ಕ್ರಿಕೆಟ್ಕೆ.ಎಲ್ ರಾಹುಲ್, ಕನ್ನಡಿಗ ರಣಜಿ ಸಾಧನೆ ಹೇಗಿದೆ ಗೊತ್ತಾ?

ಕೆ.ಎಲ್ ರಾಹುಲ್, ಕನ್ನಡಿಗ ರಣಜಿ ಸಾಧನೆ ಹೇಗಿದೆ ಗೊತ್ತಾ?

-

- Advertisment -spot_img

ಕೆ.ಎಲ್ ರಾಹುಲ್, ಕನ್ನಡಿಗ ರಣಜಿ ಸಾಧನೆ ಹೇಗಿದೆ ಗೊತ್ತಾ?

ಕನ್ನಡಿಗ ಕೆ.ಎಲ್ ರಾಹುಲ್ ಐದು ವರ್ಷಗಳ ನಂತರ ರಣಜಿ ರಣರಂಗಕ್ಕೆ ಇಳಿಯಲು ರೆಡಿಯಾಗಿದ್ದಾರೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾಗಲಿರುವ ಹರ್ಯಾಣ ವಿರುದ್ಧದ ರಣಜಿ ಪಂದ್ಯದಲ್ಲಿ ರಾಹುಲ್ ಆಡಲಿದ್ದಾರೆ. ಈ ಮೂಲಕ ಐದು ವರ್ಷಗಳ ನಂತರ ರಾಹುಲ್ ಕರ್ನಾಟಕ ಪರ ವೈಟ್ & ವೈಟ್’ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾಹುಲ್ ಕೊನೆಯ ಬಾರಿ ರಣಜಿ ಪಂದ್ಯವಾಡಿದ್ದು 2019-20ರಲ್ಲಿ. ಈ ವರ್ಷ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಆಡಿದ ನಂತರ ರಾಹುಲ್ ಮತ್ತೆ ರಣಜಿ ಪಂದ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸುದೀರ್ಘ ಐದು ವರ್ಷಗಳ ನಂತ್ರ ರಣಜಿ ಕ್ರಿಕೆಟ್’ಗೆ ರಾಹುಲ್ ಕಂಬ್ಯಾಕ್ ಮಾಡಿದ್ದಾರೆ.

ಕರ್ನಾಟಕ ಪರ ರಾಹುಲ್ ಇದುವರೆಗೆ 27 ರಣಜಿ ಪಂದ್ಯಗಳನ್ನಾಡಿದ್ದು, 49 ಇನ್ನಿಂಗ್’ಗಳಿಂದ 61.60 ಸರಾಸರಿಯಲ್ಲಿ 8 ಶತಕ ಹಾಗೂ 13 ಅರ್ಧಶತಕಗಳ ನೆರವಿವಿಂದ 2834 ರನ್ ಗಳಿಸಿದ್ದಾರೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ 2014-15ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ ಉತ್ತರ ಪ್ರದೇಶ ವಿರುದ್ಧ ಗಳಿಸಿದ್ದ 337 ರನ್ ಇನ್ನಿಂಗ್ಸ್ ಒಂದರಲ್ಲಿ ರಾಹುಲ್ ಅವರ ಗರಿಷ್ಠ ಮೊತ್ತ.

2013-14ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ 10 ಪಂದ್ಯಗಳಿಂದ 1033 ರನ್ ಗಳಿಸಿದ್ದ ರಾಹುಲ್ ಕರ್ನಾಟಕ ತಂಡ 14 ವರ್ಷಗಳ ನಂತರ ರಣಜಿ ಟ್ರೋಫಿ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. 

ರಾಹುಲ್ ರಣಜಿ ಸಾಧನೆ

ಪಂದ್ಯ: 27

ಇನ್ನಿಂಗ್ಸ್: 49

ರನ್: 2834

ಸರಾಸರಿ: 61.60

ಬೆಸ್ಟ್: 337

ಶತಕ: 08

ಅರ್ಧಶತಕ: 13

LEAVE A REPLY

Please enter your comment!
Please enter your name here

two × one =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you