ಕ್ರಿಕೆಟ್ಮಾನವೀಯತೆ ಮೆರೆದ ಕ್ರಿಕೆಟಿಗ ಕೃಷ್ಣ ಉಡುಪಿ.

ಮಾನವೀಯತೆ ಮೆರೆದ ಕ್ರಿಕೆಟಿಗ ಕೃಷ್ಣ ಉಡುಪಿ.

-

- Advertisment -spot_img

ಸರಣಿ ಶ್ರೇಷ್ಟ ಪ್ರಶಸ್ತಿ 10 ಲಕ್ಷ ವಿಮಾ ಪಾಲಿಸಿಯನ್ನು ಸಹ ಆಟಗಾರನಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದ ಕೃಷ್ಣ ಉಡುಪಿ.

 

 ನವೆಂಬರ್ 17 ಭಾನುವಾರದಂದು ಉಡುಪಿಯ ದೊಡ್ಡನಗುಡ್ಡೆ ಮೈದಾನದಲ್ಲಿ ನಡೆದ ಜಿ.ಎಫ್.ಸಿ ಟ್ರೋಫಿ-2024 ಕ್ರಿಕೆಟ್ ಪಂದ್ಯಾಟ ಮಾನವೀಯ ಮೌಲ್ಯಗಳಿಗೆ ಸಾಕ್ಷಿಯಾಯಿತು‌.

ಸಮಾರೋಪ ಸಮಾರಂಭದ ವೇದಿಕೆಯಲ್ಲಿ ವಿಶೇಷ ಚೇತನರಿಗೆ ವೀಲ್ ಚೇರ್,ಆಶ್ರಮಗಳಿಗೆ ಸಹಾಯ‌ ನಿಧಿ,ಜೊತೆಗೆ ಹಿರಿಯ ಕ್ರೀಡಾಪಟುಗಳಿಗೆ,ಸೇವಾ ನಿರತ ಸಂಸ್ಥೆಗಳಿಗೆ ಗೌರವ ಸಲ್ಲಿಸಲಾಯಿತು.

ಇದಲ್ಲದೇ ಟೆನಿಸ್ಬಾಲ್ ಕ್ರಿಕೆಟ್ ಆಟಗಾರರಿಗೆ ಯಾವುದೇ ಅವಘಡದ ಸಂದರ್ಭದಲ್ಲಿ ಯಾವುದೇ ಜೀವ ವಿಮೆ ಇಲ್ಲದ ಕಾರಣ ಇದನ್ನು ಮನಗಂಡ ಗುಂಡಿಬೈಲ್ ಫ್ರೆಂಡ್ಸ್ ಕ್ರಿಕೆಟರ್ಸ್ ಸರಣಿಶ್ರೇಷ್ಟ ಆಟಗಾರನಿಗೆ 10 ಲಕ್ಷ ಜೀವರಕ್ಷಕ ವಿಮೆ ಬಹುಮಾನ ರೂಪದಲ್ಲಿ ಘೋಷಿಸಿತ್ತು.

 

ತನ್ನ‌ ಅತ್ಯಮೂಲ್ಯ ಆಲ್ರೌಂಡರ್ ಪ್ರದರ್ಶನ ನೀಡಿದ ನೀಲಾ ಚಾಲೆಂಜರ್ಸ್ ತಂಡದ ಕೃಷ್ಣ ಉಡುಪಿ ಅರ್ಹವಾಗಿ ಸರಣಿಶ್ರೇಷ್ಟ ಗೌರವಕ್ಕೆ ಪಾತ್ರರಾಗಿದ್ದು,ತನಗೆ ನೀಡಿದ 10 ಲಕ್ಷ ವಿಮಾ ಪಾಲಿಸಿಯನ್ನು ತನ್ನ ತಂಡದ ಸಹ ಆಟಗಾರನಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.

ಪ್ರತಿಭಾನ್ವಿತ ಆಟಗಾರ ಉಡುಪಿಯ ಕೃಷ್ಣ, ವಿಷ್ಣುಮೂರ್ತಿ ದೊಡ್ಡನಗುಡ್ಡೆ,ಸೈಮಂಡ್ಸ್ ಕಡಿಯಾಳಿ,ಗುರುಬ್ರಹ್ಮ ಉದ್ಯಾವರ,ಸ್ಯಾಟರ್ಡೇ ಪ್ಯಾಂಥರ್ಸ್ ಹಾಗೂ ರಾಜ್ಯಮಟ್ಟದಲ್ಲಿ ಜಾನ್ಸನ್ ಕುಂದಾಪುರ ತಂಡವನ್ನು ಪ್ರತಿನಿಧಿಸುತ್ತಿದ್ದು,ಹೆಚ್.ಡಿ.ಎಫ್.ಸಿ ಬ್ಯಾಂಕ್ ಮಲ್ಪೆ ಶಾಖೆಯ ಉದ್ಯೋಗಿಯಾಗಿದ್ದಾರೆ.

ಕೃಷ್ಣ ಉಡುಪಿ ಇವರ ಈ ಕ್ರೀಡಾಸ್ಪೂರ್ತಿ ಇತರ ಆಟಗಾರರಿಗೂ ಮಾದರಿಯಾಗಲಿ ಎಂಬುದೇ ಸ್ಪೋರ್ಟ್ಸ್ ಕನ್ನಡ ಹಾರೈಕೆ.

LEAVE A REPLY

Please enter your comment!
Please enter your name here

three − two =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you