10.1 C
London
Tuesday, April 23, 2024
Homeಸ್ಪೋರ್ಟ್ಸ್ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪರವಾಗಿ ಎರಡನೆ ಪದಕ ಗೆದ್ದು ಇಂದು ಉಡುಪಿಗೆ ಆಗಮಿಸಿದ...

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪರವಾಗಿ ಎರಡನೆ ಪದಕ ಗೆದ್ದು ಇಂದು ಉಡುಪಿಗೆ ಆಗಮಿಸಿದ ಗುರುರಾಜ್ ಪೂಜಾರಿ ಅವರಿಗೆ ಜಿಲ್ಲಾಡಳಿತದಿಂದ ಅಭೂತಪೂರ್ವ ಸ್ವಾಗತ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಇಂಗ್ಲೆಂಡಿನ ಬರ್ಮಿಂಗ್ಹ್ಯಾಮ್‌ ನಲ್ಲಿ ನೆಡೆಯುತ್ತಿರುವ – 2022 ರ ಕಾಮನ್ ವೆಲ್ತ್ ಗೇಮ್ಸ್ ನ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಉಡುಪಿಗೆ ಇಂದು ಆಗಮಿಸಿದ ಗುರುರಾಜ್ ಪೂಜಾರಿ ಅವರಿಗೆ ಜಿಲ್ಲಾಡಳಿತದಿಂದ ಸ್ವಾಗತಿಸಿ ಗೌರವಿಸಲಾಯಿತು
 ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಗೆದ್ದಿರುವ ಕುಂದಾಪುರದ ಗುರುರಾಜ್ ಪೂಜಾರಿ ಅವರು ಇಂದು ಉಡುಪಿಗೆ ಆಗಮಿಸಿದ್ದರು ಜಿಲ್ಲಾಡಳಿತ ವತಿಯಿಂದ ಅದ್ದೂರಿ ಸ್ವಾಗತ ಕೋರಲು
ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗಿತ್ತು ಕಾರ್ಯಕ್ರಮದ ನಿಗದಿ ಯಂತೆ  ಆಗಮಿಸಿದ ಗುರುರಾಜ್ ಪೂಜಾರಿ ಅವರನ್ನು ಜಿಲ್ಲಾಧಿಕಾರಿ ಕೂರ್ಮರಾವ್ ಎಮ್ ಅವರು ಜಿಲ್ಲಾಡಳಿತದ ಪರವಾಗಿ ಅಭಿನಂಧಿಸಿದರು.
ಈ ವೇಳೆ ಮಾತನಾಡಿದ ಗುರುರಾಜ್ ಪೂಜಾರಿ ಅವರು ಯಾವುದೇ ಕ್ರೀಡೆಯಾದರೂ ಪರಿಶ್ರಮ ಮುಖ್ಯ ಕಠಿಣ ಅಭ್ಯಾಸದೊಂದಿಗೆ ನಿರ್ದಿಷ್ಟ ಗುರಿ ಇದ್ದಲ್ಲಿ ಯಶಸ್ಸು ಖಂಡಿತ. ಯಾವ ಕ್ರೀಡೆಯಲ್ಲಿ ಯಾರಿಗೆ ಇಷ್ಟ ಇದ್ದರೂ ಅದರಲ್ಲಿ ಕಠಿಣ ಅಭ್ಯಾಸ ಮಾಡಿದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯವಿದೆ. ನಾನು ಈ ಕ್ರೀಡೆಯಲ್ಲಿ ಭಾಗವಹಿಸುವ ಕೆಲವು ದಿನಗಳ ಹಿಂದೆ ನನ್ನ ಆರೋಗ್ಯದಲ್ಲಿ ಏರು ಪೆರಾಗಿತ್ತು ದೇವರ ದಯೆ ಬೇಗ ಗುಣಮುಖನಾಗಿ ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಂಚಿನ ಪದಕವನ್ನು ಗೆಲ್ಲುವಲ್ಲಿ ಸಫಲನಾದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಶ್ರಮ ಪಟ್ಟು ದೇಶಕ್ಕಾಗಿ ಚಿನ್ನದ ಪದಕ ಗೆಲ್ಲಲು ಶ್ರಮಿಸುತ್ತೇನೆ.
ಈ ಬಾರಿಯ ಕಾಮನ್ ವೆಲ್ತ್ ನಲ್ಲಿ ಭಾರತದ ಕ್ರೀಡಾಳುಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ ಕ್ರೀಡಾಪಟುಗಳಿಗೆ ತೃಪ್ತಿತಂದಿದೆ ನನ್ನ ಪದಕವನ್ನು ನನ್ನ ಪತ್ನಿಗೆ ಸಮರ್ಪಿಸಿದ್ದೇನೆ ಎಂದರು.
ನನ್ನನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಆಗಮಿಸಿದ ರಾಜ್ಯ ಸಭಾ ಸದಸ್ಯರು ಧರ್ಮಸ್ಥಳದ ಧರ್ಮಾಧಿಕಾರಿಗಳೂ ಆದ ಡಾ. ವೀರೇಂದ್ರ ಹೆಗ್ಗಡೆ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಗುರುರಾಜ್ ಪೂಜಾರಿ ಧನ್ಯವಾದ ಸಲ್ಲಿಸಿದರು.
ಕಾಮನ್ ವೆಲ್ತ್ ಗೇಮ್ಸ್-2022ರಲ್ಲಿ ಭಾರತೀಯ ವೇಟ್ ಲಿಫ್ಟರ್‌ಗಳ ತಂಡ ಪಾಲ್ಗೊಂಡಿದ್ದು, ಗುರುರಾಜ್ ಕಂಚು ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಗುರುರಾಜ್ ಸತತ ಎರಡನೇ ಬಾರಿಗೆ ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಪಾಲ್ಗೊಂಡಿದ್ದು, ಕಳೆದ ಬಾರಿ ಪುರುಷರ 56 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ ಗುರುರಾಜ್ ಒಟ್ಟು 249 ಕೆಜಿ(111+138) ಭಾರ ಎತ್ತಿ ಬೆಳ್ಳಿಯ ಪದಕ ಗೆದ್ದಿದ್ದಲ್ಲದೆ, ತನ್ನ ವೈಯಕ್ತಿಕ ಶ್ರೇಷ್ಠ ನಿರ್ವಹಣೆ ಸಮಗಟ್ಟಿದರು. ಈ ಬಾರಿ 61 ಕೆಜಿ ವಿಭಾಗದಲ್ಲಿ ಗುರುರಾಜ್ ಸ್ಪರ್ಧಿಸಿದ್ದು, ಕಂಚಿನ ಪದಕ ಒಲಿಸಿಕೊಳ್ಳುವ ಮೂಲಕ ಎರಡನೇ ಬಾರಿ ದೇಶಕ್ಕಾಗಿ ಪದಕ ಗೆದ್ದು ತಂದಿದ್ದಾರೆ
 ನನಗೆ ಈ ಪದಕ ಗೆಲ್ಲಲು ಸ್ಫೂರ್ತಿಯಾಗಿ ನಿಂತ ದೇಶದ ಕರ್ನಾಟಕ ರಾಜ್ಯದ ಮತ್ತು ಉಡುಪಿ ಜಿಲ್ಲೆಯ ಹಾಗೂ ತನ್ನ ಜನ್ಮ ನೆಲ ಕುಂದಾಪುರದ  ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ
ಸ್ಪೋರ್ಟ್ಸ್ ಕನ್ನಡ ವೆಬ್ ವತಿಯಿಂದಲು ಕಂಚಿನ ಪದಕ ಗೆದ್ದು ತಂದ ಕುಂದಾಪುರದ ಕುವರ ಗುರುರಾಜ್ ಪೂಜಾರಿ ಅವರಿಗೆ ಶುಭಾಶಯಗಳು ನಿಮ್ಮ ಮುಂದಿನ ಕ್ರೀಡಾ ಜೀವನ ಯಶಸ್ಸಿನ ಹಾದಿಯಲ್ಲಿ ಸಾಗಲಿ. ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದ ನೀವು ಚಿನ್ನಕ್ಕೆ ಕೊರಳೊಡ್ಡುವಂತಾಗಲಿ……
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

Latest stories

LEAVE A REPLY

Please enter your comment!
Please enter your name here

nine + 1 =