10 C
London
Tuesday, April 23, 2024
Homeಕ್ರಿಕೆಟ್ಚಿಕ್ಕಮಗಳೂರು ಸೂಪರ್ ಕಿಂಗ್ಸ್ ಕೆನರಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ ಲೀಗ್ 2023 ಕ್ರಿಕೆಟ್ ಪಂದ್ಯಾವಳಿಯ...

ಚಿಕ್ಕಮಗಳೂರು ಸೂಪರ್ ಕಿಂಗ್ಸ್ ಕೆನರಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ ಲೀಗ್ 2023 ಕ್ರಿಕೆಟ್ ಪಂದ್ಯಾವಳಿಯ ಚಾಂಪಿಯನ್ಸ್

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಮಂಗಳೂರು, ಮಾ.13: ಕೆನರಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್  ಪ್ರೀಮಿಯರ್ ಲೀಗ್ 2023ರ ವಿಜೇತರಾಗಿ  ಚಿಕ್ಕಮಗಳೂರು ಸೂಪರ್ ಕಿಂಗ್ಸ್ ಹೊರಹೊಮ್ಮಿದೆ
ಕೆನರಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ (ರಿ) ಕಛೇರಿ, ಮಂಗಳೂರು ಇವರು ಶನಿವಾರ, ಮಾರ್ಚ್ 11 ಮತ್ತು ಭಾನುವಾರದಂದು ಮಂಗಳೂರಿನ ನೆಹರು ಮೈದಾನದಲ್ಲಿ ಬ್ಯಾಂಕ್ ಸಿಬ್ಬಂದಿಗಳಿಗಾಗಿ ‘CBOA ಪ್ರೀಮಿಯರ್ ಲೀಗ್ 2023’ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದರು.
ಮುಖ್ಯ ಜನರಲ್ ಮ್ಯಾನೇಜರ್ ಜಯ ಕುಮಾರ್ ಬ್ಯಾಟಿಂಗ್ ಮೂಲಕ ಪಂದ್ಯಾವಳಿಯನ್ನು ಉದ್ಘಾಟಿಸಿದರು.  ತದನಂತರ ಮಾತನಾಡಿದ ಅವರು ಈ ಟೂರ್ನಿಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಎಲ್ಲಾ ಕೆನರೈಟ್‌ಗಳಿಗೆ ಮನವಿ ಮಾಡಿದರು. ಪ್ರಾದೇಶಿಕ ವ್ಯವಸ್ಥಾಪಕ ಅಮೃತ್ ಮತ್ತು ವಿಭಾಗೀಯ ವ್ಯವಸ್ಥಾಪಕ ಗುರುದತ್ತ  ಬಾಳಿಗಾ ಹಾಗೂ ಇತರೆ ನೌಕರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮಡಿಕೇರಿ, ಹಾಸನ ,ಚಿಕ್ಕ ಮಗಳೂರು, ಪುತ್ತೂರು ,ಮಂಗಳೂರು ಮುಂತಾದ ಕಡೆಗಳಿಂದ ಸುಮಾರು 14 ತಂಡಗಳು ಭಾಗವಹಿಸಿದ್ದವು.
ಕೊನೆಯಲ್ಲಿ ಚಿಕ್ಕಮಗಳೂರು ಸೂಪರ್ ಕಿಂಗ್ಸ್ CBOA ಪ್ರೀಮಿಯರ್ ಲೀಗ್ 2023 ರ ವಿಜೇತರಾಗಿ ಹೊರಹೊಮ್ಮಿತು ಮತ್ತು ಪುತ್ತೂರು ಪರ್ಲ್ಸ್ ರನ್ನರ್ ಅಪ್ ಆಯಿತು.
ಸಮಾರೋಪ ಸಮಾರಂಭದಲ್ಲಿ, ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್  ವಿಜೇತರನ್ನು ಅಭಿನಂದಿಸಿದರು.   ಕೆನರಾ  ಬ್ಯಾಂಕ್ ನ ಹಿರಿಯ ಅಧಿಕಾರಿಗಳು ವಿಜೇತರಿಗೆ ಟ್ರೋಫಿ ಗಳನ್ನು ಹಂಚಿದರು.
 ರಮೇಶ್ ನಾಯ್ಕ್ , ಇನ್ ಚಾರ್ಜ್ ಆಫ್ ಕೆನರಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್   (ರಿ)   ಮಂಗಳೂರು  ಇವರು  ಹಾಗೂ ಇವರ ಸಂಗಡಿಗರು ಪಂದ್ಯಾಕೂಟವನ್ನು ಅಚ್ಚುಕಟ್ಟಾಗಿ ನೆರವೇರಿಸಿದರು.
ಬರಹಗಾರರು
ಸುರೇಶ್ ಭಟ್, ಮೂಲ್ಕಿ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

19 − 12 =