ಕ್ರಿಕೆಟ್ನ್ಯೂಜಿಲೆಂಡ್‌ಗೆ ಖಡಕ್ ಎಚ್ಚರಿಕೆ ನೀಡಿದ ಚೇತೇಶ್ವರ್ ಪೂಜಾರ...

ನ್ಯೂಜಿಲೆಂಡ್‌ಗೆ ಖಡಕ್ ಎಚ್ಚರಿಕೆ ನೀಡಿದ ಚೇತೇಶ್ವರ್ ಪೂಜಾರ…

-

- Advertisment -spot_img
ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಅಂಕಣದಲ್ಲಿ ನಡೆಯಲಿದೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ ಶಿಪ್ ನ ಫೈನಲ್ ಪಂದ್ಯ.  ಈ ಪಂದ್ಯಕ್ಕೆ ಭಾರತೀಯ ಕ್ರಿಕೆಟ್ ಮಂಡಳಿ ಈಗಾಗಲೇ 20 ಆಟಗಾರರ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಿದೆ.
ಇಪ್ಪತ್ತು ಆಟಗಾರರನ್ನೊಳಗೊಂಡ ನ್ಯೂಜಿಲೆಂಡ್ ತಂಡ ಈಗಾಗಲೇ ಇಂಗ್ಲೆಂಡ್ ಪ್ರವಾಸ ಮಾಡಿದೆ.
ಈ ನಡುವೆ ಭಾರತ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಎಂದೆ ಹೆಸರುವಾಸಿಯಾಗಿರುವ ಚೇತೇಶ್ವರ್ ಪೂಜಾರ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿ ಕುರಿತು ತಂಡದ ಪರವಾಗಿ ಬಾಯಿ ಬಿಟ್ಟಿದ್ದಾರೆ. ಕಳೆದ ಬಾರಿ ಆಸ್ಟ್ರೇಲಿಯ ವಿರುದ್ಧ ಮತ್ತು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳಲ್ಲಿ ಭಾರತ ಜಯಗಳಿಸುವುದರ ಮೂಲಕ   ತನ್ನ ಬಲಿಷ್ಠತೆಯನ್ನು ತೋರಿಸಿತ್ತು. ಈ ಎರಡೂ ಸರಣಿಗಳಲ್ಲಿ ಭಾರತದ ಪರ  ಶ್ರೇಷ್ಠ ಪ್ರದರ್ಶನವನ್ನು ನೀಡಿ ಚೇತೇಶ್ವರ ಪೂಜಾರ ಮಿಂಚಿದ್ದರು.
ಇದೀಗ ಬರಲಿರುವ ಟೆಸ್ಟ್ ಪಂದ್ಯಗಳ ಕುರಿತು ಮಾತನಾಡಿರುವ ಚೇತೇಶ್ವರ್ ಪೂಜಾರ ನ್ಯೂಜಿಲೆಂಡ್ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ‘ನಮ್ಮ ತಂಡ ತನ್ನದೇ ಆದ ಸಾಮರ್ಥ್ಯವನ್ನು ಹೊಂದಿದೆ ಟೆಸ್ಟ್‌ ಕ್ರಿಕೆಟ್‌ ನಲ್ಲಿ ಬಲಿಷ್ಟವಾಗಿದೆ, ಈ ಹಿಂದಿನ ಸರಣಿಯಲ್ಲಿ ಆಡಿದ ಆಟವನ್ನೆ  ಪ್ರದರ್ಶಿಸಿದರೆ  ಯಾವುದೇ ತಂಡದ ವಿರುದ್ಧವಾಗಲಿ ಹಾಗೂ ಯಾವುದೇ ದೇಶದಲ್ಲಾಗಲಿ ನಾವು ಗೆಲುವನ್ನು ಸಾಧಿಸುವುದು ಸುಲಭ ಎಂದು ಚೇತೇಶ್ವರ್ ಪೂಜಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಂಡದ ಪ್ರತಿಯೊಬ್ಬ ಆಟಗಾರ ಬಗ್ಗೆ ಮಾತನಾಡಿದ ಅವರು ಟೀಮ್ ಇಂಡಿಯಾ ಇತ್ತೀಚೆಗೆ ನಡೆದ ಟೆಸ್ಟ್ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿ ಜಯಗಳಿಸಿದೆ,  ತಂಡದಲ್ಲಿನ ಎಲ್ಲಾ ಆಟಗಾರರು ಉತ್ತಮ ಆಟ ಅಡುವುದರ ಜೊತೆಗೆ ಉತ್ತಮ ಅನುಭವವನ್ನು ಹೊಂದಿದ್ದಾರೆ. ಮುಂಬರುವ ದಿನಗಳಲ್ಲೂ ಸ್ಥಿರ ಪ್ರದರ್ಶನದ ಆಟ ಮುಂದುವರಿಸಿದರೆ ಎಲ್ಲಾ ಪಂದ್ಯಗಳಲ್ಲಿಯೂ ಸಹ ಗೆಲುವನ್ನು ನಾವು ಸಾಧಿಸುತ್ತೇವೆ ಎಂದು ಪೂಜಾರಾ ಹೇಳಿದ್ದಾರೆ.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

seventeen − 3 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you