11.9 C
London
Friday, May 17, 2024
Home#covid19ಬ್ಯಾಡ್ಮಿಂಟನ್ ಟೀಮ್ ಕಂಚಿನಡ್ಕ ಇವರ ಆಶ್ರಯದಲ್ಲಿ ಆಹಾರ ಸಾಮಗ್ರಿಗಳ ವಿತರಣೆ 

ಬ್ಯಾಡ್ಮಿಂಟನ್ ಟೀಮ್ ಕಂಚಿನಡ್ಕ ಇವರ ಆಶ್ರಯದಲ್ಲಿ ಆಹಾರ ಸಾಮಗ್ರಿಗಳ ವಿತರಣೆ 

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕೊರೋನಾ ರೋಗದ ಪರಿಣಾಮದಿಂದ ಇಡೀ ದೇಶವೇ ತಟಸ್ಥವಾಗಿರುವ ಈ ಕಾಲಘಟ್ಟದಲ್ಲಿ ಸಾಮಾಜಿಕ ಸೇವೆಗಾಗಿ ಕಟಿಬಧ್ಧವಾಗಿ ಹಲವಾರು ಸಂಘಟನೆಗಳ ನಿಸ್ವಾರ್ಥ ಸೇವೆಯಲ್ಲಿ ಹಲವಾರು ಉದ್ಯಮಿಗಳು ಕೈಜೋಡಿಸುತ್ತಿದ್ದಾರೆ.
 
ಅದರಂತೆ ಮಾನವೀಯ ಕೈಂಕರ್ಯದಲ್ಲಿ ಸದಾ ಸಹಕಾರಿಯಾಗಿರುವ,ರಾಷ್ಟ್ರೀಯ ಮಟ್ಟದಲ್ಲಿಯೂ ವಿಶೇಷ ಜವಾಬ್ದಾರಿ ಹೊತ್ತ ನಾಯಕರಾದ  ಶ್ರೀ ಸಂತೋಷ್ ಶೆಟ್ಟಿ ದೆಹಲಿ ಇವರು ಕೊಡಮಾಡಿದ ಅಗತ್ಯ ದಿನಬಳಕೆಯ ಆಹಾರ ಸಾಮಗ್ರಿಗಳನ್ನು ಇಂದು ಮಾನವೀಯ ಕಾರ್ಯದಲ್ಲಿ ಕೈಜೋಡಿಸುತ್ತಿರುವ  ಬ್ಯಾಡ್ಮಿಂಟನ್ ಟೀಮ್ ಕಂಚಿನಡ್ಕದ ನೇತೃತ್ವದಲ್ಲಿ ಕಂಚಿನಡ್ಕದ ಸುಮಾರು 35 ಕುಟುಂಬಗಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಕೃಷ್ಣ ಬಂಗೇರ, ಶಂಕರ್ ಕಂಚಿನಡ್ಕ, ಪದ್ಮನಾಭ, ಸಂತೋಷ್ ನಂಬಿಯಾರ್, ಸುನೀಲ್, ಗಣೇಶ್ ಉಪಸ್ಥಿತರಿದ್ದರು.
ಕಂಚಿನಡ್ಕ ತಂಡದ ಕಾರ್ಯದರ್ಶಿಗಳಾದ ಶಂಕರ್ ಪಾಣಾರ ರವರು ಕೊರೋನಾ ದ ಪರಿಣಾಮ ಸಂಕಷ್ಟದ ಪರಿಸ್ಥಿತಿ ಅನುಭವಿಸುತ್ತಿರುವ ದೈವಾರಾಧನೆ ಕಾರ್ಯದಲ್ಲಿ ಶಂಕರ್ ರವರ ಒಡನಾಡಿಗಳು ಹಾಗೂ ಪಾಣಾರ ಮತ್ತು ನಲಿಕೆ ಜನಾಂಗದ 25 ಕುಟುಂಬಗಳಿಗೆ ದಿನಬಳಕೆಯ ವಸ್ತುಗಳನ್ನು ವಿತರಿಸಿದರು.
ಬ್ಯಾಡ್ಮಿಂಟನ್ ಟೀಮ್ ಕಂಚಿನಡ್ಕ ಪಡುಬಿದ್ರಿ ಪರಿಸರದಲ್ಲಿ ಹೊನಲು ಬೆಳಕಿನ ಷಟಲ್,ಕ್ರಿಕೆಟ್ ಹೀಗೆ ಕ್ರೀಡಾ ಚಟುವಟಿಕೆ,ಧಾರ್ಮಿಕ,ಸಾಮಾಜಿಕ‌ ಸೇವೆಗಳಲ್ಲಿ ತೊಡಗಿಸಿಕೊಂಡು ಜಿಲ್ಲೆಯ ಮಾದರಿ ಸಂಸ್ಥೆ ಎನಿಸಿಕೊಂಡಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eight + eleven =