
ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್
ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ ಮಣಿಪಾಲದಲ್ಲಿ ಜರುಗಿತು. ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ದೀಪ ಬೆಳಗಿಸುವುದರ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭ ಮಾತನಾಡಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಗಫೂರ್ ಮಾತನಾಡಿ “ಫುಟ್ಬಾಲ್ ಜಗತ್ತಿನ ಅತ್ಯಂತ ಜನಪ್ರಿಯ ಕ್ರೀಡೆಯಾಗಿದ್ದು, ಮಣಿಪಾಲದಲ್ಲಿ ಈ ಪಂದ್ಯಾಟ ಸಂಘಟಿಸಿ ಫುಟ್ಬಾಲ್ ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ಸೃಷ್ಟಿಸಿದೆ ಹಾಗೂ ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಹರಿಪ್ರಸಾದ್ ರೈ ಯವರ ಮನವಿಯ ಮೇರೆಗೆ ಉಡುಪಿಯಲ್ಲಿ ಫುಟ್ಬಾಲ್ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಿಸಲಿದ್ದೇವೆ ಎಂದರು.


ಮುಖ್ಯ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಹರಿಪ್ರಸಾದ್ ರೈ “ಜಗತ್ತಿನ ಅತ್ಯಂತ ಶ್ರೇಷ್ಠ ಹಾಗೂ ಜನಪ್ರಿಯ ಕ್ರೀಡೆ ಫುಟ್ಬಾಲ್.200 ರಾಷ್ಟ್ರಗಳು ಪುಟ್ಬಾಲ್ ನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು,ಈ ಆಟಕ್ಕೆ ಕೋಟ್ಯಾಂತರ ಮಂದಿ ಹಿಂಬಾಲಕರಿದ್ದಾರೆ.ಉಡುಪಿ ಜಿಲ್ಲೆ ಧಾರ್ಮಿಕ,ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮನ್ನಣೆ ಪಡೆದ ಹಾಗೆ ಫುಟ್ಬಾಲ್ ಕ್ರೀಡೆಯಲ್ಲೂ ಪ್ರಮುಖವಾಗಿ ಗುರುತಿಸುವಂತಾಗಬೇಕೆನ್ನುವ ಉದ್ದೇಶದಿಂದ ಶಿವಾಸ್ ಕಪ್ ಆಯೋಜಿಸಲಾಗಿದೆ ಎಂದರು.


ಈ ಸಂದರ್ಭ ಅಲೆವೂರು ಗ್ರಾಮಪಂಚಾಯತ್ ಅಧ್ಯಕ್ಷ ಹರೀಶ್ ಕಿಣಿ,ಸದಾನಂದ್ ಕಾಂಚನ್,ಜಯವೀರ್ ಇನ್ನಿತರರು ಉಪಸ್ಥಿತರಿದ್ದರು.





