ಕ್ರಿಕೆಟ್ಚೆಸ್, ಕ್ರಿಕೆಟ್ ಮತ್ತು ಅನಿಶ್ಚಿತತೆ!

ಚೆಸ್, ಕ್ರಿಕೆಟ್ ಮತ್ತು ಅನಿಶ್ಚಿತತೆ!

-

- Advertisment -spot_img
ಕ್ರಿಕೆಟ್ ಮತ್ತು ಚೆಸ್ ಆಟದಲ್ಲಿ ಪ್ರೆಡಿಕ್ಷನ್ ನಡೆಯುವುದಿಲ್ಲ! ಬದುಕಿನಲ್ಲಿ ಕೂಡ! 
ಎಷ್ಟೋ ಬಾರಿ ನಮ್ಮ ತಪ್ಪು ನಡೆಗಳೆ ನಮ್ಮನ್ನು ಗೆಲ್ಲಿಸುತ್ತವೆ! 
———————————————————
ಚೆಸ್ ಮತ್ತು ಕ್ರಿಕೆಟ್ ಆಟಗಳು ಬಹಳಷ್ಟು ವಿಶೇಷತೆಯನ್ನು ಪಡೆದವುಗಳು. ಅದಕ್ಕೆ ಕಾರಣ ಏನೆಂದರೆ ಆ ಆಟಗಳ ಒಳಗೆ ಅಡಗಿರುವ ಅನಿಶ್ಚಿತತೆ ಮತ್ತು ವಿಕಲ್ಪಗಳು. ಅವು ನಮ್ಮ ಬದುಕಿನ ಪ್ರತಿಫಲನದ ಕನ್ನಡಿಗಳು ಕೂಡ ಆಗಿವೆ!
ಜಗತ್ತಿನ ಬಲಾಢ್ಯ ಕ್ರಿಕೆಟ್ ತಂಡವಾದ ಭಾರತವನ್ನು ಕ್ರಿಕೆಟ್ ಶಿಶುಗಳಾದ ಬಾಂಗ್ಲಾ ದೇಶವು  ಸೋಲಿಸಿದ ಉದಾಹರಣೆ ಇಲ್ಲವೇ?
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ, ಅದು ಹೀಗೆ  ಆಗಬೇಕು, ಹಾಗೆಯೇ ಆಗಬೇಕು ಎಂದು! ಆದರೆ ಅದು ಹಾಗೆ ಆಗುವುದಿಲ್ಲ! ಹೀಗೆ ಕೂಡ ಆಗಲೇ ಬೇಕು ಅಂದಿಲ್ಲ! ಯಾಕೆಂದರೆ ವಿಧಿಯ ನಿರ್ಧಾರ ಬೇರೆಯೇ ಇರುತ್ತದೆ!
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ ಅವನು/ ಅವಳು ಹೀಗೇ ಇರಬೇಕು, ಹಾಗೆಯೇ ಇರಬೇಕು ಎಂದು!  ಅವನು/ ಅವಳು ನೀವು ಅಂದುಕೊಂಡ ಹಾಗೆಯೇ  ಯಾಕಿರಬೇಕು? ಅವನು ಅವನೇ! ಅವಳು ಅವಳೇ!
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ ಅದೊಂದು
ಘಟನೆಯು ನನ್ನ ಜೀವನದಲ್ಲಿ ನಡೆಯದೇ ಹೋಗಿದ್ದರೆ ಚೆನ್ನಾಗಿತ್ತು ಎಂದು! ಆದ್ರೆ ಸ್ವಲ್ಪ ಕೂತು ಯೋಚನೇ ಮಾಡಿ. ಅದೇ ಘಟನೆ ನಿಮಗೆ ಲಾಂಗ್ ರೆಂಜಲ್ಲಿ ಅದ್ಭುತ ಫಲಿತಾಂಶ ಕೊಟ್ಟಿರುತ್ತದೆ!
ಎಷ್ಟೋ ಬಾರಿ ಅಂದುಕೊಳ್ಳುತ್ತೇವೆ, ಅದೊಂದು ಸೋಲು ನನಗೆ  ಬಾರದೆ ಹೋಗಿದ್ದರೆ ಚೆನ್ನಾಗಿತ್ತು ಎಂದು! ಜಗತ್ತಿನ ಯಾವುದೇ ಆಟದಲ್ಲಿ ಎಲ್ಲರೂ, ಎಲ್ಲಾ ಕಾಲಕ್ಕೂ ಗೆಲ್ಲಲು ಸಾಧ್ಯವಿದೆಯೇ? ಸೋಲು ನಮಗೆ ಒಂದಲ್ಲ ಒಂದು ಗಟ್ಟಿ ಅನುಭವ ಕೊಟ್ಟಿರುತ್ತದೆ!
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ, ಅದೊಂದು ನಿರ್ಧಾರ ತಪ್ಪಾಗಿ ಹೋಯಿತಲ್ಲ ಎಂದು! ಆದ್ರೆ ನಿರ್ಧಾರ ಸರಿಯಾ ತಪ್ಪಾ ಎಂದು ಗೊತ್ತಾಗುವುದು ಫಲಿತಾಂಶ ಬಂದ ನಂತರ ಅಲ್ವಾ!
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ ಅವನನ್ನು ಅಥವಾ ಅವಳನ್ನು ನಂಬಿ ಮೋಸಹೋದೆ ಎಂದು! ಆದ್ರೆ ನೀವು ಸೋಲಲು ಕಾರಣ ನೀವು ಅಲ್ಲ. ತಪ್ಪು ವ್ಯಕ್ತಿಗಳ ಮೇಲೆ ನೀವು ಇಟ್ಟ ಅತಿಯಾದ ನಂಬಿಕೆ! ಇದು ಗೊತ್ತಾದರೆ ನೀವು ಮುಂದೆ ಜಾಗ್ರತೆ ವಹಿಸುವುದಿಲ್ಲವೆ?
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ ನನ್ನನ್ನು ಯಾರೂ ಅರ್ಥ ಮಾಡಿಕೊಳ್ಳುವುದಿಲ್ಲ ಎಂದು! ಆದ್ರೆ ನಮ್ಮನ್ನು ತುಂಬಾ ಪ್ರೀತಿ ಮಾಡುವವರು ಮತ್ತು ಅರ್ಥ ಮಾಡಿಕೊಳ್ಳುವವರು ನಮ್ಮ ಪಕ್ಕದಲ್ಲಿಯೇ ಇರುತ್ತಾರೆ! ನಮ್ಮನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಬಯಸುವ ನಾವು ಉಳಿದವರನ್ನು ಎಷ್ಟು ಅರ್ಥ ಮಾಡಿಕೊಂಡಿದ್ದೇವೆ?
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ ನನ್ನ ಅದೃಷ್ಟ,  ಗ್ರಹಚಾರವೇ ಸರಿ ಇಲ್ಲ ಎಂದು! ಆದರೆ ನಮ್ಮ ಗೇಮ್ ಪ್ಲಾನ್ ಮತ್ತು ಪ್ರಯತ್ನದಲ್ಲಿ ತಪ್ಪುಗಳು ಇರುತ್ತವೆ. ಅದನ್ನು ಮೊದಲು ಸರಿ ಪಡಿಸಬೇಕು ತಾನೇ?
ಎಷ್ಟೋ ಬಾರಿ ಅಂದುಕೊಳ್ಳುತ್ತೇವೆ ಅವನು ಅಥವ ಅವಳು ನನಗೆ ಸಪೋರ್ಟ್ ಮಾಡಲಿಲ್ಲ ಎಂದು! ಆದರೆ ಯೋಚನೆ ಮಾಡಿ, ತನ್ನ ಮೇಲೆ ಭರವಸೆ ಇಡದೆಯೆ ಬೇರೆಯವರನ್ನು ನಾವು ಹೆಚ್ಚು ಅವಲಂಬನೆ ಮಾಡಿದ್ದು ತಪ್ಪಲ್ಲವೇ?
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ ವಿರಾಟ್ ಕೊಹ್ಲಿ ಹಾಗೆ ಮಾಡಿದ್ದು ತಪ್ಪು. ಹೀಗೆ ಮಾಡಬೇಕಿತ್ತು ಎಂದು!  ಆದರೆ ಗಮನಿಸಿ ಕೊಹ್ಲಿ ಆ ನಿರ್ಧಾರ  ತೆಗೆದುಕೊಂಡದ್ದು ಕ್ರಿಕೆಟ್ ಗ್ರೌಂಡಲ್ಲಿ! ಕೋಟಿ ಕೋಟಿ ಜನರ ಮುಂದೆ ಮತ್ತು ನೂರಾರು ಟಿವಿ ಕ್ಯಾಮೆರಾಗಳ ಎದುರು! ಆಗ ಅವನಿಗೆ ಗೈಡ್ ಮಾಡಲು ಅಲ್ಲಿ ಯಾರಿದ್ದರು?
ಎಷ್ಟೋ ಬಾರಿ ಅಂದುಕೊಳ್ಳುತ್ತೇವೆ ಅವಳು ಅವನನ್ನು ಯಾಕೆ ಮದುವೆ ಆದಳು? ಅವನು ಅವಳನ್ನು ಯಾಕೆ ಮದುವೆ ಆದ? ಅದು ಅವರವರ ಖಾಸಗಿ ಬದುಕು. ಪ್ರತೀ ಒಬ್ಬರ ಆದ್ಯತೆಗಳು ಬೇರೆ ಬೇರೆಯೇ ಇರುತ್ತವೆ. ಎಲ್ಲರೂ ನಮ್ಮ ಹಾಗೆ ಯಾಕೆ ಯೋಚನೆ ಮಾಡಬೇಕು? ಅವರನ್ನು ಪ್ರಶ್ನೆ ಮಾಡಲು ನಾವು ಯಾರು?
ಎಷ್ಟೋ ಬಾರಿ ಒಂದು ರಿಯಾಲಿಟಿ ಶೋ ಅಥವಾ ಸ್ಪರ್ಧೆ ಮುಗಿದಾಗ ನಾವು ಹೇಳುತ್ತೇವೆ ಏನೆಂದರೆ ತೀರ್ಪುಗಾರರು ಅನ್ಯಾಯವನ್ನು  ಮಾಡಿದರು ಎಂದು! ಆದರೆ ಅವರ ಮುಂದೆ ಹಲವು ಮಾನದಂಡ ಇರುತ್ತದೆ ಮತ್ತು ಸ್ಕೋರ್ ಶೀಟ್ ಇರುತ್ತದೆ ಎಂಬುದನ್ನು ನಾವು ಮರೆತಿರುತ್ತೇವೆ. ಒಂದು ಸ್ಪರ್ಧೆ ನಾವು ವೀಕ್ಷಕರಾಗಿ ನೋಡುವುದಕ್ಕೂ, ತೀರ್ಪುಗಾರನಾಗಿ ನೋಡುವುದಕ್ಕೂ ಅಜಗಜಾಂತರ ವ್ಯತ್ಯಾಸ ಇರುತ್ತದೆ ಎಂದು ನಮಗೆ ಅರ್ಥ ಆದರೆ ಎಷ್ಟೋ ನೋವುಗಳು ಕಡಿಮೆ ಆಗುತ್ತವೆ.
ಒಟ್ಟಿನಲ್ಲಿ ನಾನು ಹೇಳಲು ಹೊರಟದ್ದು ಏನೆಂದರೆ ನಮ್ಮ ಬದುಕು ಇದೇ ರೀತಿಯ ಅನಿಶ್ಚಿತತೆಯ ಮೂಟೆ! ಇಲ್ಲಿ ಕೆಲವು ಸಂಗತಿಗಳು ನಾವು ಪ್ರೆಡಿಕ್ಟ್  ಮಾಡಿದ ಹಾಗೆ ನಡೆಯುವುದಿಲ್ಲ. ನಡೆಯಬೇಕು ಅಂತ ಕೂಡ ಇಲ್ಲ!
ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ನೂರಾರು ಟಿವಿ
ಕ್ಯಾಮೆರಾಗಳ ಮುಂದೆ ಅಂಪಾಯರ್ ಒಂದೇ ಒಂದು ತಪ್ಪು ತೀರ್ಪನ್ನು ಕೊಟ್ಟಿರುತ್ತಾನೆ. ಆಗ ತಂಡಗಳ DRS ಆಯ್ಕೆ  ಮುಗಿದಿರುತ್ತದೆ.  ಆ ತೀರ್ಪು ಪಂದ್ಯದ ಫಲಿತಾಂಶವನ್ನು ಬದಲಾವಣೆ ಮಾಡುತ್ತದೆ. ಈ ಅನುದ್ದೇಶಿತ ತಪ್ಪುಗಳೇ ಕ್ರಿಕೆಟ್ ಆಟದ ಬ್ಯೂಟಿ ಆಗಿರುತ್ತವೆ!
That’s the BEAUTY of CRICKET! 
And that’s the BEAUTY of LIFE too!
ಕ್ರಿಕೆಟ್ ಮತ್ತು ಬದುಕು ಎರಡೂ ಅನಿಶ್ಚಿತತೆಗಳ ಮೂಟೆ ಎನ್ನುವುದೇ ಇಂದಿನ ಭರತವಾಕ್ಯ.
ಭಾರತ ಇಂದು ಪಾಕ್ ವಿರುದ್ಧ ಏಷಿಯಾ ಕಪ್ ಪಂದ್ಯವನ್ನು  ಆಡುತ್ತಿದೆ. ಅದು ಯುದ್ಧ ಅಲ್ಲ. ಅದೊಂದು ಸ್ಪರ್ಧೆ ಅಷ್ಟೇ. ಒತ್ತಡ ಮಾಡಿಕೊಳ್ಳದೆ ಪಂದ್ಯ ವೀಕ್ಷಣೆ ಮಾಡೋಣ.
ಭಾರತಕ್ಕೆ ಆಲ್ ದ ಬೆಸ್ಟ್. 

LEAVE A REPLY

Please enter your comment!
Please enter your name here

four + 12 =

Latest news

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...
- Advertisement -spot_imgspot_img

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...

Must read

- Advertisement -spot_imgspot_img

You might also likeRELATED
Recommended to you