ಸ್ಪೋರ್ಟ್ಸ್ಕೊರಳಲ್ಲಿ ಚಿನ್ನದ ಪದಕ ಇದ್ದರೂ ಆಕೆಯ ಕಣ್ಣು ಯಾರನ್ನೋ ಹುಡುಕುತ್ತಿತ್ತು!

ಕೊರಳಲ್ಲಿ ಚಿನ್ನದ ಪದಕ ಇದ್ದರೂ ಆಕೆಯ ಕಣ್ಣು ಯಾರನ್ನೋ ಹುಡುಕುತ್ತಿತ್ತು!

-

- Advertisment -spot_img
ಮೊನ್ನೆ ಆದಿತ್ಯವಾರದಂದು ಲಂಡನ್ನಿನ ಬರ್ಮಿಂಗ್ಹ್ಯಾಮ್  ನಗರದಲ್ಲಿ ನಡೆದ ಕಾಮನವೆಲ್ತ್ ಗೇಮ್ಸನ ಬಾಕ್ಸಿಂಗ್ ವಿಭಾಗದ ಪದಕ ಪ್ರದಾನ ಕಾರ್ಯಕ್ರಮವು ಒಂದು ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು!
ಆಕೆ ನೀತು ಗಂಘಾಸ್. ವಯಸ್ಸು 21. ಭಾರತದ ಬಾಕ್ಸಿಂಗನ ನವೋದಿತ ತಾರೆ. ಇದು ಆಕೆಯ ಮೊದಲ ಕಾಮನವೆಲ್ತ್ ಗೇಮ್ಸ್ ಆಗಿತ್ತು. ಆಕೆಯನ್ನು ಈಗಲೆ ಜನರು ಬಾಕ್ಸಿಂಗ್ ಲೆಜೆಂಡ್ ಮೇರಿ ಕೋಮ್ ಜೊತೆ ಹೋಲಿಕೆ ಮಾಡಲು ತೊಡಗಿದ್ದರು.
ಕೊರಳಲ್ಲಿ ಚಿನ್ನದ ಪದಕವನ್ನು ತೋಡಿಸಿದಾಗ ಭಾರತದ ತ್ರಿವರ್ಣ ಧ್ವಜ ಮೇಲೇರುವ ಕ್ಷಣ, ಬ್ಯುಗಲ್ ರಾಷ್ಟ್ರಗೀತೆ ಜನಗಣಮನವನ್ನು ನುಡಿಸುವಾಗ ಆಕೆಯ ಕಣ್ಣಲ್ಲಿ ಗಂಗಾ ಭಾಗೀರಥಿ ಎಲ್ಲವೂ ಸುರಿಯಿತು. ಆದರೂ ಆಕೆಯ ಕಣ್ಣು ಯಾರನ್ನೋ ಹುಡುಕುತ್ತಿತ್ತು!
ಹೌದು, ಅವಳು ಹುಡುಕುತ್ತ ಇದ್ದದ್ದು ಅವಳ ಪ್ರೀತಿಯ ಅಪ್ಪನನ್ನು! ಅವರ ಹೆಸರು ಜೈ ಭಗವಾನ್. ಹರ್ಯಾಣ ಸರಕಾರಿ ಇಲಾಖೆಯಲ್ಲಿ ಒಬ್ಬ ಸಾಮಾನ್ಯ ನೌಕರ ಆಗಿದ್ದ ಅವರು ತನ್ನ ಮಗಳ ಸಾಧನೆಗೆ ಒತ್ತಾಸೆ ಆಗಿ ನಿಂತವರು. ಕಳೆದ ಮೂರು ವರ್ಷಗಳಿಂದ ಅವರು ವೇತನವಿಲ್ಲದ ರಜೆ ಹಾಕಿ ಮಗಳ ಜೊತೆಗೆ ಓಡಾಟ ಮಾಡುತ್ತಿದ್ದರು! ಮಗಳ ಕೋಚಿಂಗ್, ಆಹಾರ, ಪ್ರಯಾಣ ಎಲ್ಲ ಉಸ್ತುವಾರಿ ಕೂಡ ಅವರದ್ದೇ! ಬೆಳಿಗ್ಗೆ ನಾಲ್ಕು ಗಂಟೆಗೆ ಎದ್ದು ಮಗಳ ಜೊತೆ ಬಾಕ್ಸಿಂಗ್ ರಿಂಗ್ಸಗೆ ಬರುವ ಅಪ್ಪ ಮಧ್ಯರಾತ್ರಿ ಆದರೂ ಮಲಗುತ್ತಲೆ ಇರಲಿಲ್ಲ!
ಕೊರಳಲ್ಲಿ ಚಿನ್ನದ ಪದಕವನ್ನು ಧರಿಸಿ ಆಕೆ ವಿಜಯದ  ವೇದಿಕೆಯಿಂದ ಓಡಿ ಬಂದು ಸ್ಟೇಡಿಯಂ ಮೂಲೆಯಲ್ಲಿ ಮೈ ಮುದುರಿಕೊಂಡು ನಿಂತ ತನ್ನ ಅಪ್ಪನನ್ನು ಗಾಢವಾಗಿ ಅಪ್ಪಿಕೊಂಡಳು. ಇಬ್ಬರೂ ಬ್ಲಾಸ್ಟ್ ಆಗಿದ್ದರು! ಅಪ್ಪನಿಗೂ ಕಣ್ಣೀರು ನಿಯಂತ್ರಣ ಮಾಡುವುದು ಕಷ್ಟ ಆಗ್ತಿತ್ತು.
ರಿಂಗ್ಸಲ್ಲಿ ಸಿಂಹದ ಹಾಗೆ ಎರಗಿ ಹೋಗುವ ನೀತು ಹೊರಗೆ ಬಂದಾಗ ಮೆತ್ತನೆ ಮಾತಾಡುತ್ತಾಳೆ. ಅಪ್ಪನ ಮುಗ್ಧ ಮಗಳು ಆಗಿ ಬಿಡುತ್ತಾಳೆ. ಜನರು ಅವಳ ಆಟದ ಖದರು ನೋಡಿ ‘ಗಬ್ಬರ್ ಶೇರ್ನಿ’ ಎಂಬ ಅಡ್ಡ ಹೆಸರಿನಿಂದ ಕರೆಯುತ್ತಿದ್ದರು. ಅವಳು ಅಗ್ರೆಸ್ಸಿವ್ ಬಾಕ್ಸರ್. ಅಲ್ಲಿಂದ ಹೊರಗೆ ಬಂದಾಗ ಇನ್ನೋಸೆಂಟ್ ಮಗಳು!
ಮೂರು ವರ್ಷಗಳಿಂದ ವೇತನವೆ ಇಲ್ಲದ ಅಪ್ಪ ಮನೆಯ ಖರ್ಚಿಗೆ, ಮಗಳ ಕೋಚಿಂಗಗೆ, ವಿದೇಶಗಳ  ಪ್ರಯಾಣಕ್ಕೆ, ಆಹಾರಕ್ಕೆ, ಕ್ರೀಡಾ ಸಾಮಗ್ರಿಗೆ ಇತ್ಯಾದಿಗೆ ಎಲ್ಲಿಂದ ದುಡ್ಡು ಹೊಂದಿಸುತ್ತ ಇದ್ದರು ಅನ್ನುವುದೇ ಮಗಳಿಗೆ ಆಶ್ಚರ್ಯ! ಮಗಳು ಹಸಿದಾಗ ಅಪ್ಪ ಎಲ್ಲಿಂದಲೋ ದುಬಾರಿ ಆಹಾರ ತಂದು ಮಗಳಿಗೆ ತುತ್ತು ಕೊಡುತ್ತಿದ್ದರು. ನನ್ನ ಊಟ ಆಗಿದೆ ಮಗಳೆ, ನೀನು ಊಟ ಮಾಡು ಎಂದು ತಿನ್ನಿಸುತ್ತಿದ್ದರು. ಅಪ್ಪನ ಊಟ ಆಗಿಲ್ಲ ಎಂದು ಮಗಳಿಗೆ ತುಂಬಾ ತಡವಾಗಿ ಗೊತ್ತಾಗುತ್ತಿತ್ತು!
ಕಳೆದ ಆರು ವರ್ಷಗಳಲ್ಲಿ ಆಕೆ ಹತ್ತಾರು ದೇಶ ಸುತ್ತಾಡುವ ಪ್ರಸಂಗ ಬಂದಾಗ ಆಕೆಯ ನೆರಳಾಗಿ ಓಡಾಟ ಮಾಡಿದ್ದು ಅದೇ ಅಪ್ಪ! ಅವರಿಗೆ ಬಾಕ್ಸಿಂಗ್ ಪಟ್ಟುಗಳು ಗೊತ್ತಾಗುತ್ತ ಇರಲಿಲ್ಲ. ಆದರೂ ರಿಂಗ್ಸ್ ಹೊರಗೆ ನಿಂತು ಜೋರಾಗಿ ಕೂಗಿ ಸಪೋರ್ಟ್ ಮಾಡುತ್ತಿದ್ದರು. ಮಗಳಿಗೆ ರಿಂಗ್ಸಲ್ಲಿ ಗಾಯ ಆದಾಗ ಅವರ ಜೀವವೇ ಹಾರಿ ಹೋಗುತ್ತಿತ್ತು.
“ರಿಂಗ್ಸ್ ಒಳಗೆ ಚಿರತೆಯ ಹಾಗೆ ಓಡಾಡುವ ನನಗೆ ಜಗತ್ತು  ಎಲ್ಲವೂ ಮರೆತುಹೋಗುತ್ತಿತ್ತು. ಆದರೆ ನನಗೆ ಯಾವಾಗ ಏನು ಬೇಕು ಅನ್ನುವುದು ನನಗಿಂತ ಮೊದಲೇ ಅಪ್ಪನಿಗೆ ಗೊತ್ತಿರುತ್ತಿತ್ತು! ಅವರ ಸಪೋರ್ಟ್ ಇಲ್ಲ ಅಂದರೆ ನಾನಿಷ್ಟು ಎತ್ತರಕ್ಕೆ ಏರಲು ಸಾಧ್ಯವೇ ಇರಲಿಲ್ಲ” ಎಂದಾಕೆ ಹೇಳುವಾಗ ಅಪ್ಪ ಜೈ ಭಗವಾನ್ ಎದೆ ಉಬ್ಬಿಸಿ ನಿಂತಿದ್ದರು.
ತನ್ನ ಕೊರಳ ಚಿನ್ನದ ಪದಕವನ್ನು ಆಕೆ ತೆಗೆದು ತನ್ನ ಅಪ್ಪನ ಕೊರಳಿಗೆ ಹಾಕಿ ಅಪ್ಪನ ಕಣ್ಣೀರು ಒರೆಸಿದ್ದಳು. ಅಪ್ಪ ಅವಳ ನೆತ್ತಿಯ ಮೇಲೆ ಹೂ ಮುತ್ತು ಸುರಿದು ಜಗತ್ತನ್ನೇ ಮರೆತು  ನಿಂತಿದ್ದರು!
ಅವರ ಜೀವಮಾನದ ಬಹು ದೊಡ್ಡ  ಕನಸು ಅಂದು ನಿಜವಾಗಿತ್ತು.
                              ರಾಜೇಂದ್ರ ಭಟ್.ಕೆ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × five =

Latest news

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ ಕುಂದಾಪುರದ ಪ್ರತಿಷ್ಠಿತ  ನಕ್ಷತ್ರ ಜ್ಯುವೆಲ್ಲರ್ಸ್ ಪ್ರಸ್ತುತಪಡಿಸುವ ಕಲ್ಲು ಗಣಪತಿ ಟ್ರೋಫಿ 2026-27 ಕ್ರಿಕೆಟ್ ಟೂರ್ನಮೆಂಟ್‌ಗೆ...

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ ಬೈಂದೂರಿನ ಪ್ರತಿಷ್ಠಿತ ವಿಕ್ರಮ್ ಕ್ರಿಕೆಟ್ ಕ್ಲಬ್ (VCC) ವತಿಯಿಂದ, ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (UDCA)...

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...
- Advertisement -spot_imgspot_img

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

Must read

- Advertisement -spot_imgspot_img

You might also likeRELATED
Recommended to you