ಸ್ಪೋರ್ಟ್ಸ್ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಪಿವಿ ಸಿಂಧು ಅವರ ಅದ್ಭುತ ಆಟವನ್ನು ನೋಡಿದ...

ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಪಿವಿ ಸಿಂಧು ಅವರ ಅದ್ಭುತ ಆಟವನ್ನು ನೋಡಿದ ಆಸ್ಟ್ರೇಲಿಯಾದ ಹೆಸರಾಂತ ಕ್ರಿಕೆಟಿಗ ಡೇವಿಡ್ ವಾರ್ನರ್‌ ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್ ನಲ್ಲಿ ಸಿಂಧು ಅವರ ಫೋಟೊವನ್ನು ಹಾಕಿ ಶುಭಾಶಯ ಕೋರಿದ್ದಾರೆ…!!

-

- Advertisment -spot_img
ಕಾಮನ್​ವೆಲ್ತ್​ನಲ್ಲಿ ಚಿನ್ನದ ಪದಕ ಸ್ವೀಕರಿಸಿದ ಸಿಂಧು ಅವರ ಫೋಟೋವನ್ನು ವಾರ್ನರ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತು ಅದರ ಅಡಿಯಲ್ಲಿ ಶೀರ್ಷಿಕೆಯನ್ನು ನೀಡಿ ಸಿಂಧುವನ್ನು ಹೊಗಳಿದ್ದಾರೆ.
ಆಸ್ಟ್ರೇಲಿಯಾದ ಡ್ಯಾಶಿಂಗ್ ಓಪನರ್ ಡೇವಿಡ್ ವಾರ್ನರ್ (David Warner) ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯ ತುಂಬಾ ಸಕ್ರಿಯರಾಗಿದ್ದಾರೆ. ಅದರಲ್ಲೂ ಭಾರತೀಯರೆಂದರೆ ವಾರ್ನರ್ ಅಚ್ಚುಮೆಚ್ಚು ಈ ಆಭಿಮಾನದಿಂದಲೆ ಅವರು ತಮ್ಮ Instagram ಖಾತೆಯಲ್ಲಿ ವೀಡಿಯೊಗಳು ಮತ್ತು ಟ್ವೀಟ್‌ಗಳ ಮೂಲಕ ಮೈದಾನದ ಹೊರಗೆ ಅಭಿಮಾನಿಗಳನ್ನು ರಂಜಿಸುತ್ತಿತ್ತಾರೆ. ವಾರ್ನರ್ ಆಸ್ಟ್ರೇಲಿಯಾದಲ್ಲಿ ಮಾತ್ರವಲ್ಲದೆ ಕ್ರಿಕೆಟ್ ಆಡುವ ಪ್ರಪಂಚದ ಇತರ ದೇಶಗಳಲ್ಲಿಯೂ ಅಭಿಮಾನಿಗಳ ಬಳಗವನ್ನು  ಹೊಂದಿದ್ದಾರೆ. ಐಪಿಎಲ್‌ನಿಂದಾಗಿ ವಾರ್ನರ್‌ಗೆ ಭಾರತದಲ್ಲೂ ಲಕ್ಷಾಂತರ ಮಂದಿ ಅಭಿಮಾನಿಗಳನ್ನು ಹೊಂದಿದ್ದಾರೆ. ಇತ್ತೀಚೆಗೆ ಮತ್ತೆ ವಾರ್ನರ್ ತಮ್ಮ ಪೋಸ್ಟ್ ಒಂದರಿಂದ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹೌದು, ಈ ಬಾರಿ ಅವರ ಪೋಸ್ಟ್​ ಭಾತೀಯರ ಮೆಚ್ಚುಗೆಗೆ ಪಾತ್ರವಾಗಿದೆ.  ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಒಲಿಂಪಿಕ್ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು (PV Sindhu) ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ  ಚಿನ್ನದ ಪದಕವನ್ನೂ ಗೆದ್ದಿದ್ದಾರೆ. ಪದಕ ಸ್ವೀಕರಿಸಿದ ಸಿಂಧು ಅವರ ಫೋಟೋವನ್ನು ವಾರ್ನರ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತು ಅದರ ಅಡಿಯಲ್ಲಿ ಶೀರ್ಷಿಕೆಯನ್ನು ನೀಡಿ ಸಿಂಧುವನ್ನು ಹೊಗಳಿದ್ದಾರೆ.
ಪಿ.ವಿ ಸಿಂಧು ಫೋಟೋ ಹಂಚಿಕೊಂಡ ವಾರ್ನರ್​:
 ಇತ್ತೀಚೆಗೆ ಭಾರತೀಯ ಹಾಡುಗಳಿಗೆ, ರೀಲ್ಸ್ ಗಳನ್ನು ಮಾಡುವ ಮೂಲಕ ಲಕ್ಷಾಂತರ ಅಭಿಮಾನಿಗಳ ಜೋತೆಗೆ ಸಖತ್ ಚರ್ಚೆಯಲ್ಲಿರುತ್ತಿದ್ದು ಆಸೀಸ್​ನ ಡೇವಿಡ್​ ವಾರ್ನರ್​ ಇದೀಗ ಮತ್ತೊಂದು ಪೋಸ್ಟ್ ಮಾಡುವ ಮೂಲಕ ಭಾರತೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ಈ ಬಾರಿ  ಕಾಮನ್​ವೆಲ್ತ್ 2022ರಲ್ಲಿ ಚಿನ್ನ ಗೆದ್ದ ಭಾರತೀಯ ಆಟಗಾರ್ತಿಯಾದ ಪಿ.ವಿ ಸಿಂಧು ಅವರ ಫೋಟೋವನ್ನು ಹಂಚಿಕೊಂಡು ಶುಭಾಷಯವನ್ನು ಕೋರಿದ್ದಾರೆ. ಅಲ್ಲದೇ ‘ವೆಲ್​ ಡನ್​ ಪಿವಿ ಸಿಂಧು. ಅದ್ಭುತವಾದ ಪ್ರದರ್ಶನ‘ ಎಂದು ಬರೆದುಕೊಂಡಿದ್ದಾರೆ
ವಾರ್ನರ್ ಅವರ ಈ ಇನ್‌ಸ್ಟಾಗ್ರಾಮ್ ಪೋಸ್ಟ್ ಇದುವರೆಗೆ ಐದೂವರೆ ಲಕ್ಷ ಲೈಕ್‌ಗಳನ್ನು ಪಡೆದಿದೆ. ಅಷ್ಟೇ ಅಲ್ಲ, ಡೇವಿಡ್ ಪತ್ನಿ ಕ್ಯಾಂಡಿಸ್ ವಾರ್ನನ್ ಕೂಡ ಕಮೆಂಟ್ ಮಾಡಿ ‘ವೆರಿ ನೈಸ್’ ಎಂದಿದ್ದಾರೆ.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

five × four =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you