#covid19ಯು ಆರ್ ಸ್ಪೋರ್ಟ್ಸ್ ವತಿಯಿಂದ ಕೊರೋನ ವಾರಿಯರ್ಸ್ ತಂಡದವರಿಗೆ ಸನ್ಮಾನ

ಯು ಆರ್ ಸ್ಪೋರ್ಟ್ಸ್ ವತಿಯಿಂದ ಕೊರೋನ ವಾರಿಯರ್ಸ್ ತಂಡದವರಿಗೆ ಸನ್ಮಾನ

-

- Advertisment -spot_img
ಯು ಆರ್ ಸ್ಪೋರ್ಟ್ಸ್ ಮಣಿಪಾಲ ಇವರ ವತಿಯಿಂದ ಕೊರೋನ ವಿರುದ್ಧ ಹೋರಾಟ ನಡೆಸುತ್ತಿರುವ ಕೊರೋನ ವಾರಿಯರ್ಸ್ ಇವರಿಗೆ ಅಭಿನಂದನಾ ಸಮಾರಂಭವು ಮಣಿಪಾಲದ ಯು. ಆರ್. ಸ್ಪೋರ್ಟ್ಸ್ ನಲ್ಲಿ ದಿನಾಂಕ 7 – 8-2020 ರಂದು ನಡೆಯಿತು.
ಮಣಿಪಾಲ ಆರಕ್ಷಕ ಠಾಣಾಧಿಕಾರಿಯಾಗಿರುವ ಶ್ರೀ ಮಂಜುನಾಥ ಗೌಡ, ಫೋಟೋ ಪ್ಯಾಲೇಸ್ ನ ಶ್ರೀ ರವಿರಾಜ್ ಕಿದಿಯೂರು, ಪಡುಬಿದ್ರಿ ಫ್ರೆಂಡ್ಸು ಕ್ರಿಕೆಟರ್ಸ್ ನ ಶ್ರೀ ಶರತ್ ಶೆಟ್ಟಿ, ಪಡುಬಿದ್ರಿ  ಐಟೋನ್ ಆಪ್ಟಿಕಲ್ಸ್ ನ ಶ್ರೀ ಚಂದನ್ ರವರು ಹಾಗೂ ಸಂಸ್ಥೆಯ ಶ್ರೀ ದೇವರಾಜ್ ಸುವರ್ಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನರ್ಸಿಂಗ್ ಕ್ಷೇತ್ರದಲ್ಲಿ ಕೋವಿದ್ ರೋಗಿಗಳನ್ನು ಚಿಕಿತ್ಸೆ ಮಾಡಿದ ಗೌತಮ್ ಕುಮಾರ್ ಪರ್ಕಳ ಹಾಗೂ ಪೋಲಿಸ್ ಸಿಬ್ಬಂದಿಯಾಗಿರುವ ಪ್ರಶಾಂತ್ ಕೋಟ ಇವರುಗಳನ್ನು ಅತಿಥಿಗಳು ಸನ್ಮಾನಿಸಿದರು. ಹಾಗೂ ಯು ಆರ್ ಸ್ಪೋರ್ಟ್ಸ್ ಸಂಸ್ಥೆಯನ್ನು ಸ್ಥಾಪಿಸಿದ ಶ್ರೀ ರವಿರಾಜ್ ಕಿದಿಯೂರು ಇವರಿಗೆ ಗೌರವಾರ್ಪಣೆ ನೀಡಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಠಾಣಾಧಿಕಾರಿಯವರು ಕೋವಿದ್ ಬಗ್ಗೆ ಶ್ರಮಿಸಿದವರಿಗೆ ಅಭಿನಂದಿಸಿದರೆ ಅವರ ಜವಾಬ್ದಾರಿ ಹೆಚ್ಚಾಗಿ ಇನ್ನುಳಿದವರಿಗೂ ಸ್ಪೂರ್ತಿಯಾಗುವುದು ಎಂದು ತಿಳಿಸಿದರು ಅಲ್ಲದೆ ಸಂಸ್ಥೆಯ ಈ ಅಭಿನಂದನಾ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಉಳಿದ ಗಣ್ಯರು ಕಾರ್ಯಕ್ರಮದ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದರು. ಸಂಸ್ಥೆಯ ವತಿಯಿಂದ ನಡೆಸಲ್ಪಟ್ಟ ಸ್ಪೋರ್ಟ್ಸ್ ಫೋಟೋ ಸ್ಪರ್ಧೆಯಲ್ಲಿ ವಿಜೇತರಾದ ವಸಂತ ಮುನಿಯಾಲು (1), ಯತೀಶ್ ಅಲೆವೂರು (2), ಕಿರಣ್ ಕಾರ್ಕಳ (3), ಸಚಿನ್ ಕೋಟೇಶ್ವರ (4) ಇವರಿಗೆ ಟ್ರೋಫಿ ಗಳನ್ನು ವಿತರಿಸಲಾಯಿತು. ಸಂಗೀತದಲ್ಲಿ ಅತೀ ಕಿರಿಯ ವಯಸ್ಸಿನಲ್ಲೇ ಮಹತ್ತರ ಸಾಧನೆ ಮಾಡಿದ ಮಾ. ಲಿಖಿತ್ ಕರ್ಕೇರ ಇವರನ್ನು ಅಭಿನಂದಿಸಲಾಯಿತು. ವಿನಯ್ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eighteen − four =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you