ಕ್ರಿಕೆಟ್ನೌಕರರೊಡನೆ ದಿನವಿಡೀ ಮೈದಾನದಲ್ಲಿ ಆಟವಾಡಿ ಸ್ಪೂರ್ತಿ ತುಂಬಿದ ಸರಳತೆಯ ಸಾಹುಕಾರ-ಡಾ‌.ಗೋವಿಂದ ಬಾಬು...

ನೌಕರರೊಡನೆ ದಿನವಿಡೀ ಮೈದಾನದಲ್ಲಿ ಆಟವಾಡಿ ಸ್ಪೂರ್ತಿ ತುಂಬಿದ ಸರಳತೆಯ ಸಾಹುಕಾರ-ಡಾ‌.ಗೋವಿಂದ ಬಾಬು ಪೂಜಾರಿ

-

- Advertisment -spot_img
ಗೆದ್ದ ತಂಡವಷ್ಟೇ ಅಲ್ಲ,ಸೋತ ತಂಡದವರ ಬೆನ್ನು ತಟ್ಟಿ ಹುರಿದುಂಬಿಸಿ ಕ್ರೀಡಾ ಸ್ಪೂರ್ತಿ ಮೆರೆದ ಉದ್ಯಮ ರತ್ನ ಡಾ.ಗೋವಿಂದ ಬಾಬು ಪೂಜಾರಿ.
ಶೆಫ್ ಟಾಕ್ ಫುಡ್&ಹಾಸ್ಪಿಟಾಲಿಟಿ ಸರ್ವಿಸಸ್ಸ್ ಪ್ರೈ.ಲಿ ಉದ್ಯಮ ಸಂಸ್ಥೆಯನ್ನು ಸ್ಥಾಪಿಸಿ,ಹಲವು ರಾಜ್ಯಗಳಲ್ಲಿ ಅಂಗ ಸಂಸ್ಥೆಯನ್ನು ಸ್ಥಾಪಿಸಿ ಸಾವಿರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸಿ,ಸಮಾಜಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರು ತಮ್ಮ‌‌ ಸಂಸ್ಥೆಗಳಲ್ಲಿ ದಿನಂಪ್ರತಿ ದುಡಿಯುವ ನೌಕರರಿಗಾಗಿ 2 ನೇ ಬಾರಿ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿದ್ದರು.
ಬೆಂಗಳೂರು ಕೂಡ್ಲುಗೇಟ್ ಸಮೀಪದ ಮೈದಾನದಲ್ಲಿ ಡಿಸೆಂಬರ್ 25 ರಂದು 60 ಗಜಗಳ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದ್ದ ಈ ಪಂದ್ಯಾವಳಿಯಲ್ಲಿ ಗೋವಿಂದ ಬಾಬು ಪೂಜಾರಿ ಇವರ ಒಡೆತನದ 8 ಸಂಸ್ಥೆಗಳಾದ
1)ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ
2)ಮತ್ಸ್ಯ ಬಂಧನ ಪ್ರೈ.ಲಿಮಿಟೆಡ್
3)ಪ್ರಗ್ನ್ಯಾ ಸಾಗರ(ಹೋಟೆಲ್ಸ್&ರೆಸಾರ್ಟ್ಸ್)
4)ಶೆಫ್ ಟಾಕ್ ನ್ಯೂಟ್ರಿಫುಡ್‌ ಪ್ರೈ.ಲಿಮಿಟೆಡ್
5)ಶ್ರೀ ನಾರಾಯಣ ಗುರು ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್
6)ಮತ್ಸ್ಯ ಲೋಕ
7)ಫೆಲಿಜ್ ನ್(FELIZ N)
8)ಇಂದಿರಾ ಕ್ಯಾಂಟೀನ್ ಭಾಗವಹಿಸಿದ್ದರು.
ಅಂತಿಮವಾಗಿ ರೋಚಕ ಫೈನಲ್ ನಲ್ಲಿ ಇಂದಿರಾ ಕ್ಯಾಂಟೀನ್ ತಂಡ ಫೈನಲ್ ನಲ್ಲಿ ಅಸಾಧ್ಯ ಗುರಿಯನ್ನು ಬೆಂಬತ್ತಿ ಜಯದಾಖಲಿಸಿದರು.ಇಂದಿರಾ ಕ್ಯಾಂಟೀನ್ ತಂಡದ ಆಟಗಾರನೋರ್ವ ಒಂದೇ ಇನ್ನಿಂಗ್ಸ್ ನಲ್ಲಿ 8 ಸಿಕ್ಸರ್ ಸಿಡಿಸಿ ಡಾ.ಗೋವಿಂದ ಬಾಬು ಪೂಜಾರಿಯವರು ಘೋಷಿಸಿದ 8000 ನಗದು ಬಹುಮಾನವನ್ನು ಪಡೆದರು.ವಿಶೇಷವಾಗಿ ಡಾ‌.ಗೋವಿಂದ ಬಾಬು ಪೂಜಾರಿಯವರು 2 ಪಂದ್ಯಗಳಲ್ಲಿ 4 ಓವರ್ ಬೌಲಿಂಗ್ ನಡೆಸಿ,ಬ್ಯಾಟಿಂಗ್ ನಲ್ಲಿಯೂ ಮಿಂಚಿದರು.
ವಿಶೇಷ ಆಕರ್ಷಣೆ ಎಂಬಂತೆ ರಾಜ್ಯದ ಪ್ರಸಿದ್ಧ ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ ನಿರ್ಣಾಯಕರಾಗಿ ಹಾಗೂ ವೀಕ್ಷಕ ವಿವರಣೆಕಾರರಾಗಿ ಭಾಗವಹಿಸಿದರು.ವಿಶೇಷ ಅತಿಥಿಯಾಗಿ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ‌ ಸಂಪಾದಕರಾದ ಕೋಟ ರಾಮಕೃಷ್ಣ ಆಚಾರ್,ಪಂದ್ಯಾವಳಿಯ ಆಯೋಜಕರಾದ ಸುಮಂತ್ ಬಿಲ್ಲವ,ಚೇತನ್ ಮತ್ತು ಕಂಪೆನಿಯ ನೌಕರರ ಕುಟುಂಬ
ಯುವಕ,ಯುವತಿಯರು ಉಪಸ್ಥಿತರಿದ್ದರು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

6 + 2 =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you