Categories
ಕ್ರಿಕೆಟ್

ಡಿಸೆಂಬರ್ 7 ಮತ್ತು 8 ರಂದು ಜೈ ಭೀಮ್ ಟ್ರೋಫಿ-2019

ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ), ಅಂಬೇಡ್ಕರ್ ವಾದ ಗ್ರಾಮ‌ ಶಾಖೆ ಪಡುಬಿದ್ರಿ ಇವರ ಆಶ್ರಯದಲ್ಲಿ ಡಿಸೆಂಬರ್ 7 ಮತ್ತು 8 ರಂದು ಅನಾರೋಗ್ಯ ಪೀಡಿತರ ನೆರವಿಗಾಗಿ ದ್ವಿತೀಯ ಬಾರಿಗೆ ಜೈ ಭೀಮ್ ಕಪ್-2019 ಪಂದ್ಯಾವಳಿಯನ್ನು, ಪಡುಬಿದ್ರಿಯ ಬೋರ್ಡ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ.

ಎಸ್.ಸಿ ಮತ್ತು ಎಸ್.ಟಿ ತಂಡಗಳಿಗೆ ಮಾತ್ರ ಮೀಸಲಾಗಿರುವ ಈ ಪಂದ್ಯಾಕೂಟದ ವಿಜೇತ ತಂಡ 50,000 ನಗದು,ರನ್ನರ್ಸ್ ತಂಡ 30,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು,ಇನ್ನಿತರ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತಿದೆ.

ಪಂದ್ಯಾವಳಿಯ ನೇರ ಪ್ರಸಾರ “ಕ್ರಿಕ್ ಸೇ” ಯೂ ಟ್ಯೂಬ್ ಚಾನೆಲ್ ಬಿತ್ತರಿಸಲಿದೆ.

ಆರ್.ಕೆ.ಆಚಾರ್ಯ ಕೋಟ

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

six + 16 =