ಸ್ಪೋರ್ಟ್ಸ್ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಪಿವಿ ಸಿಂಧು ಅವರ ಅದ್ಭುತ ಆಟವನ್ನು ನೋಡಿದ...

ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಪಿವಿ ಸಿಂಧು ಅವರ ಅದ್ಭುತ ಆಟವನ್ನು ನೋಡಿದ ಆಸ್ಟ್ರೇಲಿಯಾದ ಹೆಸರಾಂತ ಕ್ರಿಕೆಟಿಗ ಡೇವಿಡ್ ವಾರ್ನರ್‌ ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್ ನಲ್ಲಿ ಸಿಂಧು ಅವರ ಫೋಟೊವನ್ನು ಹಾಕಿ ಶುಭಾಶಯ ಕೋರಿದ್ದಾರೆ…!!

-

- Advertisment -spot_img
ಕಾಮನ್​ವೆಲ್ತ್​ನಲ್ಲಿ ಚಿನ್ನದ ಪದಕ ಸ್ವೀಕರಿಸಿದ ಸಿಂಧು ಅವರ ಫೋಟೋವನ್ನು ವಾರ್ನರ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತು ಅದರ ಅಡಿಯಲ್ಲಿ ಶೀರ್ಷಿಕೆಯನ್ನು ನೀಡಿ ಸಿಂಧುವನ್ನು ಹೊಗಳಿದ್ದಾರೆ.
ಆಸ್ಟ್ರೇಲಿಯಾದ ಡ್ಯಾಶಿಂಗ್ ಓಪನರ್ ಡೇವಿಡ್ ವಾರ್ನರ್ (David Warner) ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯ ತುಂಬಾ ಸಕ್ರಿಯರಾಗಿದ್ದಾರೆ. ಅದರಲ್ಲೂ ಭಾರತೀಯರೆಂದರೆ ವಾರ್ನರ್ ಅಚ್ಚುಮೆಚ್ಚು ಈ ಆಭಿಮಾನದಿಂದಲೆ ಅವರು ತಮ್ಮ Instagram ಖಾತೆಯಲ್ಲಿ ವೀಡಿಯೊಗಳು ಮತ್ತು ಟ್ವೀಟ್‌ಗಳ ಮೂಲಕ ಮೈದಾನದ ಹೊರಗೆ ಅಭಿಮಾನಿಗಳನ್ನು ರಂಜಿಸುತ್ತಿತ್ತಾರೆ. ವಾರ್ನರ್ ಆಸ್ಟ್ರೇಲಿಯಾದಲ್ಲಿ ಮಾತ್ರವಲ್ಲದೆ ಕ್ರಿಕೆಟ್ ಆಡುವ ಪ್ರಪಂಚದ ಇತರ ದೇಶಗಳಲ್ಲಿಯೂ ಅಭಿಮಾನಿಗಳ ಬಳಗವನ್ನು  ಹೊಂದಿದ್ದಾರೆ. ಐಪಿಎಲ್‌ನಿಂದಾಗಿ ವಾರ್ನರ್‌ಗೆ ಭಾರತದಲ್ಲೂ ಲಕ್ಷಾಂತರ ಮಂದಿ ಅಭಿಮಾನಿಗಳನ್ನು ಹೊಂದಿದ್ದಾರೆ. ಇತ್ತೀಚೆಗೆ ಮತ್ತೆ ವಾರ್ನರ್ ತಮ್ಮ ಪೋಸ್ಟ್ ಒಂದರಿಂದ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹೌದು, ಈ ಬಾರಿ ಅವರ ಪೋಸ್ಟ್​ ಭಾತೀಯರ ಮೆಚ್ಚುಗೆಗೆ ಪಾತ್ರವಾಗಿದೆ.  ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಒಲಿಂಪಿಕ್ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು (PV Sindhu) ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ  ಚಿನ್ನದ ಪದಕವನ್ನೂ ಗೆದ್ದಿದ್ದಾರೆ. ಪದಕ ಸ್ವೀಕರಿಸಿದ ಸಿಂಧು ಅವರ ಫೋಟೋವನ್ನು ವಾರ್ನರ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತು ಅದರ ಅಡಿಯಲ್ಲಿ ಶೀರ್ಷಿಕೆಯನ್ನು ನೀಡಿ ಸಿಂಧುವನ್ನು ಹೊಗಳಿದ್ದಾರೆ.
ಪಿ.ವಿ ಸಿಂಧು ಫೋಟೋ ಹಂಚಿಕೊಂಡ ವಾರ್ನರ್​:
 ಇತ್ತೀಚೆಗೆ ಭಾರತೀಯ ಹಾಡುಗಳಿಗೆ, ರೀಲ್ಸ್ ಗಳನ್ನು ಮಾಡುವ ಮೂಲಕ ಲಕ್ಷಾಂತರ ಅಭಿಮಾನಿಗಳ ಜೋತೆಗೆ ಸಖತ್ ಚರ್ಚೆಯಲ್ಲಿರುತ್ತಿದ್ದು ಆಸೀಸ್​ನ ಡೇವಿಡ್​ ವಾರ್ನರ್​ ಇದೀಗ ಮತ್ತೊಂದು ಪೋಸ್ಟ್ ಮಾಡುವ ಮೂಲಕ ಭಾರತೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ಈ ಬಾರಿ  ಕಾಮನ್​ವೆಲ್ತ್ 2022ರಲ್ಲಿ ಚಿನ್ನ ಗೆದ್ದ ಭಾರತೀಯ ಆಟಗಾರ್ತಿಯಾದ ಪಿ.ವಿ ಸಿಂಧು ಅವರ ಫೋಟೋವನ್ನು ಹಂಚಿಕೊಂಡು ಶುಭಾಷಯವನ್ನು ಕೋರಿದ್ದಾರೆ. ಅಲ್ಲದೇ ‘ವೆಲ್​ ಡನ್​ ಪಿವಿ ಸಿಂಧು. ಅದ್ಭುತವಾದ ಪ್ರದರ್ಶನ‘ ಎಂದು ಬರೆದುಕೊಂಡಿದ್ದಾರೆ
ವಾರ್ನರ್ ಅವರ ಈ ಇನ್‌ಸ್ಟಾಗ್ರಾಮ್ ಪೋಸ್ಟ್ ಇದುವರೆಗೆ ಐದೂವರೆ ಲಕ್ಷ ಲೈಕ್‌ಗಳನ್ನು ಪಡೆದಿದೆ. ಅಷ್ಟೇ ಅಲ್ಲ, ಡೇವಿಡ್ ಪತ್ನಿ ಕ್ಯಾಂಡಿಸ್ ವಾರ್ನನ್ ಕೂಡ ಕಮೆಂಟ್ ಮಾಡಿ ‘ವೆರಿ ನೈಸ್’ ಎಂದಿದ್ದಾರೆ.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

1 × four =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you