6 C
London
Wednesday, April 24, 2024
Homeಕ್ರಿಕೆಟ್ಶರತ್ ಬಚ್ಚೇ ಗೌಡ ಕಪ್-2019 ಜಯಿಸಿದ ಸಿ.ಸಿ.ಸಿ ನ್ಯಾಶ್ ಬೆಂಗಳೂರು

ಶರತ್ ಬಚ್ಚೇ ಗೌಡ ಕಪ್-2019 ಜಯಿಸಿದ ಸಿ.ಸಿ.ಸಿ ನ್ಯಾಶ್ ಬೆಂಗಳೂರು

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಚೂ ಕ್ರಿಕೆಟ್ ಕ್ಲಬ್ ಹೊಸಕೋಟೆ ಇವರ ಆಶ್ರಯದಲ್ಲಿ ಹೊಸಕೋಟೆ ಟೌನ್ ನ ಸೂಲಿಬೆಲೆ ರಸ್ತೆಯ ಶ್ರೀ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ನಡೆದ ಎರಡು ದಿನಗಳ ಹಗಲಿನ ರಾಜ್ಯ ಮಟ್ಟದ ಪಂದ್ಯಾಕೂಟ ನ್ಯಾಶ್ ಬೆಂಗಳೂರಿನ ಆಟಗಾರರನ್ನೊಳಗೊಂಡ ಸಿ.ಸಿ.ಸಿ ಹೊಸಕೋಟೆ ತಂಡ ಜಯಿಸಿದೆ.

ರಾಜ್ಯದ ಪ್ರತಿಷ್ಟಿತ 15 ತಂಡಗಳು ಪ್ರತಿಷ್ಟಿತ ಪ್ರಶಸ್ತಿಗಾಗಿ ಸೆಣಸಾಡಿದ್ದವು.ಲೀಗ್ ಹಂತದ ರೋಚಕ ಹಣಾಹಣಿಗಳ ಬಳಿಕ ಸೆಮಿಫೈನಲ್ ನಲ್ಲಿ ಸಿ‌‌‌.ಸಿ.ಸಿ ಅಗ್ರಹಾರ, ಕೆ.ವೈ.ಸಿ.ಸಿ ಹೊಸಕೋಟೆ ತಂಡವನ್ನು ಹಾಗು ಸಿ.ಸಿ.ಸಿ ನ್ಯಾಶ್ ಹಾಸನಾಂಬಾ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು.

ಫೈನಲ್ ನಲ್ಲಿ ಸಿ‌.ಸಿ.ಸಿ ನ್ಯಾಶ್,ಸಿ.ಸಿ.ಸಿ ಅಗ್ರಹಾರ ತಂಡವನ್ನು ಸೋಲಿಸಿ ಪ್ರಥಮ ಬಹುಮಾನವಾಗಿ‌ 1 ಲಕ್ಷ ನಗದು ಹಾಗೂ ದ್ವಿತೀಯ ಸ್ಥಾನಿ ಸಿ.ಸಿ.ಸಿ ಅಗ್ರಹಾರ 50,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದರು.

ವೈಯಕ್ತಿಕ ಪ್ರಶಸ್ತಿಗಳಾದ ಬೆಸ್ಟ್ ಬ್ಯಾಟ್ಸ್‌ಮನ್ ಅಕ್ಷಯ್ ನ್ಯಾಶ್, ಬೆಸ್ಟ್ ಬೌಲರ್ ಪುರುಷಿ, ಮೌಲ್ಯಯುತ ಆಟಗಾರ ಕಿರಣ್ ಸಿ.ಸಿ.ಸಿ ಹಾಗು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ನವೀನ್ ಚೂ ಪಡೆದುಕೊಂಡರು.

2 ದಿನಗಳ ಕ್ರಿಕೆಟ್ ಪಂದ್ಯಾಕೂಟವನ್ನು ಶನಿವಾರ ಬೆಳಗ್ಗೆ ಉದ್ಘಾಟಿಸಿದ್ದ ಹೊಸಕೋಟೆಯ ಯುವ ಮುಖಂಡ ಶರತ್ ಬಚ್ಚೇ ಗೌಡ, ಹೊಸಕೋಟೆ ತಾಲ್ಲೂಕಿನ ರಾಜಕೀಯ ಧುರೀಣರೊಂದಿಗೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.

ವೀಕ್ಷಕ ವಿವರಣೆಕಾರರಾಗಿ ಶಿವನಾರಾಯಣ ಐತಾಳ್ ಕೋಟ ಹಾಗೂ ಪ್ರಶಾಂತ್ ಅಂಬಲಪಾಡಿ ಭಾಗವಹಿಸಿದ್ದು, M.Sports ಈ ಪಂದ್ಯಾಕೂಟದ ನೇರ ಪ್ರಸಾರವನ್ನು ಬಿತ್ತರಿಸಿತ್ತು.

-ಆರ್.ಕೆ‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

one × one =