ಕ್ರಿಕೆಟ್ರಾಜ್ಯದಸರಾ ಕ್ರೀಡಾಕೂಟ ಚಿನ್ನದ ಪದಕದೊಂದಿಗೆ ವಿನೂತನ ದಾಖಲೆ ನಿರ್ಮಿಸಿದ ಟೊರ್ಪೆಡೋಸ್ ಸಂಸ್ಥೆಯ...

ದಸರಾ ಕ್ರೀಡಾಕೂಟ ಚಿನ್ನದ ಪದಕದೊಂದಿಗೆ ವಿನೂತನ ದಾಖಲೆ ನಿರ್ಮಿಸಿದ ಟೊರ್ಪೆಡೋಸ್ ಸಂಸ್ಥೆಯ ವಿದ್ಯಾರ್ಥಿನಿಯರು…

-

- Advertisment -spot_img
ಅಕ್ಟೋಬರ್ 1 ರಿಂದ 4 ರ ವರೆಗೆ ಮೈಸೂರಿನ ಜೆ.ಸಿ.ಇ ಕಾಲೇಜಿನಲ್ಲಿ ನಡೆದ ದಸರಾ ರಾಜ್ಯಮಟ್ಟದ ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾಕೂಟದಲ್ಲಿ ಟೊರ್ಪೆಡೋಸ್ ಸಂಸ್ಥೆಯ ವಿದ್ಯಾರ್ಥಿನಿಯರಾದ ಪ್ರಶಸ್ತಿ ಶೆಟ್ಟಿ, ಆರ್ನಾ ಸದೋತ್ರಾ ಹಾಗೂ ಇಶಾನಿ ಹರೀಶ್ ಈ ಮೂವರ ತಂಡ ಪ್ರಥಮ‌ ಪ್ರಶಸ್ತಿಯನ್ನು ಅಲಂಕರಿಸಿದ್ದಾರೆ.
ಪ್ರಾರಂಭಿಕ ಹಂತದಿಂದಲೇ ಭರ್ಜರಿ ಯಶಸ್ಸು ಸಾಧಿಸಿದ ಈ ಮೂವರು ಪ್ರಥಮ‌ ಸುತ್ತಿನಲ್ಲಿ ಬೆಂಗಳೂರು ಗ್ರಾಮಾಂತರ ತಂಡವನ್ನು 3-0 ಅಂತರದಲ್ಲಿ,ದ್ವಿತೀಯ ಸುತ್ತಿನಲ್ಲಿ ಬೆಂಗಳೂರು ನಗರ ತಂಡವನ್ನು 3-0 ಅಂತರದಲ್ಲಿ,ತೃತೀಯ ಸುತ್ತಿನಲ್ಲಿ ಕಲಬುರ್ಗಿ ತಂಡವನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಗೈದು ಫೈನಲ್ ಪ್ರವೇಶಿಸಿದ್ದರು.
ಫೈನಲ್ ನಲ್ಲಿ ಎದುರಾಳಿ ಬೆಳಗಾಂ ತಂಡವನ್ನು 3-1 ಅಂತರದಲ್ಲಿ ಸೋಲಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿ,ನಗದು ಬಹುಮಾನವನ್ನು ಪಡೆದರು. ದಸರಾ ಕ್ರೀಡಾ ಕೂಟದಲ್ಲಿ ಸತತ 5 ನೇ ಬಾರಿಗೆ ಚಿನ್ನದ ಪದಕವನ್ನು ಪಡೆದು ವಿನೂತನ ದಾಖಲೆಯನ್ನು ನಿರ್ಮಿಸಿದ್ದಾರೆ.
ದಾಖಲೆಯ ಗೆಲುವು ಸಾಧಿಸಿದ ಈ ಮೂವರಲ್ಲಿ ಕುಮಾರಿ ಪ್ರಶಸ್ತಿ ಶೆಟ್ಟಿ,ಗೌತಮ್ ಶೆಟ್ಟಿಯವರ ಪುತ್ರಿ.
ಆರ್ನಾ ಸದೋತ್ರಾ,ಇಶಾನಿ ಹರೀಶ್ ಹಾಗೂ ಪ್ರಶಸ್ತಿ ಡೆಲ್ಲಿ ಪಬ್ಲಿಕ್ ಸ್ಕೂಲ್(MRPL) ಮಂಗಳೂರು ವಿದ್ಯಾರ್ಥಿನಿಯರು,ದೈಹಿಕ ನಿರ್ದೇಶಕರಾದ ಗೌತಮ್ ಶೆಟ್ಟಿಯವರ ಟೊರ್ಪೆಡೋಸ್ ಸಂಸ್ಥೆಯಲ್ಲಿ ಕಠಿಣ ತರಬೇತಿ ಪಡೆದು,ಭರ್ಜರಿ ಯಶಸ್ಸು ಸಾಧಿಸಿ
ವಿದ್ಯಾಸಂಸ್ಥೆಗೂ ಹಾಗೂ ಟೊರ್ಪೆಡೋಸ್ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆಂದು ಗೌತಮ್ ಶೆಟ್ಟಿಯವರು ಹರ್ಷ ವ್ಯಕ್ತ ಪಡಿಸಿದ್ದಾರೆ.
          ಆರ್.ಕೆ.ಆಚಾರ್ಯ ಕೋಟ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

15 + 15 =

Latest news

ಯಶಸ್ವೀ ಬದುಕಿಗೆ ಕ್ರೀಡೆ ಅವಶ್ಯ:ವಿಠಲ್ ರಿಶಾನ್ ನಾಯಕ್.

ಯಶಸ್ವೀ ಬದುಕಿಗೆ ಕ್ರೀಡೆ ಅವಶ್ಯ:ವಿಠಲ್ ರಿಶಾನ್ ನಾಯಕ್. ಬ್ರಹ್ಮಾವರ ಸಂತೆಕಟ್ಟೆಯಲ್ಲಿ ವಿರಾಟ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾದ ಮಾನ್ಸೂನ್ ಟ್ರೋಫಿ -26 ಕ್ರಿಕೆಟ್ ಪಂದ್ಯಾಟವು ಶುಭಾರಂಭಗೊಂಡಿತು. ದುಬೈ ಟೆಕ್ನೋಟೈಟಾನ್ಸ್ ಕ್ರಿಕೆಟ್...

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...
- Advertisement -spot_imgspot_img

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Must read

- Advertisement -spot_imgspot_img

You might also likeRELATED
Recommended to you