ಕ್ರಿಕೆಟ್ಪಾಕ್ ಸದೆಬಡಿದ ಭಾರತೀಯರು ಪಂದ್ಯ ವೀಕ್ಷಿಸುತ್ತಿದ್ದ ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್...

ಪಾಕ್ ಸದೆಬಡಿದ ಭಾರತೀಯರು ಪಂದ್ಯ ವೀಕ್ಷಿಸುತ್ತಿದ್ದ ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್ ಪುಟ್ಟ ಮಗುವಿನಂತೆ ಕುಣಿದು ಕುಪ್ಪಳಿಸಿದರು..!!

-

- Advertisment -spot_img
ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದ ಭಾರತ ತಂಡ
ಭಾರತದ ಗೆಲುವನ್ನು ಭರ್ಜರಿಯಾಗಿ ಸಂಭ್ರಮಿಸಿದ ಕ್ರಿಕೆಟ್ ಅಭಿಮಾನಿಗಳು
ಪಂದ್ಯ ಗೆಲುವಿನ ಬೆನ್ನಲ್ಲೇ ಕ್ರೀಡಾಂಗಣದಲ್ಲೆ ಕುಣಿದು ಕುಪ್ಪಳಿಸಿದ ಭಾರತೀಯ ಕ್ರಿಕೆಟ್ ನ ಹಿರಿಯ ಸೂಪರ್ ಸ್ಟಾರ್ ಸುನಿಲ್ ಗವಾಸ್ಕರ್
ಮೆಲ್ಬರ್ನ್: ಕೆಲ ವಾರಗಳ ಹಿಂದೆ ಅನೇಕರು ವಿರಾಟ್‌ ಕೊಹ್ಲಿ ಇನ್ನೂ ಭಾರತ ಟಿ20 ತಂಡದಲ್ಲಿ ಇರಬೇಕಾ? ಎಂದು ಪ್ರಶ್ನೆ ಮಾಡಿದರೆ. ಇನ್ನೂ ಕೇಲವು ವಿದೇಶಿ ಹಿರಿಯ ಕ್ರಿಕೆಟಿಗರು ಕೊಹ್ಲಿ ನಿವೃತ್ತಿ ಘೋಷಿಸಲು ಸರಿಯಾದ ಸಮಯ ಎನ್ನುವಂತೆಲ್ಲ ವ್ಯಂಗ್ಯವಾಗಿ ಮಾತನಾಡಿದ್ದರು ಆದರೆ ಎಲ್ಲಾ ಅವಿವೇಕಿಗಳಿಗೂ ತನ್ನ ಬ್ಯಾಟಿನಿಂದಲೆ ಉತ್ತರ ಕೊಟ್ಟ ಕೊಹ್ಲಿ ತನ್ನ ವಿರುದ್ಧ ಮನಬಂದಂತೆ ಮಾತನಾಡುವವರ ಬಾಯಿ ಮುಚ್ಚಿಸಿದ್ದಾರೆ ಅದು ತಮ್ಮ ಶ್ರೇಷ್ಠಮಟ್ಟದ ಬ್ಯಾಟಿಂಗ್ ಆಡುವ ಮುಖಾಂತರ.
ಕೊಹ್ಲಿಯ ಈ ಇನ್ನಿಂಗ್ಸ್ ಅನ್ನು ಯಾರೂ ಮರೆಯಲೂ ಸಾಧ್ಯವಿಲ್ಲ. 2021ರ ಟಿ20 ವಿಶ್ವಕಪ್‌ನಲ್ಲಿ ಹೀನಾಯವಾಗಿ ಸೋತಿದ್ದ ಭಾರತ, 2022ರ ವಿಶ್ವಕಪ್‌ನಲ್ಲಿ ಕೊನೆಯ ಬಾಲಿನಲ್ಲಿ  ಗೆಲುವು ಸಾಧಿಸುವ ಮುಖಾಂತರ ಪಾಕಿಸ್ತಾನ ವಿರುದ್ಧ ಸೇಡು ತೀರಿಸಿಕೊಂಡಿದೆ. 4 ವಿಕೆಟ್‌ಗಳ ರೋಚಕ ಗೆಲುವಿನೊಂದಿಗೆ ಟೀಂ ಇಂಡಿಯಾ ತನ್ನ ವಿಶ್ವಕಪ್ ನ ಅಭಿಯಾನ ಆರಂಭಿಸಿದೆ. ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಕೊನೆಯ ಎಸೆತದಲ್ಲಿ ಗೆಲುವಿನ ನಗೆ ಬೀರಿತು. ಈ ಪಂದ್ಯದ ಗೆಲುವನ್ನು ಭಾರತದ ಹಿರಿಕಿರಿಯರೆನ್ನದೇ ಸಂಭ್ರಮಿಸಿದ್ದಾರೆ. ಇನ್ನೂ ಕ್ರಿಕೆಟ್‌ ದಂತಕಥೆ ಸುನಿಲ್ ಗವಾಸ್ಕರ್ ಕೂಡಾ ಭಾರತದ ಗೆಲುವನ್ನು ಮೆಲ್ಬೋರ್ನ್ ಅಂಗಳದಲ್ಲೆ ಕಣ್ಣಾರೆ ಕಂಡು  ಪುಟ್ಟ ಮಗುವಿನಂತೆ ಕುಣಿದು ಕುಪ್ಪಳಿಸಿ  ಸಂಭ್ರಮಿಸಿದ್ದಾರೆ.
ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಒಂದು ದಿನ ಮುಂಚಿತವಾಗಿಯೇ ದೀಪಾವಳಿ ಗಿಫ್ಟ್ ನೀಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಭಾನುವಾರ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯ ಹಲವಾರು ವರ್ಷಗಳ ಕಾಲ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದೇ ಉಳಿಯಲಿದೆ ಎಂದರೆ ತಪ್ಪಾಗಲಾರದು. ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅಜೇಯ 82 ರನ್ ಬಾರಿಸುವ ಮೂಲಕ ಭಾರತೀಯರ  ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿ ಮಿಂಚಿದ್ದಾರೆ. ಭಾರತ ತಂಡವು ಬದ್ದ ಎದುರಾಳಿ ಪಾಕಿಸ್ತಾನ ಎದುರು 4 ವಿಕೆಟ್‌ ರೋಚಕ ಜಯ ಸಾಧಿಸುತ್ತಿದ್ದಂತೆಯೇ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಹುಚ್ಚೆದ್ದು ಕುಣಿದು ಸಂಭ್ರಮಿಸಿದರು. ಒಂದು ದಿನ ಮುಂಚಿತವಾಗಿಯೇ ಭಾರತದಲ್ಲಿ ದೀಪಾವಳಿ ಪಟಾಕಿ ಸಿಡಿಸಿ  ಸಂಭ್ರಮಿಸಿದರು.
ಅಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕ್ರಿಕೆಟ್ ವಿಶ್ಲೇಷಕರಾಗಿ ಪಾಲ್ಗೊಂಡಿರುವ ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಕೂಡಾ ಭಾರತ ಪಂದ್ಯ ಗೆಲ್ಲುತ್ತಿದ್ದಂತೆಯೇ ಅಕ್ಷರಶಃ ಪುಟ್ಟ ಮಗುವಿನಂತೆ ನಿಂತಲ್ಲಿಯೇ ಕುಣಿದು ಕುಪ್ಪಳಿಸಿ ಈ ಗೆಲುವನ್ನು ಸಂಭ್ರಮಿಸಿದ್ದಾರೆ  ಈ ವಿಡಿಯೋವನ್ನು ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್, ತನ್ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

fifteen − fourteen =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you