6.1 C
London
Wednesday, April 17, 2024
Home#covid19ಯು ಆರ್ ಸ್ಪೋರ್ಟ್ಸ್ ವತಿಯಿಂದ ಕೊರೋನ ವಾರಿಯರ್ಸ್ ತಂಡದವರಿಗೆ ಸನ್ಮಾನ

ಯು ಆರ್ ಸ್ಪೋರ್ಟ್ಸ್ ವತಿಯಿಂದ ಕೊರೋನ ವಾರಿಯರ್ಸ್ ತಂಡದವರಿಗೆ ಸನ್ಮಾನ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಯು ಆರ್ ಸ್ಪೋರ್ಟ್ಸ್ ಮಣಿಪಾಲ ಇವರ ವತಿಯಿಂದ ಕೊರೋನ ವಿರುದ್ಧ ಹೋರಾಟ ನಡೆಸುತ್ತಿರುವ ಕೊರೋನ ವಾರಿಯರ್ಸ್ ಇವರಿಗೆ ಅಭಿನಂದನಾ ಸಮಾರಂಭವು ಮಣಿಪಾಲದ ಯು. ಆರ್. ಸ್ಪೋರ್ಟ್ಸ್ ನಲ್ಲಿ ದಿನಾಂಕ 7 – 8-2020 ರಂದು ನಡೆಯಿತು.
ಮಣಿಪಾಲ ಆರಕ್ಷಕ ಠಾಣಾಧಿಕಾರಿಯಾಗಿರುವ ಶ್ರೀ ಮಂಜುನಾಥ ಗೌಡ, ಫೋಟೋ ಪ್ಯಾಲೇಸ್ ನ ಶ್ರೀ ರವಿರಾಜ್ ಕಿದಿಯೂರು, ಪಡುಬಿದ್ರಿ ಫ್ರೆಂಡ್ಸು ಕ್ರಿಕೆಟರ್ಸ್ ನ ಶ್ರೀ ಶರತ್ ಶೆಟ್ಟಿ, ಪಡುಬಿದ್ರಿ  ಐಟೋನ್ ಆಪ್ಟಿಕಲ್ಸ್ ನ ಶ್ರೀ ಚಂದನ್ ರವರು ಹಾಗೂ ಸಂಸ್ಥೆಯ ಶ್ರೀ ದೇವರಾಜ್ ಸುವರ್ಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನರ್ಸಿಂಗ್ ಕ್ಷೇತ್ರದಲ್ಲಿ ಕೋವಿದ್ ರೋಗಿಗಳನ್ನು ಚಿಕಿತ್ಸೆ ಮಾಡಿದ ಗೌತಮ್ ಕುಮಾರ್ ಪರ್ಕಳ ಹಾಗೂ ಪೋಲಿಸ್ ಸಿಬ್ಬಂದಿಯಾಗಿರುವ ಪ್ರಶಾಂತ್ ಕೋಟ ಇವರುಗಳನ್ನು ಅತಿಥಿಗಳು ಸನ್ಮಾನಿಸಿದರು. ಹಾಗೂ ಯು ಆರ್ ಸ್ಪೋರ್ಟ್ಸ್ ಸಂಸ್ಥೆಯನ್ನು ಸ್ಥಾಪಿಸಿದ ಶ್ರೀ ರವಿರಾಜ್ ಕಿದಿಯೂರು ಇವರಿಗೆ ಗೌರವಾರ್ಪಣೆ ನೀಡಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಠಾಣಾಧಿಕಾರಿಯವರು ಕೋವಿದ್ ಬಗ್ಗೆ ಶ್ರಮಿಸಿದವರಿಗೆ ಅಭಿನಂದಿಸಿದರೆ ಅವರ ಜವಾಬ್ದಾರಿ ಹೆಚ್ಚಾಗಿ ಇನ್ನುಳಿದವರಿಗೂ ಸ್ಪೂರ್ತಿಯಾಗುವುದು ಎಂದು ತಿಳಿಸಿದರು ಅಲ್ಲದೆ ಸಂಸ್ಥೆಯ ಈ ಅಭಿನಂದನಾ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಉಳಿದ ಗಣ್ಯರು ಕಾರ್ಯಕ್ರಮದ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದರು. ಸಂಸ್ಥೆಯ ವತಿಯಿಂದ ನಡೆಸಲ್ಪಟ್ಟ ಸ್ಪೋರ್ಟ್ಸ್ ಫೋಟೋ ಸ್ಪರ್ಧೆಯಲ್ಲಿ ವಿಜೇತರಾದ ವಸಂತ ಮುನಿಯಾಲು (1), ಯತೀಶ್ ಅಲೆವೂರು (2), ಕಿರಣ್ ಕಾರ್ಕಳ (3), ಸಚಿನ್ ಕೋಟೇಶ್ವರ (4) ಇವರಿಗೆ ಟ್ರೋಫಿ ಗಳನ್ನು ವಿತರಿಸಲಾಯಿತು. ಸಂಗೀತದಲ್ಲಿ ಅತೀ ಕಿರಿಯ ವಯಸ್ಸಿನಲ್ಲೇ ಮಹತ್ತರ ಸಾಧನೆ ಮಾಡಿದ ಮಾ. ಲಿಖಿತ್ ಕರ್ಕೇರ ಇವರನ್ನು ಅಭಿನಂದಿಸಲಾಯಿತು. ವಿನಯ್ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

fifteen − three =