ಕ್ರಿಕೆಟ್ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲಿ ಒಳ್ಳೆಯ ಹೆಸರು ಮಾಡಿದೆ- ಡಿ.ಹೆಚ್ .ಶಂಕರಮೂರ್ತಿ

ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲಿ ಒಳ್ಳೆಯ ಹೆಸರು ಮಾಡಿದೆ- ಡಿ.ಹೆಚ್ .ಶಂಕರಮೂರ್ತಿ

-

- Advertisment -spot_img
ಶಿವಮೊಗ್ಗ :- ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲೇ ಹೆಸರು ಮಾಡಿದ ಸಂಸ್ಥೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಹೇಳಿದ್ದಾರೆ.
ಅವರು ಇಂದು ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆಯ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗ, ಚಿಕ್ಕಮಗಳೂರು,ಹಾಸನ ಜಿಲ್ಲೆಯ ಆಹ್ವಾನಿತ ಪ್ರತಿಷ್ಟಿತ ತಂಡಗಳ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
೧೯೪೫ರಲ್ಲಿ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ಜನ್ಮತಾಳಿತು. ಕ್ರಿಕೆಟ್ ಅಂದರೆ ಡಿಸಿಎ(ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್) ಎಂಬ ದಿನವಿತ್ತು. ಆಗಿನ ಸಂಸ್ಥೆಯ ಸಂಸ್ಥಾಪಕರಾದ ಪುಟ್ಟಪ್ಪ ಮತ್ತು ನಾರಾಯಣ್ ಮೊದಲಾದ ಹಿರಿಯರು ನೆಹರೂ ಕ್ರೀಡಾಂಗಣದಲ್ಲಿ ಈ ಸಂಸ್ಥೆ ಹುಟ್ಟು ಹಾಕಿದರು. ಆ ಕ್ರೀಡಾಂಗಣ ಕೂಡ ಬೇರೆಯವರ ಪಾಲಾಗುವ ಸಂದರ್ಭ ಬಂದಿತ್ತು. ಆಗ ಈ ಮಹಾತ್ಮರು ಹೋರಾಟಮಾಡಿ ಕ್ರೀಡಾಂಗಣವನ್ನು ಉಳಿಸಿಕೊಂಡರು.
ಕ್ರಿಕೆಟ್ ಈಗ ಶ್ರೀಮಂತ ಕ್ರೀಡೆಯಾಗಿದೆ. ಒಂದು ಕಾಲದಲ್ಲಿ ಆಟಗಾರರಿಗೆ ಮಜ್ಜಿಗೆ ಕೊಡಲು ಕೂಡ ಹಣವಿರಲಿಲ್ಲ. ಒಂದು ಬಾಲ್ ತರಲು ೩ ದಿನಗಳ ಸತತ ಪ್ರಯತ್ನ ಮಾಡಬೇಕಿತ್ತು. ಈಗ ಟ್ವೆಂಟಿ ಟ್ವೆಂಟಿ ಕ್ರಿಕೆಟ್ ಬಂದ ಮೇಲೆ ಹಬ್ಬದ ವಾತಾವರಣವಿರುತ್ತದೆ. ಮುಂಚೆ ಮೊದಲು ನಾವೆಲ್ಲ ಅದನ್ನು ವಿರೋಧಿಸಿದ್ದೆವು ಎಂದರು.
ಈ ಸಂದರ್ಭದಲ್ಲಿ ಕೆಎಸ್‌ಸಿಎ ಅಜೀವ ಸದಸ್ಯರಾದ ಮಾಧವ್‌ರಾವ್ ಮತ್ತು ಡಿಸಿಎ ಹಿರಿಯ ಸದಸ್ಯರಾದ ಡಿ.ಹೆಚ್. ಶಂಕರಮೂರ್ತಿ ಅವರನ್ನು ಸನ್ಮಾನಿಸಲಾಯಿತು.
ಈ ಪಂದ್ಯಾವಳಿಯಲ್ಲಿ ೧೯ ವರ್ಷದ ಒಳಗಿನ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಚಿಕ್ಕಮಗಳೂರು ತಂಡದ ಅನಿಷ್‌ಗೌತಮ್, ರಣಜಿಯಲ್ಲಿ ಆಟವಾಡಿದ ಶಿವಮೊಗ್ಗದ ಎಸ್.ಎಲ್.ಅಕ್ಷಯ್ ಮತ್ತು ಕೆಪಿಎಲ್ ಪಂದ್ಯಾವಳಿಯಲ್ಲಿ ಆಡಿದ ಶಿವಮೊಗ್ಗದ ನಿದೀಶ್ ಪಾಲ್ಗೊಂಡಿದ್ದರು.
ಕೆಎಸ್‌ಸಿಎ ವಲಯ ಸಂಚಾಲಕರಾದ ಹೆಚ್.ಎಸ್.ಸದಾನಂದ, ಅಬ್ದುಲ್ ಕಲಾಂ, ನಾಗರಾಜ್, ಕಟ್ಟೆ ಶ್ರೀನಾಥ್, ಬಿ.ಜಿ.ರಾಘವೇಂದ್ರ, ಅಮೃತ್ ಹಾಗೂ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four + four =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you