16 C
London
Tuesday, May 14, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಹೆಬ್ರಿಯಲ್ಲಿ ಜಿಲ್ಲಾ ಮಟ್ಟದ ಶ್ರೀವಿಶ್ವಕರ್ಮ ಟ್ರೋಫಿ ಕ್ರಿಕೆಟ್ ಪಂದ್ಯಾಟ."ವಿಶ್ವಕರ್ಮರು ವಿಶ್ವದ ಶಿಲ್ಪಿಗಳು" : ಗಣೇಶ್ ಕುಮಾರ್

ಹೆಬ್ರಿಯಲ್ಲಿ ಜಿಲ್ಲಾ ಮಟ್ಟದ ಶ್ರೀವಿಶ್ವಕರ್ಮ ಟ್ರೋಫಿ ಕ್ರಿಕೆಟ್ ಪಂದ್ಯಾಟ.”ವಿಶ್ವಕರ್ಮರು ವಿಶ್ವದ ಶಿಲ್ಪಿಗಳು” : ಗಣೇಶ್ ಕುಮಾರ್

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಹೆಬ್ರಿ : ವಿಶ್ವಕರ್ಮರು ಹುಟ್ಟಿನಲ್ಲೇ ಪ್ರತಿಭಾನ್ವಿತರು, ಹುಟ್ಟು ಎಂಜಿನಿಯರ್ ಗಳು,ವಿಶ್ವದ ಶಿಲ್ಪಿಗಳು, ಅದಕ್ಕಾಗಿ ನಾಡಿನಲ್ಲಿ ವಿಶ್ವಕರ್ಮ ಸಮುದಾಯಕ್ಕೆ ವಿಶೇಷವಾದ ಸ್ಥಾನಮಾನವಿದೆ. ದೇಶದ ಅಭಿವೃದ್ಧಿಯಲ್ಲಿ ವಿಶ್ವಕರ್ಮರ ಅಪಾರವಾದ ಕೊಡುಗೆ ಇದೆ ಎಂದು ಹೆಬ್ರಿ ಗ್ರಾಮ‌ ಪಂಚಾಯತಿ ಉಪಾಧ್ಯಕ್ಷ ಗಣೇಶ್ ಕುಮಾರ್ ಜರ್ವತ್ತು ಹೇಳಿದರು.
ಅವರು ಹೆಬ್ರಿ ಶ್ರೀ ವಿಶ್ವಕರ್ಮ ಯುವ ವೃಂದದ ವತಿಯಿಂದ  ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ  ಭಾನುವಾರ ಆರಂಭಗೊಂಡ 2ದಿನಗಳ ವಿಶ್ವಕರ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣನಿಧಿ ಮತ್ತು ಅಶಕ್ತ ಕುಟುಂಬದ ಆರೋಗ್ಯ ನಿಧಿಯ ಸಲುವಾಗಿ  ಸಾರ್ವಜನಿಕರ ಮತ್ತು ವಿಶ್ವಕರ್ಮ ಸಮಾಜದ ಬಾಂಧವರ ಜಿಲ್ಲಾ ಮಟ್ಟದ 60 ಗಜಗಳ ನಾಕೌಟ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟವನ್ನು  ಉದ್ಘಾಟಿಸಿ ಮಾತನಾಡಿದರು.
ವಿಶ್ವಕರ್ಮ ಸಮುದಾಯದ ಎಲ್ಲರೂ ವಿದ್ಯಾವಂರರಾಗುವ ಮೂಲಕ ಎಲ್ಲರೂ ಸೇರಿ ಸಮಾಜವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟಬೇಕು, ಬ್ರಹ್ಮಶ್ರೀ ನಾರಾಯಣ ಗುರುಗಳ ಧ್ಯೇಯದಂತೆ ವಿದ್ಯೆಯಿಂದ ಸ್ವತಂತ್ರರಾಗಲು ಸಾಧ್ಯವಿದೆ ಎಂದು ಗಣೇಶ್ ಕುಮಾರ್ ಹೇಳಿದರು.
ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಉಮೇಶ ಎಡಿ ಮಾತನಾಡಿ ಪ್ರಪಂಚದ ಪ್ರಥಮ ವಾಸ್ತುಶಿಲ್ಪಿಗಳು ವಿಶ್ವಕರ್ಮರು. ಯುವಕರು ಅತ್ಯುತ್ತಮ ಶಿಕ್ಷಣ ಪಡೆದು ವಿಶ್ವಕರ್ಮರ ಕೌಶಲ್ಯದ ಪರಂಪರೆಯನ್ನು ಮುಂದುವರೆಸಿಕೊಂಡು ಸಮಾಜವನ್ನು ಇನ್ನಷ್ಟು ಪ್ರಬಲವಾಗಿ ಕಟ್ಟಬೇಕಿದೆ ಎಂದರು.
ಯುವ ವೃಂದದ ಅಧ್ಯಕ್ಷ ಭುವನೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಹೆಬ್ರಿ ಗ್ರಾಮ ಪಂಚಾಯತಿ ಸದಸ್ಯರಾದ ಚೈತನ್ಯ ಯುವ ವೃಂದದ ಗೌರವಾಧ್ಯಕ್ಷ ಎಚ್. ಜನಾರ್ಧನ್, ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಪುರ ರತ್ನಾಕರ ಆಚಾರ್ಯ, ವಿಶ್ವಕರ್ಮ ಮಹಿಳಾ ಮಂಡಳಿಯ ಲೀಲಾವತಿ ರಾಜೇಶ್ ಆಚಾರ್ಯ, ಮಠದಬೆಟ್ಟು ರಾಜೇಶ ಆಚಾರ್ಯ, ಯುವ ವೃಂದದ ಪಧಾದಿಕಾರಿಗಳು ಉಪಸ್ಥಿತರಿದ್ದರು.
ಶಿವಪುರ ಚಂದ್ರಶೇಖರ ಆಚಾರ್ಯ ನಿರೂಪಿಸಿ ಸ್ವಾಗತಿಸಿದರು. ಅರವಿಂದ ಆಚಾರ್ಯ ವಂದಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

5 × 1 =