ-ಟಿ.ಎ ಪೈ ತಂಡ ಚಾಂಪಿಯನ್*
ಫೈನಲ್ ಟಾಸ್ ಸೋತು ಬ್ಯಾಟಿಂಗ್ ಇಳಿಸಲ್ಪಟ್ಟ ಗ್ರೀನ್ ಪಾರ್ಕ್ ಹೈಸ್ಕೂಲ್ ಹಿರಿಯಡ್ಕ
ಪವನ್ 34 ರನ್ ನೆರವಿನಿಂದ ನಿಗದಿತ 10 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 68 ರನ್ ಕಲೆ ಹಾಕಿತ್ತು.
‌ಇದಕ್ಕುತ್ತರವಾಗಿ ಟಿ‌.ಎ ಪೈ ತಂಡ ವೈದಿಕ್ ಶೆಟ್ಟಿ ಅಜೇಯ 35   ಗಳ ಜವಾಬ್ದಾರಿಯುತ ಆಟದ ನೆರವಿನಿಂದ ಕೊನೆಯ ಓವರ್ ನಲ್ಲಿ ಜಯ ಸಾಧಿಸಿತು.
ಸೈಲಸ್ ಉಡುಪಿ ಮತ್ತು ಗುರುಕುಲ ವಕ್ವಾಡಿ ತಂಡ ಮೂರನೇ ಸ್ಥಾನ ಪಡೆದುಕೊಂಡರು.
ಫೈನಲ್ ನ ಪಂದ್ಯಶ್ರೇಷ್ಟ ಮತ್ತು ಬೆಸ್ಟ್ ಬ್ಯಾಟರ್ ಪ್ರಶಸ್ತಿ ವೈದಿಕ್ ಶೆಟ್ಟಿ, ಗ್ರೀನ್ ಪಾರ್ಕ್ ನ ಮಾಝಿನ್ ಬೆಸ್ಟ್ ಬೌಲರ್ ಹಾಗೂ ಪವನ್ ಗ್ರೀನ್ ಪಾರ್ಕ್ ಸರಣಿಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು.
ಬಹುಮಾನ ವಿತರಣಾ ಸಮಾರಂಭದಲ್ಲಿ ಟಿ.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ, ರಮೇಶ್  ಶೆಟ್ಟಿ, ಮನೋಜ್ ನಾಯರ್,ಕೆ.ಪಿ ಸತೀಶ್,ನಾರಾಯಣ ಶೆಟ್ಟಿ, ರಾಘವೇಂದ್ರ ಚರಣ್ ನಾವಡ,ನಾರಾಯಣ ಶೆಟ್ಟಿ ಮಾರ್ಕೋಡು,ಭಾಸ್ಕರ ಆಚಾರ್,ನಾಗೇಶ್ ನಾವಡ,
ಸ್ಪೋರ್ಟ್ಸ್ ಕನ್ನಡ ಕೋಟ ರಾಮಕೃಷ್ಣ ಆಚಾರ್,ಶಿವನಾರಾಯಣ ಐತಾಳ್ ಕೋಟ,ಟಿ‌.ಸಿ.ಎ ಪದಾಧಿಕಾರಿಗಳು,ಸದಸ್ಯರು ಮತ್ತು ಪಂದ್ಯಾಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ಪೋರ್ಟ್ಸ್ ಕನ್ನಡ ಟಿ.ವಿ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಂಡಿತು.
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಟೆನಿಸ್ಬಾಲ್ ಕ್ರಿಕೆಟ್ ಗೆ ಪುನರ್ಜನ್ಮ ನೀಡುವ ಟಿ‌‌‌.ಸಿ.ಎ ಉಡುಪಿ ಪ್ರಯತ್ನ ಶ್ಲಾಘನೀಯ-ಪ್ರಶಾಂತ್ ಕುಂದರ್

*ಸ್ಪೋರ್ಟ್ಸ್ ಕನ್ನಡ ವರದಿ*
ಕುಂದಾಪುರ-ಇಲ್ಲಿನ ಗಾಂಧಿಮೈದಾನದಲ್ಲಿ ಟಿ.ಸಿ.ಎ ಉಡುಪಿ ಆಶ್ರಯದಲ್ಲಿ  ಉಡುಪಿ-ದ.ಕ ಜಿಲ್ಲಾ ಶಾಲಾ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ದೊರಕಿತು.
ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಉದ್ಯಮಿ ಪ್ರಶಾಂತ್ ಕುಂದರ್ “ಗಿಡ ಸುಂದರವಾಗಿ ಕಾಣಲು ಹೂವು ಎಷ್ಟು ಮುಖ್ಯವೋ,ಪದಾರ್ಥಕ್ಕೆ ಉಪ್ಪು ಖಾರ ಎಷ್ಟು ಮುಖ್ಯವೋ ಅಂತೆಯೇ ಮನುಷ್ಯನ ಜೀವನದಲ್ಲಿ ಕ್ರೀಡೆಯೂ ಮುಖ್ಯವಾಗಿರುತ್ತದೆ ಈ ನಿಟ್ಟಿನಲ್ಲಿ ಅಳಿವಿನಂಚಿನಲ್ಲಿರುವ ಟೆನಿಸ್ಬಾಲ್ ಕ್ರಿಕೆಟ್ ಉಳಿಸುವ ಟಿ.ಸಿ.ಎ ಪ್ರಯತ್ನ ಶ್ಲಾಘನೀಯ” ಎಂದರು.
ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಟಿ‌‌.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ “ಅಂತರಾಷ್ಟ್ರೀಯ ಆಟಗಾರರೂ ಕೂಡ ತಮ್ಮ ಕ್ರೀಡಾ ಜೀವನವನ್ನು ಟೆನಿಸ್ಬಾಲ್ ಕ್ರಿಕೆಟ್ ನಿಂದಲೇ ಪ್ರಾರಂಭಿಸಿದ್ದು,ಲೆದರ್ ಬಾಲ್ ಕ್ರಿಕೆಟ್ ಕೆಲವೇ ಕೆಲವು ಅಕಾಡೆಮಿ ಹಾಗೂ ವಿದ್ಯಾಸಂಸ್ಥೆಗಳಿಗೆ ಸೀಮಿತವಾಗಿದೆ ಆದ್ದರಿಂದ ಉಡುಪಿ-ದ.ಕ ಜಿಲ್ಲಾ ವಿದ್ಯಾಸಂಸ್ಥೆಗಳಿಗೆ ಮುಕ್ತ ಆಹ್ವಾನ ನೀಡಿದ್ದು 64 ವಿದ್ಯಾಸಂಸ್ಥೆಗಳು ಈ ಟೂರ್ನಮೆಂಟ್ ನ ಭಾಗವಾಗಲಿವೆ.ಮುಂದಿನ ದಿನಗಳಲ್ಲಿ ಟೆನಿಸ್ಬಾಲ್ ಕ್ರಿಕೆಟ್ ಪ್ರತಿಭೆಗಳಿಗೂ ಭವಿಷ್ಯದಲ್ಲಿ ಕ್ರೀಡಾಜೀವನಕ್ಕೆ ಸರ್ವ ಸಹಕಾರ ನೀಡಲಿದ್ದೇವೆ” ಎಂದರು.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಪಂದ್ಯಾಟದಲ್ಲಿ ಭಾಗವಹಿಸಿದ ಶಾಲಾ-ಕಾಲೇಜು ತಂಡದ ವಿದ್ಯಾರ್ಥಿಗಳಿಗೆ ಹಸ್ತಲಾಘವ ನೀಡಿ ಶುಭ ಹಾರೈಸಿದರು.ಈ ಸಂದರ್ಭ ರೋಶನ್ ಕುಮಾರ್ ಶೆಟ್ಟಿ,ಉದ್ಯಮಿ
ಚಿತ್ತರಂಜನ್ ಹೆಗ್ಡೆ ಹರ್ಕೂರು,ರಮೇಶ್ ಶೆಟ್ಟಿ, ಕುಸುಮಾಕರ್ ಶೆಟ್ಟಿ, ಶ್ರೀಧರ್ ಶೆಟ್ಟಿ ಪ್ಯಾರಡೈಸ್ ಬನ್ನಂಜೆ,ಯಾದವ್‌ ನಾಯಕ್ ಕೆಮ್ಮಣ್ಣು,ಸದಾನಂದ ಶಿರ್ವ,
ನಾರಾಯಣ ಶೆಟ್ಟಿ ಮಾರ್ಕೋಡು,ಶಂಕರ್ ಅಂಕದಕಟ್ಟೆ,ಸುಧೀರ್.ಕೆ.ಎಸ್,
ಚೇತನ್ ಕುಮಾರ್ ದೇವಾಡಿಗ,ಕೋಟ ರಾಮಕೃಷ್ಣ ಆಚಾರ್ ಸ್ಪೋರ್ಟ್ಸ್ ಕನ್ನಡ,ಶಿವನಾರಾಯಣ ಐತಾಳ್ ಕೋಟ,ಟಿ‌.ಸಿ.ಎ ಪದಾಧಿಕಾರಿಗಳು ಮತ್ತು ಸದಸ್ಯರು,ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
*ಪ್ರಥಮ ದಿನ ಭಾಗವಹಿಸಿದ 12 ತಂಡಗಳು*
ಟಿ‌.ಸಿ.ಎ ಉಡುಪಿ ಆಯೋಜಿಸಿದ ಶಾಲಾ-ಕಾಲೇಜು ಮಟಯ ಕ್ರಿಕೆಟ್ ಪಂದ್ಯಾಟದ ಮೊದಲ ದಿನ,
ಭಂಡಾರ್ಕರ್ಸ್ ಕಾಲೇಜು ಕುಂದಾಪುರ,ಜಿ.ಎಫ್.ಜಿ.ಸಿ ಶಂಕರನಾರಾಯಣ,ಯು.ಪಿ.ಎಂ.ಸಿ ಉಡುಪಿ,ಎಮ್.ಪಿ.ಯು‌.ಸಿ ಮಣಿಪಾಲ,ಗೋವಿಂದದಾಸ್ ಕಾಲೇಜ್ ಸುರತ್ಕಲ್,ಭಂಡಾರ್ಕರ್ಸ್ ಪಿ.ಯು ಕಾಲೇಜ್,ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಮಣಿಪಾಲ,ಐ.ಎಮ್‌.ಜೆ ಮೂಡ್ಲಕಟ್ಟೆ,ಜಿ.ಎಫ್.ಜಿ.ಸಿ ತೆಂಕನಿಡಿಯೂರು,ಜಿ.ಪಿ.ಟಿ ಮಣಿಪಾಲ,ಬಿ.ಬಿ ಹೆಗ್ಡೆ ಕಾಲೇಜ್ ಕುಂದಾಪುರ ಹೀಗೆ ಒಟ್ಟು 12 ತಂಡಗಳು ಭಾಗವಹಿಸಿದ್ದವು.
*4 ತಂಡಗಳು ಕ್ವಾರ್ಟರ್ ಫೈನಲ್ ಗೆ*
ಪ್ರಥಮ ದಿನದಾಂತ್ಯದಲ್ಲಿ
ಜಿ‌.ಎಫ್.ಜಿ‌‌.ಸಿ ಶಂಕರನಾರಾಯಣ,
ಭಂಡಾರ್ಕರ್ಸ್ ಪಿ.ಯು ಕಾಲೇಜ್,
ಐ.ಎಮ್.ಜೆ ಮೂಡ್ಲಕಟ್ಟೆ ಮತ್ತು ಜಿ‌.ಪಿ‌‌.ಟಿ ಮಣಿಪಾಲ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು.
ಭರತ್ ಪಟೇಲ್,ಪ್ರೀತೇಶ್ 2 ಬಾರಿ,ರೋಹಿತ್,ಸುಹಾಗ್,ಅನ್ವಿತ್,ಫಲ್ಗುಣ್,ಕೌಶಿಕ್,ಶ್ರೇಯಸ್,
ಪ್ರೀತೇಶ್,ಶ್ರೇಯಸ್ ಶೆಣೈ ಮತ್ತು ಸಂತೋಷ್  ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು.
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಶಾಲಾ ಕಾಲೇಜು ವಿದ್ಯಾರ್ಥಿಗಳ ಕ್ರಿಕೆಟ್ ಮುಖಾಮುಖಿಗೆ ಬೃಹತ್ ವೇದಿಕೆಯನ್ನು ಸಿದ್ಧಪಡಿಸುತ್ತಿರುವ ಟಿ.ಸಿ.ಎ ಉಡುಪಿ

ಉಡುಪಿ- ಶಾಲಾ,ಕಾಲೇಜು ವಿದ್ಯಾರ್ಥಿಗಳಿಗಾಗಿ ನವೆಂಬರ್ 06 ರಿಂದ ನವೆಂಬರ್ 12 ರ ವರೆಗೆ  ಟೆನಿಸ್ ಬಾಲ್ ಕ್ರಿಕೆಟ್  ಪಂದ್ಯಾವಳಿಯನ್ನು ಆಯೋಜಿಸಲು ಉಡುಪಿ  ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಸಜ್ಜಾಗುತ್ತಿದೆ.
ಪಂದ್ಯಾವಳಿಯು ನವೆಂಬರ್ 6 ರಿಂದ ಪ್ರಾರಂಭವಾಗಲಿದ್ದು,ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ  ವಿವಿಧ ಶಾಲಾ-ಕಾಲೇಜಿನ ಒಟ್ಟು 64 ತಂಡಗಳು ನೋಂದಣಿ ಮಾಡಿಕೊಂಡಿದ್ದು,ಕುಂದಾಪುರ ಗಾಂಧಿ ಮೈದಾನದಲ್ಲಿ 700 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಕ್ರಿಕೆಟ್‌ನಲ್ಲಿ ಸ್ಪರ್ಧಿಸುವುದನ್ನು ನೋಡಬಹುದಾಗಿದೆ.
“ಈ ಪಂದ್ಯಾವಳಿಯು ಶಾಲಾ- ಕಾಲೇಜು  ಮಕ್ಕಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ ಮತ್ತು ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ ಮತ್ತು ಸಾಂಘಿಕ ಕೆಲಸವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.ನವೆಂಬರ್ 6 ಬೆಳಿಗ್ಗೆ 9 ಗಂಟೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಎ.ಕಿರಣ್ ಕೊಡ್ಗಿ ಮತ್ತು ಜನತಾ ಫಿಶ್ ಮಿಲ್ ನ ಪ್ರವರ್ತಕರಾದ ಶ್ರೀ ಪ್ರಶಾಂತ್ ಕುಂದರ್ ಇವರು ಉದ್ಘಾಟಿಸಲಿದ್ದು,
ಟಿ‌.ಸಿ.ಎ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಭಾಗವಹಿಸಲಿದ್ದಾರೆ”ಎಂದು ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷ ಗೌತಮ್ ಶೆಟ್ಟಿ ತಿಳಿಸಿದ್ದಾರೆ.”
ಟಿ.ಸಿ.ಎ ಉಡುಪಿ ಸಂಸ್ಥೆ ಈ ಕ್ರಿಕೆಟ್ ಪಂದ್ಯಾಟವನ್ನು ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸುತ್ತಿದ್ದು,ಎರಡು ಪ್ರತ್ಯೇಕ ವಿಭಾಗಗಳಲ್ಲಿ ನಡೆಯಲಿದೆ. ಒಂದರಿಂದ 10ನೇ ತರಗತಿಯ ಮಕ್ಕಳಿಗೆ ಶಾಲಾ ಮಟ್ಟದಲ್ಲಿ ಹಾಗೂ ಪಿಯುಸಿ ಮತ್ತು ಪದವಿ  ವಿದ್ಯಾರ್ಥಿಗಳಿಗೆ ಕಾಲೇಜು ಮಟ್ಟದಲ್ಲಿ  ಹೀಗೆ ಎರಡು ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.
ಪಂದ್ಯಾವಳಿಯ ನೇರ ಪ್ರಸಾರ Sportskannadatv ಯುಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಕ್ರಿಕೆಟ್ ಬ್ಯಾಡ್ಮಿಂಟನ್

ಕ್ರೀಡೆ ದೈನಂದಿನ ಜೀವನದ ಭಾಗವಾಗಲಿ-ಗೌತಮ್ ಶೆಟ್ಟಿ

ಕುಂದಾಪುರ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ “ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ​​(SKPA)” ಇವರ ಆಶ್ರಯದಲ್ಲಿ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಮತ್ತು  ಕುಂದಾಪುರ- ಬೈಂದೂರು ವಲಯದ “ದಿ.ರಾಬರ್ಟ್ ಡಿಸೋಜಾ ಟ್ರೋಫಿ-2023” ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೆನಿಸ್ ಬಾಲ್ ಬಾಕ್ಸ್ ಕ್ರಿಕೆಟ್ ಪಂದ್ಯಾಟ 28.10.2023 ರಂದು ರಂದು ಸಹನಾ ಸ್ಪೋರ್ಟ್ಸ್ ಕ್ಲಬ್ ಕುಂದಾಪುರದಲ್ಲಿ ನಡೆಯಿತು.
 ಪಂದ್ಯಾವಳಿಯನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಮತ್ತು ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಉಪಾಧ್ಯಕ್ಷ  ಗೌತಮ್ ಶೆಟ್ಟಿ ಮಾತನಾಡಿ “ಕ್ರೀಡೆ ದೈನಂದಿನ ಜೀವನದ ಭಾಗವಾಗಿರಬೇಕು.ಕ್ರೀಡೆ ನಮಗೆ ಜೀವನ ಕೌಶಲ್ಯವನ್ನು ಕಲಿಸುತ್ತದೆ.ಪೋಷಕರು ತಮ್ಮ ಮಕ್ಕಳಿಗೆ ಕ್ರೀಡೆಯ ಮೇಲಿರುವ ಆಸಕ್ತಿಯನ್ನು ಪ್ರೋತ್ಸಾಹಿಸಬೇಕು ಎಂದರು.
“ಛಾಯಾಚಿತ್ರ ಗ್ರಾಹಕರು ಮೆದುಳು ಮತ್ತು ತಂತ್ರ ವನ್ನು ಬಳಸಿ ನಮ್ಮನ್ನು ಸುಂದರವಾಗಿ ಕಾಣುವಂತೆ ಮಾಡುತ್ತಾರೆ ಎಂಬುದರ ಕುರಿತು ಮಾತನಾಡಿದರು. ಉಡುಪಿ ಜಿಲ್ಲೆಯ ವಿಭಜನೆಯ ನಂತರವೂ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ನಂತೆ  ಒಗ್ಗಟ್ಟಾಗಿದ್ದಾರೆ,ಬಿಡುವಿಲ್ಲದ ವೇಳೆಯಲ್ಲೂ ಸುಳ್ಯದಿಂದ ಬೈಂದೂರಿನವರೆಗೂ ಛಾಯಾಚಿತ್ರಗ್ರಾಹಕರು ಈ ಪಂದ್ಯಾವಳಿಯಲ್ಲಿ ಭಾಗವಹಿಸಿರುವುದು ಶ್ಲಾಘನೀಯ ಎಂದರು.”
ಈ ಸಂದರ್ಭ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ,ಸಹನಾ ಗ್ರೂಪ್ಸ್ ನ ಸುರೇಂದ್ರ ಶೆಟ್ಟಿ ಮತ್ತು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೊಶಿಯೇಶನ್ ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಕ್ರಿಕೆಟ್

ದುಬೈ: ನ. 12 ರಂದು ಅದ್ದೂರಿಯ ಯುನೈಟೆಡ್ ಕಾಪು ಟ್ರೋಫಿ ಸೀಸನ್ 4 ಕ್ರಿಕೆಟ್ ಟೂರ್ನಿ

ದುಬೈ-ಉಡುಪಿ, ದಕ್ಷಿಣ ಕನ್ನಡ ಮೂಲದ ಕ್ರೀಡಾ ಪ್ರೋತ್ಸಾಹಕರಾದ ಫೈಜಲ್ ಕಾಪು, ಆದಿಲ್ ಮುಲ್ಲಾ, ಶಾಫಿ,ಆಶಿಕ್ ಬೆಳಪು,  ಶಕೀರ್ ವಿಟ್ಲ ಇವರೆಲ್ಲರ ಸಂಯೋಜನೆಯಲ್ಲಿ ಸಮಾಜದಲ್ಲಿ “ಶಾಂತಿ-ಸೌಹಾರ್ದತೆಗಾಗಿ ಕ್ರಿಕೆಟ್”
ಅಭಿಯಾನದೊಂದಿಗೆ ಯಶಸ್ವಿ ಸತತ 4 ನೇ ಬಾರಿಗೆ  ಅದ್ಧೂರಿಯ “ಯುನೈಟೆಡ್ ಕಾಪು ಟ್ರೋಫಿ ಸೀಸನ್ 4” ಕ್ರಿಕೆಟ್ ಟೂರ್ನಿ ಯನ್ನು ಕರ್ನಾಟಕ ಮೂಲದ ತಂಡಗಳಿಗೆ ನವೆಂಬರ್ 12,2023 ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಜ್ಮಾನ್‌ ಓವಲ್ ನ ಹುಲ್ಲು ಹಾಸಿನ ಮೈದಾನ ಮತ್ತು  MCC2 ಕ್ರಿಕೆಟ್ ಮೈದಾನ ದಲ್ಲಿ ಆಯೋಜಿಸಲಿದೆ.
ದಿನದ ಪಂದ್ಯಾವಳಿಯು ಲೀಗ್ ಮತ್ತು ನಾಕೌಟ್ ಪಂದ್ಯಗಳನ್ನು ಒಳಗೊಂಡಿರುತ್ತದೆ. ಪ್ರತಿಷ್ಠಿತ
ಟ್ರೋಫಿಗಾಗಿ ಉಡುಪಿ ಫ್ರೆಂಡ್ಸ್, ಬ್ಲೂ ಫೋರ್ಸ್,ಕರಾವಳಿ ಆಟೋ ವರ್ಕ್ ಶಾಪ್,ಕಟೀಲ್ ಫ್ರೆಂಡ್ಸ್,ಕರ್ಮಾರ್ ಡಿ.ಜೆ ಚಾಲೆಂಜರ್ಸ್,ದುಬೈ ಬ್ರದರ್ಸ್,ಟೀಮ್ ಎಲಿಗೆಂಟ್ ಮತ್ತು ವಿದ್ವಾರ್ ಬಾಯ್ಸ್ ಈ ಎಂಟು ತಂಡಗಳ ಕದನವನ್ನು ಈ ಟೂರ್ನಮೆಂಟ್ನಲ್ಲಿ ವೀಕ್ಷಿಸಬಹುದು
ಯುನೈಟೆಡ್ ಕಾಪು ಟ್ರೋಫಿಯ ಪ್ರಶಸ್ತಿಯ ಒಟ್ಟು ಮೊತ್ತ AED 10000 ಮೌಲ್ಯದ್ದಾಗಿದ್ದು,
ಪಂದ್ಯಾವಳಿಯ ವಿಜೇತರು AED 5005 ಮತ್ತು ಟ್ರೋಫಿಯನ್ನು ಪಡೆಯಲಿದೆ. ರನ್ನರ್ಸ್ ಅಪ್  2505 AED ಮತ್ತು ಟ್ರೋಫಿಯನ್ನು ಪಡೆಯುತ್ತದೆ.
ಮ್ಯಾನ್ ಆಫ್ ದಿ ಮ್ಯಾಚ್, ಮ್ಯಾನ್ ಆಫ್ ದಿ ಸೀರೀಸ್, ಬೆಸ್ಟ್ ಬೌಲರ್ ಮತ್ತು ಬೆಸ್ಟ್ ಬ್ಯಾಟರ್ ಗಳಿಗೆ ಕೂಡಾ ಬಹುಮಾನವೂ ಇರುತ್ತದೆ.
 ಶೃಂಗೇರಿಯ ಪ್ರಸಿದ್ಧ ವೆರಿಕೋಸ್ ವೈನ್ ತಜ್ಞ ವೈದ್ಯರಾದ ವಾಸುದೇವ ಉರಾಳ ಇವರ “ಡಾ.ಉರಾಳ್ಸ್ ವೆರಿಕೋಸ್ ವೈನ್ಸ್ ಆಯುರ್ವೇದ ಕೇರ್” ಪಂದ್ಯಾವಳಿಯ ಮುಖ್ಯ ಪ್ರಾಯೋಜಕರಾಗಿರುತ್ತಾರೆ.ಡಾ.ವಾಸುದೇವ್ ಉರಾಳರು ಮೊತ್ತ ಮೊದಲ ಬಾರಿಗೆ ಪಂದ್ಯಾವಳಿಯ ಮುಖ್ಯ ಅತಿಥಿಯಾಗಿ ಭಾಗವಹಿಸಲು ದುಬೈಗೆ ಆಗಮಿಸಲಿದ್ದಾರೆ.
ಜೊತೆಯಲ್ಲಿ ಅತಿಥಿ ವೆಜಿಟೇರಿಯನ್ ರೆಸ್ಟೋರೆಂಟ್, ದುಬೈ ಸಹ ಪ್ರಾಯೋಜಕರಾಗಿರುತ್ತಾರೆ.
ಪಂದ್ಯಾವಳಿಯ ಇತರ ವಿವರಗಳಿಗಾಗಿ +971 50 628 8509  ,  + 971 52 799 9564 ಅಥವಾ + 971 52 829 1122  ಅನ್ನು ಸಂಪರ್ಕಿಸಬಹುದು.