Categories
Action Replay ಬ್ಯಾಡ್ಮಿಂಟನ್

ಹಳೆಯಂಗಡಿ : ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಇವರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಷಟಲ್ ಬ್ಯಾಡ್ಮಿಂಟನ್

ವೃತ್ತಿಪರ ಇಂಜಿನಿಯರ್ಸ್ ಗಳಿಗಾಗಿ ಏರ್ಪಡಿಸಲಾಗಿದ್ದ ಅಂತರ್ ಜಿಲ್ಲಾ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಉದ್ಘಾಟನಾ ಸಮಾರಂಭ ರವಿವಾರ ನಡೆಯಿತು.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಇಂಜಿನಿಯರ್ಸ್ ಅಸೋಷಿಯೇಶನ್ ಅಧ್ಯಕ್ಷರು ಹಾಗೂ ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಗುರುರಾಜ್ ಭಟ್,ಹಿಮಾಲಯ ಪ್ರಾಡಕ್ಟ್ ನ ಸೀನಿಯರ್ ಸೇಲ್ಸ್ ಆಫೀಸರ್ ದಿನೇಶ್ ಆಚಾರ್ಯ,ಉದ್ಯಮಿ ನಾಗಭೂಷಣ್ ರೆಡ್ಡಿ ಹಾಗೂ ಸ್ಪೋರ್ಟ್ಸ್ ಡೆನ್ ಈವೆಂಟ್ ಪ್ರಮುಖ ರೂವಾರಿ ಗಣೇಶ್ ಕಾಮತ್ ಹಾಗೂ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ‌ ಅಧ್ಯಕ್ಷ ಗೌತಮ್ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲೆಯ 62 ವೃತ್ತಿಪರ ಇಂಜಿನಿಯರ್ಸ್ ಆಟಗಾರರು ಷಟಲ್ ಪಂದ್ಯಾಕೂಟದಲ್ಲಿ ಭಾಗವಹಿಸಿದ್ದು,

ಬ್ಯಾಡ್ಮಿಂಟನ್ ಕೋಚ್ ಸಂತೋಷ್,ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಮೆನೇಜರ್ ಕೆ.ಪಿ.ಸತೀಶ್,ಕಾರ್ತಿಕ್,ನವನೀತ್ ಪಂದ್ಯಾಕೂಟವನ್ನು ಅಚ್ಚುಕಟ್ಟಾಗಿ ಸಂಯೋಜಿಸಿದ್ದರು.

  • ಆರ್.ಕೆ‌.ಆಚಾರ್ಯ ಕೋಟ

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

10 − 10 =