SportsKannada | ಸ್ಪೋರ್ಟ್ಸ್ ಕನ್ನಡ

ಡಿಸೆಂಬರ್ 21, 22 : ಬೈಂದೂರು ತಾಲೂಕು ಮಟ್ಟದ 60 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ “ಬೈಂದೂರು ಚಾಂಪಿಯನ್ ಟ್ರೋಫಿ – 2019”

ಬೈಂದೂರು : ಇಲ್ಲಿನ ಶ್ರೀ ಸೇನೇಶ್ವರ ಕಲಾ ಮತ್ತು ಕ್ರೀಡಾ ಸಂಘ (ರಿ.) ಇವರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ಸಹಾಯಧನ ಹುಟ್ಟೂರ ಸನ್ಮಾನ ಹಾಗೂ ಬೈಂದೂರು ತಾಲೂಕು ಮಟ್ಟದ 60 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ “ಬೈಂದೂರು ಚಾಂಪಿಯನ್ ಟ್ರೋಫಿ – 2019” ಡಿಸೆಂಬರ್ 21, 22ನೇ ಶನಿವಾರ ಮತ್ತು ಭಾನುವಾರ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಡಿಸೆಂಬರ್ 21ನೇ ಶನಿವಾರ ರಾತ್ರಿ 8.30ಕ್ಕೆ ಸಭಾ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ಕರ್ನಾಟಕ ಸರಕಾರ ಧಾರ್ಮಿಕ ಮುಜುರಾಯಿ ಹಾಗೂ ಬಂದರು, ಮೀನುಗಾರರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆ ಮಾಡಲಿದ್ದಾರೆ. ಶಿವಮೊಗ್ಗ-ಬೈಂದೂರು ಲೋಕಸಭಾ ಕ್ಷೇತ್ರದ ಸಂಸದರು ಬಿ.ವೈ, ರಾಘವೇಂದ್ರ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ನಿವೃತ್ತ ಐ.ಎಫ್.ಎಸ್ ಅಧಿಕಾರಿ ಬಿ. ಜಗನ್ನಾಥ ಶೆಟ್ಟಿ, ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ, ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ಟಿ. ಶಂಕರ ಪೂಜಾರಿ, ಕುಂದಾಪುರ ತಾಲೂಕು ಪಂಚಾಯತ್ ಸದಸ್ಯೆ ಮಾಲಿನಿ.ಕೆ, ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ ಉಪಸ್ಥಿಲಿದ್ದಾರೆ.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ : ಧಾರವಾಡ ಉದ್ಯಮಿ ಯು.ಬಿ. ಶೆಟ್ಟಿ, ಶ್ರೇಷ್ಠ ರಾಜ್ಯ ಸಹಕಾರ ಪ್ರಶಸ್ತಿ ಪುರಸ್ಕೃತ ಎಸ್. ರಾಜು ಪೂಜಾರಿ, ಸಮಾಜ ಸೇವೆಯಲ್ಲಿ ಗೋವಿಂದಬಾಬು ಪೂಜಾರಿ, ಜ್ಯೋತಿಷ್ಯ ಶಾಸ್ತ್ರದಲ್ಲಿ ಡಾ. ಮಹೇಂದ್ರ ಭಟ್, ಮೌಖಿಕ ಮತ್ತು ಮ್ಯಾಕ್ಸಿಲೊ ಮುಖದ ಶಸ್ತ್ರ ಚಿಕಿತ್ಸೆ ವೈದ್ಯಾಧಿಕಾರಿ. ಉದಯ್ ಎಮ್.ಡಿ.ಎಸ್. ಇವರೆಲ್ಲನ್ನೂ ಸನ್ಮಾನ ಮಾಡಲಿದ್ದಾರೆ. ಅದೃಷ್ಟ ವೀಕ್ಷಕರಿಗೆ ಆಕರ್ಷಕ ಬಹುಮಾನ.

ಸಾಂಸ್ಕೃತಿಕ ಕಾರ್ಯಕ್ರಮ : ದಿನಾಂಕ – 21ನೇ ಶನಿವಾರ ಸಂಜೆ. 6.30ಕ್ಕೆ ಬೈಂದೂರು ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಖ್ಯಾತ ಬಡಗು ಮತ್ತು ತೆಂಕು ಕಲಾವಿದರ ಸಮಾಗಮದಲ್ಲಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಸಾರಿಥ್ಯದಲ್ಲಿ ಅದ್ದೂರಿ ಯಕ್ಷಗಾನ “ಗಾನ-ನಾಟ್ಯ-ವೈಭವ” ನಡೆಯಲಿದೆ.

ಡಿಸೆಂಬರ್ 22ನೇ ಭಾನುವಾರ ರಾತ್ರಿ. 7.30ಕ್ಕೆ ಸಮಾರೋಪ ಸಮಾರಂಭದ ಸಭಾ ಕಾರ್ಯಕ್ರಮ ವಿಶೇಷ ಆಹ್ವಾನಿತ ಉಪ್ಪುಂದ ಖ್ಯಾತ ಜಾದುಗಾರ ಓಂ ಗಣೇಶ್ ಉಪ್ಪುಂದ, ಸಭಾಧ್ಯಕ್ಷ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ, ಮುಖ್ಯಅತಿಥಿಗಳಾಗಿ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯ ಪುಷ್ಪರಾಜ್ ಶೆಟ್ಟಿ, ಕುಂದಾಪುರ ಪ್ರಥಮದರ್ಜೆ ಗುತ್ತಿಗೆದಾರ ಮಹೇಶ್ ಪೂಜಾರಿ, ಯಡ್ತರೆ ಗ್ರಾಮ ಪಂಚಾಯತ್ ಸದಸ್ಯ ಬಿ. ನಾಗರಾಜ್ ಗಾಣಿಗ, ಕುಂದಾಪುರ ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯ ಜೈಸನ್ ಎಂ.ಡಿ, ಬೈಂದೂರು ಅಂಬಿಕಾ ಇಂಟರ್ ನ್ಯಾಷನಲ್ ಆಡಳಿತ ನಿರ್ದೇಶಕ ಜಯಾನಂದ ಹೋಬಳಿದಾರ್, ಬೈಂದೂರು ಲಾವಣ್ಯ ರಿ ರಂಗಭೂಮಿ ಕಲಾವಿದ ಬಿ. ಗಣೇಶ್ ಕಾರಂತ್, ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಯು. ಪ್ರಕಾಶ್ ಭಟ್, ಧೃತಿ ಸರ್ಜಿಕಲ್ ಸಲ್ಯೂಷನ್ಸ್ ಇಂಡಿಯಾ ಪ್ರೈ.ಲಿ ಬೆಳಕೆ – ಭಟ್ಕಳ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಬೈಂದೂರು ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸುರೇಶ್ ಜಿ. ನಾಯ್ಕ್ ಭಾಗವಹಿಸಲಿದ್ದಾರೆ.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ : ತೀರ್ಥಹಳ್ಳಿ ಗೋಪಾಲ ಆಚಾರ್ಯ, ಕುಮಾರಿ ಧನ್ವಿ ಪೂಜಾರಿ, ಚಂದ್ರ ಪೂಜಾರಿ ದುರ್ಮಿ, ವಿಲ್ಸನ್ ಡಯಾಸ್, ರಿಯಾಜ್ ಇವರೆಲ್ಲನ್ನು ಸನ್ಮಾನ ಮಾಡಿಲಿದ್ದಾರೆ.

ಮಂಗಳೂರು ರೆಡ್.ಎಫ್.ಎಂ 93.5 ನಿರೂಪಕಿ ಆರ್.ಜೆ ನಯನಾ ಯರುಕೋಣೆ, ಅರುಣ್ ಕುಮಾರ್ ಶಿರೂರು ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.

ಮಾಧ್ಯಮ ಪ್ರಚಾರ : ಸ್ಪೋರ್ಟ್ಸ್ ಕನ್ನಡ ಡಾಟ್ ಕಾಮ್, ಮೈಬೈಂದೂರು ಡಾಟ್ ಕಾಮ್

ಸರ್ವರಿಗೂ ಆದರದ ಸ್ವಾಗತ ಬಯಸುವ : ಗೌವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಶ್ರೀ ಸೇನೇಶ್ವರ ಕಲಾ ಮತ್ತು ಕ್ರೀಡಾ ಸಂಘ ರಿ ಬೈಂದೂರು

 

Exit mobile version