10 C
London
Tuesday, April 23, 2024
Homeಕ್ರಿಕೆಟ್ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲಿ ಒಳ್ಳೆಯ ಹೆಸರು ಮಾಡಿದೆ- ಡಿ.ಹೆಚ್ .ಶಂಕರಮೂರ್ತಿ

ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲಿ ಒಳ್ಳೆಯ ಹೆಸರು ಮಾಡಿದೆ- ಡಿ.ಹೆಚ್ .ಶಂಕರಮೂರ್ತಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಶಿವಮೊಗ್ಗ :- ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲೇ ಹೆಸರು ಮಾಡಿದ ಸಂಸ್ಥೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಹೇಳಿದ್ದಾರೆ.
ಅವರು ಇಂದು ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆಯ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗ, ಚಿಕ್ಕಮಗಳೂರು,ಹಾಸನ ಜಿಲ್ಲೆಯ ಆಹ್ವಾನಿತ ಪ್ರತಿಷ್ಟಿತ ತಂಡಗಳ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
೧೯೪೫ರಲ್ಲಿ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ಜನ್ಮತಾಳಿತು. ಕ್ರಿಕೆಟ್ ಅಂದರೆ ಡಿಸಿಎ(ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್) ಎಂಬ ದಿನವಿತ್ತು. ಆಗಿನ ಸಂಸ್ಥೆಯ ಸಂಸ್ಥಾಪಕರಾದ ಪುಟ್ಟಪ್ಪ ಮತ್ತು ನಾರಾಯಣ್ ಮೊದಲಾದ ಹಿರಿಯರು ನೆಹರೂ ಕ್ರೀಡಾಂಗಣದಲ್ಲಿ ಈ ಸಂಸ್ಥೆ ಹುಟ್ಟು ಹಾಕಿದರು. ಆ ಕ್ರೀಡಾಂಗಣ ಕೂಡ ಬೇರೆಯವರ ಪಾಲಾಗುವ ಸಂದರ್ಭ ಬಂದಿತ್ತು. ಆಗ ಈ ಮಹಾತ್ಮರು ಹೋರಾಟಮಾಡಿ ಕ್ರೀಡಾಂಗಣವನ್ನು ಉಳಿಸಿಕೊಂಡರು.
ಕ್ರಿಕೆಟ್ ಈಗ ಶ್ರೀಮಂತ ಕ್ರೀಡೆಯಾಗಿದೆ. ಒಂದು ಕಾಲದಲ್ಲಿ ಆಟಗಾರರಿಗೆ ಮಜ್ಜಿಗೆ ಕೊಡಲು ಕೂಡ ಹಣವಿರಲಿಲ್ಲ. ಒಂದು ಬಾಲ್ ತರಲು ೩ ದಿನಗಳ ಸತತ ಪ್ರಯತ್ನ ಮಾಡಬೇಕಿತ್ತು. ಈಗ ಟ್ವೆಂಟಿ ಟ್ವೆಂಟಿ ಕ್ರಿಕೆಟ್ ಬಂದ ಮೇಲೆ ಹಬ್ಬದ ವಾತಾವರಣವಿರುತ್ತದೆ. ಮುಂಚೆ ಮೊದಲು ನಾವೆಲ್ಲ ಅದನ್ನು ವಿರೋಧಿಸಿದ್ದೆವು ಎಂದರು.
ಈ ಸಂದರ್ಭದಲ್ಲಿ ಕೆಎಸ್‌ಸಿಎ ಅಜೀವ ಸದಸ್ಯರಾದ ಮಾಧವ್‌ರಾವ್ ಮತ್ತು ಡಿಸಿಎ ಹಿರಿಯ ಸದಸ್ಯರಾದ ಡಿ.ಹೆಚ್. ಶಂಕರಮೂರ್ತಿ ಅವರನ್ನು ಸನ್ಮಾನಿಸಲಾಯಿತು.
ಈ ಪಂದ್ಯಾವಳಿಯಲ್ಲಿ ೧೯ ವರ್ಷದ ಒಳಗಿನ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಚಿಕ್ಕಮಗಳೂರು ತಂಡದ ಅನಿಷ್‌ಗೌತಮ್, ರಣಜಿಯಲ್ಲಿ ಆಟವಾಡಿದ ಶಿವಮೊಗ್ಗದ ಎಸ್.ಎಲ್.ಅಕ್ಷಯ್ ಮತ್ತು ಕೆಪಿಎಲ್ ಪಂದ್ಯಾವಳಿಯಲ್ಲಿ ಆಡಿದ ಶಿವಮೊಗ್ಗದ ನಿದೀಶ್ ಪಾಲ್ಗೊಂಡಿದ್ದರು.
ಕೆಎಸ್‌ಸಿಎ ವಲಯ ಸಂಚಾಲಕರಾದ ಹೆಚ್.ಎಸ್.ಸದಾನಂದ, ಅಬ್ದುಲ್ ಕಲಾಂ, ನಾಗರಾಜ್, ಕಟ್ಟೆ ಶ್ರೀನಾಥ್, ಬಿ.ಜಿ.ರಾಘವೇಂದ್ರ, ಅಮೃತ್ ಹಾಗೂ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

nineteen − one =