10 C
London
Tuesday, April 23, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಡಿಸೆಂಬರ್-2022 ವರ್ಷಾಂತ್ಯದಲ್ಲಿ-ಕುಂದಾಪುರದಲ್ಲಿ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಹಬ್ಬ-ಜಾನ್ಸನ್ ಟ್ರೋಫಿ 2022-23

ಡಿಸೆಂಬರ್-2022 ವರ್ಷಾಂತ್ಯದಲ್ಲಿ-ಕುಂದಾಪುರದಲ್ಲಿ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಹಬ್ಬ-ಜಾನ್ಸನ್ ಟ್ರೋಫಿ 2022-23

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕುಂದಾಪುರ-ತಾಲೂಕು ಪಂಚಾಯತ್ ಸದಸ್ಯರು ಹಾಗೂ ಉದ್ಯಮಿ ಶ್ರೀ ಉಮೇಶ್ ಶೆಟ್ಟಿ ಕಲ್ಗದ್ದೆ ಇವರ ಗೌರವಾಧ್ಯಕ್ಷತೆಯಲ್ಲಿ,ಜಾನ್ಸನ್ ಕುಂದಾಪುರ ತಂಡದ ವ್ಯವಸ್ಥಾಪಕರಾದ ರವೀಂದ್ರ ಹೆಗ್ಡೆ ಇವರ ಘನ ಅಧ್ಯಕ್ಷತೆಯಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ
ಡಿಸೆಂಬರ್ 30,31 ಮತ್ತು ಜನವರಿ 1ರಂದು ಹೊನಲು ಬೆಳಕಿನ ಕ್ರಿಕೆಟ್ ಹಬ್ಬ ಜಾನ್ಸನ್ ಟ್ರೋಫಿ 2022-23
ಆಯೋಜಿಸಲಾಗಿದೆ.
ಜಾನ್ಸನ್ ಟ್ರೋಫಿಯಲ್ಲಿ ಭಾಗವಹಿಸಲು ಈಗಾಗಲೇ ರಾಜ್ಯದ ನಾನಾ ಭಾಗಗಳಿಂದ ಒಟ್ಟು 24 ತಂಡಗಳು ತಮ್ಮ ಹೆಸರು ನೋಂದಾಯಿಸಿದ್ದು,2022 ವರ್ಷಾಂತ್ಯ ಮತ್ತು 2023 ಹೊಸ ವರ್ಷದ ಪ್ರಾರಂಭದಲ್ಲಿ ಆಯೋಜಿಸಲಾದ ಈ ಪಂದ್ಯಾಟ ಕ್ರೀಡಾಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸಲಿದೆ.
ಜಾನ್ಸನ್ ಟ್ರೋಫಿಯ ಪ್ರಥಮ‌ ಪ್ರಶಸ್ತಿ ವಿಜೇತ ತಂಡ 4,04,000 ನಗದು ಬಹುಮಾನ,ದ್ವಿತೀಯ 2,02,000 ನಗದು ಬಹುಮಾನ‌ ಸಹಿತ ಆಕರ್ಷಕ ಶಾಶ್ವತ ಪಾರಿತೋಷಕಗಳನ್ನು ಪಡೆಯಲಿದ್ದಾರೆ.ಪಂದ್ಯಾಟದ ಅತ್ಯುತ್ತಮ ಬ್ಯಾಟರ್,ಅತ್ಯುತ್ತಮ ಬೌಲರ್ ಬಹುಮಾನ ರೂಪದಲ್ಲಿ ಆಕರ್ಷಕ ಉಡುಗೊರೆಗಳನ್ನು ಪಡೆಯಲಿದ್ದು,ಸರಣಿ ಪುರುಷೋತ್ತಮ ಆಟಗಾರ ದ್ವಿಚಕ್ರ ವಾಹನವನ್ನು ತನ್ನದಾಗಿಸಿಕೊಳ್ಳಲಿದ್ದಾರೆ.
*ಜಾನ್ಸನ್ ರಾಷ್ಟ್ರೀಯ ಮಟ್ಟದ ಪಂದ್ಯಾಟ ಸಮಿತಿಯ ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ.*
*ಗೌರವಾಧ್ಯಕ್ಷರು*-ಉಮೇಶ್ ಶೆಟ್ಟಿ ಕಲ್ಗದ್ದೆ
*ಅಧ್ಯಕ್ಷರು*-ರವೀಂದ್ರ ಹೆಗ್ಡೆ
*ಉಪಾಧ್ಯಕ್ಷರು*-ಅನಿಲ್ ಖಾರ್ವಿ,ರವೂಫ್.ಎಮ್.ಕೆ
*ನಾಯಕ*-ರಾಜೇಶ್ ಪೂಜಾರಿ(ರಾಜಾ ಸಾಲಿಗ್ರಾಮ)
*ಕಾರ್ಯದರ್ಶಿ*-ಮನೋಜ್ ನಾಯರ್
*ಜೊತೆ ಕಾರ್ಯದರ್ಶಿಗಳು*-ಕೃಷ್ಣ ದೇವಾಡಿಗ,ನಾಗೇಶ್ ನಾವಡ
*ಕೋಶಾಧಿಕಾರಿಗಳು*-ಆದಿತ್ಯ ಶೆಟ್ಟಿ
ಉಲ್ಲಾಸ್ ಡಿ’ಮೆಲ್ಲೋ
*ನಿರ್ದೇಶಕರು*-ರಾಘವೇಂದ್ರ ಪೈ,ಜಾರ್ಜ್ ಕರ್ವೆಲ್ಲೋ,ಮೋಹನ್ ಮಾವಿನಕೆರೆ,ಚಂದ್ರ ಮಾವಿನಕೆರೆ.
ಮತ್ತು ತಂಡದ ಸರ್ವ ಸದಸ್ಯರ ಸಹಕಾರದೊಂದಿಗೆ ಅತ್ಯಂತ ವಿಜೃಂಭಣೆಯಿಂದ ಪಂದ್ಯಾಟ ನಡೆಯಲಿದೆ ಎಂದು ಅಧ್ಯಕ್ಷರಾದ ರವೀಂದ್ರ ಹೆಗ್ಡೆ ಸ್ಪೋರ್ಟ್ಸ್ ಕನ್ನಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

20 − 13 =