ಕ್ರಿಕೆಟ್ಚೆಸ್ ಆಟ ಮಾನಸಿಕ,ಬೌದ್ಧಿಕ ಬೆಳವಣಿಗೆಗೆ ಸಹಕಾರಿ"-ಡಿ.ವೈ.ಎಸ್‌.ಪಿ ಶ್ರೀಕಾಂತ್

ಚೆಸ್ ಆಟ ಮಾನಸಿಕ,ಬೌದ್ಧಿಕ ಬೆಳವಣಿಗೆಗೆ ಸಹಕಾರಿ”-ಡಿ.ವೈ.ಎಸ್‌.ಪಿ ಶ್ರೀಕಾಂತ್

-

- Advertisment -spot_img
ಕುಂದಾಪುರ-ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ) ಆಶ್ರಯದಲ್ಲಿ,2 ನೇ ಆವೃತ್ತಿಯ ರಶ್ಮಿ ಶೆಟ್ಟಿ ಸ್ಮರಣಾರ್ಥ ಅಖಿಲ‌ ಭಾರತ ಫಿಡೆ ರೇಟೆಡ್ ಚೆಸ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ ಕುಂದಾಪುರದ ನಾರಾಯಣ ಗುರು ಎ‌.ಸಿ.ಹಾಲ್ ನಲ್ಲಿ ಜರುಗಿತು.
ದೀಪ ಬೆಳಗಿಸಿ ಚೆಸ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರದ ಡಿ‌.ವೈ.ಎಸ್.ಪಿ ಶ್ರೀಕಾಂತ್ ಮಾತನಾಡಿ “ಹಿರಿಯರು ಕಿರಿಯರೆಂಬ ವಯಸ್ಸಿನ ಭೇದವಿಲ್ಲದೆ ಆಡಬಹುದಾದ ಈ
ಚೆಸ್ ಆಟದಿಂದ ಮೆದುಳು ಚುರುಕು ಗೊಳ್ಳುತ್ತದೆ ಹಾಗೂ ಮಾನಸಿಕ,ಬೌದ್ಧಿಕ ಬೆಳವಣಿಗೆಗೆ ಇದು ಸಹಕಾರಿ ಎಂದರು‌‌.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕುಂದಾಪುರ ಪುರಸಭೆ ಅಧ್ಯಕ್ಷೆ ಶ್ರೀಮತಿ ವೀಣಾ ಭಾಸ್ಕರ್ ಮೆಂಡನ್ ಮಾತ‌ನಾಡಿ “ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಬಹಳಷ್ಟು ವರ್ಷಗಳಿಂದ ಹತ್ತು ಹಲವಾರು ಕ್ರೀಡಾ ಚಟುವಟಿಕೆಗಳನ್ನು ಸಂಘಟಿಸುತ್ತಾ ಬಂದಿದೆ.ಕ್ರೀಡಾಪಟುಗಳು ಇಂತಹ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಎಸ್.ಪೂಜಾರಿ,ಡಿಜಿಫ್ಲಿಕ್ ಇನ್ಷುರೆನ್ಸ್ ಕಂಪೆನಿಯ ಸಿ.ಇ.ಎ,ರಂಜನ್ ನಾಗರಕಟ್ಟೆ ಸಕ್ಸಸ್ಅಕಾಡೆಮಿಯ ಸಂಸ್ಥಾಪಕ ರಂಜನ್ ನಾಗರಕಟ್ಟೆ,ಉಡುಪಿ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾದ ಅಮಿತ್ ಕುಮಾರ್ ಶೆಟ್ಟಿ,ಚೀಫ್ ಆರ್ಬಿಟರ್ ವಸಂತ್.
ಬಿ.ಹೆಚ್ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭ ಚೆಸ್ ನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಅವನಿ‌ ಆಚಾರ್ಯ ಉಡುಪಿ,ಪ್ರಗತಿ ನಾಯಕ್ ಬ್ರಹ್ಮಾವರ ಇವರನ್ನು ಸನ್ಮಾನಿಸ
ಲಾಯಿತು.ಈ ಚೆಸ್ ಪಂದ್ಯಾಟದಲ್ಲಿ ಭಾರತದ ಒಟ್ಟು 355 ಸ್ಪರ್ಧಿಗಳು ಭಾಗವಹಿಸುತ್ತಿದ್ದು ದಾಖಲೆಯ ಪುಟಗಳನ್ನು ಸೇರಲಿದೆ.
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರೆ,ಶಿವನಾರಾಯಣ ಐತಾಳ್ ಕೋಟ ಮತ್ತು ಸೌಂದರ್ಯ ಕಾರ್ಯಕ್ರಮ ನಿರೂಪಣೆಗೈದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twenty − 9 =

Latest news

HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು

  HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು HMC ಯುನೈಟೆಡ್ ಟ್ರೋಫಿ–2026 ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಗಳ...

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಟೂರ್ನಿಯ ಇತ್ತೀಚೆಗೆ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ...

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ ಶ್ರೀ ಕೃಷ್ಣ ಕ್ಷೇತ್ರ.

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ  ಶ್ರೀ ಕೃಷ್ಣ ಕ್ಷೇತ್ರ. ಧರ್ಮ ಕ್ರೀಡೆ ಸಾಹಿತ್ಯ ಸಂಸ್ಕೃತಿಯ ಮಹಾಪೋಷಕರಾಗಿದ್ದ ಶ್ರೀಶಿರೂರುಮಠದ ಪೀಠಾಧಿಪತಿ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಸ್ಮರಣಾರ್ಥ...

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ ಅಂತರರಾಷ್ಟ್ರೀಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಮಹೋತ್ಸವವಾಗಿರುವ HMC ಯುನೈಟೆಡ್ ಟ್ರೋಫಿ–2026ಗೆ ಭರ್ಜರಿ ಚಾಲನೆ ದೊರೆತಿದ್ದು,...
- Advertisement -spot_imgspot_img

ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ

  ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ   ಕಿದಿಯೂರಿನ ಎಸ್‌ಎನ್‌ಜಿ ಸ್ಪೋರ್ಟ್ಸ್ ಕ್ಲಬ್ ತನ್ನ 12ನೇ ವಾರ್ಷಿಕೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ...

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ.

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ. HMC ಸಂಸ್ಥೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ HMC ಯುನೈಟೆಡ್ ಟ್ರೋಫಿ 2026 ಅಂತರರಾಷ್ಟ್ರೀಯ...

Must read

- Advertisement -spot_imgspot_img

You might also likeRELATED
Recommended to you