ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಹೆಬ್ರಿಯಲ್ಲಿ ಜಿಲ್ಲಾ ಮಟ್ಟದ ಶ್ರೀವಿಶ್ವಕರ್ಮ ಟ್ರೋಫಿ ಕ್ರಿಕೆಟ್ ಪಂದ್ಯಾಟ."ವಿಶ್ವಕರ್ಮರು ವಿಶ್ವದ ಶಿಲ್ಪಿಗಳು"...

ಹೆಬ್ರಿಯಲ್ಲಿ ಜಿಲ್ಲಾ ಮಟ್ಟದ ಶ್ರೀವಿಶ್ವಕರ್ಮ ಟ್ರೋಫಿ ಕ್ರಿಕೆಟ್ ಪಂದ್ಯಾಟ.”ವಿಶ್ವಕರ್ಮರು ವಿಶ್ವದ ಶಿಲ್ಪಿಗಳು” : ಗಣೇಶ್ ಕುಮಾರ್

-

- Advertisment -spot_img
ಹೆಬ್ರಿ : ವಿಶ್ವಕರ್ಮರು ಹುಟ್ಟಿನಲ್ಲೇ ಪ್ರತಿಭಾನ್ವಿತರು, ಹುಟ್ಟು ಎಂಜಿನಿಯರ್ ಗಳು,ವಿಶ್ವದ ಶಿಲ್ಪಿಗಳು, ಅದಕ್ಕಾಗಿ ನಾಡಿನಲ್ಲಿ ವಿಶ್ವಕರ್ಮ ಸಮುದಾಯಕ್ಕೆ ವಿಶೇಷವಾದ ಸ್ಥಾನಮಾನವಿದೆ. ದೇಶದ ಅಭಿವೃದ್ಧಿಯಲ್ಲಿ ವಿಶ್ವಕರ್ಮರ ಅಪಾರವಾದ ಕೊಡುಗೆ ಇದೆ ಎಂದು ಹೆಬ್ರಿ ಗ್ರಾಮ‌ ಪಂಚಾಯತಿ ಉಪಾಧ್ಯಕ್ಷ ಗಣೇಶ್ ಕುಮಾರ್ ಜರ್ವತ್ತು ಹೇಳಿದರು.
ಅವರು ಹೆಬ್ರಿ ಶ್ರೀ ವಿಶ್ವಕರ್ಮ ಯುವ ವೃಂದದ ವತಿಯಿಂದ  ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ  ಭಾನುವಾರ ಆರಂಭಗೊಂಡ 2ದಿನಗಳ ವಿಶ್ವಕರ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣನಿಧಿ ಮತ್ತು ಅಶಕ್ತ ಕುಟುಂಬದ ಆರೋಗ್ಯ ನಿಧಿಯ ಸಲುವಾಗಿ  ಸಾರ್ವಜನಿಕರ ಮತ್ತು ವಿಶ್ವಕರ್ಮ ಸಮಾಜದ ಬಾಂಧವರ ಜಿಲ್ಲಾ ಮಟ್ಟದ 60 ಗಜಗಳ ನಾಕೌಟ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟವನ್ನು  ಉದ್ಘಾಟಿಸಿ ಮಾತನಾಡಿದರು.
ವಿಶ್ವಕರ್ಮ ಸಮುದಾಯದ ಎಲ್ಲರೂ ವಿದ್ಯಾವಂರರಾಗುವ ಮೂಲಕ ಎಲ್ಲರೂ ಸೇರಿ ಸಮಾಜವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟಬೇಕು, ಬ್ರಹ್ಮಶ್ರೀ ನಾರಾಯಣ ಗುರುಗಳ ಧ್ಯೇಯದಂತೆ ವಿದ್ಯೆಯಿಂದ ಸ್ವತಂತ್ರರಾಗಲು ಸಾಧ್ಯವಿದೆ ಎಂದು ಗಣೇಶ್ ಕುಮಾರ್ ಹೇಳಿದರು.
ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಉಮೇಶ ಎಡಿ ಮಾತನಾಡಿ ಪ್ರಪಂಚದ ಪ್ರಥಮ ವಾಸ್ತುಶಿಲ್ಪಿಗಳು ವಿಶ್ವಕರ್ಮರು. ಯುವಕರು ಅತ್ಯುತ್ತಮ ಶಿಕ್ಷಣ ಪಡೆದು ವಿಶ್ವಕರ್ಮರ ಕೌಶಲ್ಯದ ಪರಂಪರೆಯನ್ನು ಮುಂದುವರೆಸಿಕೊಂಡು ಸಮಾಜವನ್ನು ಇನ್ನಷ್ಟು ಪ್ರಬಲವಾಗಿ ಕಟ್ಟಬೇಕಿದೆ ಎಂದರು.
ಯುವ ವೃಂದದ ಅಧ್ಯಕ್ಷ ಭುವನೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಹೆಬ್ರಿ ಗ್ರಾಮ ಪಂಚಾಯತಿ ಸದಸ್ಯರಾದ ಚೈತನ್ಯ ಯುವ ವೃಂದದ ಗೌರವಾಧ್ಯಕ್ಷ ಎಚ್. ಜನಾರ್ಧನ್, ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಪುರ ರತ್ನಾಕರ ಆಚಾರ್ಯ, ವಿಶ್ವಕರ್ಮ ಮಹಿಳಾ ಮಂಡಳಿಯ ಲೀಲಾವತಿ ರಾಜೇಶ್ ಆಚಾರ್ಯ, ಮಠದಬೆಟ್ಟು ರಾಜೇಶ ಆಚಾರ್ಯ, ಯುವ ವೃಂದದ ಪಧಾದಿಕಾರಿಗಳು ಉಪಸ್ಥಿತರಿದ್ದರು.
ಶಿವಪುರ ಚಂದ್ರಶೇಖರ ಆಚಾರ್ಯ ನಿರೂಪಿಸಿ ಸ್ವಾಗತಿಸಿದರು. ಅರವಿಂದ ಆಚಾರ್ಯ ವಂದಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

sixteen − 16 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you