ಸಂತಾಪಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕ ಸಾವು....!

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕ ಸಾವು….!

-

- Advertisment -spot_img
ಭದ್ರಾವತಿಯ *ವಿ ಐ ಎಸ್ ಎಲ್* ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ಷೇತ್ರ ರಕ್ಷಣೆಯಲ್ಲಿ ನಿರತನಾಗಿದ್ದ ದಿನೇಶ್ ರಾವ್ (38) ಪಂದ್ಯದ ನಡುವೆಯೇ ಕುಸಿದುಬಿದ್ದು ಸಾವಿನೆಡೆಗೆ ಹೆಜ್ಜೆ ಹಾಕಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೃದಯ ಭಾಗದಲ್ಲಿರುವ ವಿಐಎಸ್ ಎಲ್ ಕ್ರೀಡಾಂಗಣದಲ್ಲಿ ಇಂದು  ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು ಪಂದ್ಯ ನೆಡೆಯುವ ವೇಳೆಯಲ್ಲೆ ಈ ಘಟನೆ ನಡೆದಿದೆ. ಎರಡು ತಂಡಗಳು ಸೋಲು ಗೆಲುವಿನ ಲೆಕ್ಕಚಾರ ಹಾಕುವ ಸಮಯದಲ್ಲೆ ಈ ಬದುಕಿನ ಲೆಕ್ಕಾಚಾರ ಮುಗಿಸಿ ದಿನೇಶ್ ರವ್ ಮೈದಾನದಲ್ಲೆ ಹಠಾತ್ ಹೃದಯಾಘಾತಕ್ಕೆ ಬಲಿಯಾಗಿ ಬಾರದ ಲೋಕಕ್ಕೆ ಪಯಣ ಬೆಳೆಸಿರುವುದು ಮಾತ್ರ ದುರಂತವೆ ಹೌದು…
ದಿನೇಶ್ ರಾವ್ (38) ಮೃತಪಟ್ಟ ವ್ಯಕ್ತಿಯಾಗಿದ್ದು ಈತ ಭದ್ರಾವತಿ ನಗರಸಭೆ ಸಿಬ್ಬಂದಿಯಾಗಿದ್ದಾನೆ ಇಂದು ನಗರಸಭೆ ವತಿಯಿಂದ  ಕಾರ್ಮಿಕರು ಹಾಗೂ ಸಿಬ್ಬಂದಿವರ್ಗದರಿಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಡುವ ಸಮಯದಲ್ಲೇ ದಿನೇಶ್ ಕುಸಿದು ಬಿದ್ದಿದ್ದಾನೆ ತಕ್ಷಣವೇ
ಸ್ಥಳದಲ್ಲಿಯೇ ಇದ್ದ ಆರೋಗ್ಯ ಸಿಬ್ಬಂದಿಯಿಂದ ದಿನೇಶ್ ರಾವ್ ತಪಾಸಣೆ ನಡೆದಿದೆ. ಕುಸಿದು ಬಿದ್ದ ತಕ್ಷಣವೇ ದಿನೇಶ್ ಮೃತಪಟ್ಟಿದ್ದಾರೆಂದು   ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಸ್ಪಷ್ಟಪಡಿಸಿದ್ದಾರೆ.
ನಂತರ ಮೃತದೇಹವನ್ನು ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ತಾನು ಆಡುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದ ದಿನೇಶ್ ಗೆ ವಿಧಿಯ ಆಟ ಅರಿವಿಗೆ ಬಾರದೆ ಉಸಿರು ಚೆಲ್ಲಿ ಸಾವಿನೆಡೆಗೆ ಹೆಜ್ಜೆ ಹಾಕಿದ್ದಾರೆ…..
ಒಳ್ಳೆಯ ಕ್ರಿಕೆಟ್ ಆಟಗಾರನಾಗಿದ್ದ ದಿನೇಶ್ ರಾವ್ ಕಿರಿ ವಯಸ್ಸಿನಲ್ಲೆ ಬದುಕಿನ ಕೋಟಾ ಮುಗಿಸಿದ್ದು ಮಾತ್ರ ದುರಂತವೆ ಹೌದು
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

14 + sixteen =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you