ಕ್ರಿಕೆಟ್ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲಿ ಒಳ್ಳೆಯ ಹೆಸರು ಮಾಡಿದೆ- ಡಿ.ಹೆಚ್ .ಶಂಕರಮೂರ್ತಿ

ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲಿ ಒಳ್ಳೆಯ ಹೆಸರು ಮಾಡಿದೆ- ಡಿ.ಹೆಚ್ .ಶಂಕರಮೂರ್ತಿ

-

- Advertisment -spot_img
ಶಿವಮೊಗ್ಗ :- ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲೇ ಹೆಸರು ಮಾಡಿದ ಸಂಸ್ಥೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಹೇಳಿದ್ದಾರೆ.
ಅವರು ಇಂದು ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆಯ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗ, ಚಿಕ್ಕಮಗಳೂರು,ಹಾಸನ ಜಿಲ್ಲೆಯ ಆಹ್ವಾನಿತ ಪ್ರತಿಷ್ಟಿತ ತಂಡಗಳ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
೧೯೪೫ರಲ್ಲಿ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ಜನ್ಮತಾಳಿತು. ಕ್ರಿಕೆಟ್ ಅಂದರೆ ಡಿಸಿಎ(ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್) ಎಂಬ ದಿನವಿತ್ತು. ಆಗಿನ ಸಂಸ್ಥೆಯ ಸಂಸ್ಥಾಪಕರಾದ ಪುಟ್ಟಪ್ಪ ಮತ್ತು ನಾರಾಯಣ್ ಮೊದಲಾದ ಹಿರಿಯರು ನೆಹರೂ ಕ್ರೀಡಾಂಗಣದಲ್ಲಿ ಈ ಸಂಸ್ಥೆ ಹುಟ್ಟು ಹಾಕಿದರು. ಆ ಕ್ರೀಡಾಂಗಣ ಕೂಡ ಬೇರೆಯವರ ಪಾಲಾಗುವ ಸಂದರ್ಭ ಬಂದಿತ್ತು. ಆಗ ಈ ಮಹಾತ್ಮರು ಹೋರಾಟಮಾಡಿ ಕ್ರೀಡಾಂಗಣವನ್ನು ಉಳಿಸಿಕೊಂಡರು.
ಕ್ರಿಕೆಟ್ ಈಗ ಶ್ರೀಮಂತ ಕ್ರೀಡೆಯಾಗಿದೆ. ಒಂದು ಕಾಲದಲ್ಲಿ ಆಟಗಾರರಿಗೆ ಮಜ್ಜಿಗೆ ಕೊಡಲು ಕೂಡ ಹಣವಿರಲಿಲ್ಲ. ಒಂದು ಬಾಲ್ ತರಲು ೩ ದಿನಗಳ ಸತತ ಪ್ರಯತ್ನ ಮಾಡಬೇಕಿತ್ತು. ಈಗ ಟ್ವೆಂಟಿ ಟ್ವೆಂಟಿ ಕ್ರಿಕೆಟ್ ಬಂದ ಮೇಲೆ ಹಬ್ಬದ ವಾತಾವರಣವಿರುತ್ತದೆ. ಮುಂಚೆ ಮೊದಲು ನಾವೆಲ್ಲ ಅದನ್ನು ವಿರೋಧಿಸಿದ್ದೆವು ಎಂದರು.
ಈ ಸಂದರ್ಭದಲ್ಲಿ ಕೆಎಸ್‌ಸಿಎ ಅಜೀವ ಸದಸ್ಯರಾದ ಮಾಧವ್‌ರಾವ್ ಮತ್ತು ಡಿಸಿಎ ಹಿರಿಯ ಸದಸ್ಯರಾದ ಡಿ.ಹೆಚ್. ಶಂಕರಮೂರ್ತಿ ಅವರನ್ನು ಸನ್ಮಾನಿಸಲಾಯಿತು.
ಈ ಪಂದ್ಯಾವಳಿಯಲ್ಲಿ ೧೯ ವರ್ಷದ ಒಳಗಿನ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಚಿಕ್ಕಮಗಳೂರು ತಂಡದ ಅನಿಷ್‌ಗೌತಮ್, ರಣಜಿಯಲ್ಲಿ ಆಟವಾಡಿದ ಶಿವಮೊಗ್ಗದ ಎಸ್.ಎಲ್.ಅಕ್ಷಯ್ ಮತ್ತು ಕೆಪಿಎಲ್ ಪಂದ್ಯಾವಳಿಯಲ್ಲಿ ಆಡಿದ ಶಿವಮೊಗ್ಗದ ನಿದೀಶ್ ಪಾಲ್ಗೊಂಡಿದ್ದರು.
ಕೆಎಸ್‌ಸಿಎ ವಲಯ ಸಂಚಾಲಕರಾದ ಹೆಚ್.ಎಸ್.ಸದಾನಂದ, ಅಬ್ದುಲ್ ಕಲಾಂ, ನಾಗರಾಜ್, ಕಟ್ಟೆ ಶ್ರೀನಾಥ್, ಬಿ.ಜಿ.ರಾಘವೇಂದ್ರ, ಅಮೃತ್ ಹಾಗೂ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

15 + 4 =

Latest news

test123123

test123123

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು...
- Advertisement -spot_imgspot_img

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

Must read

- Advertisement -spot_imgspot_img

You might also likeRELATED
Recommended to you