17.8 C
London
Tuesday, April 30, 2024
Homeಭರವಸೆಯ ಬೆಳಕುಅಗಲಿದ ಕ್ರಿಕೆಟಿಗ ಸಿ.ಎ.ಮಲ್ಲೇಶ್ ಬಂಗೇರ ಸ್ಮರಣಾರ್ಥ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

ಅಗಲಿದ ಕ್ರಿಕೆಟಿಗ ಸಿ.ಎ.ಮಲ್ಲೇಶ್ ಬಂಗೇರ ಸ್ಮರಣಾರ್ಥ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಉದ್ಯಾವರ-ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್ ಪಿತ್ರೋಡಿ ಇವರ ನೇತೃತ್ವದಲ್ಲಿ ಇತ್ತೀಚಿಗೆ ನಿಧನರಾದ ಸಂಸ್ಥೆಯ ಮಾಜಿ ಅಧ್ಯಕ್ಷ ಮತ್ತು ಸರಳ ಸಜ್ಜನಿಕೆಯ ವ್ಯಕ್ತಿತ್ವದ ಖ್ಯಾತ ಕ್ರಿಕೆಟಿಗ ಸಿ.ಎ.ಮಲ್ಲೇಶ್ ಬಂಗೇರ ಇವರ ಸ್ಮರಣಾರ್ಥ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ ನಡೆಯಿತು.
ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ದಿ.ಮಲ್ಲೇಶ್ ರವರ ತಾಯಿ ಬೇಬಿ ಬಂಗೇರ ಲೋಕಾರ್ಪಣೆಗೊಳಿಸಿದರು.ಇದೇ ಸಂದರ್ಭ ದಿ.ಮಲ್ಲೇಶ್ ಬಂಗೇರ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ,”ಚಿಕ್ಕ ಪ್ರಾಯದಲ್ಲಿ ಮಕ್ಕಳಿಗೆ ಹಿರಿಯರು ಸಂಸ್ಕಾರದ ಬಗ್ಗೆ ಪಾಠ ಕಲಿಸಬೇಕು.ಇದರಿಂದ ಮಕ್ಕಳು ತಪ್ಪು ದಾರಿಗೆ ಹೋಗುವುದನ್ನು ತಪ್ಪಿಸಲು ಸಾಧ್ಯ.ಯುವಕರು ಮಧ್ಯವ್ಯಸನಿಯಾಗದೆ ಸಮಾಜದ ಅಭಿವೃದ್ಧಿಯತ್ತ ಚಿತ್ತವಹಿಸಬೇಕು.ಶಿಸ್ತು,ಸರಳತೆಯಿಂದ ಜೀವನ‌ ನಡೆಸಿ ನಮ್ಮನ್ನಗಲಿದ ದಿ‌.ಮಲ್ಲೇಶ್ ಎಲ್ಲ ಯುವಕರಿಗೆ ಮಾದರಿ” ಎಂದರು.
ಈ ಸಂದರ್ಭ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ, ಸರಕಾರಿ‌ ಪ್ರೌಢಶಾಲೆಯ ನಿಕಟಪೂರ್ವ ಮುಖ್ಯೋಪಾಧ್ಯಾಯಿನಿ ಉಮಾ ಕೃಷ್ಣ, ತಂಡದ ಗೌರವಾಧ್ಯಕ್ಷ ಗೋಪಾಲ‌ ಅಮೀನ್,ವೆಂಕಟರಮಣ ಭಜನಾ ಮಂದಿರದ ಅಧ್ಯಕ್ಷ ಗಂಗಾಧರ ಕರ್ಕೇರ,ಪ್ರಮುಖರಾದ ದಿವಾಕರ ಕುಂದರ್,ಅಧ್ಯಕ್ಷರಾದ ನವೀನ್ ಸಾಲ್ಯಾನ್,ವಿಜಯ್ ಕೋಟ್ಯಾನ್,ಪ್ರವೀಣ್ ಪಿತ್ರೋಡಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ವಿನಯ್ ಉದ್ಯಾವರ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು ಹಾಗೂ ಉಮೇಶ್ ಕರ್ಕೇರ ವಂದಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

14 − fourteen =