Categories
ಸಂತಾಪ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಹಿರಿಯ ಗ್ರೌಂಡ್ಸ್ ಮನ್ ರಾಮಣ್ಣ ಇನ್ನಿಲ್ಲ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಗೌಂಡ್ಸ್ ಮನ್ ರಾಮಣ್ಣ (75) ಇಂದು ವಿಧಿವಶರಾಗಿದ್ದಾರೆ. ನಿಷ್ಠಾವಂತ ಕೆಲಸಗಾರರಾಗಿ ಗುರುತಿಸಿಕೊಂಡಿದ್ದ ರಾಮಣ್ಣನವರ ನಿಧನಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂತಾಪ ಸೂಚಿಸಿದೆ.

ತಮ್ಮ ಇಡೀ ಜೀವನವನ್ನು ಕ್ರಿಕೆಟ್ ಮೈದಾನದಲ್ಲಿ ಕಳೆದು  ಕ್ರಿಕೆಟ್‌ಗಾಗಿ ಮುಡಿಪಾಗಿಟ್ಟಿದ್ದ ರಾಮಣ್ಣ, 53 ವರ್ಷಗಳ ಕಾಲ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಗೌಂಡ್ಸ್‌ಮನ್ ಆಗಿ ಸೇವೆ ಸಲ್ಲಿಸಿದ್ದರು. ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದ ರಾಮಣ್ಣ, ಹಾಲಿ ಹಾಗೂ ಮಾಜಿ ಕ್ರಿಕೆಟಿಗರ ಜೊತೆ ಉತಮ ಬಾಂಧವ್ಯ ಹೊಂದಿದ್ದರು.

ಇವರ ಆತ್ಮಕ್ಕೆ ಚಿರಶಾಂತಿ ದೊರಕಲಿ…💐💐💐🙏
Categories
ಸಂತಾಪ

ವೆಂಕಟರಮಣ ಪಿತ್ರೋಡಿ ಸಂಸ್ಥೆಯ ಮಾಜಿ ಅಧ್ಯಕ್ಷ,ಕ್ರಿಕೆಟ್ ಪಟು CA ಮಲ್ಲೇಶ್ ಕುಮಾರ್ ನಿಧನ

ಉಡುಪಿ-ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ಪಿತ್ರೋಡಿ ಇದರ ಮಾಜಿ ಅಧ್ಯಕ್ಷರು,CA ಅಸೋಸಿಯೇಷನ್ ಕಾರ್ಯದರ್ಶಿಯಾಗಿದ್ದ ಮಲ್ಲೇಶ್ ಕುಮಾರ್ ಪಿತ್ರೋಡಿ(40) ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅತ್ಯಂತ ಸರಳ ಸಜ್ಜನಿಕೆಯ ಸ್ವಭಾವದ ಮಲ್ಲೇಶ್ ಕುಮಾರ್ ಪಿತ್ರೋಡಿ ಇವರು ವೆಂಕಟರಮಣ ಪಿತ್ರೋಡಿ ತಂಡದ ಪ್ರಮುಖ ಆಟಗಾರರಾಗಿ ಹಲವಾರು ಜಿಲ್ಲಾ ಮತ್ತು ರಾಜ್ಯ ಮಟ್ಟದ ಪಂದ್ಯಾಟಗಳಲ್ಲಿ ಭಾಗವಹಿಸಿ ತನ್ನ ತಂಡಕ್ಕೆ ಪ್ರಶಸ್ತಿಯ ಗರಿ ಮೂಡಿಸಿದ್ದರು.ರಾಜ್ಯದ ಅತ್ಯಂತ ಶಿಸ್ತುಬದ್ಧ ತಂಡವಾಗಿ ಗುರುತಿಸಿಕೊಂಡ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ನ ಶಿಸ್ತಿನ ಸಿಪಾಯಿಯಾಗಿ ಗುರುತಿಸಿಕೊಂಡ ಮಲ್ಲೇಶ್ ರವರು ಸಂಸ್ಥೆಯ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ನ ರಕ್ತದಾನ ಸಂಘದ ಸದಸ್ಯರಾಗಿ ಹಲವು ಬಾರಿ ರಕ್ತದಾನ ಮಾಡುವ ಮೂಲಕ ಹಲವಾರು ಜೀವಗಳನ್ನು ರಕ್ಷಿಸುವಲ್ಲಿ ಸಹಕಾರಿಯಾಗಿದ್ದರು.
ಮಲ್ಲೇಶ್ ರವರು ಸಿ.ಎ ಉದ್ಯೋಗಿಯಾಗಿದ್ದು ಉಡುಪಿಯ ಬನ್ನಂಜೆಯಲ್ಲಿ ಕಛೇರಿಯನ್ನು ಹೊಂದಿದ್ದರು.ಸಿ.ಎ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.
ಮೃತರು ತಂದೆ,ತಾಯಿ,ಸೋದರಿ,ಪತ್ನಿ,ಪುತ್ರ ಹಾಗೂ ಇಬ್ಬರು ಪುಟ್ಟ ಮಕ್ಕಳ‌ ಸಹಿತ ಅಪಾರ ಬಂಧುಬಳಗ ಮತ್ತು ಸ್ನೇಹಿತ ವರ್ಗವನ್ನು ಅಗಲಿದ್ದಾರೆ.
ಅಗಲಿದ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೂ ಕುಟುಂಬ ವರ್ಗಕ್ಕೆ ಅಗಲಿಕೆಯ ನೋವನ್ನು ಮರೆಸುವ ಶಕ್ತಿ ನೀಡಲಿ ಎಂದು ರಾಜ್ಯ ಟೆನಿಸ್ ಕ್ರಿಕೆಟ್ ಮತ್ತು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ವತಿಯಿಂದ ಪ್ರಾರ್ಥಿಸುತ್ತೇವೆ…
Categories
ಚಿರಸ್ಮರಣೆ ಸಂತಾಪ

ಸಾಮಾಜಿಕ ಕಾರ್ಯಕರ್ತ,ಮಾಜಿ ಕ್ರಿಕೆಟ್ ಪಟು ಸಾಯಿದತ್ತ ಭಟ್ ಬೈಂದೂರು ನಿಧನ

ಬೈಂದೂರು-ವಿಕ್ರಮ್ ಸ್ಪೋರ್ಟ್ಸ್ ಕ್ಲಬ್ ಬೈಂದೂರು ತಂಡದ ಪರವಾಗಿ 80 ರ ದಶಕದಲ್ಲಿ ಮಿಂಚಿದ್ದ ಆಲ್ ರೌಂಡರ್, ಉದ್ಯಾನ ನಗರಿ ಬೆಂಗಳೂರನ್ನು ಫ್ಲೆಕ್ಸ್ ಮುಕ್ತ ನಗರಿಯನ್ನಾಗಿಸುವಲ್ಲಿ ಹಾಗೂ ಕಾನೂನಾತ್ಮಕ ಹೋರಾಟದ ಮೂಲಕ ಬಿ‌.ಡಿ.ಎ ಗೆ ಕೋಟ್ಯಾಂತರ ಮೌಲ್ಯದ ಭೂಮಿಯನ್ನು ಉಳಿಸಿಕೊಟ್ಟ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಭಟ್ ಬೈಂದೂರು ಇಂದು ಹೃದಯಾಘಾತದಿಂದ ನಿಧನರಾದರು.
80 ರ ದಶಕದಲ್ಲಿ ಆಲ್ ರೌಂಡರ್ ಆಟಗಾರರ ರೂಪದಲ್ಲಿ ವಿಕ್ರಮ್ ತಂಡದಲ್ಲಿ ಕ್ರಿಕೆಟ್ ಜೀವನ ಪ್ರಾರಂಭಿಸಿದ್ದ ಸಾಯಿದತ್ತ ಭಟ್ ಗಂಗೊಳ್ಳಿಯಲ್ಲಿ ನಡೆದ ಜಿಲ್ಲಾಮಟ್ಟದ ಪಂದ್ಯವೊಂದರಲ್ಲಿ ರಾಯಲ್ ಗಂಗೊಳ್ಳಿ ತಂಡದೆದುರು ಹ್ಯಾಟ್ರಿಕ್ ವಿಕೆಟ್ ಗಳಿಸಿ ಮಿಂಚಿದ್ದರು.ಹಲವಾರು ಪಂದ್ಯಗಳಲ್ಲಿ ವಿಕ್ರಮ್ ಪರ ಗೆಲುವಿನ ರೂವಾರಿಯಾಗಿ ಮೂಡಿಬಂದಿದ್ದರು‌.ಇದಲ್ಲದೇ ಕರಾವಳಿ ಕುಂದಾಪುರ ಹಾಗೂ ಶ್ರೀಲತಾ ಕುಂದಾಪುರ ತಂಡದ ಪರವಾಗಿ ನೇತಾಜಿ ಪರ್ಕಳ ಪಂದ್ಯದಲ್ಲಿ ಹಾಗೂ ಪಯೋನೀರ್ ಬೀಡಿನಗುಡ್ಡೆ ಪಂದ್ಯಾವಳಿಯಲ್ಲಿ ಶ್ರೇಷ್ಠ ನಿರ್ವಹಣೆ ನೀಡಿದ್ದರು‌.
ಕುಂದಾಪುರದ ಮೈಲಾರೇಶ್ವರ ಯುವಕ ಸಂಘ ತಂಡವನ್ನು ಪ್ರತಿನಿಧಿಸಿ ಕೋಣಿಯಲ್ಲಿ ನಡೆದ ಜಿಲ್ಲಾಮಟ್ಟದ ಪಂದ್ಯದಲ್ಲಿ ಸರಣಿಶ್ರೇಷ್ಟ ಪ್ರಶಸ್ತಿಯೂ ತನ್ನದಾಗಿಸಿಕೊಂಡಿದ್ದರು.
ಹಲವಾರು ಪಂದ್ಯಾಕೂಟಗಳಲ್ಲಿ ವೀಕ್ಷಕ ವಿವರಣೆಕಾರರಾಗಿ ಹಾಗೂ ನಿರ್ಣಾಯಕರಾಗಿ ಕಾರ್ಯ ನಿರ್ವಹಿಸಿದ್ದರು.ವಿಕ್ರಮ್ ಬೈಂದೂರು ತಂಡದ ಜನರಲ್ ಸೆಕ್ರೆಟರಿಯಾಗಿ,ಪ್ರಸಿದ್ಧ “ಲಾವಣ್ಯ ಕಲಾವೃಂದದ ಪೋಷಕರಾಗಿ ಹಾಗೂ ಬೈಂದೂರು ಜೇಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ‌.ಕಾಲೇಜು ವ್ಯಾಸಂಗದ ವೇಳೆ ಹಲವಾರು ಡಿಬೇಟ್ ಕಾರ್ಯಕ್ರಮಗಳಲ್ಲೂ ಪಾಲ್ಗೊಂಡಿದ್ದರು.
1993 ರ ಬಳಿಕ ಹೊಟ್ಟೆಪಾಡಿಗಾಗಿ ಬೆಂಗಳೂರು ಪ್ರವೇಶಿಸಿದ ಇವರು ಸಾಮಾಜಿಕ ಕಾರ್ಯಕರ್ತರಾಗಿ ಹೈಕೋರ್ಟ್ ನಲ್ಲಿ 16 ಸಾರ್ವಜನಿಕ ದಾವೆಗಳಿಗಾಗಿ ಹೋರಾಟ, 25 ಕ್ಕೂ ಹೆಚ್ಚಿನ ಲೋಕಾಯುಕ್ತ ಸಂಬಂಧಿಸಿದಂತೆ ದೂರುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಅಲ್ಲದೆ ACB ದೂರುಗಳ ಬಗ್ಗೆ ತನಿಖೆ ಮಾಡಿದವರು. ಬೆಂಗಳೂರು ನಗರವನ್ನು ಫ್ಲೆಕ್ಸ್ ಮುಕ್ತ ಮಾಡುವಲ್ಲಿ ಯಶಸ್ವಿಯಾದರು.ಜಾಗಕ್ಕೆ ಸಂಬಂಧಿಸಿದಂತೆ ಇರುವ ದೂರುಗಳ ವಿಚಾರಣೆ ಅಲ್ಲದೆ ಬಿಡಿಎ ಲ್ಯಾಂಡ್ ಗಳ ಬಗ್ಗೆ ತನಿಖೆ ನಡೆಸಲು ಯಶಸ್ವಿ ಹೋರಾಟ ನಡೆಸಿದ ಕಾರ್ಯಕರ್ತ ಎಂದು ಹೆಸರು ಮಾಡಿರುವ ಇವರು ವಿವಾದಿತ ಸ್ವಯಂ ಘೋಷಿತ ದೇವಮಾನವ ಅಸೋರಾಂ ಬಾಪೂ ಆಶ್ರಮದ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸಿ ಗೆದ್ದು ಕೋಟ್ಯಾಂತರ ರೂಪಾಯಿ ಮೌಲ್ಯದ ಭೂಮಿಯನ್ನು ಬಿ.ಡಿ.ಎ ಗೆ ಉಳಿಸಿಕೊಟ್ಟ ಆಪತ್ಬಾಂಧವ. ಅನೇಕ ಬಾರಿ ಟಿವಿ ವಾಹಿನಿಯಲ್ಲಿ ಪ್ರಸಾರವಾಗುವ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.ಇವರ ಸಾಮಾಜಿಕ ಸೇವೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಒಲಿದು ಬಂದಿದ್ದು ಇವುಗಳಲ್ಲಿ ಬಿ.ಬಿ.ಎಮ್.ಪಿ ಕೊಡಮಾಡಿದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ,ಕನ್ನಡ ಸಾಹಿತ್ಯ ಪರಿಷತ್ ಪ್ರಶಸ್ತಿ ಹಾಗೂ ಶಿರ್ಕೆ ಗ್ರೂಪ್ ಪ್ರಶಸ್ತಿಗಳು ಪ್ರಮುಖವಾದುದು…
ಅಗಲಿದ ಸಾಮಾಜಿಕ ಕಾರ್ಯಕರ್ತ ಹಾಗೂ ಮಾಜಿ ಕ್ರಿಕೆಟಿಗರಾದ ಸಾಯಿದತ್ತ ಭಟ್ ಬೈಂದೂರು ಇವರ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೂ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ರಾಜ್ಯ ಟೆನಿಸ್ ಕ್ರಿಕೆಟ್ ಮತ್ತು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ವತಿಯಿಂದ ಪ್ರಾರ್ಥಿಸುತ್ತೇವೆ.
Categories
ಸಂತಾಪ

ಕಿರಿ ವಯಸ್ಸಿನಲ್ಲೇ ಬ್ರೈನ್ ಟ್ಯೂಮರ್ ಗೆ ಬಲಿಯಾದ ಉದಯೋನ್ಮುಖ ಕ್ರಿಕೆಟಿಗ ರಕ್ಷಿತ್ ಶೆಟ್ಟಿ…!

ಸಾವು ಅನ್ನೋದು ಅನಿರೀಕ್ಷಿತ. ಯಾರು? ಯಾವಾಗ? ಎಲ್ಲಿ? ಹೇಗೆ? ಸಾವಿನಮನೆ ಸೇರುತ್ತಾರೆಂದು ಊಹಿಸಲು ಸಾಧ್ಯವಿಲ್ಲ..! ಯಾವ ರೂಪದಲ್ಲಾದರು ಸಾವು ಎದುರಾಗಬಹುದು. ಈ ರೀತಿಯ ಸಾವಿಗೆ ಉಸಿರು ಚೆಲ್ಲಿದವರು ಉಡುಪಿ ಜಿಲ್ಲೆಯ ಪೆರ್ಡೂರು ಸಮೀಪದ ಬುಕ್ಕಿಗುಡ್ಡೆಯ ಯುವ ಕ್ರಿಕೆಟಿಗ ರಕ್ಷಿತ್ ಶೆಟ್ಟಿ..!!
ಸಾವು ಬಹುಬೇಗನೆ ಬಂದು ಆತನ ಉಸಿರನ್ನು ಕಸಿದುಕೊಂಡು ಹೋಗಿದೆ ವಿಧಿ..?
 30 ವರ್ಷದ ಗಡಿ ದಾಟುವ ಮುನ್ನವೆ ಬ್ರೈನ್ ಟ್ಯೂಮರ್ ಗೆ ಬಲಿಯಾದ ಯುವಕನನ್ನು ಕಂಡು ಆತನ ಆಪ್ತ ವಲಯ ಬೆಚ್ಚಿ ಬಿದ್ದಿದೆ.ಈತನ ಸಾವಿನ ಸುದ್ದಿ ತಿಳಿದು  ಆತನ ಹೆತ್ತವರಿಗೂ ಸಂಬಂಧಿಕರಿಗೂ ಮತ್ತು ಮಿತ್ರವೃಂದಕ್ಕೂ ಇನ್ನೂ ಕೂಡ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ವಿಧಿ ನಿನೇಷ್ಟು ಕ್ರೂರಿ ಬದುಕಿನ ಹಾದಿಯಲ್ಲಿ ನೆಮ್ಮದಿಯ ಪಯಣ ಮಾಡುತ್ತಿದ್ದ  ಹುಡುಗನ ಉಸಿರು ನಿಲ್ಲಿಸಿ ನಿನ್ನ ಕ್ರೂರ ತನವನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಿಯಾ..! ಬೆಟ್ಟದಷ್ಟು ಕನಸುಗಳನ್ನು ತನ್ನ ಜೋಳಿಗೆಯಲ್ಲಿ ಹೊತ್ತು ತನ್ನಿಚ್ಚೆಯ ಗುರಿತಲುಪಲು ಹಗಲಿರುಳು ಶ್ರಮಿಸುತ್ತಿದ್ದ  ಯುವಕ  ರಕ್ಷಿತ್ ಶೆಟ್ಟಿ.
ರಕ್ಷಿತ್ ಶೆಟ್ಟಿಗೆ ಚಿಕ್ಕವಯಸ್ಸಿನಿಂದಲೂ ಕ್ರಿಕೆಟ್ ಆಟವೆಂದರೆ ಪಂಚಪ್ರಾಣ. ತಾನು ಕೂಡ ಒಳ್ಳೆಯ ಕ್ರಿಕೆಟಿಗನಾಗಬೇಕೆಂದು ಕನಸು ಕಂಡವನು ಸುಮ್ಮನೆ ಕೂರಲಿಲ್ಲಿ. ಕರಾವಳಿ ಮೂಲದ ಪ್ರಸಿದ್ದ ತಂಡಗಳಲ್ಲಿ ಒಂದಾದ ಪೆರ್ಡೂರಿನ *”ಗೆಳೆಯರ ಬಳಗ”* ತಂಡದ ಮುಖಾಂತರ ಕ್ರಿಕೆಟ್ ಆಟವನ್ನು ಆರಂಭಿಸಿದ *”ರಕ್ಷಿತ್ ಶೆಟ್ಟಿ”* ತಿರುಗಿ ನೋಡಲಿಲ್ಲ ಉತ್ತಮ ಆಟಗಾರನಾಗಿ ಹೊರಹೊಮ್ಮಿ ಎಲ್ಲರಿಗೂ ಚಿರಪರಿಚಿತರಾಗಿದ್ದರು.  ತಾಲ್ಲೂಕು ಮಟ್ಟದಿಂದ ಜಿಲ್ಲಾ ಮತ್ತು ರಾಜ್ಯಮಟ್ಟದ ಪಂದ್ಯಗಳಲ್ಲಿ ತನ್ನ ಆಕರ್ಷಕ ಬೌಲಿಂಗ್ ನಿಂದ ಸಾಕಷ್ಟು ಹೆಸರು ಮಾಡಿದ್ದ ರಕ್ಷಿತ್ ಶೆಟ್ಟಿ ರಾಜ್ಯದ ಹೆಸರಾಂತ ತಂಡಗಳನ್ನು ಪ್ರತಿನಿಧಿಸುವ ಮೂಲಕ ಕರಾವಳಿಯ ಹೆಸರಾಂತ ಬೌಲರ್ ಸಾಲಿನಲ್ಲಿ ತನ್ನ ಹೆಸರನ್ನು ನಮೂದಿಸಿದ್ದರು.
ಸೌಮ್ಯ ಸ್ವಭಾವದ ಆಕರ್ಷಕ ಮೈಕಟ್ಟಿನ ಸುಂದರ ಯುವಕ ರಕ್ಷಿತ್ ಶೆಟ್ಟಿ ತನ್ನ 29 ನೇ ವಯಸ್ಸಿನಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದ ಕ್ರಿಕೆಟ್ ಅಂಗಳದಲ್ಲಿ ಸಾಕಷ್ಟು ಹೆಸರು ಮಾಡಿದ್ದರು.
 ಮನೆಯ ಮುದ್ದಿನ ಮಗನಾಗಿದ್ದ ರಕ್ಷಿತ್ ಶೆಟ್ಟಿಗೆ ಮನೆಯ ಜವಾಬ್ದಾರಿಯು ಕೂಡ ಹೆಗಲ ಮೇಲಿತ್ತು ಎಲ್ಲವನ್ನೂ ನಿಭಾಯಿಸುವ ಶಕ್ತಿಕೂಡ ಅವನಲ್ಲಿತ್ತು. ಎಲ್ಲವನ್ನೂ ಸರಿದೂಗಿಸಿಕೊಂಡು ಹೆಜ್ಜೆ ಹಾಕುತ್ತಿದ್ದ ಸಮಯದಲ್ಲಿಯೇ  ರಕ್ಷಿತ್ ಶೆಟ್ಟಿಯ ಮೇಲೆ ಆ ದೇವರಿಗೂ ಜಲಸ್ಸಿರ ಬೇಕು..! ಕಳೆದ ಜನವರಿ ಎಂಟನೇ ತಾರೀಖು ಯಾರು ಊಹಿಸಲು ಸಾಧ್ಯವಿಲ್ಲದಂತಹ ಸುದ್ದಿಯೊಂದು ಸುನಾಮಿಯಂತೆ ಕರಾವಳಿಯ ಮಂದಿಯ ಕಿವಿಗೆ  ಅಪ್ಪಳಿಸಿತ್ತು..! ಇನ್ನೂ ಬಾಳಿ ಬದುಕಬೇಕಾಗಿದ್ದ 29 ವಯಸ್ಸಿನ ಯುವಕ ರಕ್ಷಿತ್ ಶೆಟ್ಟಿ ಇನ್ನಿಲ್ಲ ಎನ್ನುವ ಸಾವಿನ ಸುದ್ದಿ..!
ತನ್ನ ಬದುಕಿಗೆ ಅಂತ್ಯವಾಡಿ ಒಲ್ಲದ ಮನಸ್ಸಿನಿಂದಲೆ ಈ ನೆಲದ ಋಣ ಮುಗಿಸಿ ಹೊರಟ ಶ್ರೇಷ್ಠ ಕ್ರಿಕೆಟಿಗನ ಸಾವಿನ ಸುದ್ಧಿ ಕರಾವಳಿಯ ಕ್ರಿಕೆಟ್ ಅಂಗಳದ ಅಸಂಖ್ಯಾತ ಅಭಿಮಾನಿಗಳು ಮತ್ತು ಕ್ರಿಕೆಟಿಗರನ್ನು  ಒಮ್ಮೆ ದುಃಖಿಸುವಂತೆ ಮಾಡಿತ್ತು. ರಕ್ಷಿತ್ ಶೆಟ್ಟಿಯ ಸಾವಿನ ಸುದ್ಧಿ ಕೇಳಿದ ಕುಟುಂಬಸ್ಥರು ಮತ್ತು ಮಿತ್ರರು ಕ್ರಿಕೆಟ್ ಅಂಗಳದ ಸ್ನೇಹಿತರ ದುಃಖ ಮುಗಿಲು ಮುಟ್ಟಿತ್ತು. ಚಿಕ್ಕ ವಯಸ್ಸಿನಲ್ಲೇ ಬ್ರೈನ್ ಟ್ಯೂಮರ್ ಎಂಬ ಮಾರಕ ರೋಗಕ್ಕೆ ಬಲಿಯಾದ ರಕ್ಷಿತ್ ಶೆಟ್ಟಿಯ ಅಂತಿಮ ದರ್ಶನಕ್ಕೆ ಆತನ ಸ್ನೇಹಿತರು ಕ್ರಿಕೆಟ್ ಅಭಿಮಾನಿಗಳು.ಸಹ ಆಟಗಾರರು ಮತ್ತು ಕುಟುಂಬಸ್ಥರು ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡು ಅಂತಿಮ ಯಾತ್ರೆಯೊಂದಿಗೆ ಯುವ ಕ್ರಿಕೆಟಿಗನನ್ನು ಬಿಳ್ಕೋಟ್ಟರು….
ಒಟ್ಟಿನಲ್ಲಿ ಮಾರಕ ರೋಗವೊಂದು ಹರೆಯದ ಯುವಕನನ್ನು ಬಲಿಪಡೆದಿದ್ದು ಮಾತ್ರ ದುರಂತವೆ ಹೌದು..!
 ಮೃತ ರಕ್ಷಿತ್ ಶೆಟ್ಟಿಯ ಆತ್ಮಕ್ಕೆ ಚಿರಶಾಂತಿ ದೊರಕಲಿ ದೇವರು ಅವರ ಅಭಿಮಾನಿಗಳು. ಮಿತ್ರರು ಮತ್ತು ಕುಟುಂಬ ವರ್ಗದರಿಗೆ  ದುಃಖ ಭರಿಸುವ ಶಕ್ತಿ ನೀಡಲಿ
Categories
ಸಂತಾಪ

ಉದಯೋನ್ಮುಖ ಕ್ರಿಕೆಟಿಗ ರಕ್ಷಿತ್ ಶೆಟ್ಟಿ ಪೆರ್ಡೂರು ನಿಧನ

ಉಡುಪಿ-ರಾಜ್ಯ,ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟಗಳಲ್ಲಿ ಮಿಂಚಿದ್ದ ವೇಗಿ,ಉದಯೋನ್ಮುಖ ಕ್ರಿಕೆಟಿಗ ರಕ್ಷಿತ್ ಶೆಟ್ಟಿ ಪೆರ್ಡೂರು(29 ವರ್ಷ) ಬ್ರೈನ್ ಟ್ಯೂಮರ್ ನಿಂದ ಇಂದು ನಿಧನರಾದರು.
ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ ಕ್ರಿಕೆಟ್ ಜೀವನ ಪ್ರಾರಂಭಿಸಿದ ರಕ್ಷಿತ್ ಶೆಟ್ಟಿ ಯಂಗ್ ಸ್ಟಾರ್ ಪೆರ್ಡೂರು,ದುರ್ಗಾ ಆತ್ರಾಡಿ ತಂಡಗಳ ಪರವಾಗಿ ಜಿಲ್ಲಾಮಟ್ಟದ ಪಂದ್ಯಗಳನ್ನಾಡಿದ್ದರು‌.ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ ರಕ್ಷಿತ್ ಶೆಟ್ಟಿ ಎಸ್.ಝಡ್‌‌.ಸಿ.ಸಿ ಮತ್ತು ಎಮ್‌.ಬಿ.ಸಿ.ಸಿ ತಂಡಗಳ ಪರವಾಗಿ ತನ್ನ ಆಕರ್ಷಕ ಶೈಲಿಯ ಬೌಲಿಂಗ್ ಶೈಲಿಯ ಮೂಲಕ ಯಶಸ್ಸು ಸಾಧಿಸಿದ್ದರು.ತನ್ನ ಸರಳ ಸಜ್ಜನಿಕೆಯಿಂದ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿದ್ದರು.
ಮೃತರ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ರಾಜ್ಯ ಟೆನಿಸ್ ಕ್ರಿಕೆಟ್ ಮತ್ತು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಪರವಾಗಿ ಪ್ರಾರ್ಥಿಸುತ್ತೇವೆ.
Categories
ಸಂತಾಪ

ವೆಸ್ಟ್‌ವಿಂಡೀಸ್‌ ಮಾಜಿ ಕೀಪರ್‌ ಡೇವಿಡ್‌ ಮರ್ರೆ ನಿಧನ

ಬಾರ್ಬಡೊಸ್‌: ಒಂದುಕಾಲದ ಬಲಿಷ್ಠ ಕ್ರಿಕೆಟ್ ತಂಡ ವೆಸ್ಟ್‌ ಇಂಡೀಸ್‌ನ ಭಯಾನಕ ಹಾಗೂ ಘಾತಕ ವೇಗಿಗಳ ಕಾಲಘಟ್ಟದಲ್ಲಿ ಅಮೋಘ ಕೀಪಿಂಗ್‌ ನಡೆಸಿ ವಿಶ್ವಖ್ಯಾತಿ ಪಡೆದಂತಹ ಶ್ರೇಷ್ಠ ಕ್ರಿಕೆಟ್ ಆಟಗಾರ ಡೇವಿಡ್‌ ಮರ್ರೆ (72) ಇನ್ನೂ ನೆನಪು ಮಾತ್ರ.
ಇವರ ನಿಧನವನ್ನು ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ಒಂದು ದಿನ ವಿಳಂಬವಾಗಿ ಘೋಷಿಸಿದೆ.
ಡೇವಿಡ್‌ ಆ್ಯಂಟನಿ ಮರ್ರೆ ವೆಸ್ಟ್ ಇಂಡೀಸ್‌ನ ಖ್ಯಾತ ತ್ರಿವಳಿ “ಡಬ್ಲ್ಯು’ ಗಳಲ್ಲಿ ಒಬ್ಬರಾದ ಎವರ್ಟನ್‌ ವೀಕ್ಸ್‌ ಅವರ ಪುತ್ರ. 1973ರ ಇಂಗ್ಲೆಂಡ್‌ ಪ್ರವಾಸದ ವೇಳೆ ವಿಂಡೀಸ್‌ ತಂಡಕ್ಕೆ ಆಯ್ಕೆಯಾದರು. ಆದರೆ ಟೆಸ್ಟ್‌ ಪಾದಾರ್ಪಣೆ  ಮಾಡಿದ್ದು 1978 ರಲ್ಲಿ ಅಂದು ಪ್ರವಾಸಿ ಆಸ್ಟ್ರೇಲಿಯಾ ತಂಡದ ಆಗಮನದ ವೇಳೆ. 19 ಟೆಸ್ಟ್‌, 10 ಏಕದಿನ ಪಂದ್ಯಗಳನ್ನು ಆಡಿದ್ದ ಮರ್ರೆ
ಮಾರ್ಷಲ್‌, ಹೋಲ್ಡಿಂಗ್‌ ಮೊದ ಲಾದ ವಿಂಡೀಸ್ ಬಲಿಷ್ಠ ವೇಗಿಗಳ ಎಸೆತಗಳನ್ನು ಯಾವುದೇ ಅಳುಕಿಲ್ಲದೆ ನಿರಾಯಾಸವಾಗಿ ಗ್ಲೌಸ್‌ಗೆ ಸೇರಿಸಿಕೊಳ್ಳುತ್ತಿದ್ದ ಹೆಗ್ಗಳಿಕೆ ಮರ್ರೆ ಅವರದಾಗಿತ್ತು.
ಆದರೆ ಹದಿಮೂರನೇ ವಯಸ್ಸಿನಲ್ಲೇ ಅಂಟಿಕೊಂಡ ಮರಿಜುವಾನಾ ಚಟ, 1983ರಲ್ಲಿ ದಕ್ಷಿಣ ಆಫ್ರಿಕಾಕ್ಕೆ ಬಂಡುಕೋರನಾಗಿ ತೆರಳಲು ದೊಡ್ಡ ಮೊತ್ತ ಪಡೆದದ್ದು ಮರ್ರೆ ಅವರ ಕ್ರಿಕೆಟ್‌ ಬದುಕನ್ನು ಬಹಳ ಬೇಗ ಮೊಟಕುಗೊಳಿಸಿತು. ಇನ್ನಷ್ಟು ಎತ್ತರಕ್ಕೆ ಬೆಳೆಯ ಬೇಕಾಗಿದ್ದ ಮರ್ರೆ ತಮ್ಮ ‌ಕೈಯಾರೆ ತಮ್ಮ ಉತ್ತಂಗ ಕ್ರಿಕೆಟ್ ಬದುಕನ್ನು ನಾಶಮಾಡಿಕೊಂಡಿದ್ದು ಮಾತ್ರ ದುರಂತವೆ ಹೌದು
ಇಂದು ಹೆಸರಾಂತ ಹಿರಿಯ ಕ್ರಿಕೆಟಿಗ ಮರ್ರೆ ತಮ್ಮ ಎಪ್ಪತ್ತೆರಡನೆ ವಯಸ್ಸಿನಲ್ಲಿ ತಮ್ಮ ‌ಬದುಕಿಗೆ ವಿಧಾಯ ಹೇಳಿ ಇಹಲೋಕ ತೆಜಿಸಿದ್ದಾರೆ. ಇವರ ಅಕಾಲಿಕ ಮರಣಕ್ಕೆ ಅಸಂಖ್ಯಾತ ಕ್ರಿಕೆಟ್ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ
Categories
ಸಂತಾಪ

ಸೌಕೂರು ಶೇರ್ವೆಗಾರ್ ಮನೆ ಕುಸುಮಾ.ಎಸ್.ಶೆಟ್ಟಿ ನಿಧನ

ಕುಂದಾಪುರ-ಆಜ್ರಿ ದೊಡ್ಮನೆ ದಿ‌.ಸುಧಾಕರ ಶೆಟ್ಟಿ ಯವರ ಧರ್ಮಪತ್ನಿ,ಸೌಕೂರು ಶೇರ್ವೆಗಾರ್ ಮನೆ  ಕುಸುಮಾ.ಎಸ್.ಶೆಟ್ಟಿ(76 ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಛೇರ್ಮನ್ ಗೌತಮ್ ಶೆಟ್ಟಿ ಇವರ ತಾಯಿ,
ಕುಸುಮಾ.ಎಸ್.ಶೆಟ್ಟಿ ಇವರು ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದ ಎಲ್ಲರ ಪ್ರೀತಿ ಪಾತ್ರರಾಗಿದ್ದರು‌.
ಮೃತರು ಓರ್ವ ಪುತ್ರ,ಪುತ್ರಿ,ಮೊಮ್ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Categories
ಸಂತಾಪ

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕ ಸಾವು….!

ಭದ್ರಾವತಿಯ *ವಿ ಐ ಎಸ್ ಎಲ್* ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ಷೇತ್ರ ರಕ್ಷಣೆಯಲ್ಲಿ ನಿರತನಾಗಿದ್ದ ದಿನೇಶ್ ರಾವ್ (38) ಪಂದ್ಯದ ನಡುವೆಯೇ ಕುಸಿದುಬಿದ್ದು ಸಾವಿನೆಡೆಗೆ ಹೆಜ್ಜೆ ಹಾಕಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೃದಯ ಭಾಗದಲ್ಲಿರುವ ವಿಐಎಸ್ ಎಲ್ ಕ್ರೀಡಾಂಗಣದಲ್ಲಿ ಇಂದು  ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು ಪಂದ್ಯ ನೆಡೆಯುವ ವೇಳೆಯಲ್ಲೆ ಈ ಘಟನೆ ನಡೆದಿದೆ. ಎರಡು ತಂಡಗಳು ಸೋಲು ಗೆಲುವಿನ ಲೆಕ್ಕಚಾರ ಹಾಕುವ ಸಮಯದಲ್ಲೆ ಈ ಬದುಕಿನ ಲೆಕ್ಕಾಚಾರ ಮುಗಿಸಿ ದಿನೇಶ್ ರವ್ ಮೈದಾನದಲ್ಲೆ ಹಠಾತ್ ಹೃದಯಾಘಾತಕ್ಕೆ ಬಲಿಯಾಗಿ ಬಾರದ ಲೋಕಕ್ಕೆ ಪಯಣ ಬೆಳೆಸಿರುವುದು ಮಾತ್ರ ದುರಂತವೆ ಹೌದು…
ದಿನೇಶ್ ರಾವ್ (38) ಮೃತಪಟ್ಟ ವ್ಯಕ್ತಿಯಾಗಿದ್ದು ಈತ ಭದ್ರಾವತಿ ನಗರಸಭೆ ಸಿಬ್ಬಂದಿಯಾಗಿದ್ದಾನೆ ಇಂದು ನಗರಸಭೆ ವತಿಯಿಂದ  ಕಾರ್ಮಿಕರು ಹಾಗೂ ಸಿಬ್ಬಂದಿವರ್ಗದರಿಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಡುವ ಸಮಯದಲ್ಲೇ ದಿನೇಶ್ ಕುಸಿದು ಬಿದ್ದಿದ್ದಾನೆ ತಕ್ಷಣವೇ
ಸ್ಥಳದಲ್ಲಿಯೇ ಇದ್ದ ಆರೋಗ್ಯ ಸಿಬ್ಬಂದಿಯಿಂದ ದಿನೇಶ್ ರಾವ್ ತಪಾಸಣೆ ನಡೆದಿದೆ. ಕುಸಿದು ಬಿದ್ದ ತಕ್ಷಣವೇ ದಿನೇಶ್ ಮೃತಪಟ್ಟಿದ್ದಾರೆಂದು   ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಸ್ಪಷ್ಟಪಡಿಸಿದ್ದಾರೆ.
ನಂತರ ಮೃತದೇಹವನ್ನು ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ತಾನು ಆಡುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದ ದಿನೇಶ್ ಗೆ ವಿಧಿಯ ಆಟ ಅರಿವಿಗೆ ಬಾರದೆ ಉಸಿರು ಚೆಲ್ಲಿ ಸಾವಿನೆಡೆಗೆ ಹೆಜ್ಜೆ ಹಾಕಿದ್ದಾರೆ…..
ಒಳ್ಳೆಯ ಕ್ರಿಕೆಟ್ ಆಟಗಾರನಾಗಿದ್ದ ದಿನೇಶ್ ರಾವ್ ಕಿರಿ ವಯಸ್ಸಿನಲ್ಲೆ ಬದುಕಿನ ಕೋಟಾ ಮುಗಿಸಿದ್ದು ಮಾತ್ರ ದುರಂತವೆ ಹೌದು
Categories
ಸಂತಾಪ

ಆಸೀಸ್ ಕ್ರಿಕೆಟ್ ದಿಗ್ಗಜ ಹಿರಿಯ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಉಸಿರು ಚೆಲ್ಲಿದ್ದಾರೆ

ಕ್ವೀನ್ಸ್‌ಲ್ಯಾಂಡ್, ಮೇ 15 ರಾತ್ರಿ ಆಸ್ಟ್ರೇಲಿಯಾದ ಲೆಜೆಂಡರಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ (46) ಅವರು ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನ ಆಲಿಸ್ ನದಿ ಸೇತುವೆ ಬಳಿಯ ಹರ್ವೆ ರೇಂಜ್ ರಸ್ತೆಯಲ್ಲಿ ಕಾರಿನಲ್ಲಿ ಚಲಿಸುತ್ತಿರುವಾಗ ರಸ್ತೆ ಬಿಟ್ಟು ಸೈಡಿಗೆ ಕಾರು ಉರುಳಿ ಅಪಘಾತದಲ್ಲಿ ಸೈಮಂಡ್ಸ್ ಸಾವನ್ನಪ್ಪಿದ್ದಾರೆ ಎಂದು ಕ್ವೀನ್ಸ್‌ಲ್ಯಾಂಡ್ ಪೊಲೀಸರು ತಿಳಿಸಿದ್ದಾರೆ.
ಆಸ್ಟ್ರೇಲಿಯಾ ಕ್ರಿಕೆಟ್‌ಗೆ ಮತ್ತೊಂದು ಬರಸಿಡಿಲು ಬಡಿದಂತಾಗಿದೆ  ಮಾರ್ಚ್‌ನಲ್ಲಿ ಶೇನ್ ವಾರ್ನ್ ಮತ್ತು ರಾಡ್ ಮಾರ್ಷ್ ಅವರ ದುರಂತ ಸಾವಿನ ನಂತರ ಸೈಮಂಡ್ಸ್ ಈ ವರ್ಷ ಹಠಾತ್ ನಿಧನರಾದ ಮೂರನೇ ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆಯಾಗಿದ್ದಾರೆ.  ಸೈಮಂಡ್ಸ್ ಸಾವಿನ ಬಗ್ಗೆ ಹಿರಿಯ ಕಿರಿಯ ಕ್ರಿಕೆಟಿಗರು ತಮ್ಮ ಅಳಲನ್ನು ಟ್ವಿಟ್ಟರ್ ಮೂಲಕ ವ್ಯಕ್ತಪಡಿಸಿದ್ದಾರೆ  ಹಲವರು ಎದೆಗುಂದಿದ್ದಾರೆ.  ಸೈಮಂಡ್ಸ್ ಸಾವಿನ ಸುದ್ದಿಗೆ ಆಸ್ಟ್ರೇಲಿಯಾದ ಕ್ರಿಕೆಟ್ ಕೋಚ್ ಮತ್ತು ಮಾಜಿ ಕ್ರಿಕೆಟಿಗ ಜೇಸನ್ ನೀಲ್ ಗಿಲ್ಲೆಸ್ಪಿ ಆಘಾತ ವ್ಯಕ್ತಪಡಿಸಿದ್ದಾರೆ.  “ಎಚ್ಚರಗೊಳ್ಳಲು ಭಯಾನಕ ಸುದ್ದಿ” ಎಂದು ಟ್ವೀಟ್ ಮಾಡಿದ ಅವರು, “ಸಂಪೂರ್ಣವಾಗಿ ಧ್ವಂಸಗೊಂಡಿದ್ದೇವೆ. ನಾವೆಲ್ಲರೂ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ ಗೆಳೆಯ”. ಎಂದಿದ್ದಾರೆ
ಮಾಜಿ ಸಹ ಆಟಗಾರ ಮತ್ತು ಫಾಕ್ಸ್ ಕ್ರಿಕೆಟ್ ಸಹೋದ್ಯೋಗಿ ಆಡಮ್ ಗಿಲ್‌ಕ್ರಿಸ್ಟ್ “ಇದು ನಿಜವಾಗಿಯೂ ನಮಗೆ ಎಂದು ಮರೆಯದ ನೋವುಂಟುಮಾಡುತ್ತದೆ” ಎಂದು ಬರೆದುಕೊಂಡಿದ್ದಾರೆ. ಹಿರಿಯ ಕ್ರಿಕೆಟ್ ಅಂಗಳದ ಪತ್ರಕರ್ತ ರಾಬರ್ಟ್ ಕ್ರಾಡಾಕ್ ಅವರ ವರದಿಗಳ ಪ್ರಕಾರ, ಶನಿವಾರ ರಾತ್ರಿ ಟೌನ್ಸ್‌ವಿಲ್ಲೆ ನಗರದಿಂದ ಸುಮಾರು 50 ಕಿಮೀ ದೂರದಲ್ಲಿ ಆಸೀಸ್ ಹಿರಿಯ ಆಲ್‌ರೌಂಡರ್ ಆಟಗಾರ ಸೈಮಂಡ್ಸ್ ಗೆ ಅಪಘಾತವಾಗಿ ಸಾವನಪ್ಪಿದ್ದಾರೆ ಎಂದು ವರದಿಮಾಡಿದ್ದಾರೆ.  ಕ್ವೀನ್ಸ್‌ಲ್ಯಾಂಡ್ ಪೊಲೀಸ್ ಹೇಳಿಕೆಯ ಪ್ರಕಾರ, ಸೈಮಂಡ್ಸ್ ಚಲಿಸುತ್ತಿದ್ದ ಕಾರು ರಾತ್ರಿ 10:30 ರ ಸುಮಾರಿಗೆ   ಅಪಘಾತಕ್ಕೀಡಾಗಿದೆ.  ಅಪಘಾತದ ಮಾಹಿತಿಯ ನಂತರ, ವೈದ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಬಂದರು ಆದರೆ ಮಾಜಿ ಆಸ್ಟ್ರೇಲಿಯಾದ ಕ್ರಿಕೆಟಿಗನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.  ಕಾರಿನಲ್ಲಿದ್ದ ಏಕೈಕ ವ್ಯಕ್ತಿ ಸೈಮಂಡ್ಸ್ ಅಪಘಾತಕ್ಕಿಡಾದ ಸ್ಥಳದಲ್ಲೇ ಲಕ್ಷಾಂತರ ಅಭಿಮಾನಿಗಳ ಜೋತೆಗೆ ಕ್ರಿಕೆಟ್ ಲೋಕವನ್ನು ಬಿಟ್ಟು ಸದ್ದಿಲ್ಲದೆ ಸಾವಿನ ಮನೆ ಸೇರಿದ್ದು ಮಾತ್ರ ದುರಂತವೆ ಹೌದು.
 ಸೈಮಂಡ್ಸ್ ಆಸ್ಟ್ರೇಲಿಯಾ ಪರ 26 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 1999 ಮತ್ತು 2007 ರ ನಡುವೆ ವಿಶ್ವದ ಪ್ರಾಬಲ್ಯ ಹೊಂದಿರುವ ಆಸ್ಟ್ರೇಲಿಯಾದ ವೈಟ್-ಬಾಲ್ ತಂಡಗಳ ಅವಿಭಾಜ್ಯ ಅಂಗವಾಗಿದ್ದರು. ನಿವೃತ್ತಿಯ ಆಟದಲ್ಲಿ, ವಾರ್ನ್ ಮತ್ತು ಸೈಮಂಡ್ಸ್ ಇಬ್ಬರೂ ಫಾಕ್ಸ್ ಕ್ರಿಕೆಟ್‌ನ ಕಾಮೆಂಟರಿ ತಂಡದ ಮೌಲ್ಯಯುತ ಸದಸ್ಯರಾಗಿದ್ದರು.
ಅದರಲ್ಲೂ ಭಾರತ ತಂಡದ ಹಿರಿಯ ಶ್ರೇಷ್ಠ  ಸ್ಫೀನ್ನರ್ ಮಣಿಂದರ್ ಸಿಂಗ್ ಜೋತೆಗೆ ಟೆಸ್ಟ್ ಪಂದ್ಯದ ವೇಳೆ  ಭಾರತ ಪ್ರವಾಸದಲ್ಲಿ ಕಿರಿಕ್ ಮಾಡಿಕೊಂಡಿದ್ದು ವಿಶ್ವಾದ್ಯಂತ ದೊಡ್ಡ ಸುದ್ದಿಯಾಗಿತ್ತು ಅದೇನೆ ಇರಲಿ ಸೈಮಂಡ್ಸ್ ವಿಶ್ವದ ಶ್ರೇಷ್ಠ ಕ್ರಿಕೆಟಿಗ ಎನ್ನುವುದರಲ್ಲಿ ಎರಡು ಮಾತಿಲ್ಲ ಅದರಲ್ಲೂ ಎದುರಾಳಿ ಬೌಲರ್ ಗಳು ಸೈಮಂಡ್ಸ್ ಆಡಲು ಮೈದಾನಕ್ಕೆ ಬಂದರೆ ಒಂದೊಮ್ಮೆ ನಡುಗ ಮಟ್ಟಕ್ಕೆ ಅವರ ಬ್ಯಾಟಿಂಗ್ ನಲ್ಲಿ ಶಕ್ತಿ ಇತ್ತು ಸಾಕಷ್ಟು ಬಾರಿ ವಿಶ್ವದ ಶ್ರೇಷ್ಠ ಬೌಲರ್ ಗಳ ಬೆವರಿಳಿಸಿದ್ದಾರೆ
      ತನಗರಿವಿಲ್ಲದೆ ಅಸಂಖ್ಯಾತ ಅಭಿಮಾನಿಗಳ ಜೊತೆಗೆ ತನ್ನ ಸಹ ಆಟಗಾರ ಜೊತೆಗೆ ತನ್ನ ಮಡದಿ ಮಕ್ಕಳನ್ನು ಬಿಟ್ಟು ಬಾರದ ಲೋಕದೆಡೆ ಹೆಜ್ಜೆ ಹಾಕಿದ್ದಾರೆ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಕ್ರಿಕೆಟ್ ಅಂಗಳದಲ್ಲಿ ಸೈಮಂಡ್ಸ್ ಅವರ ಕ್ರಿಕೆಟ್  ಬದುಕಿನ ಪ್ರತಿಯೊಂದು ಕ್ಷಣವೂ ಚಿರಕಾಲ ಉಳಿಯಲಿ
Categories
ಸಂತಾಪ

ಆಸ್ಟ್ರೇಲಿಯಾದ ದಿಗ್ಗಜ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ನಿಧನ!

ಬಾಲ್‌ ಆಫ್‌ ದಿ ಸೆಂಚುರಿ ಖ್ಯಾತಿಯ ವಿಶ್ವ ಶ್ರೇಷ್ಠ ಲೆಗ್‌ ಸ್ಪಿನ್ನರ್‌ ಶೇನ್‌ ವಾರ್ನ್‌ ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಅಗಲಿದ ಮಾಜಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ರಾಡ್‌ ಮಾರ್ಷ್‌ ಅವರಿಗೆ ಟ್ವಿಟರ್‌ ಗೋಡೆಯ ಮೇಲೆ ನುಡಿ ನಮನ ಸಲ್ಲಿಸಿದ್ದ ಶೇನ್‌ ವಾರ್ನ್‌,

 

ಅದೇ ದಿನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳಿವೆ. 52 ವರ್ಷದ ಮಾಜಿ ಕ್ರಿಕೆಟಿಗ ಥಾಯ್ಲೆಂಡ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಕ್ರಿಕೆಟ್‌ ಜಗತ್ತಿನ ಹಾಲಿ ಮತ್ತು ಮಾಜಿ ಕ್ರಿಕೆಟಿಗರಲ್ಲಾ ಟ್ವಿಟರ್‌ ಮೂಲಕ ಅಚ್ಚರಿ ಹೊರಹಾಕಿದ್ದಾರೆ.