#covid19ಯು ಆರ್ ಸ್ಪೋರ್ಟ್ಸ್ ವತಿಯಿಂದ ಕೊರೋನ ವಾರಿಯರ್ಸ್ ತಂಡದವರಿಗೆ ಸನ್ಮಾನ

ಯು ಆರ್ ಸ್ಪೋರ್ಟ್ಸ್ ವತಿಯಿಂದ ಕೊರೋನ ವಾರಿಯರ್ಸ್ ತಂಡದವರಿಗೆ ಸನ್ಮಾನ

-

- Advertisment -spot_img
ಯು ಆರ್ ಸ್ಪೋರ್ಟ್ಸ್ ಮಣಿಪಾಲ ಇವರ ವತಿಯಿಂದ ಕೊರೋನ ವಿರುದ್ಧ ಹೋರಾಟ ನಡೆಸುತ್ತಿರುವ ಕೊರೋನ ವಾರಿಯರ್ಸ್ ಇವರಿಗೆ ಅಭಿನಂದನಾ ಸಮಾರಂಭವು ಮಣಿಪಾಲದ ಯು. ಆರ್. ಸ್ಪೋರ್ಟ್ಸ್ ನಲ್ಲಿ ದಿನಾಂಕ 7 – 8-2020 ರಂದು ನಡೆಯಿತು.
ಮಣಿಪಾಲ ಆರಕ್ಷಕ ಠಾಣಾಧಿಕಾರಿಯಾಗಿರುವ ಶ್ರೀ ಮಂಜುನಾಥ ಗೌಡ, ಫೋಟೋ ಪ್ಯಾಲೇಸ್ ನ ಶ್ರೀ ರವಿರಾಜ್ ಕಿದಿಯೂರು, ಪಡುಬಿದ್ರಿ ಫ್ರೆಂಡ್ಸು ಕ್ರಿಕೆಟರ್ಸ್ ನ ಶ್ರೀ ಶರತ್ ಶೆಟ್ಟಿ, ಪಡುಬಿದ್ರಿ  ಐಟೋನ್ ಆಪ್ಟಿಕಲ್ಸ್ ನ ಶ್ರೀ ಚಂದನ್ ರವರು ಹಾಗೂ ಸಂಸ್ಥೆಯ ಶ್ರೀ ದೇವರಾಜ್ ಸುವರ್ಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನರ್ಸಿಂಗ್ ಕ್ಷೇತ್ರದಲ್ಲಿ ಕೋವಿದ್ ರೋಗಿಗಳನ್ನು ಚಿಕಿತ್ಸೆ ಮಾಡಿದ ಗೌತಮ್ ಕುಮಾರ್ ಪರ್ಕಳ ಹಾಗೂ ಪೋಲಿಸ್ ಸಿಬ್ಬಂದಿಯಾಗಿರುವ ಪ್ರಶಾಂತ್ ಕೋಟ ಇವರುಗಳನ್ನು ಅತಿಥಿಗಳು ಸನ್ಮಾನಿಸಿದರು. ಹಾಗೂ ಯು ಆರ್ ಸ್ಪೋರ್ಟ್ಸ್ ಸಂಸ್ಥೆಯನ್ನು ಸ್ಥಾಪಿಸಿದ ಶ್ರೀ ರವಿರಾಜ್ ಕಿದಿಯೂರು ಇವರಿಗೆ ಗೌರವಾರ್ಪಣೆ ನೀಡಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಠಾಣಾಧಿಕಾರಿಯವರು ಕೋವಿದ್ ಬಗ್ಗೆ ಶ್ರಮಿಸಿದವರಿಗೆ ಅಭಿನಂದಿಸಿದರೆ ಅವರ ಜವಾಬ್ದಾರಿ ಹೆಚ್ಚಾಗಿ ಇನ್ನುಳಿದವರಿಗೂ ಸ್ಪೂರ್ತಿಯಾಗುವುದು ಎಂದು ತಿಳಿಸಿದರು ಅಲ್ಲದೆ ಸಂಸ್ಥೆಯ ಈ ಅಭಿನಂದನಾ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಉಳಿದ ಗಣ್ಯರು ಕಾರ್ಯಕ್ರಮದ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದರು. ಸಂಸ್ಥೆಯ ವತಿಯಿಂದ ನಡೆಸಲ್ಪಟ್ಟ ಸ್ಪೋರ್ಟ್ಸ್ ಫೋಟೋ ಸ್ಪರ್ಧೆಯಲ್ಲಿ ವಿಜೇತರಾದ ವಸಂತ ಮುನಿಯಾಲು (1), ಯತೀಶ್ ಅಲೆವೂರು (2), ಕಿರಣ್ ಕಾರ್ಕಳ (3), ಸಚಿನ್ ಕೋಟೇಶ್ವರ (4) ಇವರಿಗೆ ಟ್ರೋಫಿ ಗಳನ್ನು ವಿತರಿಸಲಾಯಿತು. ಸಂಗೀತದಲ್ಲಿ ಅತೀ ಕಿರಿಯ ವಯಸ್ಸಿನಲ್ಲೇ ಮಹತ್ತರ ಸಾಧನೆ ಮಾಡಿದ ಮಾ. ಲಿಖಿತ್ ಕರ್ಕೇರ ಇವರನ್ನು ಅಭಿನಂದಿಸಲಾಯಿತು. ವಿನಯ್ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 × three =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you