Categories
ಕ್ರಿಕೆಟ್

ಚಕ್ರವರ್ತಿ ತುಮಕೂರು ರಾಷ್ಟ್ರೀಯ ಮಟ್ಟದ ಪಂದ್ಯಾಟ-ಫ್ರೆಂಡ್ಸ್ ಮತ್ತು ಮೈಟಿ ಸೆಮಿಫೈನಲ್ ಎಂಟ್ರಿ

ತುಮಕೂರು-ಚಕ್ರವರ್ತಿ ಗೆಳೆಯರ ಬಳಗ ತುಮಕೂರು ಇವರ ಆಶ್ರಯದಲ್ಲಿ,ತುಮಕೂರಿನ ಕ್ರೀಡಾಪಟು ಹಾಗೂ ಕ್ರೀಡಾ ಸಂಘಟಕ ಪ್ರಕಾಶ್ ಟಿ.ಸಿ ಸಾರಥ್ಯದಲ್ಲಿ,ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರ ಸವಿನೆನಪಿಗಾಗಿ,ತುಮಕೂರಿನಲ್ಲಿ ಆಯೋಜಿಸಲಾದ 5 ನೇ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ಫ್ರೆಂಡ್ಸ್ ಬೆಂಗಳೂರು ಮತ್ತು ಮೈಟಿ ಸ್ಮೈಲ್ ಸೆಮಿಫೈನಲ್ ಪ್ರವೇಶಿಸಿದೆ.
32 ತಂಡಗಳು ಭಾಗವಹಿಸಿದ ಈ ಪಂದ್ಯಾಟದ ಮೊದಲ ಕ್ವಾರ್ಟರ್ ಫೈನಲ್ ನಲ್ಲಿ ಫ್ರೆಂಡ್ಸ್ ಬೆಂಗಳೂರು ರಾಕರ್ಸ್ ನವೀನ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಜಾನ್ಸನ್ ಕುಂದಾಪುರ ತಂಡವನ್ನು ಸೋಲಿಸಿ ಮೊದಲ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿತು.
ದ್ವಿತೀಯ ಕ್ವಾರ್ಟರ್ ಫೈನಲ್ ನಲ್ಲಿ ಮೈಟಿ ಸ್ಮೈಲ್ ನ ಆರಂಭಿಕ‌ ಆಟಗಾರ ಮುರಳಿ ಬ್ಯಾಟಿಂಗ್ ಅಬ್ಬರದ ಮುಂದೆ ಎದುರಾಳಿ ರಾಕ್ 2 ತುಮಕೂರಿನ ತಂಡ ಗೆಲುವಿನ ಕನಸು ನುಚ್ಚು ನೂರಾಯಿತು.
ಎರಡನೇ ತಂಡವಾಗಿ ಮೈಟಿ ಸ್ಮೈಲ್ ಸೆಮಿಫೈನಲ್ ಪ್ರವೇಶಿಸಿದೆ.
ಮೂರನೇ ಕ್ವಾರ್ಟರ್ ಫೈನಲ್ ಇದೀಗ ಚಕ್ರವರ್ತಿ ತುಮಕೂರು ಮತ್ತು ಪವರ್ ಆಫ್ ಯೂತ್ ನಡುವೆ ಹಾಗೂ ಅಂತಿಮ‌ ಕ್ವಾರ್ಟರ್ ಫೈನಲ್ ನಲ್ಲಿ ನ್ಯಾಶ್ ಬೆಂಗಳೂರು- ಹಾಸನಾಂಬಾ ತಂಡವನ್ನು ಎದುರಿಸಲಿದೆ.
ಈ ರಾಷ್ಟ್ರೀಯ ಮಟ್ಟದ ಪಂದ್ಯಾಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 3 ಲಕ್ಷ ನಗದು ಹಾಗೂ ದ್ವಿತೀಯ ಸ್ಥಾನಿ 1.5 ಲಕ್ಷ ನಗದು ಬಹುಮಾನ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

three × five =